ETV Bharat / bharat

Heat Wave: ಯುಪಿಯಲ್ಲಿ ಬಿಸಿಲಿನ ಹೊಡೆತ: ಹೀಟ್​ವೇವ್​ನಿಂದ 54 ಜನ ಸಾವು

author img

By

Published : Jun 18, 2023, 3:38 PM IST

ಉತ್ತರ ಪ್ರದೇಶದ ಬಲಿಯಾ ಜಿಲ್ಲೆಯಲ್ಲಿ ಬಿಸಿಲಿನ ತಾಪ ವಿಪರೀತವಾಗಿದೆ. ಬಿಸಿಲಿನ ಝಳಕ್ಕೆ ಜಿಲ್ಲೆಯಲ್ಲಿ 54 ಜನ ಪ್ರಾಣ ಕಳೆದುಕೊಂಡಿದ್ದಾರೆ.

Heatwave death toll rises to 54 in UPs Ballia
Heatwave death toll rises to 54 in UPs Ballia

ಲಕ್ನೋ : ಉತ್ತರ ಪ್ರದೇಶದ ಬಲಿಯಾ ಜಿಲ್ಲೆಯಲ್ಲಿ ಬಿಸಿಲಿನ ತಾಪದಿಂದ ಸಾವನ್ನಪ್ಪಿದವರ ಸಂಖ್ಯೆ 54 ಕ್ಕೆ ಏರಿದೆ. ಪ್ರದೇಶದಲ್ಲಿನ ಪರಿಸ್ಥಿತಿಯನ್ನು ಅವಲೋಕಿಸಲು ಸರ್ಕಾರ ಇಬ್ಬರು ಹಿರಿಯ ವೈದ್ಯರನ್ನು ಭಾನುವಾರ ಅಲ್ಲಿಗೆ ಕಳುಹಿಸಿದೆ ಎಂದು ಆರೋಗ್ಯ ಖಾತೆಯನ್ನು ಹೊಂದಿರುವ ಉಪ ಮುಖ್ಯಮಂತ್ರಿ ಬ್ರಜೇಶ್ ಪಾಠಕ್ ತಿಳಿಸಿದ್ದಾರೆ. 'ಬೇಜವಾಬ್ದಾರಿ ಹೇಳಿಕೆ' ನೀಡಿದ ಕಾರಣಕ್ಕಾಗಿ ಬಲಿಯಾ ಮುಖ್ಯ ವೈದ್ಯಕೀಯ ಅಧೀಕ್ಷಕರನ್ನು ಹುದ್ದೆಯಿಂದ ವಜಾ ಮಾಡಲಾಗಿದೆ ಎಂದು ಸಚಿವರು ವೀಡಿಯೊ ಹೇಳಿಕೆಯಲ್ಲಿ ತಿಳಿಸಿದ್ದಾರೆ.

ಬಿಸಿಲಿನ ತಾಪ ಹೆಚ್ಚಾಗುವುದರಿಂದ ಎಲ್ಲರಿಗೂ ಸಮಸ್ಯೆಯಾಗುತ್ತದೆ. ಆದರೆ ಅಂಥ ಹವಾಮಾನ ಪರಿಸ್ಥಿತಿಗಳಲ್ಲಿ, ರಕ್ತದೊತ್ತಡ, ಶ್ವಾಸನಾಳದ ಆಸ್ತಮಾದಂತಹ ಕಾಯಿಲೆಗಳಿಂದ ಬಳಲುತ್ತಿರುವ ಜನರ ಸಮಸ್ಯೆ ಇನ್ನೂ ಹೆಚ್ಚಾಗುತ್ತದೆ ಎಂದು ಬಲಿಯಾ ಜಿಲ್ಲಾ ಆಸ್ಪತ್ರೆಯ ಮುಖ್ಯ ವೈದ್ಯಕೀಯ ಅಧೀಕ್ಷಕರು ಹೇಳಿದ್ದರು. ಬಲಿಯಾ ಜಿಲ್ಲೆಯಲ್ಲಿ ಜೂನ್ 15 ರಂದು 23 ಜನರು ಸಾವನ್ನಪ್ಪಿದ್ದರೆ, ಜೂನ್ 16 ರ ಮಧ್ಯಾಹ್ನದವರೆಗೆ 11 ಜನರು ಸಾವನ್ನಪ್ಪಿದ್ದಾರೆ ಎಂದು ಜಿಲ್ಲಾ ಆರೋಗ್ಯ ಇಲಾಖೆ ಹೊರಡಿಸಿದ ಪ್ರಕಟಣೆ ತಿಳಿಸಿದೆ.

ಸಾವಿಗೆ ಬೇರೆ ಬೇರೆ ಕಾರಣಗಳಿದ್ದರೂ, ತೀವ್ರ ಬಿಸಿಲಿನಿಂದ ಅನೇಕರು ಸಾವಿಗೀಡಾಗಿದ್ದಾರೆ ಎಂದು ವೈದ್ಯರು ಹೇಳಿದ್ದಾರೆ. ತೀವ್ರ ಶಾಖದಿಂದಾಗಿ ಆಸ್ಪತ್ರೆಗೆ ದಾಖಲಾಗುವವರ ಸಂಖ್ಯೆ ಹೆಚ್ಚುತ್ತಿದೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ. ತೀವ್ರ ಬಿಸಿಲ ಅಲೆಯು ರಾಜ್ಯಾದ್ಯಂತ ಆವರಿಸಿದ್ದು, ಹೆಚ್ಚಿನ ಸ್ಥಳಗಳಲ್ಲಿ ತಾಪಮಾನವು 40 ಡಿಗ್ರಿ ದಾಟಿದೆ. ಜ್ವರ, ಉಸಿರಾಟದ ತೊಂದರೆ ಮತ್ತು ಇತರ ಸಮಸ್ಯೆಗಳಿಂದ ರೋಗಿಗಳು ಆಸ್ಪತ್ರೆಗಳಿಗೆ ದಾಖಲಾಗುತ್ತಿರುವುದು ಹೆಚ್ಚಾಗುತ್ತಿದೆ. ಜೊತೆಗೆ ಹಠಾತ್ ಸಾವುಗಳು ಸಂಭವಿಸುತ್ತಿವೆ.

ಯಾವುದಾದರೂ ಪತ್ತೆಯಾಗದ ಕಾಯಿಲೆ ಏನಾದರೂ ಬಂದಿದೆಯಾ ಎಂಬುದರ ಬಗ್ಗೆ ತನಿಖೆ ನಡೆಸಲು ಲಕ್ನೋದಿಂದ ವೈದ್ಯರ ತಂಡ ಬರುತ್ತಿದೆ ಎಂದು ಅಜಮಗಢ ವಿಭಾಗದ ಹೆಚ್ಚುವರಿ ಆರೋಗ್ಯ ನಿರ್ದೇಶಕ ಡಾ. ಬಿಪಿ ತಿವಾರಿ ತಿಳಿಸಿದರು. ಬಿಸಿಲಿನ ಝಳ ತೀವ್ರವಾಗಿದ್ದಾಗ ಅಥವಾ ತೀರಾ ಚಳಿ ಇರುವಾಗ ಉಸಿರಾಟದ ಸಮಸ್ಯೆ ಹೊಂದಿರುವ ರೋಗಿಗಳು, ಮಧುಮೇಹ ರೋಗಿಗಳು ಮತ್ತು ರಕ್ತದೊತ್ತಡದ ರೋಗಿಗಳಿಗೆ ಹೆಚ್ಚಿನ ಅಪಾಯದ ಸಾಧ್ಯತೆ ಇರುತ್ತದೆ. ಅತಿಯಾದ ಬಿಸಿಲಿನಿಂದ ಇಂಥವರು ಕೆಲವೊಮ್ಮೆ ಸಾವಿಗೀಡಾಗಬಹುದು ಎಂದು ಡಾ ತಿವಾರಿ ಹೇಳಿದರು.

ಜಿಲ್ಲಾಸ್ಪತ್ರೆಯಲ್ಲಿ ಭಾರಿ ಜನದಟ್ಟಣೆ ಕಂಡು ಬರುತ್ತಿದ್ದು, ರೋಗಿಗಳಿಗೆ ಸಕಾಲಕ್ಕೆ ಸ್ಟ್ರೆಚರ್‌ ಲಭ್ಯವಾಗುತ್ತಿಲ್ಲ. ಇನ್ನು ಕೆಲವೆಡೆ ಸಂಬಂಧಿಕರು ತಮ್ಮ ರೋಗಿಗಳನ್ನು ಹೆಗಲ ಮೇಲೆ ಹೊತ್ತುಕೊಂಡು ತುರ್ತು ಚಿಕಿತ್ಸಾ ವಿಭಾಗಕ್ಕೆ ಹೋಗುತ್ತಿರುವುದು ಕಂಡು ಬಂದಿದೆ. "ಒಮ್ಮೆಲೇ ಅತ್ಯಧಿಕ ಸಂಖ್ಯೆಯಲ್ಲಿ ರೋಗಿಗಳು ಬಂದಾಗ ಸಮಸ್ಯೆಯಾಗುತ್ತದೆ. ಆದರೆ ಎಲ್ಲರಿಗೂ ಸ್ಟ್ರೆಚರ್ ಲಭ್ಯವಾಗುತ್ತಿದೆ" ಎಂದು ಹೆಚ್ಚುವರಿ ಆರೋಗ್ಯ ನಿರ್ದೇಶಕರು ತಿಳಿಸಿದ್ದಾರೆ. ಸರ್ಕಾರಿ ಆಸ್ಪತ್ರೆಗಳಲ್ಲಿ ಸೌಲಭ್ಯಗಳ ಯಾವುದೇ ಕೊರತೆ ಇಲ್ಲ ಎಂದು ಇದೇ ವೇಳೆ ರಾಜ್ಯದ ಉಪಮುಖ್ಯಮಂತ್ರಿಗಳು ಪ್ರತಿಪಾದಿಸಿದ್ದಾರೆ.

ಹೀಟ್ ವೇವ್ ಎಂಬುದು ಅಸಹಜವಾಗಿ ಹೆಚ್ಚಾಗುವ ತಾಪಮಾನದ ಅವಧಿಯಾಗಿದೆ. ಇದು ಭಾರತದ ವಿವಿಧ ಭಾಗಗಳಲ್ಲಿ ಬೇಸಿಗೆ ಕಾಲದಲ್ಲಿ ಸಂಭವಿಸುವ ಸಾಮಾನ್ಯ ಗರಿಷ್ಠ ತಾಪಮಾನಕ್ಕಿಂತ ಹೆಚ್ಚು. ಹೀಟ್ ವೇವ್ಸ್ ಸಾಮಾನ್ಯವಾಗಿ ಮಾರ್ಚ್ ಮತ್ತು ಜೂನ್ ನಡುವೆ ಸಂಭವಿಸುತ್ತದೆ ಮತ್ತು ಕೆಲವು ಅಪರೂಪದ ಸಂದರ್ಭಗಳಲ್ಲಿ ಜುಲೈ ವರೆಗೆ ವಿಸ್ತರಿಸುತ್ತದೆ.

ಇದನ್ನೂ ಓದಿ : Petrol Diesel: ಮುಂಗಾರು ಆಗಮನ: ಪೆಟ್ರೋಲ್, ಡೀಸೆಲ್​ ಮಾರಾಟ ಇಳಿಕೆ

ಲಕ್ನೋ : ಉತ್ತರ ಪ್ರದೇಶದ ಬಲಿಯಾ ಜಿಲ್ಲೆಯಲ್ಲಿ ಬಿಸಿಲಿನ ತಾಪದಿಂದ ಸಾವನ್ನಪ್ಪಿದವರ ಸಂಖ್ಯೆ 54 ಕ್ಕೆ ಏರಿದೆ. ಪ್ರದೇಶದಲ್ಲಿನ ಪರಿಸ್ಥಿತಿಯನ್ನು ಅವಲೋಕಿಸಲು ಸರ್ಕಾರ ಇಬ್ಬರು ಹಿರಿಯ ವೈದ್ಯರನ್ನು ಭಾನುವಾರ ಅಲ್ಲಿಗೆ ಕಳುಹಿಸಿದೆ ಎಂದು ಆರೋಗ್ಯ ಖಾತೆಯನ್ನು ಹೊಂದಿರುವ ಉಪ ಮುಖ್ಯಮಂತ್ರಿ ಬ್ರಜೇಶ್ ಪಾಠಕ್ ತಿಳಿಸಿದ್ದಾರೆ. 'ಬೇಜವಾಬ್ದಾರಿ ಹೇಳಿಕೆ' ನೀಡಿದ ಕಾರಣಕ್ಕಾಗಿ ಬಲಿಯಾ ಮುಖ್ಯ ವೈದ್ಯಕೀಯ ಅಧೀಕ್ಷಕರನ್ನು ಹುದ್ದೆಯಿಂದ ವಜಾ ಮಾಡಲಾಗಿದೆ ಎಂದು ಸಚಿವರು ವೀಡಿಯೊ ಹೇಳಿಕೆಯಲ್ಲಿ ತಿಳಿಸಿದ್ದಾರೆ.

ಬಿಸಿಲಿನ ತಾಪ ಹೆಚ್ಚಾಗುವುದರಿಂದ ಎಲ್ಲರಿಗೂ ಸಮಸ್ಯೆಯಾಗುತ್ತದೆ. ಆದರೆ ಅಂಥ ಹವಾಮಾನ ಪರಿಸ್ಥಿತಿಗಳಲ್ಲಿ, ರಕ್ತದೊತ್ತಡ, ಶ್ವಾಸನಾಳದ ಆಸ್ತಮಾದಂತಹ ಕಾಯಿಲೆಗಳಿಂದ ಬಳಲುತ್ತಿರುವ ಜನರ ಸಮಸ್ಯೆ ಇನ್ನೂ ಹೆಚ್ಚಾಗುತ್ತದೆ ಎಂದು ಬಲಿಯಾ ಜಿಲ್ಲಾ ಆಸ್ಪತ್ರೆಯ ಮುಖ್ಯ ವೈದ್ಯಕೀಯ ಅಧೀಕ್ಷಕರು ಹೇಳಿದ್ದರು. ಬಲಿಯಾ ಜಿಲ್ಲೆಯಲ್ಲಿ ಜೂನ್ 15 ರಂದು 23 ಜನರು ಸಾವನ್ನಪ್ಪಿದ್ದರೆ, ಜೂನ್ 16 ರ ಮಧ್ಯಾಹ್ನದವರೆಗೆ 11 ಜನರು ಸಾವನ್ನಪ್ಪಿದ್ದಾರೆ ಎಂದು ಜಿಲ್ಲಾ ಆರೋಗ್ಯ ಇಲಾಖೆ ಹೊರಡಿಸಿದ ಪ್ರಕಟಣೆ ತಿಳಿಸಿದೆ.

ಸಾವಿಗೆ ಬೇರೆ ಬೇರೆ ಕಾರಣಗಳಿದ್ದರೂ, ತೀವ್ರ ಬಿಸಿಲಿನಿಂದ ಅನೇಕರು ಸಾವಿಗೀಡಾಗಿದ್ದಾರೆ ಎಂದು ವೈದ್ಯರು ಹೇಳಿದ್ದಾರೆ. ತೀವ್ರ ಶಾಖದಿಂದಾಗಿ ಆಸ್ಪತ್ರೆಗೆ ದಾಖಲಾಗುವವರ ಸಂಖ್ಯೆ ಹೆಚ್ಚುತ್ತಿದೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ. ತೀವ್ರ ಬಿಸಿಲ ಅಲೆಯು ರಾಜ್ಯಾದ್ಯಂತ ಆವರಿಸಿದ್ದು, ಹೆಚ್ಚಿನ ಸ್ಥಳಗಳಲ್ಲಿ ತಾಪಮಾನವು 40 ಡಿಗ್ರಿ ದಾಟಿದೆ. ಜ್ವರ, ಉಸಿರಾಟದ ತೊಂದರೆ ಮತ್ತು ಇತರ ಸಮಸ್ಯೆಗಳಿಂದ ರೋಗಿಗಳು ಆಸ್ಪತ್ರೆಗಳಿಗೆ ದಾಖಲಾಗುತ್ತಿರುವುದು ಹೆಚ್ಚಾಗುತ್ತಿದೆ. ಜೊತೆಗೆ ಹಠಾತ್ ಸಾವುಗಳು ಸಂಭವಿಸುತ್ತಿವೆ.

ಯಾವುದಾದರೂ ಪತ್ತೆಯಾಗದ ಕಾಯಿಲೆ ಏನಾದರೂ ಬಂದಿದೆಯಾ ಎಂಬುದರ ಬಗ್ಗೆ ತನಿಖೆ ನಡೆಸಲು ಲಕ್ನೋದಿಂದ ವೈದ್ಯರ ತಂಡ ಬರುತ್ತಿದೆ ಎಂದು ಅಜಮಗಢ ವಿಭಾಗದ ಹೆಚ್ಚುವರಿ ಆರೋಗ್ಯ ನಿರ್ದೇಶಕ ಡಾ. ಬಿಪಿ ತಿವಾರಿ ತಿಳಿಸಿದರು. ಬಿಸಿಲಿನ ಝಳ ತೀವ್ರವಾಗಿದ್ದಾಗ ಅಥವಾ ತೀರಾ ಚಳಿ ಇರುವಾಗ ಉಸಿರಾಟದ ಸಮಸ್ಯೆ ಹೊಂದಿರುವ ರೋಗಿಗಳು, ಮಧುಮೇಹ ರೋಗಿಗಳು ಮತ್ತು ರಕ್ತದೊತ್ತಡದ ರೋಗಿಗಳಿಗೆ ಹೆಚ್ಚಿನ ಅಪಾಯದ ಸಾಧ್ಯತೆ ಇರುತ್ತದೆ. ಅತಿಯಾದ ಬಿಸಿಲಿನಿಂದ ಇಂಥವರು ಕೆಲವೊಮ್ಮೆ ಸಾವಿಗೀಡಾಗಬಹುದು ಎಂದು ಡಾ ತಿವಾರಿ ಹೇಳಿದರು.

ಜಿಲ್ಲಾಸ್ಪತ್ರೆಯಲ್ಲಿ ಭಾರಿ ಜನದಟ್ಟಣೆ ಕಂಡು ಬರುತ್ತಿದ್ದು, ರೋಗಿಗಳಿಗೆ ಸಕಾಲಕ್ಕೆ ಸ್ಟ್ರೆಚರ್‌ ಲಭ್ಯವಾಗುತ್ತಿಲ್ಲ. ಇನ್ನು ಕೆಲವೆಡೆ ಸಂಬಂಧಿಕರು ತಮ್ಮ ರೋಗಿಗಳನ್ನು ಹೆಗಲ ಮೇಲೆ ಹೊತ್ತುಕೊಂಡು ತುರ್ತು ಚಿಕಿತ್ಸಾ ವಿಭಾಗಕ್ಕೆ ಹೋಗುತ್ತಿರುವುದು ಕಂಡು ಬಂದಿದೆ. "ಒಮ್ಮೆಲೇ ಅತ್ಯಧಿಕ ಸಂಖ್ಯೆಯಲ್ಲಿ ರೋಗಿಗಳು ಬಂದಾಗ ಸಮಸ್ಯೆಯಾಗುತ್ತದೆ. ಆದರೆ ಎಲ್ಲರಿಗೂ ಸ್ಟ್ರೆಚರ್ ಲಭ್ಯವಾಗುತ್ತಿದೆ" ಎಂದು ಹೆಚ್ಚುವರಿ ಆರೋಗ್ಯ ನಿರ್ದೇಶಕರು ತಿಳಿಸಿದ್ದಾರೆ. ಸರ್ಕಾರಿ ಆಸ್ಪತ್ರೆಗಳಲ್ಲಿ ಸೌಲಭ್ಯಗಳ ಯಾವುದೇ ಕೊರತೆ ಇಲ್ಲ ಎಂದು ಇದೇ ವೇಳೆ ರಾಜ್ಯದ ಉಪಮುಖ್ಯಮಂತ್ರಿಗಳು ಪ್ರತಿಪಾದಿಸಿದ್ದಾರೆ.

ಹೀಟ್ ವೇವ್ ಎಂಬುದು ಅಸಹಜವಾಗಿ ಹೆಚ್ಚಾಗುವ ತಾಪಮಾನದ ಅವಧಿಯಾಗಿದೆ. ಇದು ಭಾರತದ ವಿವಿಧ ಭಾಗಗಳಲ್ಲಿ ಬೇಸಿಗೆ ಕಾಲದಲ್ಲಿ ಸಂಭವಿಸುವ ಸಾಮಾನ್ಯ ಗರಿಷ್ಠ ತಾಪಮಾನಕ್ಕಿಂತ ಹೆಚ್ಚು. ಹೀಟ್ ವೇವ್ಸ್ ಸಾಮಾನ್ಯವಾಗಿ ಮಾರ್ಚ್ ಮತ್ತು ಜೂನ್ ನಡುವೆ ಸಂಭವಿಸುತ್ತದೆ ಮತ್ತು ಕೆಲವು ಅಪರೂಪದ ಸಂದರ್ಭಗಳಲ್ಲಿ ಜುಲೈ ವರೆಗೆ ವಿಸ್ತರಿಸುತ್ತದೆ.

ಇದನ್ನೂ ಓದಿ : Petrol Diesel: ಮುಂಗಾರು ಆಗಮನ: ಪೆಟ್ರೋಲ್, ಡೀಸೆಲ್​ ಮಾರಾಟ ಇಳಿಕೆ

ETV Bharat Logo

Copyright © 2024 Ushodaya Enterprises Pvt. Ltd., All Rights Reserved.