ETV Bharat / bharat

ಹರಿಯಾಣ ಹಿಂಸಾಚಾರ: ನುಹ್ ಎಸ್​ಪಿ ವರುಣ್ ಸಿಂಗ್ಲಾ ವರ್ಗಾವಣೆ: ನೂತನ SP ಆಗಿ ನರೇಂದರ್ ಬಿಜರ್ನಿಯಾ ನೇಮಕ

author img

By

Published : Aug 4, 2023, 12:00 PM IST

ಹರಿಯಾಣದ ನುಹ್ ಜಿಲ್ಲೆಯಲ್ಲಿ ನಡೆದ ಹಿಂಸಾಚಾರದ ಬಳಿಕ ರಾಜ್ಯ ಸರ್ಕಾರವು ಪೊಲೀಸ್ ವರಿಷ್ಠಾಧಿಕಾರಿ ವರುಣ್ ಸಿಂಗ್ಲಾ ಅವರನ್ನು ವರ್ಗಾವಣೆ ಮಾಡಿ ಆದೇಶ ಹೊರಡಿಸಿದೆ.

Haryana violence
ವರುಣ್ ಸಿಂಗ್ಲಾ

ಹರಿಯಾಣ : ಜುಲೈ 31ರ ಸೋಮವಾರದಂದು ಹರಿಯಾಣದ ನುಹ್‌ನಲ್ಲಿ ನಡೆದ ಬ್ರಜ್ ಮಂಡಲ್ ಯಾತ್ರೆಯಲ್ಲಿ ಎರಡು ಗುಂಪುಗಳ ನಡುವೆ ಉಂಟಾದ ಹಿಂಸಾತ್ಮಕ ಘರ್ಷಣೆ ಬಳಿಕ ನುಹ್ (ಎಸ್​ಪಿ) ಪೊಲೀಸ್ ವರಿಷ್ಠಾಧಿಕಾರಿ ವರುಣ್ ಸಿಂಗ್ಲಾ ಅವರನ್ನು ವರ್ಗಾವಣೆ ಮಾಡಿ ರಾಜ್ಯ ಸರ್ಕಾರವು ಆದೇಶ ಹೊರಡಿಸಿದೆ. ಐಪಿಎಸ್ ನರೇಂದರ್ ಬಿಜರ್ನಿಯಾ ಈಗ ನುಹ್ ಜಿಲ್ಲೆಯ ಪೂರ್ಣಾವಧಿ ಎಸ್​ಪಿಯಾಗಲಿದ್ದಾರೆ.

ಹಿಂಸಾಚಾರಕ್ಕೆ ಸಂಬಂಧಿಸಿದಂತೆ ಇದುವರೆಗೆ 176 ಜನರನ್ನು ಬಂಧಿಸಲಾಗಿದೆ. ಹಿಂಸಾಚಾರ ಪೀಡಿತ ಪ್ರದೇಶಗಳಲ್ಲಿ 93 ಎಫ್‌ಐಆರ್‌ಗಳನ್ನು ದಾಖಲಿಸಲಾಗಿದೆ. ಈ ಮಧ್ಯೆ, ಹರಿಯಾಣ ಸರ್ಕಾರ ದೊಡ್ಡ ಕ್ರಮ ಕೈಗೊಂಡಿದ್ದು, ನುಹ್ ಎಸ್​ಪಿ ವರುಣ್ ಸಿಂಗ್ಲಾ ಅವರನ್ನು ವರ್ಗಾವಣೆ ಮಾಡಿದೆ. ವರುಣ್ ಸಿಂಗ್ಲಾ ಅವರನ್ನು ಭಿವಾನಿಗೆ ಕಳುಹಿಸಲಾಗಿದ್ದು, ಭಿವಾನಿಯ ಎಸ್​ಪಿ ನರೇಂದ್ರ ಬಿಜರ್ನಿಯಾ ಅವರಿಗೆ ನುಹ್ ಜವಾಬ್ದಾರಿಯನ್ನು ವಹಿಸಲಾಗಿದೆ. ಈ ಆದೇಶ ತಕ್ಷಣದಿಂದ ಜಾರಿಗೆ ಬರುವಂತೆ ಸೂಚಿಸಲಾಗಿದೆ.

ವರುಣ್ ಸಿಂಗ್ಲಾ ಅವರು ಬ್ರಜ್ ಮಂಡಲ್ ಯಾತ್ರೆಗೂ ಮುನ್ನ ರಜೆಯ ಮೇಲೆ ತೆರಳಿದ್ದರು. ಈ ಸಮಯದಲ್ಲಿ ಭಿವಾನಿಯ ಐಪಿಎಸ್ ಅಧಿಕಾರಿ ನರೇಂದ್ರ ಬಿಜರ್ನಿಯಾ ಅವರಿಗೆ ನುಹ್ ಜಿಲ್ಲೆಯ ಹೆಚ್ಚುವರಿ ಜವಾಬ್ದಾರಿ ವಹಿಸಲಾಗಿತ್ತು. ನರೇಂದ್ರ ಬಿಜರ್ನಿಯಾ ಅವರು ಈ ಹಿಂದೆಯೂ ಕೂಡ ನುಹ್ ಜಿಲ್ಲೆಯ ಎಸ್​ಪಿ ಆಗಿ ಕಾರ್ಯ ನಿರ್ವಹಿಸಿದ್ದಾರೆ.

ಏನಿದು ವಿವಾದ : ಜುಲೈ 31 ರಂದು ವಿಶ್ವ ಹಿಂದೂ ಪರಿಷತ್ ಸೇರಿದಂತೆ ಹಿಂದೂ ಸಂಘಟನೆಗಳು ನಡೆಸಿದ ಮೆರವಣಿಗೆಯಲ್ಲಿ ಎರಡು ಗುಂಪುಗಳ ನಡುವೆ ಹಿಂಸಾತ್ಮಕ ಘರ್ಷಣೆ ಸಂಭವಿಸಿತ್ತು. ಈ ವೇಳೆ, 2 ಪೊಲೀಸರು ಸೇರಿದಂತೆ 6 ಜನರು ಸಾವನ್ನಪ್ಪಿದರು. ಹಿಂಸಾತ್ಮಕ ಘರ್ಷಣೆಯ ಬಳಿಕ ರಾಜ್ಯದ ಹಲವು ಜಿಲ್ಲೆಗಳಲ್ಲಿ ಉದ್ವಿಗ್ನ ವಾತಾವರಣ ಉಂಟಾಗಿತ್ತು. ಈ ಹಿನ್ನೆಲೆಯಲ್ಲಿ ಹಿಂಸಾಚಾರ ಪೀಡಿತ ಪ್ರದೇಶಗಳಲ್ಲಿ ಹೆಚ್ಚಿನ ಸಂಖ್ಯೆಯಲ್ಲಿ ಪೊಲೀಸರು ಮತ್ತು ಸೇನಾ ಸಿಬ್ಬಂದಿ ನಿಯೋಜಿಸಲಾಗಿದೆ. ಈ ಬೆನ್ನಲ್ಲೇ ಉದ್ವಿಗ್ನ ಪರಿಸ್ಥಿತಿಯನ್ನು ಗಮನದಲ್ಲಿಟ್ಟುಕೊಂಡು ಆಗಸ್ಟ್ 5 ರವರೆಗೆ ಇಂಟರ್​ನೆಟ್​ ಸೇವೆಯನ್ನು ಸ್ಥಗಿತಗೊಳಿಸಲಾಗಿದೆ.

ಇದನ್ನೂ ಓದಿ : ಹರಿಯಾಣ ಹಿಂಸಾಚಾರ : ಹಿಂಸಾತ್ಮಕ ಚಟುವಟಿಕೆಗಳಿಂದ ದೂರವಿರಲು ಅಮೆರಿಕದ​ ಸರ್ಕಾರದ ಮನವಿ

ಇನ್ನೊಂದೆಡೆ, ಇಂದು ನುಹ್ ಜಿಲ್ಲೆಯಲ್ಲಿ ಮತ್ತೊಮ್ಮೆ ಕರ್ಫ್ಯೂ ಸಡಿಲಗೊಳಿಸಲಾಗಿದೆ. ಇಂದು ಮಧ್ಯಾಹ್ನ 12:00 ರಿಂದ 3:00 ರವರೆಗೆ ಜನರು ಅಗತ್ಯ ವಸ್ತುಗಳನ್ನು ಖರೀದಿಸಬಹುದು ಎಂದು ಜಿಲ್ಲಾಧಿಕಾರಿ ತಿಳಿಸಿದ್ದಾರೆ. ಶಾಂತಿ ಸ್ಥಾಪನೆಗಾಗಿ ಪೊಲೀಸರು ಮತ್ತು ಸೇನಾ ಸಿಬ್ಬಂದಿ ನಿರಂತರವಾಗಿ ಸಂಚರಿಸುತ್ತಿದ್ದಾರೆ.

ಇದನ್ನೂ ಓದಿ : ಹರಿಯಾಣ ಘರ್ಷಣೆಗೆ 6 ಸಾವು, 116 ಮಂದಿ ಬಂಧನ; ಶಾಂತಿ ಕಾಪಾಡಲು ಸಿಎಂ ಖಟ್ಟರ್​ ಮನವಿ

ಸುದ್ದಿಗಾರರ ಜೊತೆ ಮಾತನಾಡಿದ ಹರಿಯಾಣದ ಮಾಜಿ ಮುಖ್ಯಮಂತ್ರಿ ಭೂಪಿಂದರ್ ಸಿಂಗ್ ಹೂಡಾ ಅವರು, " ಹಿಂಸಾಚಾರವನ್ನು ತಡೆಯುವಲ್ಲಿ ಸರ್ಕಾರದ ವೈಫಲ್ಯದ ಕುರಿತು ಟೀಕಿಸಿದ್ದಾರೆ. ಈ ಕುರಿತು ಹೈಕೋರ್ಟ್ ನ್ಯಾಯಾಧೀಶರಿಂದ ನ್ಯಾಯಾಂಗ ತನಿಖೆ ನಡೆಸಬೇಕೆಂದು ಒತ್ತಾಯಿಸಿದ್ದಾರೆ. "ನುಹ್‌ನಲ್ಲಿನ ಗಲಭೆಗಳನ್ನು ತಡೆಯಲು ಸರ್ಕಾರ ಏಕೆ ವಿಫಲವಾಗಿದೆ ಎಂಬುದರ ಕುರಿತು ಹೈಕೋರ್ಟ್ ನ್ಯಾಯಾಧೀಶರ ನೇತೃತ್ವದಲ್ಲಿ ನ್ಯಾಯಾಂಗ ತನಿಖೆಗೆ ನಾವು ಒತ್ತಾಯಿಸುತ್ತೇವೆ. ಈ ತನಿಖೆಯಿಂದ ಸತ್ಯವನ್ನು ಹೊರತರಲು ಸಹಾಯ" ಎಂದು ತಿಳಿಸಿದ್ದಾರೆ.

ಇದನ್ನೂ ಓದಿ : ಹರಿಯಾಣ ಹಿಂಸಾಚಾರದಲ್ಲಿ ಇಬ್ಬರು ಗೃಹರಕ್ಷಕ ದಳದ ಸಿಬ್ಬಂದಿ ಸಾವು: ಶಾಲಾ - ಕಾಲೇಜು ಬಂದ್, ಇಂಟರ್ನೆಟ್ ಸೇವೆ ಸ್ಥಗಿತ!

ಹರಿಯಾಣ : ಜುಲೈ 31ರ ಸೋಮವಾರದಂದು ಹರಿಯಾಣದ ನುಹ್‌ನಲ್ಲಿ ನಡೆದ ಬ್ರಜ್ ಮಂಡಲ್ ಯಾತ್ರೆಯಲ್ಲಿ ಎರಡು ಗುಂಪುಗಳ ನಡುವೆ ಉಂಟಾದ ಹಿಂಸಾತ್ಮಕ ಘರ್ಷಣೆ ಬಳಿಕ ನುಹ್ (ಎಸ್​ಪಿ) ಪೊಲೀಸ್ ವರಿಷ್ಠಾಧಿಕಾರಿ ವರುಣ್ ಸಿಂಗ್ಲಾ ಅವರನ್ನು ವರ್ಗಾವಣೆ ಮಾಡಿ ರಾಜ್ಯ ಸರ್ಕಾರವು ಆದೇಶ ಹೊರಡಿಸಿದೆ. ಐಪಿಎಸ್ ನರೇಂದರ್ ಬಿಜರ್ನಿಯಾ ಈಗ ನುಹ್ ಜಿಲ್ಲೆಯ ಪೂರ್ಣಾವಧಿ ಎಸ್​ಪಿಯಾಗಲಿದ್ದಾರೆ.

ಹಿಂಸಾಚಾರಕ್ಕೆ ಸಂಬಂಧಿಸಿದಂತೆ ಇದುವರೆಗೆ 176 ಜನರನ್ನು ಬಂಧಿಸಲಾಗಿದೆ. ಹಿಂಸಾಚಾರ ಪೀಡಿತ ಪ್ರದೇಶಗಳಲ್ಲಿ 93 ಎಫ್‌ಐಆರ್‌ಗಳನ್ನು ದಾಖಲಿಸಲಾಗಿದೆ. ಈ ಮಧ್ಯೆ, ಹರಿಯಾಣ ಸರ್ಕಾರ ದೊಡ್ಡ ಕ್ರಮ ಕೈಗೊಂಡಿದ್ದು, ನುಹ್ ಎಸ್​ಪಿ ವರುಣ್ ಸಿಂಗ್ಲಾ ಅವರನ್ನು ವರ್ಗಾವಣೆ ಮಾಡಿದೆ. ವರುಣ್ ಸಿಂಗ್ಲಾ ಅವರನ್ನು ಭಿವಾನಿಗೆ ಕಳುಹಿಸಲಾಗಿದ್ದು, ಭಿವಾನಿಯ ಎಸ್​ಪಿ ನರೇಂದ್ರ ಬಿಜರ್ನಿಯಾ ಅವರಿಗೆ ನುಹ್ ಜವಾಬ್ದಾರಿಯನ್ನು ವಹಿಸಲಾಗಿದೆ. ಈ ಆದೇಶ ತಕ್ಷಣದಿಂದ ಜಾರಿಗೆ ಬರುವಂತೆ ಸೂಚಿಸಲಾಗಿದೆ.

ವರುಣ್ ಸಿಂಗ್ಲಾ ಅವರು ಬ್ರಜ್ ಮಂಡಲ್ ಯಾತ್ರೆಗೂ ಮುನ್ನ ರಜೆಯ ಮೇಲೆ ತೆರಳಿದ್ದರು. ಈ ಸಮಯದಲ್ಲಿ ಭಿವಾನಿಯ ಐಪಿಎಸ್ ಅಧಿಕಾರಿ ನರೇಂದ್ರ ಬಿಜರ್ನಿಯಾ ಅವರಿಗೆ ನುಹ್ ಜಿಲ್ಲೆಯ ಹೆಚ್ಚುವರಿ ಜವಾಬ್ದಾರಿ ವಹಿಸಲಾಗಿತ್ತು. ನರೇಂದ್ರ ಬಿಜರ್ನಿಯಾ ಅವರು ಈ ಹಿಂದೆಯೂ ಕೂಡ ನುಹ್ ಜಿಲ್ಲೆಯ ಎಸ್​ಪಿ ಆಗಿ ಕಾರ್ಯ ನಿರ್ವಹಿಸಿದ್ದಾರೆ.

ಏನಿದು ವಿವಾದ : ಜುಲೈ 31 ರಂದು ವಿಶ್ವ ಹಿಂದೂ ಪರಿಷತ್ ಸೇರಿದಂತೆ ಹಿಂದೂ ಸಂಘಟನೆಗಳು ನಡೆಸಿದ ಮೆರವಣಿಗೆಯಲ್ಲಿ ಎರಡು ಗುಂಪುಗಳ ನಡುವೆ ಹಿಂಸಾತ್ಮಕ ಘರ್ಷಣೆ ಸಂಭವಿಸಿತ್ತು. ಈ ವೇಳೆ, 2 ಪೊಲೀಸರು ಸೇರಿದಂತೆ 6 ಜನರು ಸಾವನ್ನಪ್ಪಿದರು. ಹಿಂಸಾತ್ಮಕ ಘರ್ಷಣೆಯ ಬಳಿಕ ರಾಜ್ಯದ ಹಲವು ಜಿಲ್ಲೆಗಳಲ್ಲಿ ಉದ್ವಿಗ್ನ ವಾತಾವರಣ ಉಂಟಾಗಿತ್ತು. ಈ ಹಿನ್ನೆಲೆಯಲ್ಲಿ ಹಿಂಸಾಚಾರ ಪೀಡಿತ ಪ್ರದೇಶಗಳಲ್ಲಿ ಹೆಚ್ಚಿನ ಸಂಖ್ಯೆಯಲ್ಲಿ ಪೊಲೀಸರು ಮತ್ತು ಸೇನಾ ಸಿಬ್ಬಂದಿ ನಿಯೋಜಿಸಲಾಗಿದೆ. ಈ ಬೆನ್ನಲ್ಲೇ ಉದ್ವಿಗ್ನ ಪರಿಸ್ಥಿತಿಯನ್ನು ಗಮನದಲ್ಲಿಟ್ಟುಕೊಂಡು ಆಗಸ್ಟ್ 5 ರವರೆಗೆ ಇಂಟರ್​ನೆಟ್​ ಸೇವೆಯನ್ನು ಸ್ಥಗಿತಗೊಳಿಸಲಾಗಿದೆ.

ಇದನ್ನೂ ಓದಿ : ಹರಿಯಾಣ ಹಿಂಸಾಚಾರ : ಹಿಂಸಾತ್ಮಕ ಚಟುವಟಿಕೆಗಳಿಂದ ದೂರವಿರಲು ಅಮೆರಿಕದ​ ಸರ್ಕಾರದ ಮನವಿ

ಇನ್ನೊಂದೆಡೆ, ಇಂದು ನುಹ್ ಜಿಲ್ಲೆಯಲ್ಲಿ ಮತ್ತೊಮ್ಮೆ ಕರ್ಫ್ಯೂ ಸಡಿಲಗೊಳಿಸಲಾಗಿದೆ. ಇಂದು ಮಧ್ಯಾಹ್ನ 12:00 ರಿಂದ 3:00 ರವರೆಗೆ ಜನರು ಅಗತ್ಯ ವಸ್ತುಗಳನ್ನು ಖರೀದಿಸಬಹುದು ಎಂದು ಜಿಲ್ಲಾಧಿಕಾರಿ ತಿಳಿಸಿದ್ದಾರೆ. ಶಾಂತಿ ಸ್ಥಾಪನೆಗಾಗಿ ಪೊಲೀಸರು ಮತ್ತು ಸೇನಾ ಸಿಬ್ಬಂದಿ ನಿರಂತರವಾಗಿ ಸಂಚರಿಸುತ್ತಿದ್ದಾರೆ.

ಇದನ್ನೂ ಓದಿ : ಹರಿಯಾಣ ಘರ್ಷಣೆಗೆ 6 ಸಾವು, 116 ಮಂದಿ ಬಂಧನ; ಶಾಂತಿ ಕಾಪಾಡಲು ಸಿಎಂ ಖಟ್ಟರ್​ ಮನವಿ

ಸುದ್ದಿಗಾರರ ಜೊತೆ ಮಾತನಾಡಿದ ಹರಿಯಾಣದ ಮಾಜಿ ಮುಖ್ಯಮಂತ್ರಿ ಭೂಪಿಂದರ್ ಸಿಂಗ್ ಹೂಡಾ ಅವರು, " ಹಿಂಸಾಚಾರವನ್ನು ತಡೆಯುವಲ್ಲಿ ಸರ್ಕಾರದ ವೈಫಲ್ಯದ ಕುರಿತು ಟೀಕಿಸಿದ್ದಾರೆ. ಈ ಕುರಿತು ಹೈಕೋರ್ಟ್ ನ್ಯಾಯಾಧೀಶರಿಂದ ನ್ಯಾಯಾಂಗ ತನಿಖೆ ನಡೆಸಬೇಕೆಂದು ಒತ್ತಾಯಿಸಿದ್ದಾರೆ. "ನುಹ್‌ನಲ್ಲಿನ ಗಲಭೆಗಳನ್ನು ತಡೆಯಲು ಸರ್ಕಾರ ಏಕೆ ವಿಫಲವಾಗಿದೆ ಎಂಬುದರ ಕುರಿತು ಹೈಕೋರ್ಟ್ ನ್ಯಾಯಾಧೀಶರ ನೇತೃತ್ವದಲ್ಲಿ ನ್ಯಾಯಾಂಗ ತನಿಖೆಗೆ ನಾವು ಒತ್ತಾಯಿಸುತ್ತೇವೆ. ಈ ತನಿಖೆಯಿಂದ ಸತ್ಯವನ್ನು ಹೊರತರಲು ಸಹಾಯ" ಎಂದು ತಿಳಿಸಿದ್ದಾರೆ.

ಇದನ್ನೂ ಓದಿ : ಹರಿಯಾಣ ಹಿಂಸಾಚಾರದಲ್ಲಿ ಇಬ್ಬರು ಗೃಹರಕ್ಷಕ ದಳದ ಸಿಬ್ಬಂದಿ ಸಾವು: ಶಾಲಾ - ಕಾಲೇಜು ಬಂದ್, ಇಂಟರ್ನೆಟ್ ಸೇವೆ ಸ್ಥಗಿತ!

ETV Bharat Logo

Copyright © 2024 Ushodaya Enterprises Pvt. Ltd., All Rights Reserved.