ETV Bharat / bharat

ಶ್ರದ್ಧಾ ಮರ್ಡರ್ ಕೇಸ್: ಆರೋಪಿ ಅಫ್ತಾಬ್ ಜಾಮೀನು ಅರ್ಜಿ ವಿಚಾರಣೆ ಮುಂದೂಡಿಕೆ

ಅಫ್ತಾಬ್ ಪರ ವಕೀಲ ಎಂ.ಎಸ್. ಖಾನ್ ಅವರು ದೆಹಲಿ ಪೊಲೀಸರ ಕಾರ್ಯಶೈಲಿಯನ್ನು ಸಹ ಪ್ರಶ್ನಿಸಿದ್ದು, ಶ್ರದ್ಧಾ ಹತ್ಯೆ ಪ್ರಕರಣದಲ್ಲಿ ಹೊಸ ಟ್ವಿಸ್ಟ್ ಬರಲಿದೆ, ನಂತರ ದೆಹಲಿ ಪೊಲೀಸರ ಕಾಲ ಕೆಳಗಿನ ಭೂಮಿ ಕುಸಿಯಲಿದೆ ಎಂದು ಹೇಳಿದ್ದಾರೆ.

author img

By

Published : Dec 16, 2022, 1:37 PM IST

ಶ್ರದ್ಧಾ ಮರ್ಡರ್ ಕೇಸ್: ಆರೋಪಿ ಅಫ್ತಾಬ್ ಜಾಮೀನು ಅರ್ಜಿ ವಿಚಾರಣೆ ಮುಂದೂಡಿಕೆ
hearing-on-bail-plea-of-accused-aftab-postponed-in-shraddha-murder-case

ನವದೆಹಲಿ: ಶ್ರದ್ಧಾ ವಾಲ್ಕರ್ ಹತ್ಯಾಕಾಂಡದ ಆರೋಪಿ ಅಫ್ತಾಬ್ ಪೂನಾವಾಲಾ ಈತನ ಜಾಮೀನು ಅರ್ಜಿ ವಿಚಾರಣೆಯನ್ನು ಮುಂದೂಡಲಾಗಿದೆ. ಪೊಲೀಸರ ಮನವಿಯ ಮೇರೆಗೆ ಸಾಕೇತ್ ನ್ಯಾಯಾಲಯವು ವಿಚಾರಣೆಯನ್ನು ಶನಿವಾರ ಬೆಳಗ್ಗೆ 10 ಗಂಟೆಗೆ ಮುಂದೂಡಿದೆ. ಇದೀಗ ಜಾಮೀನು ಅರ್ಜಿಯ ವಿಚಾರಣೆ ಶನಿವಾರ ನಡೆಯಲಿದೆ.

ಇದಕ್ಕೂ ಮುನ್ನ ಆರೋಪಿ ಅಫ್ತಾಬ್ ಪೂನಾವಾಲಾ ಪರ ವಕೀಲ ಎಂ.ಎಸ್. ಖಾನ್ ಜಾಮೀನು ಕೋರಿ ಸಾಕೇತ್ ನ್ಯಾಯಾಲಯಕ್ಕೆ ಅರ್ಜಿ ಸಲ್ಲಿಸಿದ್ದು, ಇಂದು ಬೆಳಗ್ಗೆ 10 ಗಂಟೆಗೆ ವಿಚಾರಣೆ ನಡೆಯಬೇಕಿತ್ತು. ಆರೋಪಿ ಪರ ವಕೀಲರು ಅಫ್ತಾಬ್‌ಗೆ ಜಾಮೀನು ಸಿಗುವ ಭರವಸೆ ವ್ಯಕ್ತಪಡಿಸಿದ್ದರು.

ಅಫ್ತಾಬ್ ಪರ ವಕೀಲ ಎಂ.ಎಸ್. ಖಾನ್ ಅವರು ದೆಹಲಿ ಪೊಲೀಸರ ಕಾರ್ಯಶೈಲಿಯನ್ನು ಸಹ ಪ್ರಶ್ನಿಸಿದ್ದು, ಶ್ರದ್ಧಾ ಹತ್ಯೆ ಪ್ರಕರಣದಲ್ಲಿ ಹೊಸ ಟ್ವಿಸ್ಟ್ ಬರಲಿದೆ, ನಂತರ ದೆಹಲಿ ಪೊಲೀಸರ ಕಾಲ ಕೆಳಗಿನ ಭೂಮಿ ಕುಸಿಯಲಿದೆ ಎಂದು ಹೇಳಿದ್ದಾರೆ. ದೆಹಲಿ ಪೊಲೀಸರು ಪ್ರಸ್ತುತಪಡಿಸುತ್ತಿರುವ ಪುರಾವೆಗಳು ಆಧಾರರಹಿತವಾಗಿವೆ. ಇಲ್ಲಿಯವರೆಗೆ, ದೆಹಲಿ ಪೊಲೀಸರಿಂದ ಯಾವುದೇ ದೃಢವಾದ ಸಾಕ್ಷ್ಯ ಪ್ರಸ್ತುತಪಡಿಸಲಾಗಿಲ್ಲ ಮತ್ತು ಈ ಪ್ರಕರಣವು ಮುಂದುವರೆದಂತೆ ದೆಹಲಿ ಪೊಲೀಸರೂ ಈ ಪ್ರಕರಣದಲ್ಲಿ ಸಿಕ್ಕಿಹಾಕಿಕೊಳ್ಳುತ್ತಾರೆ ಎಂದು ಅವರು ಹೇಳಿದ್ದಾರೆ.

ಶ್ರದ್ಧಾಳ ಮೃತದೇಹದ ಮೂಳೆಗಳನ್ನು ಮೆಹ್ರೌಲಿ ಅರಣ್ಯದಿಂದ ಪೊಲೀಸರು ವಶಪಡಿಸಿಕೊಂಡಿದ್ದಾರೆ. ಇದೀಗ ಈ ಮೂಳೆಗಳನ್ನು ಶ್ರದ್ಧಾ ತಂದೆ ವಿಕಾಸ್ ವಾಕರ್ ಅವರ ಡಿಎನ್‌ಎಯೊಂದಿಗೆ ಹೊಂದಾಣಿಕೆ ಮಾಡಲಾಗಿದೆ. ಈ ಡಿಎನ್‌ಎ ಪರೀಕ್ಷೆಯ ವರದಿಗಾಗಿ ಪೊಲೀಸರು ಹಲವು ದಿನಗಳಿಂದ ಕಾಯುತ್ತಿದ್ದರು.

ಮತ್ತೊಂದೆಡೆ, ದೆಹಲಿ ಪೊಲೀಸ್ ಮೂಲಗಳ ಪ್ರಕಾರ, ಡಿಎನ್‌ಎ ಮಾಡಲಾದ ಮೂಳೆಗಳನ್ನು ಶೀಘ್ರದಲ್ಲೇ ಮರಣೋತ್ತರ ಪರೀಕ್ಷೆಗಾಗಿ ಏಮ್ಸ್‌ಗೆ ಕಳುಹಿಸಲಾಗುವುದು. ಶವಪರೀಕ್ಷೆಯ ಮೂಲಕ ಶ್ರದ್ಧಾ ಹತ್ಯೆಯ ನಿಖರವಾದ ದಿನ ಮತ್ತು ಸಮಯವನ್ನು ಕಂಡುಹಿಡಿಯಲು ಪ್ರಯತ್ನಿಸಲಾಗುವುದು ಎಂದು ಮೂಲಗಳು ತಿಳಿಸಿವೆ. ಇಷ್ಟೇ ಅಲ್ಲದೆ, ಪಾಲಿಗ್ರಾಫ್ ಪರೀಕ್ಷೆಯ ನಂತರ ಪೊಲೀಸರು ಶ್ರದ್ಧಾ ಅವರ ಕೊನೆಯ ಕ್ಷಣಗಳಲ್ಲಿ ಧರಿಸಿದ್ದ ಕೆಲವು ಬಟ್ಟೆಗಳನ್ನು ಅರಣ್ಯದಿಂದ ವಶಪಡಿಸಿಕೊಂಡಿದ್ದಾರೆ. ಈ ಬಟ್ಟೆಗಳು ಕಾಡಿನಲ್ಲಿ ಪತ್ತೆಯಾಗಿದ್ದು, ವಿಧಿವಿಜ್ಞಾನ ಪರೀಕ್ಷೆಗೆ ಕಳುಹಿಸಲಾಗಿದೆ.

ಇದನ್ನೂ ಓದಿ: ಶ್ರದ್ಧಾ ವಾಲ್ಕರ್​ ನೆನಪಿಸುವ ಕೊಲೆ: ಕತ್ತರಿಸಿದ ಮೃತದೇಹ ಪ್ಲಾಸ್ಟಿಕ್​ ಚೀಲದಲ್ಲಿತ್ತು!

ನವದೆಹಲಿ: ಶ್ರದ್ಧಾ ವಾಲ್ಕರ್ ಹತ್ಯಾಕಾಂಡದ ಆರೋಪಿ ಅಫ್ತಾಬ್ ಪೂನಾವಾಲಾ ಈತನ ಜಾಮೀನು ಅರ್ಜಿ ವಿಚಾರಣೆಯನ್ನು ಮುಂದೂಡಲಾಗಿದೆ. ಪೊಲೀಸರ ಮನವಿಯ ಮೇರೆಗೆ ಸಾಕೇತ್ ನ್ಯಾಯಾಲಯವು ವಿಚಾರಣೆಯನ್ನು ಶನಿವಾರ ಬೆಳಗ್ಗೆ 10 ಗಂಟೆಗೆ ಮುಂದೂಡಿದೆ. ಇದೀಗ ಜಾಮೀನು ಅರ್ಜಿಯ ವಿಚಾರಣೆ ಶನಿವಾರ ನಡೆಯಲಿದೆ.

ಇದಕ್ಕೂ ಮುನ್ನ ಆರೋಪಿ ಅಫ್ತಾಬ್ ಪೂನಾವಾಲಾ ಪರ ವಕೀಲ ಎಂ.ಎಸ್. ಖಾನ್ ಜಾಮೀನು ಕೋರಿ ಸಾಕೇತ್ ನ್ಯಾಯಾಲಯಕ್ಕೆ ಅರ್ಜಿ ಸಲ್ಲಿಸಿದ್ದು, ಇಂದು ಬೆಳಗ್ಗೆ 10 ಗಂಟೆಗೆ ವಿಚಾರಣೆ ನಡೆಯಬೇಕಿತ್ತು. ಆರೋಪಿ ಪರ ವಕೀಲರು ಅಫ್ತಾಬ್‌ಗೆ ಜಾಮೀನು ಸಿಗುವ ಭರವಸೆ ವ್ಯಕ್ತಪಡಿಸಿದ್ದರು.

ಅಫ್ತಾಬ್ ಪರ ವಕೀಲ ಎಂ.ಎಸ್. ಖಾನ್ ಅವರು ದೆಹಲಿ ಪೊಲೀಸರ ಕಾರ್ಯಶೈಲಿಯನ್ನು ಸಹ ಪ್ರಶ್ನಿಸಿದ್ದು, ಶ್ರದ್ಧಾ ಹತ್ಯೆ ಪ್ರಕರಣದಲ್ಲಿ ಹೊಸ ಟ್ವಿಸ್ಟ್ ಬರಲಿದೆ, ನಂತರ ದೆಹಲಿ ಪೊಲೀಸರ ಕಾಲ ಕೆಳಗಿನ ಭೂಮಿ ಕುಸಿಯಲಿದೆ ಎಂದು ಹೇಳಿದ್ದಾರೆ. ದೆಹಲಿ ಪೊಲೀಸರು ಪ್ರಸ್ತುತಪಡಿಸುತ್ತಿರುವ ಪುರಾವೆಗಳು ಆಧಾರರಹಿತವಾಗಿವೆ. ಇಲ್ಲಿಯವರೆಗೆ, ದೆಹಲಿ ಪೊಲೀಸರಿಂದ ಯಾವುದೇ ದೃಢವಾದ ಸಾಕ್ಷ್ಯ ಪ್ರಸ್ತುತಪಡಿಸಲಾಗಿಲ್ಲ ಮತ್ತು ಈ ಪ್ರಕರಣವು ಮುಂದುವರೆದಂತೆ ದೆಹಲಿ ಪೊಲೀಸರೂ ಈ ಪ್ರಕರಣದಲ್ಲಿ ಸಿಕ್ಕಿಹಾಕಿಕೊಳ್ಳುತ್ತಾರೆ ಎಂದು ಅವರು ಹೇಳಿದ್ದಾರೆ.

ಶ್ರದ್ಧಾಳ ಮೃತದೇಹದ ಮೂಳೆಗಳನ್ನು ಮೆಹ್ರೌಲಿ ಅರಣ್ಯದಿಂದ ಪೊಲೀಸರು ವಶಪಡಿಸಿಕೊಂಡಿದ್ದಾರೆ. ಇದೀಗ ಈ ಮೂಳೆಗಳನ್ನು ಶ್ರದ್ಧಾ ತಂದೆ ವಿಕಾಸ್ ವಾಕರ್ ಅವರ ಡಿಎನ್‌ಎಯೊಂದಿಗೆ ಹೊಂದಾಣಿಕೆ ಮಾಡಲಾಗಿದೆ. ಈ ಡಿಎನ್‌ಎ ಪರೀಕ್ಷೆಯ ವರದಿಗಾಗಿ ಪೊಲೀಸರು ಹಲವು ದಿನಗಳಿಂದ ಕಾಯುತ್ತಿದ್ದರು.

ಮತ್ತೊಂದೆಡೆ, ದೆಹಲಿ ಪೊಲೀಸ್ ಮೂಲಗಳ ಪ್ರಕಾರ, ಡಿಎನ್‌ಎ ಮಾಡಲಾದ ಮೂಳೆಗಳನ್ನು ಶೀಘ್ರದಲ್ಲೇ ಮರಣೋತ್ತರ ಪರೀಕ್ಷೆಗಾಗಿ ಏಮ್ಸ್‌ಗೆ ಕಳುಹಿಸಲಾಗುವುದು. ಶವಪರೀಕ್ಷೆಯ ಮೂಲಕ ಶ್ರದ್ಧಾ ಹತ್ಯೆಯ ನಿಖರವಾದ ದಿನ ಮತ್ತು ಸಮಯವನ್ನು ಕಂಡುಹಿಡಿಯಲು ಪ್ರಯತ್ನಿಸಲಾಗುವುದು ಎಂದು ಮೂಲಗಳು ತಿಳಿಸಿವೆ. ಇಷ್ಟೇ ಅಲ್ಲದೆ, ಪಾಲಿಗ್ರಾಫ್ ಪರೀಕ್ಷೆಯ ನಂತರ ಪೊಲೀಸರು ಶ್ರದ್ಧಾ ಅವರ ಕೊನೆಯ ಕ್ಷಣಗಳಲ್ಲಿ ಧರಿಸಿದ್ದ ಕೆಲವು ಬಟ್ಟೆಗಳನ್ನು ಅರಣ್ಯದಿಂದ ವಶಪಡಿಸಿಕೊಂಡಿದ್ದಾರೆ. ಈ ಬಟ್ಟೆಗಳು ಕಾಡಿನಲ್ಲಿ ಪತ್ತೆಯಾಗಿದ್ದು, ವಿಧಿವಿಜ್ಞಾನ ಪರೀಕ್ಷೆಗೆ ಕಳುಹಿಸಲಾಗಿದೆ.

ಇದನ್ನೂ ಓದಿ: ಶ್ರದ್ಧಾ ವಾಲ್ಕರ್​ ನೆನಪಿಸುವ ಕೊಲೆ: ಕತ್ತರಿಸಿದ ಮೃತದೇಹ ಪ್ಲಾಸ್ಟಿಕ್​ ಚೀಲದಲ್ಲಿತ್ತು!

ETV Bharat Logo

Copyright © 2024 Ushodaya Enterprises Pvt. Ltd., All Rights Reserved.