ETV Bharat / bharat

ಹೆಂಡ್ತಿ,ಅತ್ತೆ,ಮಾವನ ಮೇಲೆ ಮಾರಣಾಂತಿಕ ಹಲ್ಲೆ.. ಗಂಡನ ಮೃಗೀಯ ವರ್ತನೆ ಸಿಸಿಟಿವಿಯಲ್ಲಿ ಸೆರೆ

author img

By

Published : Mar 26, 2022, 4:15 PM IST

ಹೆಂಡತಿ ಮನೆಯವರು ಹಣ ನೀಡಲಿಲ್ಲ ಎಂಬ ಕಾರಣಕ್ಕಾಗಿ ಅವರ ಮೇಲೆ ವ್ಯಕ್ತಿಯೋರ್ವ ಮಾರಣಾಂತಿಕವಾಗಿ ಹಲ್ಲೆ ನಡೆಸಿರುವ ಘಟನೆ ಪಂಜಾಬ್​ನಲ್ಲಿ ನಡೆದಿದ್ದು, ಘಟನೆಯ ಭೀಕರ ದೃಶ್ಯಾವಳಿ ಸಿಸಿಟಿವಿಯಲ್ಲಿ ಸೆರೆಯಾಗಿವೆ..

man attacked his wife and mother-in-law
man attacked his wife and mother-in-law

ಅಮೃತಸರ್(ಪಂಜಾಬ್​) : ಕಟ್ಟಿಕೊಂಡ ಹೆಂಡತಿ, ಅತ್ತೆ ಹಾಗೂ ಮಾವನ ಮೇಲೆ ವ್ಯಕ್ತಿಯೋರ್ವ ನಡುರಸ್ತೆಯಲ್ಲೇ ಮಚ್ಚಿನಿಂದ ಮಾರಣಾಂತಿಕವಾಗಿ ಹಲ್ಲೆ ನಡೆಸಿರುವ ಘಟನೆ ನಡೆದಿದೆ. ಇದರ ಸಂಪೂರ್ಣ ದೃಶ್ಯ ಸ್ಥಳೀಯ ಸಿಸಿಟಿವಿಯಲ್ಲಿ ಸೆರೆಯಾಗಿವೆ. ಪಂಜಾಬ್​​ನ ಅಮೃತಸರದ ಶಹೀದ್​​ ಉಧಮ್​ ಸಿಂಗ್​ ನಗರದಲ್ಲಿ ಈ ಪ್ರಕರಣ ನಡೆದಿದ್ದು, ದೂರು ದಾಖಲಾಗಿದೆ.

ಹೆಂಡ್ತಿ,ಅತ್ತೆ,ಮಾವನ ಮೇಲೆ ಮಾರಣಾಂತಿಕ ಹಲ್ಲೆ..

ಲಭ್ಯವಾಗಿರುವ ಮಾಹಿತಿ ಪ್ರಕಾರ, ಪತ್ನಿ ಸಿಮ್ರಾನ್ ಹಾಗೂ ಆಕೆಯ ಗಂಡನ ಮಧ್ಯೆ ಕಳೆದ ಕೆಲ ದಿನಗಳಿಂದ ಹಣಕಾಸಿನ ವಿಚಾರಕ್ಕಾಗಿ ಜಗಳ ನಡೆಯುತ್ತಿತ್ತು. ಹೀಗಾಗಿ, ಗಂಡನಿಂದ ದೂರವಾಗಿದ್ದ ಸಿಮ್ರಾನ್ ಪೋಷಕರೊಂದಿಗೆ ಉಳಿದುಕೊಂಡು ಜೀವನ ನಡೆಸುತ್ತಿದ್ದಳು. ಕೊಲೆ ಮಾಡುವ ಉದ್ದೇಶದಿಂದಲೇ ಅವರನ್ನ ಕರೆಯಿಸಿಕೊಂಡು ಹಲ್ಲೆ ನಡೆಸಲಾಗಿದೆ ಎಂದು ತಿಳಿದು ಬಂದಿದೆ. ಗಾಯಗೊಂಡಿರುವ ಎಲ್ಲರೂ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆದುಕೊಳ್ಳುತ್ತಿದ್ದಾರೆ.

ಇದನ್ನೂ ಓದಿ: ಹಿಜಾಬ್​ ಧರಿಸುತ್ತಿದ್ದ ಪ್ರಾಂಶುಪಾಲೆಗೆ ಕಿರುಕುಳ ಆರೋಪ.. ಮನನೊಂದು ರಾಜೀನಾಮೆ!?

ಗಂಡನಿಗೆ ನನ್ನ ಕುಟುಂಬಸ್ಥರು ಹಣ ನೀಡದ ಕಾರಣಕ್ಕಾಗಿ ಈ ದಾಳಿ ನಡೆದಿದೆ ಎಂದು ಸಿಮ್ರಾನ್​ ಹೇಳಿಕೊಂಡಿದ್ದು, ಮೋಸದಿಂದ ನಮ್ಮನ್ನು ಕರೆಯಿಸಿ, ಹಲ್ಲೆ ನಡೆಸಿರುವುದಾಗಿ ದೂರಿನಲ್ಲಿ ತಿಳಿಸಿದ್ದಾಳೆ. ಸದ್ಯ ತೀವ್ರವಾಗಿ ಗಾಯಗೊಂಡಿರುವ ನನ್ನ ತಂದೆ ಮತ್ತು ತಾಯಿ ಚಿಕಿತ್ಸೆ ಪಡೆದುಕೊಳ್ಳುತ್ತಿದ್ದು, ನ್ಯಾಯ ದೊರಕಿಸಿಕೊಡುವಂತೆ ಮನವಿ ಮಾಡಿದ್ದಾಳೆ. ಘಟನೆಗೆ ಸಂಬಂಧಿಸಿದಂತೆ ಮಾತನಾಡಿರುವ ಪೊಲೀಸ್​ ಅಧಿಕಾರಿ ಅಮರ್ ಜಿತ್ ಸಿಂಗ್​, ಹಲ್ಲೆ ನಡೆದಿರುವ ಬಗ್ಗೆ ದೂರು ದಾಖಲಾಗಿದ್ದು, ಸಿಸಿಟಿವಿ ದೃಶ್ಯ ವಶಕ್ಕೆ ಪಡೆದುಕೊಂಡು, ಅದರ ಆಧಾರದ ಮೇಲೆ ಕ್ರಮ ಕೈಗೊಳ್ಳುವುದಾಗಿ ತಿಳಿಸಿದ್ದಾರೆ.

ಅಮೃತಸರ್(ಪಂಜಾಬ್​) : ಕಟ್ಟಿಕೊಂಡ ಹೆಂಡತಿ, ಅತ್ತೆ ಹಾಗೂ ಮಾವನ ಮೇಲೆ ವ್ಯಕ್ತಿಯೋರ್ವ ನಡುರಸ್ತೆಯಲ್ಲೇ ಮಚ್ಚಿನಿಂದ ಮಾರಣಾಂತಿಕವಾಗಿ ಹಲ್ಲೆ ನಡೆಸಿರುವ ಘಟನೆ ನಡೆದಿದೆ. ಇದರ ಸಂಪೂರ್ಣ ದೃಶ್ಯ ಸ್ಥಳೀಯ ಸಿಸಿಟಿವಿಯಲ್ಲಿ ಸೆರೆಯಾಗಿವೆ. ಪಂಜಾಬ್​​ನ ಅಮೃತಸರದ ಶಹೀದ್​​ ಉಧಮ್​ ಸಿಂಗ್​ ನಗರದಲ್ಲಿ ಈ ಪ್ರಕರಣ ನಡೆದಿದ್ದು, ದೂರು ದಾಖಲಾಗಿದೆ.

ಹೆಂಡ್ತಿ,ಅತ್ತೆ,ಮಾವನ ಮೇಲೆ ಮಾರಣಾಂತಿಕ ಹಲ್ಲೆ..

ಲಭ್ಯವಾಗಿರುವ ಮಾಹಿತಿ ಪ್ರಕಾರ, ಪತ್ನಿ ಸಿಮ್ರಾನ್ ಹಾಗೂ ಆಕೆಯ ಗಂಡನ ಮಧ್ಯೆ ಕಳೆದ ಕೆಲ ದಿನಗಳಿಂದ ಹಣಕಾಸಿನ ವಿಚಾರಕ್ಕಾಗಿ ಜಗಳ ನಡೆಯುತ್ತಿತ್ತು. ಹೀಗಾಗಿ, ಗಂಡನಿಂದ ದೂರವಾಗಿದ್ದ ಸಿಮ್ರಾನ್ ಪೋಷಕರೊಂದಿಗೆ ಉಳಿದುಕೊಂಡು ಜೀವನ ನಡೆಸುತ್ತಿದ್ದಳು. ಕೊಲೆ ಮಾಡುವ ಉದ್ದೇಶದಿಂದಲೇ ಅವರನ್ನ ಕರೆಯಿಸಿಕೊಂಡು ಹಲ್ಲೆ ನಡೆಸಲಾಗಿದೆ ಎಂದು ತಿಳಿದು ಬಂದಿದೆ. ಗಾಯಗೊಂಡಿರುವ ಎಲ್ಲರೂ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆದುಕೊಳ್ಳುತ್ತಿದ್ದಾರೆ.

ಇದನ್ನೂ ಓದಿ: ಹಿಜಾಬ್​ ಧರಿಸುತ್ತಿದ್ದ ಪ್ರಾಂಶುಪಾಲೆಗೆ ಕಿರುಕುಳ ಆರೋಪ.. ಮನನೊಂದು ರಾಜೀನಾಮೆ!?

ಗಂಡನಿಗೆ ನನ್ನ ಕುಟುಂಬಸ್ಥರು ಹಣ ನೀಡದ ಕಾರಣಕ್ಕಾಗಿ ಈ ದಾಳಿ ನಡೆದಿದೆ ಎಂದು ಸಿಮ್ರಾನ್​ ಹೇಳಿಕೊಂಡಿದ್ದು, ಮೋಸದಿಂದ ನಮ್ಮನ್ನು ಕರೆಯಿಸಿ, ಹಲ್ಲೆ ನಡೆಸಿರುವುದಾಗಿ ದೂರಿನಲ್ಲಿ ತಿಳಿಸಿದ್ದಾಳೆ. ಸದ್ಯ ತೀವ್ರವಾಗಿ ಗಾಯಗೊಂಡಿರುವ ನನ್ನ ತಂದೆ ಮತ್ತು ತಾಯಿ ಚಿಕಿತ್ಸೆ ಪಡೆದುಕೊಳ್ಳುತ್ತಿದ್ದು, ನ್ಯಾಯ ದೊರಕಿಸಿಕೊಡುವಂತೆ ಮನವಿ ಮಾಡಿದ್ದಾಳೆ. ಘಟನೆಗೆ ಸಂಬಂಧಿಸಿದಂತೆ ಮಾತನಾಡಿರುವ ಪೊಲೀಸ್​ ಅಧಿಕಾರಿ ಅಮರ್ ಜಿತ್ ಸಿಂಗ್​, ಹಲ್ಲೆ ನಡೆದಿರುವ ಬಗ್ಗೆ ದೂರು ದಾಖಲಾಗಿದ್ದು, ಸಿಸಿಟಿವಿ ದೃಶ್ಯ ವಶಕ್ಕೆ ಪಡೆದುಕೊಂಡು, ಅದರ ಆಧಾರದ ಮೇಲೆ ಕ್ರಮ ಕೈಗೊಳ್ಳುವುದಾಗಿ ತಿಳಿಸಿದ್ದಾರೆ.

ETV Bharat Logo

Copyright © 2024 Ushodaya Enterprises Pvt. Ltd., All Rights Reserved.