ETV Bharat / bharat

ಪ್ರಧಾನಿ ಮೋದಿ ಭೇಟಿ ಮಾಡಿದ IMF ಮುಖ್ಯ ಅರ್ಥಶಾಸ್ತ್ರಜ್ಞೆ ಗೀತಾ ಗೋಪಿನಾಥ್​​

author img

By

Published : Dec 16, 2021, 3:56 AM IST

ಐಎಂಎಫ್​​ ಮುಖ್ಯ ಅರ್ಥಶಾಸ್ತ್ರಜ್ಞೆಯಾಗಿ ಕಾರ್ಯನಿರ್ವಹಿಸುತ್ತಿರುವ ಗೀತಾ ಗೋಪಿನಾಥ್ ನವದೆಹಲಿಯಲ್ಲಿ ಪ್ರಧಾನಿ ನರೇಂದ್ರ ಮೋದಿ ಅವರನ್ನ ಭೇಟಿ ಮಾಡಿ, ಕೆಲ ನಿಮಿಷಗಳ ಕಾಲ ಚರ್ಚೆ ನಡೆಸಿದರು.

Gita Gopinath calls on PM
Gita Gopinath calls on PM

ನವದೆಹಲಿ: ಅಂತಾರಾಷ್ಟ್ರೀಯ ಹಣಕಾಸು ನಿಧಿಯ ಮುಖ್ಯ ಅರ್ಥಶಾಸ್ತ್ರಜ್ಞೆ ಗೀತಾ ಗೋಪಿನಾಥ್​ ಪ್ರಧಾನಿ ನರೇಂದ್ರ ಮೋದಿ ಅವರನ್ನ ಭೇಟಿ ಮಾಡಿದರು. ಇದಕ್ಕೆ ಸಂಬಂಧಿಸಿದಂತೆ ಪ್ರಧಾನಿ ಕಾರ್ಯಾಲಯ ಟ್ವೀಟ್ ಮೂಲಕ ಮಾಹಿತಿ ಹೊರಹಾಕಿದೆ.

ಮುಂದಿನ ವರ್ಷದ ಅಂತಾರಾಷ್ಟ್ರೀಯ ಹಣಕಾಸು ನಿಧಿಯ ಉಪ ವ್ಯವಸ್ಥಾಪಕ ನಿರ್ದೇಶಕಿಯಾಗಿ ಗೀತಾ ಗೋಪಿನಾಥ್​ ಅಧಿಕಾರ ವಹಿಸಿಕೊಳ್ಳಲಿದ್ದು, ಇದರ ಬೆನ್ನಲ್ಲೇ ಪ್ರಧಾನಿ ನರೇಂದ್ರ ಮೋದಿ ಅವರನ್ನ ಭೇಟಿ ಮಾಡಿ, ಕೆಲ ನಿಮಿಷಗಳ ಕಾಲ ಚರ್ಚೆ ನಡೆಸಿದರು.

ಕಳೆದ ಮೂರು ವರ್ಷಗಳಿಂದ ಐಎಂಎಫ್​​ ಮುಖ್ಯ ಅರ್ಥಶಾಸ್ತ್ರಜ್ಞೆಯಾಗಿ ಕಾರ್ಯನಿರ್ವಹಿಸುತ್ತಿರುವ ಗೀತಾ ಗೋಪಿನಾಥ್​, 2022ರ ಜನವರಿಯಲ್ಲಿ ತಮ್ಮ ಹುದ್ದೆಗೆ ರಾಜೀನಾಮೆ ನೀಡಿ ಹಾರ್ವರ್ಡ್​ ವಿಶ್ವವಿದ್ಯಾಲಯದಲ್ಲಿ ಪ್ರೊಫೇಸರ್​​​​​ ಹುದ್ದೆಗೆ ಮರಳಲಿದ್ದಾರೆ ಎನ್ನಲಾಗಿತ್ತು. ಆದರೆ IMFನ ಮೊದಲ ಉಪವ್ಯವಸ್ಥಾಪಕ ನಿರ್ದೇಶಕ ಜೆಪ್ರಿ ಒಕಾಮೊಟೊ ಅವರು ಮುಂದಿನ ವರ್ಷ ತಮ್ಮ ಹುದ್ದೆಗೆ ರಾಜೀನಾಮೆ ನೀಡುತ್ತಿರುವ ಕಾರಣ ಅವರ ಸ್ಥಾನಕ್ಕೆ ಗೀತಾ ಗೋಪಿನಾಥನ್​ ನೇಮಕಗೊಳ್ಳಲಿದ್ದಾರೆ.

ಇದನ್ನೂ ಓದಿರಿ: ಗೌರಿಬಿದನೂರಿನ ಸೈನಿಕನೀಗ ಲೆಫ್ಟಿನೆಂಟ್​ ಕರ್ನಲ್​​... 23 ವರ್ಷದ ಸೇವೆಗೆ ಒಲಿದು ಬಂತು ಭಾಗ್ಯ

ಐಎಂಎಫ್​​ನಂತಹ ಪ್ರತಿಷ್ಠಿತ ಹಣಕಾಸು ಸಂಸ್ಥೆಯ ಮುಖ್ಯ ಅರ್ಥಶಾಸ್ತ್ರಜ್ಞೆಯಾಗಿರುವ ಗೀತಾ ಗೋಪಿನಾಥ್ ಮೂಲತಃ ಕರ್ನಾಟಕದ ಮೈಸೂರುನವರು ಎಂಬುದು ಗಮನಾರ್ಹ ವಿಚಾರ.

ನವದೆಹಲಿ: ಅಂತಾರಾಷ್ಟ್ರೀಯ ಹಣಕಾಸು ನಿಧಿಯ ಮುಖ್ಯ ಅರ್ಥಶಾಸ್ತ್ರಜ್ಞೆ ಗೀತಾ ಗೋಪಿನಾಥ್​ ಪ್ರಧಾನಿ ನರೇಂದ್ರ ಮೋದಿ ಅವರನ್ನ ಭೇಟಿ ಮಾಡಿದರು. ಇದಕ್ಕೆ ಸಂಬಂಧಿಸಿದಂತೆ ಪ್ರಧಾನಿ ಕಾರ್ಯಾಲಯ ಟ್ವೀಟ್ ಮೂಲಕ ಮಾಹಿತಿ ಹೊರಹಾಕಿದೆ.

ಮುಂದಿನ ವರ್ಷದ ಅಂತಾರಾಷ್ಟ್ರೀಯ ಹಣಕಾಸು ನಿಧಿಯ ಉಪ ವ್ಯವಸ್ಥಾಪಕ ನಿರ್ದೇಶಕಿಯಾಗಿ ಗೀತಾ ಗೋಪಿನಾಥ್​ ಅಧಿಕಾರ ವಹಿಸಿಕೊಳ್ಳಲಿದ್ದು, ಇದರ ಬೆನ್ನಲ್ಲೇ ಪ್ರಧಾನಿ ನರೇಂದ್ರ ಮೋದಿ ಅವರನ್ನ ಭೇಟಿ ಮಾಡಿ, ಕೆಲ ನಿಮಿಷಗಳ ಕಾಲ ಚರ್ಚೆ ನಡೆಸಿದರು.

ಕಳೆದ ಮೂರು ವರ್ಷಗಳಿಂದ ಐಎಂಎಫ್​​ ಮುಖ್ಯ ಅರ್ಥಶಾಸ್ತ್ರಜ್ಞೆಯಾಗಿ ಕಾರ್ಯನಿರ್ವಹಿಸುತ್ತಿರುವ ಗೀತಾ ಗೋಪಿನಾಥ್​, 2022ರ ಜನವರಿಯಲ್ಲಿ ತಮ್ಮ ಹುದ್ದೆಗೆ ರಾಜೀನಾಮೆ ನೀಡಿ ಹಾರ್ವರ್ಡ್​ ವಿಶ್ವವಿದ್ಯಾಲಯದಲ್ಲಿ ಪ್ರೊಫೇಸರ್​​​​​ ಹುದ್ದೆಗೆ ಮರಳಲಿದ್ದಾರೆ ಎನ್ನಲಾಗಿತ್ತು. ಆದರೆ IMFನ ಮೊದಲ ಉಪವ್ಯವಸ್ಥಾಪಕ ನಿರ್ದೇಶಕ ಜೆಪ್ರಿ ಒಕಾಮೊಟೊ ಅವರು ಮುಂದಿನ ವರ್ಷ ತಮ್ಮ ಹುದ್ದೆಗೆ ರಾಜೀನಾಮೆ ನೀಡುತ್ತಿರುವ ಕಾರಣ ಅವರ ಸ್ಥಾನಕ್ಕೆ ಗೀತಾ ಗೋಪಿನಾಥನ್​ ನೇಮಕಗೊಳ್ಳಲಿದ್ದಾರೆ.

ಇದನ್ನೂ ಓದಿರಿ: ಗೌರಿಬಿದನೂರಿನ ಸೈನಿಕನೀಗ ಲೆಫ್ಟಿನೆಂಟ್​ ಕರ್ನಲ್​​... 23 ವರ್ಷದ ಸೇವೆಗೆ ಒಲಿದು ಬಂತು ಭಾಗ್ಯ

ಐಎಂಎಫ್​​ನಂತಹ ಪ್ರತಿಷ್ಠಿತ ಹಣಕಾಸು ಸಂಸ್ಥೆಯ ಮುಖ್ಯ ಅರ್ಥಶಾಸ್ತ್ರಜ್ಞೆಯಾಗಿರುವ ಗೀತಾ ಗೋಪಿನಾಥ್ ಮೂಲತಃ ಕರ್ನಾಟಕದ ಮೈಸೂರುನವರು ಎಂಬುದು ಗಮನಾರ್ಹ ವಿಚಾರ.

ETV Bharat Logo

Copyright © 2024 Ushodaya Enterprises Pvt. Ltd., All Rights Reserved.