ETV Bharat / bharat

ಸಂಕಷ್ಟದಲ್ಲಿರುವ ಶ್ರೀಲಂಕಾಗೆ 21 ಸಾವಿರ ಟನ್​ ರಾಸಾಯನಿಕ ರಸಗೊಬ್ಬರ ನೀಡಿದ ಭಾರತ

author img

By

Published : Aug 23, 2022, 7:23 AM IST

ಶ್ರೀಲಂಕಾಗೆ ಭಾರತ 21 ಸಾವಿರ ಟನ್​ ರಾಸಾಯನಿಕ ರಸಗೊಬ್ಬರವನ್ನು ಹಸ್ತಾಂತರಿಸಿ ನೆರವಿನ ಹಸ್ತ ನೀಡಿದೆ.

india-provided-chemical-fertilizer-to-sri-lanka
ರಾಸಾಯನಿಕ ರಸಗೊಬ್ಬರ ನೀಡಿದ ಭಾರತ

ನವದೆಹಲಿ: ತೀವ್ರ ಆರ್ಥಿಕ ಬಿಕ್ಕಟ್ಟಿಗೆ ಸಿಲುಕಿರುವ ಶ್ರೀಲಂಕಾಗೆ ಭಾರತ ಮತ್ತೆ ನೆರವಿನ ಹಸ್ತಚಾಚಿದೆ. 21 ಸಾವಿರ ಟನ್​ ರಾಸಾಯನಿಕ ಗೊಬ್ಬರವನ್ನು ಕಳುಹಿಸಿ ಸಹಾಯಕ್ಕೆ ಬಂದಿದೆ. ವಿಶೇಷ ಬೆಂಬಲದಡಿ ಭಾರತದ ಹೈಕಮಿಷನ್​ ಆ ದೇಶಕ್ಕೆ ನಿನ್ನೆ ರಾಸಾಯನಿಕ ಗೊಬ್ಬರವನ್ನು ಹಸ್ತಾಂತರಿಸಿತು. ಕಳೆದ ತಿಂಗಳು 44 ಸಾವಿರ ಟನ್​ ರಾಸಾಯನಿಕ ಗೊಬ್ಬರವನ್ನು ಪೂರೈಸಲಾಗಿತ್ತು. ಒಟ್ಟಾರೆ ಈ ವರ್ಷ ದ್ವೀಪರಾಷ್ಟ್ರಕ್ಕೆ ಭಾರತ 4 ಬಿಲಿಯನ್​ ಡಾಲರ್​ ನೆರವು ನೀಡಿದಂತಾಗಿದೆ.

"ಶ್ರೀಲಂಕಾದ ಕೃಷಿ ಕ್ಷೇತ್ರ ಮತ್ತೆ ಚೇತರಿಕೆ ಕಾಣಲು ಈ ನೆರವು ನೀಡಲಾಗಿದೆ. ದೇಶದ ಆಹಾರ ಭದ್ರತೆಗೂ ಇದು ಬೆಂಬಲವಾಗಿರಲಿದೆ. ಉಭಯ ರಾಷ್ಟ್ರಗಳ ನಿಕಟ ಬಾಂಧವ್ಯವನ್ನೂ ಇದು ತೋರಿಸುತ್ತದೆ" ಎಂದು ಕೊಲಂಬೊದಲ್ಲಿರುವ ಭಾರತ ಹೈಕಮಿಷನ್​ ಸರಣಿ ಟ್ವೀಟ್​ ಮಾಡಿದೆ.

  • Adding to the fragrance of friendship and cooperation.
    High Commissioner formally handed over 21,000 tonnes of fertilizer supplied under 🇮🇳’s special support to the people of 🇱🇰.
    This follows 44,000 tonnes supplied last month under 🇮🇳n support totalling about USD 4bn in 2022 (1/ pic.twitter.com/gmmu5NCRQA

    — India in Sri Lanka (@IndiainSL) August 22, 2022 " class="align-text-top noRightClick twitterSection" data=" ">

ಶ್ರೀಲಂಕಾದ ಅವಶ್ಯಕತೆಗಳಿಗೆ ಅನುಗುಣವಾಗಿ ಆರ್ಥಿಕ ಸಹಾಯವನ್ನು ನೀಡುವಲ್ಲಿ ಭಾರತ ಮುಂದಿದೆ. ಅಗತ್ಯವಿರುವ ಸಮಯದಲ್ಲಿ ಗರಿಷ್ಠ ಪ್ರಮಾಣದ ಸಹಾಯವನ್ನು ಒದಗಿಸಿದ ದೇಶವಾಗಿದೆ. ಈ ವರ್ಷದ ಆರಂಭದಿಂದ ದ್ವೀಪರಾಷ್ಟ್ರ ಆರ್ಥಿಕ ಬಿಕ್ಕಟ್ಟಿಗೆ ಸಿಲುಕಿ ನಲುಗಿದೆ. ವಿದೇಶಿ ಸಾಲಗಳನ್ನು ಮರುಪಾವತಿ ಮಾಡುವುದನ್ನು ಮುಂದೂಡಿದೆ. ದೇಶದ 5.7 ಮಿಲಿಯನ್​ ಜನರ ರಕ್ಷಣೆಗಾಗಿ ಲಂಕಾಡಳಿತ ಹಲವು ದೇಶಗಳ ನೆರವು ಬಯಸಿದೆ.

ವಿದೇಶಿ ವಿನಿಮಯ ಕೊರತೆಯಿಂದಾಗಿ ಶ್ರೀಲಂಕಾದಲ್ಲಿ ಆರ್ಥಿಕ ಬಿಕ್ಕಟ್ಟು ತಲೆದೋರಿತು. ಆಹಾರ ಮತ್ತು ಇಂಧನದ ಕೊರತೆಯಿಂದಾಗಿ ಜನರು ಸರ್ಕಾರದ ವಿರುದ್ಧವೇ ದಂಗೆದ್ದಿದ್ದನ್ನು ಇಲ್ಲಿ ನೆನಪಿಸಬಹುದು.

ನವದೆಹಲಿ: ತೀವ್ರ ಆರ್ಥಿಕ ಬಿಕ್ಕಟ್ಟಿಗೆ ಸಿಲುಕಿರುವ ಶ್ರೀಲಂಕಾಗೆ ಭಾರತ ಮತ್ತೆ ನೆರವಿನ ಹಸ್ತಚಾಚಿದೆ. 21 ಸಾವಿರ ಟನ್​ ರಾಸಾಯನಿಕ ಗೊಬ್ಬರವನ್ನು ಕಳುಹಿಸಿ ಸಹಾಯಕ್ಕೆ ಬಂದಿದೆ. ವಿಶೇಷ ಬೆಂಬಲದಡಿ ಭಾರತದ ಹೈಕಮಿಷನ್​ ಆ ದೇಶಕ್ಕೆ ನಿನ್ನೆ ರಾಸಾಯನಿಕ ಗೊಬ್ಬರವನ್ನು ಹಸ್ತಾಂತರಿಸಿತು. ಕಳೆದ ತಿಂಗಳು 44 ಸಾವಿರ ಟನ್​ ರಾಸಾಯನಿಕ ಗೊಬ್ಬರವನ್ನು ಪೂರೈಸಲಾಗಿತ್ತು. ಒಟ್ಟಾರೆ ಈ ವರ್ಷ ದ್ವೀಪರಾಷ್ಟ್ರಕ್ಕೆ ಭಾರತ 4 ಬಿಲಿಯನ್​ ಡಾಲರ್​ ನೆರವು ನೀಡಿದಂತಾಗಿದೆ.

"ಶ್ರೀಲಂಕಾದ ಕೃಷಿ ಕ್ಷೇತ್ರ ಮತ್ತೆ ಚೇತರಿಕೆ ಕಾಣಲು ಈ ನೆರವು ನೀಡಲಾಗಿದೆ. ದೇಶದ ಆಹಾರ ಭದ್ರತೆಗೂ ಇದು ಬೆಂಬಲವಾಗಿರಲಿದೆ. ಉಭಯ ರಾಷ್ಟ್ರಗಳ ನಿಕಟ ಬಾಂಧವ್ಯವನ್ನೂ ಇದು ತೋರಿಸುತ್ತದೆ" ಎಂದು ಕೊಲಂಬೊದಲ್ಲಿರುವ ಭಾರತ ಹೈಕಮಿಷನ್​ ಸರಣಿ ಟ್ವೀಟ್​ ಮಾಡಿದೆ.

  • Adding to the fragrance of friendship and cooperation.
    High Commissioner formally handed over 21,000 tonnes of fertilizer supplied under 🇮🇳’s special support to the people of 🇱🇰.
    This follows 44,000 tonnes supplied last month under 🇮🇳n support totalling about USD 4bn in 2022 (1/ pic.twitter.com/gmmu5NCRQA

    — India in Sri Lanka (@IndiainSL) August 22, 2022 " class="align-text-top noRightClick twitterSection" data=" ">

ಶ್ರೀಲಂಕಾದ ಅವಶ್ಯಕತೆಗಳಿಗೆ ಅನುಗುಣವಾಗಿ ಆರ್ಥಿಕ ಸಹಾಯವನ್ನು ನೀಡುವಲ್ಲಿ ಭಾರತ ಮುಂದಿದೆ. ಅಗತ್ಯವಿರುವ ಸಮಯದಲ್ಲಿ ಗರಿಷ್ಠ ಪ್ರಮಾಣದ ಸಹಾಯವನ್ನು ಒದಗಿಸಿದ ದೇಶವಾಗಿದೆ. ಈ ವರ್ಷದ ಆರಂಭದಿಂದ ದ್ವೀಪರಾಷ್ಟ್ರ ಆರ್ಥಿಕ ಬಿಕ್ಕಟ್ಟಿಗೆ ಸಿಲುಕಿ ನಲುಗಿದೆ. ವಿದೇಶಿ ಸಾಲಗಳನ್ನು ಮರುಪಾವತಿ ಮಾಡುವುದನ್ನು ಮುಂದೂಡಿದೆ. ದೇಶದ 5.7 ಮಿಲಿಯನ್​ ಜನರ ರಕ್ಷಣೆಗಾಗಿ ಲಂಕಾಡಳಿತ ಹಲವು ದೇಶಗಳ ನೆರವು ಬಯಸಿದೆ.

ವಿದೇಶಿ ವಿನಿಮಯ ಕೊರತೆಯಿಂದಾಗಿ ಶ್ರೀಲಂಕಾದಲ್ಲಿ ಆರ್ಥಿಕ ಬಿಕ್ಕಟ್ಟು ತಲೆದೋರಿತು. ಆಹಾರ ಮತ್ತು ಇಂಧನದ ಕೊರತೆಯಿಂದಾಗಿ ಜನರು ಸರ್ಕಾರದ ವಿರುದ್ಧವೇ ದಂಗೆದ್ದಿದ್ದನ್ನು ಇಲ್ಲಿ ನೆನಪಿಸಬಹುದು.

ETV Bharat Logo

Copyright © 2024 Ushodaya Enterprises Pvt. Ltd., All Rights Reserved.