ETV Bharat / bharat

ಹಿಜಾಬ್​ ತೀರ್ಪಿನ ಮೇಲ್ಮನವಿ ತುರ್ತು ವಿಚಾರಣೆ ಇಲ್ಲ: ಸುಪ್ರೀಂಕೋರ್ಟ್​ ಸ್ಪಷ್ಟನೆ

ಮೇಲ್ಮನವಿ ಅರ್ಜಿಯನ್ನ ಹೋಳಿ ಹಬ್ಬದ ನಂತರ ಕೈಗೆತ್ತಿಕೊಳ್ಳುವುದಾಗಿ ಸುಪ್ರೀಂಕೋರ್ಟ್​ ತಿಳಿಸಿದೆ. ಸುಪ್ರೀಂಕೋರ್ಟ್​ನ ಹಿರಿಯ ನ್ಯಾಯಮೂರ್ತಿ ಸಂಜಯ್​ ಹೆಗ್ಡೆ ಇದರ ವಿಚಾರಣೆ ನಡೆಸಲಿದ್ದಾರೆ..

author img

By

Published : Mar 16, 2022, 3:10 PM IST

Hijab in Supreme Court
Hijab in Supreme Court

ನವದೆಹಲಿ : ಶಾಲಾ- ಕಾಲೇಜ್​ಗಳಲ್ಲಿ ಹಿಜಾಬ್​ ಹಾಕಿಕೊಂಡು ಹೋಗುವ ವಿಚಾರಕ್ಕೆ ಸಂಬಂಧಿಸಿದಂತೆ ಕರ್ನಾಟಕ ಹೈಕೋರ್ಟ್ ನೀಡಿರುವ ತೀರ್ಪು ಪ್ರಶ್ನೆ ಮಾಡಿ ಇದೀಗ ಸುಪ್ರೀಂಕೋರ್ಟ್​​ನಲ್ಲಿ ಮೇಲ್ಮನವಿ ಸಲ್ಲಿಕೆ ಮಾಡಲಾಗಿದೆ. ಇದರ ತುರ್ತು ವಿಚಾರಣೆ ನಡೆಸಲು ಸಾಧ್ಯವಿಲ್ಲ ಎಂದು ಸರ್ವೋನ್ನತ ನ್ಯಾಯಾಲಯ ಹೇಳಿದೆ.

ರಾಜ್ಯದಲ್ಲಿ ಉಂಟಾಗಿದ್ದ ಹಿಜಾಬ್​ ವಿವಾದದ ಬಗ್ಗೆ ನಿನ್ನೆ ಅಂತಿಮ ತೀರ್ಪು ನೀಡಿದ್ದ ಕರ್ನಾಟಕ ಹೈಕೋರ್ಟ್​, ಶಾಲಾ-ಕಾಲೇಜುಗಳಲ್ಲಿ ಆಡಳಿತ ಮಂಡಳಿ ನಿಗದಿಪಡಿಸುವ ಸಮವಸ್ತ್ರವನ್ನ ಕಡ್ಡಾಯವಾಗಿ ಪಾಲಿಸಬೇಕು. ಇಲ್ಲಿ ಯಾವುದೇ ಕಾರಣಕ್ಕೂ ಹಿಜಾಬ್​, ಕೇಸರಿ ಶಾಲ್​​ಗಳಿಗೆ ಅವಕಾಶವಿಲ್ಲ ಎಂದು ತೀರ್ಪು ನೀಡಿತ್ತು.

ಇದನ್ನ ಪ್ರಶ್ನೆ ಮಾಡಿದ್ದ ವಿದ್ಯಾರ್ಥಿನಿ ನಿಬಾನಾಜ್​​ ಸುಪ್ರೀಂಕೋರ್ಟ್​ನಲ್ಲಿ ಮೇಲ್ಮನವಿ ಸಲ್ಲಿಕೆ ಮಾಡಿದ್ದರು. ಮೇಲ್ಮನವಿ ಅರ್ಜಿಯನ್ನ ಹೋಳಿ ಹಬ್ಬದ ನಂತರ ಕೈಗೆತ್ತಿಕೊಳ್ಳುವುದಾಗಿ ಸುಪ್ರೀಂಕೋರ್ಟ್​ ತಿಳಿಸಿದೆ. ಸುಪ್ರೀಂಕೋರ್ಟ್​ನ ಹಿರಿಯ ನ್ಯಾಯಮೂರ್ತಿ ಸಂಜಯ್​ ಹೆಗ್ಡೆ ಇದರ ವಿಚಾರಣೆ ನಡೆಸಲಿದ್ದಾರೆ.

ಇದನ್ನೂ ಓದಿರಿ: ಪಂಜಾಬ್ ಮುಖ್ಯಮಂತ್ರಿಯಾಗಿ ಪ್ರಮಾಣವಚನ ಸ್ವೀಕರಿಸಿದ ಆಪ್​ನ ಭಗವಂತ್​ ಮಾನ್

ಕಳೆದ ಜನವರಿ ತಿಂಗಳಿಂದಲೂ ಹಿಜಾಬ್​ ಪರ ಮತ್ತು ವಿರೋಧಿ ಚರ್ಚೆಗಳು ನಡೆಯುತ್ತಿದ್ದವು. ಹಿಜಾಬ್​ ಧರಿಸುವುದಕ್ಕೆ ಪ್ರತಿಯಾಗಿ ಕೇಸರಿ ಶಾಲು ಧರಿಸಿಕೊಂಡು ಬರುವ ಮೂಲಕ ವಿವಾದ ಮತ್ತಷ್ಟು ಕಾವು ಪಡೆದಿತ್ತು.

ಉಡುಪಿಯ ಸರ್ಕಾರಿ ಮಹಿಳಾ ಪದವಿಪೂರ್ವ ಕಾಲೇಜಿನಿಂದ ಆರಂಭವಾಗಿದ್ದ ಹಿಜಾಬ್​ ವಿವಾದ ದೇಶಾದ್ಯಂತ ವ್ಯಾಪಿಸಿತ್ತು. ನಿನ್ನೆ ಕರ್ನಾಟಕ ಹೈಕೋರ್ಟ್​ನಿಂದ ಮಹತ್ವದ ತೀರ್ಪು ಹೊರ ಬಿದ್ದಿದೆ. ಇದನ್ನ ಪ್ರಶ್ನೆ ಮಾಡಿರುವ ಹಿಜಾಬ್ ಪರ ಅರ್ಜಿದಾರರು ಇದೀಗ ಸುಪ್ರೀಂಕೋರ್ಟ್ ಮೆಟ್ಟಿಲೇರಿದ್ದಾರೆ.

ನವದೆಹಲಿ : ಶಾಲಾ- ಕಾಲೇಜ್​ಗಳಲ್ಲಿ ಹಿಜಾಬ್​ ಹಾಕಿಕೊಂಡು ಹೋಗುವ ವಿಚಾರಕ್ಕೆ ಸಂಬಂಧಿಸಿದಂತೆ ಕರ್ನಾಟಕ ಹೈಕೋರ್ಟ್ ನೀಡಿರುವ ತೀರ್ಪು ಪ್ರಶ್ನೆ ಮಾಡಿ ಇದೀಗ ಸುಪ್ರೀಂಕೋರ್ಟ್​​ನಲ್ಲಿ ಮೇಲ್ಮನವಿ ಸಲ್ಲಿಕೆ ಮಾಡಲಾಗಿದೆ. ಇದರ ತುರ್ತು ವಿಚಾರಣೆ ನಡೆಸಲು ಸಾಧ್ಯವಿಲ್ಲ ಎಂದು ಸರ್ವೋನ್ನತ ನ್ಯಾಯಾಲಯ ಹೇಳಿದೆ.

ರಾಜ್ಯದಲ್ಲಿ ಉಂಟಾಗಿದ್ದ ಹಿಜಾಬ್​ ವಿವಾದದ ಬಗ್ಗೆ ನಿನ್ನೆ ಅಂತಿಮ ತೀರ್ಪು ನೀಡಿದ್ದ ಕರ್ನಾಟಕ ಹೈಕೋರ್ಟ್​, ಶಾಲಾ-ಕಾಲೇಜುಗಳಲ್ಲಿ ಆಡಳಿತ ಮಂಡಳಿ ನಿಗದಿಪಡಿಸುವ ಸಮವಸ್ತ್ರವನ್ನ ಕಡ್ಡಾಯವಾಗಿ ಪಾಲಿಸಬೇಕು. ಇಲ್ಲಿ ಯಾವುದೇ ಕಾರಣಕ್ಕೂ ಹಿಜಾಬ್​, ಕೇಸರಿ ಶಾಲ್​​ಗಳಿಗೆ ಅವಕಾಶವಿಲ್ಲ ಎಂದು ತೀರ್ಪು ನೀಡಿತ್ತು.

ಇದನ್ನ ಪ್ರಶ್ನೆ ಮಾಡಿದ್ದ ವಿದ್ಯಾರ್ಥಿನಿ ನಿಬಾನಾಜ್​​ ಸುಪ್ರೀಂಕೋರ್ಟ್​ನಲ್ಲಿ ಮೇಲ್ಮನವಿ ಸಲ್ಲಿಕೆ ಮಾಡಿದ್ದರು. ಮೇಲ್ಮನವಿ ಅರ್ಜಿಯನ್ನ ಹೋಳಿ ಹಬ್ಬದ ನಂತರ ಕೈಗೆತ್ತಿಕೊಳ್ಳುವುದಾಗಿ ಸುಪ್ರೀಂಕೋರ್ಟ್​ ತಿಳಿಸಿದೆ. ಸುಪ್ರೀಂಕೋರ್ಟ್​ನ ಹಿರಿಯ ನ್ಯಾಯಮೂರ್ತಿ ಸಂಜಯ್​ ಹೆಗ್ಡೆ ಇದರ ವಿಚಾರಣೆ ನಡೆಸಲಿದ್ದಾರೆ.

ಇದನ್ನೂ ಓದಿರಿ: ಪಂಜಾಬ್ ಮುಖ್ಯಮಂತ್ರಿಯಾಗಿ ಪ್ರಮಾಣವಚನ ಸ್ವೀಕರಿಸಿದ ಆಪ್​ನ ಭಗವಂತ್​ ಮಾನ್

ಕಳೆದ ಜನವರಿ ತಿಂಗಳಿಂದಲೂ ಹಿಜಾಬ್​ ಪರ ಮತ್ತು ವಿರೋಧಿ ಚರ್ಚೆಗಳು ನಡೆಯುತ್ತಿದ್ದವು. ಹಿಜಾಬ್​ ಧರಿಸುವುದಕ್ಕೆ ಪ್ರತಿಯಾಗಿ ಕೇಸರಿ ಶಾಲು ಧರಿಸಿಕೊಂಡು ಬರುವ ಮೂಲಕ ವಿವಾದ ಮತ್ತಷ್ಟು ಕಾವು ಪಡೆದಿತ್ತು.

ಉಡುಪಿಯ ಸರ್ಕಾರಿ ಮಹಿಳಾ ಪದವಿಪೂರ್ವ ಕಾಲೇಜಿನಿಂದ ಆರಂಭವಾಗಿದ್ದ ಹಿಜಾಬ್​ ವಿವಾದ ದೇಶಾದ್ಯಂತ ವ್ಯಾಪಿಸಿತ್ತು. ನಿನ್ನೆ ಕರ್ನಾಟಕ ಹೈಕೋರ್ಟ್​ನಿಂದ ಮಹತ್ವದ ತೀರ್ಪು ಹೊರ ಬಿದ್ದಿದೆ. ಇದನ್ನ ಪ್ರಶ್ನೆ ಮಾಡಿರುವ ಹಿಜಾಬ್ ಪರ ಅರ್ಜಿದಾರರು ಇದೀಗ ಸುಪ್ರೀಂಕೋರ್ಟ್ ಮೆಟ್ಟಿಲೇರಿದ್ದಾರೆ.

ETV Bharat Logo

Copyright © 2024 Ushodaya Enterprises Pvt. Ltd., All Rights Reserved.