ETV Bharat / bharat

ಬಿಜೆಪಿ ಭ್ರಷ್ಟಾಚಾರದ ಬಗ್ಗೆ ತನಿಖೆಗೆ ಸಿಎಂ ಗೆಹ್ಲೋಟ್‌ಗೆ ಪತ್ರ ಬರೆದಿದ್ದೆ, ಉತ್ತರ ಸಿಕ್ಕಿಲ್ಲ- ಸಚಿನ್ ಪೈಲಟ್

author img

By

Published : Apr 9, 2023, 10:53 PM IST

ವಸುಂಧರಾ ರಾಜೇ ನೇತೃತ್ವದ ಬಿಜೆಪಿ ಸರ್ಕಾರದ ಅಧಿಕಾರದ ಅವಧಿಯಲ್ಲಿ ನಡೆದ ಭ್ರಷ್ಟಾಚಾರದ ಬಗ್ಗೆ ನಾವು ರಾಜ್ಯದ ಜನತೆಯ ಗಮನ ಸೆಳೆದಿದ್ದೇವೆ ಎಂದು ಕಾಂಗ್ರೆಸ್ ನಾಯಕ ಸಚಿನ್ ಪೈಲಟ್ ಹೇಳಿದ್ದಾರೆ.

ಕಾಂಗ್ರೆಸ್ ನಾಯಕ ಸಚಿನ್ ಪೈಲಟ್
ಕಾಂಗ್ರೆಸ್ ನಾಯಕ ಸಚಿನ್ ಪೈಲಟ್

ಜೈಪುರ (ರಾಜಸ್ಥಾನ): ಬಿಜೆಪಿ ಸರ್ಕಾರದ ಅಧಿಕಾರಾವಧಿಯಲ್ಲಿ ರಾಜಸ್ಥಾನದಲ್ಲಿ ನಡೆದ ಭ್ರಷ್ಟಾಚಾರ ಆರೋಪದ ಪ್ರಕರಣಗಳ ತನಿಖೆಗೆ ಒತ್ತಾಯಿಸಿ ಸಿಎಂ ಅಶೋಕ್ ಗೆಹ್ಲೋಟ್‌ಗೆ ಪತ್ರ ಬರೆದಿದ್ದೆ. ಆದರೆ ಅವರಿಂದ ಯಾವುದೇ ಪ್ರತಿಕ್ರಿಯೆ ಬಂದಿಲ್ಲ ಎಂದು ಕಾಂಗ್ರೆಸ್ ನಾಯಕ ಸಚಿನ್ ಪೈಲಟ್ ತಿಳಿಸಿದ್ದಾರೆ.

ಭಾನುವಾರ ಇಲ್ಲಿ ನಡೆದ ಸುದ್ದಿಗೋಷ್ಠಿ ಉದ್ದೇಶಿಸಿ ಮಾತನಾಡಿದ ಪೈಲಟ್, ವಸುಂಧರಾ ರಾಜೇ ನೇತೃತ್ವದ ಬಿಜೆಪಿ ಸರ್ಕಾರ ಭಾರಿ ಬಹುಮತದೊಂದಿಗೆ ಅಧಿಕಾರಕ್ಕೆ ಬಂದಿತ್ತು. ಅಧಿಕಾರಾವಧಿಯಲ್ಲಿ ನಾವು (ಕಾಂಗ್ರೆಸ್) ಬಿಜೆಪಿಯ ನೀತಿಗಳ ಬಗ್ಗೆ ಸರ್ಕಾರದ ವಿರುದ್ಧ ಟೀಕಾಸಮರ ನಡೆಸಿದ್ದೇವೆ. ಅವರ ಅಧಿಕಾರಾವಧಿಯಲ್ಲಿ ನಡೆದ ಭ್ರಷ್ಟಾಚಾರದ ಬಗ್ಗೆ ಗಮನ ಸೆಳೆದಿದ್ದೇವೆ ಎಂದರು.

ನಾವು ಜವಾಬ್ದಾರಿಯುತ ಪ್ರತಿಪಕ್ಷದ ಪಾತ್ರ ನಿರ್ವಹಿಸಿದ್ದೇವೆ ಮತ್ತು ಮುಂಚೂಣಿಗೆ ಬಂದ ಪ್ರತಿಯೊಂದು ಭ್ರಷ್ಟಾಚಾರ ಸಂಬಂಧಿತ ವಿಷಯವನ್ನು ಎತ್ತಿ ತೋರಿಸಿದ್ದೇವೆ. ಸಾರ್ವಜನಿಕರೂ ನಮ್ಮೊಂದಿಗೆ ಪ್ರತಿಧ್ವನಿಸಿದರು. ಇದರ ಪರಿಣಾಮವಾಗಿ ರಾಜ್ಯದಲ್ಲಿ ಬಿಜೆಪಿ ಅಧಿಕಾರ ಕಳೆದುಕೊಂಡಿತು ಎಂದು ಹೇಳಿದರು.

ನಾವು ಅಧಿಕಾರಕ್ಕೆ ಬಂದ ನಂತರ ಭ್ರಷ್ಟಾಚಾರದ ಪ್ರತಿಯೊಂದು ಆರೋಪದ ಬಗ್ಗೆ ತನಿಖೆ ನಡೆಸುತ್ತೇವೆ ಎಂದು ನಾವು ಜನರಿಗೆ ಭರವಸೆ ನೀಡಿದ್ದೆವು. ನಾನು ಸೇಡಿನ ಭಾವನೆ ಅಥವಾ ದ್ವೇಷದಿಂದ ತನಿಖೆ ನಡೆಸಲು ಎಂದಿಗೂ ಮುಂದಾಗಿಲ್ಲ. ಆದರೆ, ಭ್ರಷ್ಟಾಚಾರ ನಡೆದಿರುವುದು ಸತ್ಯವೂ ಆಗಿದೆ. ನಾವು ನಮ್ಮ ಭರವಸೆಗಳನ್ನು ಈಡೇರಿಸಿದರೆ ಮಾತ್ರ ಪ್ರತಿಪಕ್ಷವಾಗಿ ನಮ್ಮ ವಿಶ್ವಾಸಾರ್ಹತೆಯನ್ನು ಉಳಿಸಿಕೊಳ್ಳಬಹುದು ಎಂದು ಅವರು ಹೇಳಿದರು.

ಕಳೆದ ವರ್ಷ ಮಾರ್ಚ್ 28 ರಂದು ನಾನು ಮುಖ್ಯಮಂತ್ರಿಗೆ ಪತ್ರ ಬರೆದಿದ್ದೇನೆ ಮತ್ತು ನನಗೆ ಉತ್ತರ ಸಿಗದಿದ್ದಾಗ ನಾನು ನವೆಂಬರ್ 2 ರಂದು ಮತ್ತೊಮ್ಮೆ ಅವರಿಗೆ ಪತ್ರ ಬರೆದಿದ್ದೇನೆ. ಎಲ್ಲಾ ವಿಷಯಗಳ ಬಗ್ಗೆ ತನಿಖೆ ನಡೆಸುವಂತೆ ನಾನು ಅವರನ್ನು ಒತ್ತಾಯಿಸಿದೆ. ನಾನು ಮತ್ತು ಸಿಎಂ ಗೆಹ್ಲೋಟ್ ಇಬ್ಬರೂ ಭೂಮಾಫಿಯಾ, ಲಿಕ್ಕರ್ ಮಾಫಿಯಾ, ಮೈನಿಂಗ್ ಮಾಫಿಯಾ ಅಥವಾ ಇತರ ಪ್ರಕರಣಗಳ ಬಗ್ಗೆ ತನಿಖೆಗೆ ಒತ್ತಾಯಿಸಿದ್ದೇವೆ. ಚುನಾವಣೆಗಳು ಬರಲಿವೆ ಮತ್ತು ನಮ್ಮ ಭರವಸೆ ಮತ್ತು ನಮ್ಮ ಕೆಲಸದ ನಡುವೆ ಯಾವುದೇ ವ್ಯತ್ಯಾಸವಿಲ್ಲ ಎಂದು ಸಾರ್ವಜನಿಕರಿಗೆ ತೋರಿಸಬೇಕು ಎಂಬುದು ಉದ್ದೇಶವಾಗಿತ್ತು ಎಂದರು.

ಜೈರಾಮ್ ರಮೇಶ್ ತಿರುಗೇಟು: ಈ ಬಗ್ಗೆ ಕಾಂಗ್ರೆಸ್ ನಾಯಕ ಜೈರಾಮ್ ರಮೇಶ್ ಪ್ರತಿಕ್ರಿಯಿಸಿದ್ದು, ಸಿಎಂ ಅಶೋಕ್ ಗೆಹ್ಲೋಟ್ ಅವರ ಅಧಿಕಾರಾವಧಿಯಲ್ಲಿನ ಸಾಧನೆಗಳು ಹೆಗ್ಗುರುತುಗಳನ್ನು ಸಾಧಿಸಿವೆ. ಅದರ ಆಧಾರದ ಮೇಲೆ ಪಕ್ಷವು ಈ ವರ್ಷದ ನಂತರ ಜನರಿಂದ ಹೊಸ ಜನಾದೇಶವನ್ನು ಬಯಸುತ್ತದೆ ಎಂದಿದ್ದಾರೆ.

ಪಕ್ಷದ ಸಂವಹನ ಪ್ರಧಾನ ಕಾರ್ಯದರ್ಶಿಯಾಗಿರುವ ಜೈರಾಮ್ ರಮೇಶ್ ಮಾತನಾಡಿದ್ದು, ಅಶೋಕ್ ಗೆಹ್ಲೋಟ್ ಸಿಎಂ ಆದ ನಂತರ ರಾಜಸ್ಥಾನದಲ್ಲಿ ಕಾಂಗ್ರೆಸ್ ಸರ್ಕಾರವು ಹೆಚ್ಚಿನ ಸಂಖ್ಯೆಯ ಯೋಜನೆಗಳನ್ನು ಜಾರಿಗೆ ತಂದಿದೆ. ಅನೇಕ ಹೊಸ ಉಪಕ್ರಮಗಳನ್ನು ಕೈಗೊಂಡಿದೆ. ಅದು ಜನರ ಮೇಲೆ ಗಾಢವಾಗಿ ಪರಿಣಾಮ ಬೀರಿದೆ ಎಂದಿದ್ದಾರೆ.

ಇದನ್ನೂ ಓದಿ : ರಾಹುಲ್​ ಗಾಂಧಿ ವಿರುದ್ಧ ಮಾನನಷ್ಟ ಮೊಕದ್ದಮೆ ಹೂಡಲು ಮುಂದಾದ ಅಸ್ಸಾಂ ಸಿಎಂ

ಜೈಪುರ (ರಾಜಸ್ಥಾನ): ಬಿಜೆಪಿ ಸರ್ಕಾರದ ಅಧಿಕಾರಾವಧಿಯಲ್ಲಿ ರಾಜಸ್ಥಾನದಲ್ಲಿ ನಡೆದ ಭ್ರಷ್ಟಾಚಾರ ಆರೋಪದ ಪ್ರಕರಣಗಳ ತನಿಖೆಗೆ ಒತ್ತಾಯಿಸಿ ಸಿಎಂ ಅಶೋಕ್ ಗೆಹ್ಲೋಟ್‌ಗೆ ಪತ್ರ ಬರೆದಿದ್ದೆ. ಆದರೆ ಅವರಿಂದ ಯಾವುದೇ ಪ್ರತಿಕ್ರಿಯೆ ಬಂದಿಲ್ಲ ಎಂದು ಕಾಂಗ್ರೆಸ್ ನಾಯಕ ಸಚಿನ್ ಪೈಲಟ್ ತಿಳಿಸಿದ್ದಾರೆ.

ಭಾನುವಾರ ಇಲ್ಲಿ ನಡೆದ ಸುದ್ದಿಗೋಷ್ಠಿ ಉದ್ದೇಶಿಸಿ ಮಾತನಾಡಿದ ಪೈಲಟ್, ವಸುಂಧರಾ ರಾಜೇ ನೇತೃತ್ವದ ಬಿಜೆಪಿ ಸರ್ಕಾರ ಭಾರಿ ಬಹುಮತದೊಂದಿಗೆ ಅಧಿಕಾರಕ್ಕೆ ಬಂದಿತ್ತು. ಅಧಿಕಾರಾವಧಿಯಲ್ಲಿ ನಾವು (ಕಾಂಗ್ರೆಸ್) ಬಿಜೆಪಿಯ ನೀತಿಗಳ ಬಗ್ಗೆ ಸರ್ಕಾರದ ವಿರುದ್ಧ ಟೀಕಾಸಮರ ನಡೆಸಿದ್ದೇವೆ. ಅವರ ಅಧಿಕಾರಾವಧಿಯಲ್ಲಿ ನಡೆದ ಭ್ರಷ್ಟಾಚಾರದ ಬಗ್ಗೆ ಗಮನ ಸೆಳೆದಿದ್ದೇವೆ ಎಂದರು.

ನಾವು ಜವಾಬ್ದಾರಿಯುತ ಪ್ರತಿಪಕ್ಷದ ಪಾತ್ರ ನಿರ್ವಹಿಸಿದ್ದೇವೆ ಮತ್ತು ಮುಂಚೂಣಿಗೆ ಬಂದ ಪ್ರತಿಯೊಂದು ಭ್ರಷ್ಟಾಚಾರ ಸಂಬಂಧಿತ ವಿಷಯವನ್ನು ಎತ್ತಿ ತೋರಿಸಿದ್ದೇವೆ. ಸಾರ್ವಜನಿಕರೂ ನಮ್ಮೊಂದಿಗೆ ಪ್ರತಿಧ್ವನಿಸಿದರು. ಇದರ ಪರಿಣಾಮವಾಗಿ ರಾಜ್ಯದಲ್ಲಿ ಬಿಜೆಪಿ ಅಧಿಕಾರ ಕಳೆದುಕೊಂಡಿತು ಎಂದು ಹೇಳಿದರು.

ನಾವು ಅಧಿಕಾರಕ್ಕೆ ಬಂದ ನಂತರ ಭ್ರಷ್ಟಾಚಾರದ ಪ್ರತಿಯೊಂದು ಆರೋಪದ ಬಗ್ಗೆ ತನಿಖೆ ನಡೆಸುತ್ತೇವೆ ಎಂದು ನಾವು ಜನರಿಗೆ ಭರವಸೆ ನೀಡಿದ್ದೆವು. ನಾನು ಸೇಡಿನ ಭಾವನೆ ಅಥವಾ ದ್ವೇಷದಿಂದ ತನಿಖೆ ನಡೆಸಲು ಎಂದಿಗೂ ಮುಂದಾಗಿಲ್ಲ. ಆದರೆ, ಭ್ರಷ್ಟಾಚಾರ ನಡೆದಿರುವುದು ಸತ್ಯವೂ ಆಗಿದೆ. ನಾವು ನಮ್ಮ ಭರವಸೆಗಳನ್ನು ಈಡೇರಿಸಿದರೆ ಮಾತ್ರ ಪ್ರತಿಪಕ್ಷವಾಗಿ ನಮ್ಮ ವಿಶ್ವಾಸಾರ್ಹತೆಯನ್ನು ಉಳಿಸಿಕೊಳ್ಳಬಹುದು ಎಂದು ಅವರು ಹೇಳಿದರು.

ಕಳೆದ ವರ್ಷ ಮಾರ್ಚ್ 28 ರಂದು ನಾನು ಮುಖ್ಯಮಂತ್ರಿಗೆ ಪತ್ರ ಬರೆದಿದ್ದೇನೆ ಮತ್ತು ನನಗೆ ಉತ್ತರ ಸಿಗದಿದ್ದಾಗ ನಾನು ನವೆಂಬರ್ 2 ರಂದು ಮತ್ತೊಮ್ಮೆ ಅವರಿಗೆ ಪತ್ರ ಬರೆದಿದ್ದೇನೆ. ಎಲ್ಲಾ ವಿಷಯಗಳ ಬಗ್ಗೆ ತನಿಖೆ ನಡೆಸುವಂತೆ ನಾನು ಅವರನ್ನು ಒತ್ತಾಯಿಸಿದೆ. ನಾನು ಮತ್ತು ಸಿಎಂ ಗೆಹ್ಲೋಟ್ ಇಬ್ಬರೂ ಭೂಮಾಫಿಯಾ, ಲಿಕ್ಕರ್ ಮಾಫಿಯಾ, ಮೈನಿಂಗ್ ಮಾಫಿಯಾ ಅಥವಾ ಇತರ ಪ್ರಕರಣಗಳ ಬಗ್ಗೆ ತನಿಖೆಗೆ ಒತ್ತಾಯಿಸಿದ್ದೇವೆ. ಚುನಾವಣೆಗಳು ಬರಲಿವೆ ಮತ್ತು ನಮ್ಮ ಭರವಸೆ ಮತ್ತು ನಮ್ಮ ಕೆಲಸದ ನಡುವೆ ಯಾವುದೇ ವ್ಯತ್ಯಾಸವಿಲ್ಲ ಎಂದು ಸಾರ್ವಜನಿಕರಿಗೆ ತೋರಿಸಬೇಕು ಎಂಬುದು ಉದ್ದೇಶವಾಗಿತ್ತು ಎಂದರು.

ಜೈರಾಮ್ ರಮೇಶ್ ತಿರುಗೇಟು: ಈ ಬಗ್ಗೆ ಕಾಂಗ್ರೆಸ್ ನಾಯಕ ಜೈರಾಮ್ ರಮೇಶ್ ಪ್ರತಿಕ್ರಿಯಿಸಿದ್ದು, ಸಿಎಂ ಅಶೋಕ್ ಗೆಹ್ಲೋಟ್ ಅವರ ಅಧಿಕಾರಾವಧಿಯಲ್ಲಿನ ಸಾಧನೆಗಳು ಹೆಗ್ಗುರುತುಗಳನ್ನು ಸಾಧಿಸಿವೆ. ಅದರ ಆಧಾರದ ಮೇಲೆ ಪಕ್ಷವು ಈ ವರ್ಷದ ನಂತರ ಜನರಿಂದ ಹೊಸ ಜನಾದೇಶವನ್ನು ಬಯಸುತ್ತದೆ ಎಂದಿದ್ದಾರೆ.

ಪಕ್ಷದ ಸಂವಹನ ಪ್ರಧಾನ ಕಾರ್ಯದರ್ಶಿಯಾಗಿರುವ ಜೈರಾಮ್ ರಮೇಶ್ ಮಾತನಾಡಿದ್ದು, ಅಶೋಕ್ ಗೆಹ್ಲೋಟ್ ಸಿಎಂ ಆದ ನಂತರ ರಾಜಸ್ಥಾನದಲ್ಲಿ ಕಾಂಗ್ರೆಸ್ ಸರ್ಕಾರವು ಹೆಚ್ಚಿನ ಸಂಖ್ಯೆಯ ಯೋಜನೆಗಳನ್ನು ಜಾರಿಗೆ ತಂದಿದೆ. ಅನೇಕ ಹೊಸ ಉಪಕ್ರಮಗಳನ್ನು ಕೈಗೊಂಡಿದೆ. ಅದು ಜನರ ಮೇಲೆ ಗಾಢವಾಗಿ ಪರಿಣಾಮ ಬೀರಿದೆ ಎಂದಿದ್ದಾರೆ.

ಇದನ್ನೂ ಓದಿ : ರಾಹುಲ್​ ಗಾಂಧಿ ವಿರುದ್ಧ ಮಾನನಷ್ಟ ಮೊಕದ್ದಮೆ ಹೂಡಲು ಮುಂದಾದ ಅಸ್ಸಾಂ ಸಿಎಂ

ETV Bharat Logo

Copyright © 2024 Ushodaya Enterprises Pvt. Ltd., All Rights Reserved.