ETV Bharat / bharat

ದೇಶದಲ್ಲಿ ಕೋವಿಡ್‌ ಹೆಚ್ಚಳ: 46,164 ಸೋಂಕಿತರು ಪತ್ತೆ, 607 ಮಂದಿ ಬಲಿ

author img

By

Published : Aug 26, 2021, 10:39 AM IST

ದೇಶದಲ್ಲಿ ಕೋವಿಡ್‌ ಆರ್ಭಟ ಮತ್ತೆ ಶುರುವಾಗಿದ್ದು ಕಳೆದ 24 ಗಂಟೆಗಳ ಅವಧಿಯಲ್ಲಿ ಹೊಸ ಸೋಂಕಿತರು, ಸಾವಿನ ಸಂಖ್ಯೆಯ ವರದಿ ಹೀಗಿದೆ..

India reports 46,164 new COVID19 cases, 34,159 recoveries and 607 deaths in the last 24 hrs, as per Health Ministry
ದೇಶದಲ್ಲಿ ಮತ್ತೆ ಏರಿಕೆಯತ್ತ ಮುಖ ಮಾಡಿದ ಕೋವಿಡ್‌; ನಿನ್ನೆ ಒಂದೇ ದಿನ 46,164 ಹೊಸ ಕೇಸ್‌, 607 ಮಂದಿ ಬಲಿ

ನವದೆಹಲಿ: ದೇಶದಲ್ಲಿ ಹೊಸದಾಗಿ 46,164 ಜನರಿಗೆ ಕೊರೊನಾ ವೈರಸ್ ದೃಢಪಟ್ಟಿದೆ. ಇದೇ ಅವಧಿಯಲ್ಲಿ 607 ಮಂದಿ ಮೃತಪಟ್ಟಿದ್ದಾರೆ. ಇಲ್ಲಿಯವರೆಗೆ ಮಾರಕ ರೋಗದಿಂದ ಪ್ರಾಣ ಕಳೆದುಕೊಂಡವರ ಸಂಖ್ಯೆ 4,36,365ರ ಗಡಿ ದಾಟಿದೆ ಎಂದು ಕೇಂದ್ರ ಆರೋಗ್ಯ ಇಲಾಖೆ ತಿಳಿಸಿದೆ.

ಕಳೆದೊಂದು ದಿನದಲ್ಲಿ 34,159 ಮಂದಿ ಗುಣಮುಖರಾಗಿದ್ದಾರೆ. ಇಲ್ಲಿಯವರೆಗೆ ಚೇತರಿಸಿಕೊಂಡವರ ಸಂಖ್ಯೆ 3,17,88,440 ಆಗಿದೆ. ಸಕ್ರಿಯ ಪ್ರಕರಣಗಳು 3,33,725ರಷ್ಟಿವೆ. ನಿನ್ನೆ ಕಂಡುಬಂದ ಕೋವಿಡ್‌ ಪ್ರಕರಣಗಳ ಬಗೆಗಿನ ಮಾಹಿತಿಗೆ ಈ ಕೆಳಗಿನ ಲಿಂಕ್ ಕ್ಲಿಕ್‌ ಮಾಡಿ.

ಇದನ್ನೂ ಓದಿ: ದೇಶದಲ್ಲಿ ಹೊಸದಾಗಿ 37,593 ಮಂದಿಗೆ ಕೋವಿಡ್‌ ದೃಢ: 648 ಜನ ಸಾವು

ಭಾರತದಲ್ಲಿ ಈವರೆಗೆ 60,38,46,475 ಮಂದಿಗೆ ಲಸಿಕೆ ನೀಡಲಾಗಿದೆ. ನಿನ್ನೆ ಒಂದೇ ದಿನ 80,40,407 ಜನರಿಗೆ ಲಸಿಕೆ ಪೂರೈಕೆ ಮಾಡಲಾಗಿದೆ ಎಂದು ಐಸಿಎಂಆರ್​ ಹೇಳಿದೆ.

ಕೋವಿಡ್‌ ಪರೀಕ್ಷೆಗಳನ್ನು ಹೆಚ್ಚಿಸಿರುವ ಹಿನ್ನೆಲೆಯಲ್ಲಿ ಹೊಸ ಪ್ರಕರಣಗಳ ಸಂಖ್ಯೆಯಲ್ಲಿ ಹೆಚ್ಚಳವಾಗುತ್ತಿದೆ ಎಂದು ಹೇಳಲಾಗುತ್ತಿದೆ. ಇಡೀ ದೇಶದ ಅರ್ಧಕ್ಕಿಂತ ಹೆಚ್ಚಿನ ಪ್ರಕರಣಗಳು ನೆರೆಯ ಕೇರಳ ರಾಜ್ಯದಲ್ಲೇ ಪತ್ತೆಯಾಗುತ್ತಿವೆ. ಈ ಬಗ್ಗೆ ಕೇಂದ್ರ ಸರ್ಕಾರ ಕಳವಳ ವ್ಯಕ್ತಪಡಿಸಿದ್ದು, ತಜ್ಞರ ತಂಡವನ್ನು ಅಲ್ಲಿಗೆ ಕಳುಹಿಸಿಕೊಟ್ಟಿದೆ.

ನವದೆಹಲಿ: ದೇಶದಲ್ಲಿ ಹೊಸದಾಗಿ 46,164 ಜನರಿಗೆ ಕೊರೊನಾ ವೈರಸ್ ದೃಢಪಟ್ಟಿದೆ. ಇದೇ ಅವಧಿಯಲ್ಲಿ 607 ಮಂದಿ ಮೃತಪಟ್ಟಿದ್ದಾರೆ. ಇಲ್ಲಿಯವರೆಗೆ ಮಾರಕ ರೋಗದಿಂದ ಪ್ರಾಣ ಕಳೆದುಕೊಂಡವರ ಸಂಖ್ಯೆ 4,36,365ರ ಗಡಿ ದಾಟಿದೆ ಎಂದು ಕೇಂದ್ರ ಆರೋಗ್ಯ ಇಲಾಖೆ ತಿಳಿಸಿದೆ.

ಕಳೆದೊಂದು ದಿನದಲ್ಲಿ 34,159 ಮಂದಿ ಗುಣಮುಖರಾಗಿದ್ದಾರೆ. ಇಲ್ಲಿಯವರೆಗೆ ಚೇತರಿಸಿಕೊಂಡವರ ಸಂಖ್ಯೆ 3,17,88,440 ಆಗಿದೆ. ಸಕ್ರಿಯ ಪ್ರಕರಣಗಳು 3,33,725ರಷ್ಟಿವೆ. ನಿನ್ನೆ ಕಂಡುಬಂದ ಕೋವಿಡ್‌ ಪ್ರಕರಣಗಳ ಬಗೆಗಿನ ಮಾಹಿತಿಗೆ ಈ ಕೆಳಗಿನ ಲಿಂಕ್ ಕ್ಲಿಕ್‌ ಮಾಡಿ.

ಇದನ್ನೂ ಓದಿ: ದೇಶದಲ್ಲಿ ಹೊಸದಾಗಿ 37,593 ಮಂದಿಗೆ ಕೋವಿಡ್‌ ದೃಢ: 648 ಜನ ಸಾವು

ಭಾರತದಲ್ಲಿ ಈವರೆಗೆ 60,38,46,475 ಮಂದಿಗೆ ಲಸಿಕೆ ನೀಡಲಾಗಿದೆ. ನಿನ್ನೆ ಒಂದೇ ದಿನ 80,40,407 ಜನರಿಗೆ ಲಸಿಕೆ ಪೂರೈಕೆ ಮಾಡಲಾಗಿದೆ ಎಂದು ಐಸಿಎಂಆರ್​ ಹೇಳಿದೆ.

ಕೋವಿಡ್‌ ಪರೀಕ್ಷೆಗಳನ್ನು ಹೆಚ್ಚಿಸಿರುವ ಹಿನ್ನೆಲೆಯಲ್ಲಿ ಹೊಸ ಪ್ರಕರಣಗಳ ಸಂಖ್ಯೆಯಲ್ಲಿ ಹೆಚ್ಚಳವಾಗುತ್ತಿದೆ ಎಂದು ಹೇಳಲಾಗುತ್ತಿದೆ. ಇಡೀ ದೇಶದ ಅರ್ಧಕ್ಕಿಂತ ಹೆಚ್ಚಿನ ಪ್ರಕರಣಗಳು ನೆರೆಯ ಕೇರಳ ರಾಜ್ಯದಲ್ಲೇ ಪತ್ತೆಯಾಗುತ್ತಿವೆ. ಈ ಬಗ್ಗೆ ಕೇಂದ್ರ ಸರ್ಕಾರ ಕಳವಳ ವ್ಯಕ್ತಪಡಿಸಿದ್ದು, ತಜ್ಞರ ತಂಡವನ್ನು ಅಲ್ಲಿಗೆ ಕಳುಹಿಸಿಕೊಟ್ಟಿದೆ.

ETV Bharat Logo

Copyright © 2024 Ushodaya Enterprises Pvt. Ltd., All Rights Reserved.