ETV Bharat / bharat

ತಿರುಚಿದ ಇತಿಹಾಸ ಸರಿಪಡಿಸುವುದನ್ನು ತಡೆಯಲು ಯಾರಿಂದಲೂ ಸಾಧ್ಯವಿಲ್ಲ: ಅಮಿತ್ ಶಾ

author img

By

Published : Nov 25, 2022, 12:34 PM IST

ನಮ್ಮ ಇತಿಹಾಸವನ್ನು ಸರಿಯಾಗಿ ಪ್ರಸ್ತುತಪಡಿಸಲಾಗಿಲ್ಲ ಮತ್ತು ಅದನ್ನು ತಿರುಚಲಾಗಿದೆ ಎಂದು ನಾನು ಬಹಳಷ್ಟು ಬಾರಿ ತಿಳಿದುಕೊಂಡಿದ್ದೇನೆ. ಬಹುಶಃ ಅದು ಸರಿಯಾಗಿರಬಹುದು. ಆದರೆ ಈಗ ನಾವು ಇದನ್ನು ಸರಿಪಡಿಸಬೇಕಾಗಿದೆ ಎಂದು ಅಮಿತ್ ಶಾ ಹೇಳಿದರು.

ತಿರುಚಲಾದ ಇತಿಹಾಸ ಸರಿಪಡಿಸುವುದನ್ನು ತಡೆಯಲು ಯಾರಿಂದಲೂ ಸಾಧ್ಯವಿಲ್ಲ: ಗೃಹ ಸಚಿವ ಅಮಿತ್ ಶಾ
home-minister-amit-shah-says-nothing-can-stop-us-from-correcting-and-rewriting-distorted-history

ನವದೆಹಲಿ: ಭಾರತದ ದೃಷ್ಟಿಕೋನದಿಂದ ಇತಿಹಾಸವನ್ನು ಪುನಃ ಬರೆಯುವಂತೆ ಕೇಂದ್ರ ಗೃಹ ಸಚಿವ ಅಮಿತ್ ಶಾ ಇತಿಹಾಸಕಾರರಿಗೆ ಮನವಿ ಮಾಡಿದ್ದಾರೆ. ಇದಕ್ಕಾಗಿ ಅಗತ್ಯವಿರುವ ಎಲ್ಲ ನೆರವನ್ನು ಸರ್ಕಾರ ನೀಡಲಿದೆ ಎಂದು ಅವರು ಭರವಸೆ ಕೊಟ್ಟರು.

ನಾನೊಬ್ಬ ಇತಿಹಾಸದ ವಿದ್ಯಾರ್ಥಿ. ನಮ್ಮ ಇತಿಹಾಸವನ್ನು ಸರಿಯಾಗಿ ಪ್ರಸ್ತುತಪಡಿಸಲಾಗಿಲ್ಲ ಮತ್ತು ಅದನ್ನು ತಿರುಚಲಾಗಿದೆ ಎಂದು ನಾನು ಬಹಳಷ್ಟು ಬಾರಿ ತಿಳಿದುಕೊಂಡಿದ್ದೇನೆ. ಬಹುಶಃ ಅದು ಸರಿಯಾಗಿರಬಹುದು. ಆದರೆ ಈಗ ನಾವು ಇದನ್ನು ಸರಿಪಡಿಸಬೇಕಾಗಿದೆ ಎಂದು ಶಾ ಹೇಳಿದರು. ಅಸ್ಸಾಂ ಸರ್ಕಾರದ ವತಿಯಿಂದ ದೆಹಲಿಯಲ್ಲಿ ಏರ್ಪಡಿಸಲಾದ 17 ನೇ ಶತಮಾನದ ಅಹೋಮ್ ಜನರಲ್ ಲಚಿತ್ ಬರ್ಫುಕನ್ ಅವರ 400 ನೇ ಜನ್ಮ ವಾರ್ಷಿಕೋತ್ಸವದ ಮೂರು ದಿನಗಳ ಆಚರಣೆಯ 2 ನೇ ದಿನದ ಸಮಾರಂಭದಲ್ಲಿ ಅವರು ಮಾತನಾಡಿದರು.

ಇತಿಹಾಸವನ್ನು ಸರಿಯಾಗಿ ಮತ್ತು ವೈಭವಯುತವಾಗಿ ಪ್ರಸ್ತುತಪಡಿಸುವುದನ್ನು ಯಾರು ತಡೆಯಬಲ್ಲರು ಎಂದು ನಾನು ಕೇಳ ಬಯಸುತ್ತೇನೆ ಎಂದು ಶಾ ನುಡಿದರು.

ಅಹೋಮ್ ಜನರಲ್ ಲಚಿತ್ ಬರ್ಫುಕನ್ ಅವರ ನೆನಪಿಗಾಗಿ ನವೆಂಬರ್ 24 ಅನ್ನು ಲಚಿತ್ ದಿವಸ್ ಎಂದು ಆಚರಿಸಲಾಗುತ್ತದೆ.

ಇತಿಹಾಸ ಸರಿಯಾಗಿಲ್ಲ ಎಂಬ ಭಾವನೆಯನ್ನು ತೊಡೆದುಹಾಕಲು ನಾನು ವಿನಂತಿಸುತ್ತಿದ್ದೇನೆ. ದೇಶದಲ್ಲಿ 150 ವರ್ಷಗಳ ಕಾಲ ಆಳಿದ 30 ರಾಜವಂಶಗಳು ಮತ್ತು ಸ್ವಾತಂತ್ರ್ಯಕ್ಕಾಗಿ ಹೋರಾಡಿದ 300 ಗಣ್ಯ ವ್ಯಕ್ತಿಗಳ ಬಗ್ಗೆ ಸಂಶೋಧನೆ ಮಾಡಲು ಪ್ರಯತ್ನಿಸುವಂತೆ ಇಲ್ಲಿ ಕುಳಿತಿರುವ ಎಲ್ಲಾ ವಿದ್ಯಾರ್ಥಿಗಳು ಮತ್ತು ವಿಶ್ವವಿದ್ಯಾಲಯದ ಪ್ರಾಧ್ಯಾಪಕರಿಗೆ ವಿನಂತಿಸುತ್ತೇನೆ ಎಂದು ಅವರು ಹೇಳಿದರು.

ಮುಂದೆ ಬನ್ನಿ, ಸಂಶೋಧನೆ ಮಾಡಿ ಮತ್ತು ಇತಿಹಾಸವನ್ನು ಪುನಃ ಬರೆಯಿರಿ. ಈ ರೀತಿಯಾಗಿ ನಾವು ಭವಿಷ್ಯದ ಪೀಳಿಗೆಗೂ ಸ್ಫೂರ್ತಿ ನೀಡಬಹುದು ಎಂದು ಅವರು ಹೇಳಿದರು.

ಈ ಸಂದರ್ಭದಲ್ಲಿ ಅವರು ಲಚಿತ್ ಕುರಿತ ಸಾಕ್ಷ್ಯಚಿತ್ರವನ್ನು ಉದ್ಘಾಟಿಸಿದರು. ಪ್ರಧಾನಿ ನರೇಂದ್ರ ಮೋದಿ ಈಶಾನ್ಯ ಮತ್ತು ಭಾರತದ ಉಳಿದ ಭಾಗಗಳ ನಡುವಿನ ಅಂತರವನ್ನು ಕಡಿಮೆ ಮಾಡಿದ್ದಾರೆ. ಸರ್ಕಾರದ ಪ್ರಯತ್ನದಿಂದ ಈಶಾನ್ಯದಲ್ಲಿ ಶಾಂತಿ ನೆಲೆಸಿದೆ ಎಂದರು.

ಇದನ್ನೂ ಓದಿ: ನಾವು ದೇಶದ ಯಾವುದೇ ಭಾಷೆ ನಾಶವಾಗಲು ಬಿಡುವುದಿಲ್ಲ: ಅಮಿತ್ ಶಾ

ನವದೆಹಲಿ: ಭಾರತದ ದೃಷ್ಟಿಕೋನದಿಂದ ಇತಿಹಾಸವನ್ನು ಪುನಃ ಬರೆಯುವಂತೆ ಕೇಂದ್ರ ಗೃಹ ಸಚಿವ ಅಮಿತ್ ಶಾ ಇತಿಹಾಸಕಾರರಿಗೆ ಮನವಿ ಮಾಡಿದ್ದಾರೆ. ಇದಕ್ಕಾಗಿ ಅಗತ್ಯವಿರುವ ಎಲ್ಲ ನೆರವನ್ನು ಸರ್ಕಾರ ನೀಡಲಿದೆ ಎಂದು ಅವರು ಭರವಸೆ ಕೊಟ್ಟರು.

ನಾನೊಬ್ಬ ಇತಿಹಾಸದ ವಿದ್ಯಾರ್ಥಿ. ನಮ್ಮ ಇತಿಹಾಸವನ್ನು ಸರಿಯಾಗಿ ಪ್ರಸ್ತುತಪಡಿಸಲಾಗಿಲ್ಲ ಮತ್ತು ಅದನ್ನು ತಿರುಚಲಾಗಿದೆ ಎಂದು ನಾನು ಬಹಳಷ್ಟು ಬಾರಿ ತಿಳಿದುಕೊಂಡಿದ್ದೇನೆ. ಬಹುಶಃ ಅದು ಸರಿಯಾಗಿರಬಹುದು. ಆದರೆ ಈಗ ನಾವು ಇದನ್ನು ಸರಿಪಡಿಸಬೇಕಾಗಿದೆ ಎಂದು ಶಾ ಹೇಳಿದರು. ಅಸ್ಸಾಂ ಸರ್ಕಾರದ ವತಿಯಿಂದ ದೆಹಲಿಯಲ್ಲಿ ಏರ್ಪಡಿಸಲಾದ 17 ನೇ ಶತಮಾನದ ಅಹೋಮ್ ಜನರಲ್ ಲಚಿತ್ ಬರ್ಫುಕನ್ ಅವರ 400 ನೇ ಜನ್ಮ ವಾರ್ಷಿಕೋತ್ಸವದ ಮೂರು ದಿನಗಳ ಆಚರಣೆಯ 2 ನೇ ದಿನದ ಸಮಾರಂಭದಲ್ಲಿ ಅವರು ಮಾತನಾಡಿದರು.

ಇತಿಹಾಸವನ್ನು ಸರಿಯಾಗಿ ಮತ್ತು ವೈಭವಯುತವಾಗಿ ಪ್ರಸ್ತುತಪಡಿಸುವುದನ್ನು ಯಾರು ತಡೆಯಬಲ್ಲರು ಎಂದು ನಾನು ಕೇಳ ಬಯಸುತ್ತೇನೆ ಎಂದು ಶಾ ನುಡಿದರು.

ಅಹೋಮ್ ಜನರಲ್ ಲಚಿತ್ ಬರ್ಫುಕನ್ ಅವರ ನೆನಪಿಗಾಗಿ ನವೆಂಬರ್ 24 ಅನ್ನು ಲಚಿತ್ ದಿವಸ್ ಎಂದು ಆಚರಿಸಲಾಗುತ್ತದೆ.

ಇತಿಹಾಸ ಸರಿಯಾಗಿಲ್ಲ ಎಂಬ ಭಾವನೆಯನ್ನು ತೊಡೆದುಹಾಕಲು ನಾನು ವಿನಂತಿಸುತ್ತಿದ್ದೇನೆ. ದೇಶದಲ್ಲಿ 150 ವರ್ಷಗಳ ಕಾಲ ಆಳಿದ 30 ರಾಜವಂಶಗಳು ಮತ್ತು ಸ್ವಾತಂತ್ರ್ಯಕ್ಕಾಗಿ ಹೋರಾಡಿದ 300 ಗಣ್ಯ ವ್ಯಕ್ತಿಗಳ ಬಗ್ಗೆ ಸಂಶೋಧನೆ ಮಾಡಲು ಪ್ರಯತ್ನಿಸುವಂತೆ ಇಲ್ಲಿ ಕುಳಿತಿರುವ ಎಲ್ಲಾ ವಿದ್ಯಾರ್ಥಿಗಳು ಮತ್ತು ವಿಶ್ವವಿದ್ಯಾಲಯದ ಪ್ರಾಧ್ಯಾಪಕರಿಗೆ ವಿನಂತಿಸುತ್ತೇನೆ ಎಂದು ಅವರು ಹೇಳಿದರು.

ಮುಂದೆ ಬನ್ನಿ, ಸಂಶೋಧನೆ ಮಾಡಿ ಮತ್ತು ಇತಿಹಾಸವನ್ನು ಪುನಃ ಬರೆಯಿರಿ. ಈ ರೀತಿಯಾಗಿ ನಾವು ಭವಿಷ್ಯದ ಪೀಳಿಗೆಗೂ ಸ್ಫೂರ್ತಿ ನೀಡಬಹುದು ಎಂದು ಅವರು ಹೇಳಿದರು.

ಈ ಸಂದರ್ಭದಲ್ಲಿ ಅವರು ಲಚಿತ್ ಕುರಿತ ಸಾಕ್ಷ್ಯಚಿತ್ರವನ್ನು ಉದ್ಘಾಟಿಸಿದರು. ಪ್ರಧಾನಿ ನರೇಂದ್ರ ಮೋದಿ ಈಶಾನ್ಯ ಮತ್ತು ಭಾರತದ ಉಳಿದ ಭಾಗಗಳ ನಡುವಿನ ಅಂತರವನ್ನು ಕಡಿಮೆ ಮಾಡಿದ್ದಾರೆ. ಸರ್ಕಾರದ ಪ್ರಯತ್ನದಿಂದ ಈಶಾನ್ಯದಲ್ಲಿ ಶಾಂತಿ ನೆಲೆಸಿದೆ ಎಂದರು.

ಇದನ್ನೂ ಓದಿ: ನಾವು ದೇಶದ ಯಾವುದೇ ಭಾಷೆ ನಾಶವಾಗಲು ಬಿಡುವುದಿಲ್ಲ: ಅಮಿತ್ ಶಾ

ETV Bharat Logo

Copyright © 2024 Ushodaya Enterprises Pvt. Ltd., All Rights Reserved.