ETV Bharat / bharat

ಚೆಸ್​ ಒಲಿಂಪಿಯಾಡ್​​ನಲ್ಲಿ 2 ಪದಕ ಗೆದ್ದ ಭಾರತ: ₹1 ಕೋಟಿ ಬಹುಮಾನ ಘೋಷಿಸಿದ ತಮಿಳುನಾಡು ಸಿಎಂ

author img

By

Published : Aug 10, 2022, 9:47 PM IST

ಚೆನ್ನೈನಲ್ಲಿ ಆಯೋಜನೆಗೊಂಡಿದ್ದ 44ನೇ ಚೆಸ್ ಒಲಿಂಪಿಯಾಡ್​​ನಲ್ಲಿ ಭಾರತ ಕಂಚು ಗೆಲ್ಲುವಲ್ಲಿ ಯಶಸ್ವಿಯಾಗಿದೆ.

Etv Bharat
Etv Bharat

ಚೆನ್ನೈ(ತಮಿಳುನಾಡು): 44ನೇ ಚೆಸ್​ ಒಲಿಂಪಿಯಾಡ್​​ನಲ್ಲಿ ಭಾರತದ A ಮತ್ತು B ತಂಡಗಳು ಕಂಚಿನ ಪದಕ ಗೆಲ್ಲುವಲ್ಲಿ ಯಶಸ್ವಿಯಾಗಿವೆ. ಈ ಟೀಂಗಳಿಗೆ ತಮಿಳುನಾಡಿನ ಮುಖ್ಯಮಂತ್ರಿ ಎಂ ಕೆ ಸ್ಟಾಲಿನ್​ 1 ಕೋಟಿ ರೂಪಾಯಿ ನಗದು ಬಹುಮಾನ ನೀಡಿದ್ದಾರೆ.

ಮಹಾಬಲೀಪುರಂನಲ್ಲಿ ನಡೆದ ಪಂದ್ಯಾವಳಿಯಲ್ಲಿ ಯುವ ಆಟಗಾರರಾದ ಡಿ ಗುಕೇಶ್, ಆರ್ ಪ್ರಗ್ನಾನಂದ , ನಿಹಾಲ್ ಸರಿನ್, ರೌನಕ್ ಸಾಧ್ವನಿ, ಬಿ ಅಧಿಬನ್ ಮತ್ತು ಕೊನೇರು ಹಂಪಿ, ಆರ್ ವೈಶಾಲಿ ಪಾಲ್ಗೊಂಡಿದ್ದರು. ಭಾರತೀಯ ಮಹಿಳೆಯರು 11ನೇ ಪಂದ್ಯದಲ್ಲಿ ಯುಎಸ್ ವಿರುದ್ಧ ಸೋಲುವ ಮೂಲಕ ಕಂಚಿಗೆ ತೃಪ್ತಿಪಟ್ಟುಕೊಳ್ಳಬೇಕಾಯಿತು.

ತಮಿಳುನಾಡು ಸರ್ಕಾರದ ಸಹಯೋಗದಲ್ಲಿ ನಡೆದ ಅಂತಾರಾಷ್ಟ್ರೀಯ ಚೆಸ್ ಒಲಿಂಪಿಯಾಡ್​​​ ಕ್ರೀಡಾಕೂಟ ಯಶಸ್ವಿಯಾಗಿ ಮುಕ್ತಾಯಗೊಂಡಿದ್ದು, ಉಜ್ಬೇಕಿಸ್ತಾನ ಚಿನ್ನ ಗೆದ್ದರೆ, ಅರ್ಮೇನಿಯಾ ಬೆಳ್ಳಿ ಪದಕ ತನ್ನದಾಗಿಸಿಕೊಂಡಿದೆ.

ಇದನ್ನೂ ಓದಿ: ಚೆಸ್ ಒಲಿಂಪಿಯಾಡ್ ಕ್ರೀಡಾಕೂಟ ಮುಕ್ತಾಯ: ಹಂಗೇರಿಗೆ ಫಿಡೆ ಧ್ವಜ ಹಸ್ತಾಂತರ

ಸಮಾರೋಪ ಸಮಾರಂಭ ಕಾರ್ಯಕ್ರಮದಲ್ಲಿ ಭಾಗಿಯಾಗಿ ಮಾತನಾಡಿದ ಮುಖ್ಯಮಂತ್ರಿ ಎಂ ಕೆ ಸ್ಟಾಲಿನ್​, ಚೆಸ್ ಒಲಿಂಪಿಯಾಡ್​​ನಲ್ಲಿ ಭಾರತ ಪದಕ ಗೆದ್ದಿರುವುದು ಎಲ್ಲರೂ ಹೆಮ್ಮೆ ಪಡುವಂತಹ ವಿಷಯ. ಈ ತಂಡಗಳಿಗೆ ಸರ್ಕಾರ ಒಂದು ಕೋಟಿ ರೂಪಾಯಿ ನಗದು ಬಹುಮಾನ ನೀಡುತ್ತಿದೆ ಎಂದರು.

ಕ್ರೀಡಾಕೂಟದಲ್ಲಿ 187 ದೇಶಗಳ ಆಟಗಾರರು ಭಾಗಿಯಾಗಿದ್ದರು. ಜುಲೈ 28ರಿಂದ ಆರಂಭಗೊಂಡಿದ್ದ ಕ್ರೀಡಾಕೂಟ ಆಗಸ್ಟ್ 9 ರಂದು ಮುಕ್ತಾಯವಾಗಿದ್ದು, ಇಂದು ಸಮಾರೋಪ ಸಮಾರಂಭ ನಡೆಯಿತು. ಒಲಿಂಪಿಯಾಡ್​​ನಲ್ಲಿ ಪದಕ ಗೆದ್ದಿರುವ ಎರಡು ತಂಡಗಳಿಗೆ ಪ್ರಧಾನಿ ನರೇಂದ್ರ ಮೋದಿ ಟ್ವೀಟ್ ಮೂಲಕ ಅಭಿನಂದನೆ ಸಲ್ಲಿಸಿದ್ದಾರೆ.

ಚೆನ್ನೈ(ತಮಿಳುನಾಡು): 44ನೇ ಚೆಸ್​ ಒಲಿಂಪಿಯಾಡ್​​ನಲ್ಲಿ ಭಾರತದ A ಮತ್ತು B ತಂಡಗಳು ಕಂಚಿನ ಪದಕ ಗೆಲ್ಲುವಲ್ಲಿ ಯಶಸ್ವಿಯಾಗಿವೆ. ಈ ಟೀಂಗಳಿಗೆ ತಮಿಳುನಾಡಿನ ಮುಖ್ಯಮಂತ್ರಿ ಎಂ ಕೆ ಸ್ಟಾಲಿನ್​ 1 ಕೋಟಿ ರೂಪಾಯಿ ನಗದು ಬಹುಮಾನ ನೀಡಿದ್ದಾರೆ.

ಮಹಾಬಲೀಪುರಂನಲ್ಲಿ ನಡೆದ ಪಂದ್ಯಾವಳಿಯಲ್ಲಿ ಯುವ ಆಟಗಾರರಾದ ಡಿ ಗುಕೇಶ್, ಆರ್ ಪ್ರಗ್ನಾನಂದ , ನಿಹಾಲ್ ಸರಿನ್, ರೌನಕ್ ಸಾಧ್ವನಿ, ಬಿ ಅಧಿಬನ್ ಮತ್ತು ಕೊನೇರು ಹಂಪಿ, ಆರ್ ವೈಶಾಲಿ ಪಾಲ್ಗೊಂಡಿದ್ದರು. ಭಾರತೀಯ ಮಹಿಳೆಯರು 11ನೇ ಪಂದ್ಯದಲ್ಲಿ ಯುಎಸ್ ವಿರುದ್ಧ ಸೋಲುವ ಮೂಲಕ ಕಂಚಿಗೆ ತೃಪ್ತಿಪಟ್ಟುಕೊಳ್ಳಬೇಕಾಯಿತು.

ತಮಿಳುನಾಡು ಸರ್ಕಾರದ ಸಹಯೋಗದಲ್ಲಿ ನಡೆದ ಅಂತಾರಾಷ್ಟ್ರೀಯ ಚೆಸ್ ಒಲಿಂಪಿಯಾಡ್​​​ ಕ್ರೀಡಾಕೂಟ ಯಶಸ್ವಿಯಾಗಿ ಮುಕ್ತಾಯಗೊಂಡಿದ್ದು, ಉಜ್ಬೇಕಿಸ್ತಾನ ಚಿನ್ನ ಗೆದ್ದರೆ, ಅರ್ಮೇನಿಯಾ ಬೆಳ್ಳಿ ಪದಕ ತನ್ನದಾಗಿಸಿಕೊಂಡಿದೆ.

ಇದನ್ನೂ ಓದಿ: ಚೆಸ್ ಒಲಿಂಪಿಯಾಡ್ ಕ್ರೀಡಾಕೂಟ ಮುಕ್ತಾಯ: ಹಂಗೇರಿಗೆ ಫಿಡೆ ಧ್ವಜ ಹಸ್ತಾಂತರ

ಸಮಾರೋಪ ಸಮಾರಂಭ ಕಾರ್ಯಕ್ರಮದಲ್ಲಿ ಭಾಗಿಯಾಗಿ ಮಾತನಾಡಿದ ಮುಖ್ಯಮಂತ್ರಿ ಎಂ ಕೆ ಸ್ಟಾಲಿನ್​, ಚೆಸ್ ಒಲಿಂಪಿಯಾಡ್​​ನಲ್ಲಿ ಭಾರತ ಪದಕ ಗೆದ್ದಿರುವುದು ಎಲ್ಲರೂ ಹೆಮ್ಮೆ ಪಡುವಂತಹ ವಿಷಯ. ಈ ತಂಡಗಳಿಗೆ ಸರ್ಕಾರ ಒಂದು ಕೋಟಿ ರೂಪಾಯಿ ನಗದು ಬಹುಮಾನ ನೀಡುತ್ತಿದೆ ಎಂದರು.

ಕ್ರೀಡಾಕೂಟದಲ್ಲಿ 187 ದೇಶಗಳ ಆಟಗಾರರು ಭಾಗಿಯಾಗಿದ್ದರು. ಜುಲೈ 28ರಿಂದ ಆರಂಭಗೊಂಡಿದ್ದ ಕ್ರೀಡಾಕೂಟ ಆಗಸ್ಟ್ 9 ರಂದು ಮುಕ್ತಾಯವಾಗಿದ್ದು, ಇಂದು ಸಮಾರೋಪ ಸಮಾರಂಭ ನಡೆಯಿತು. ಒಲಿಂಪಿಯಾಡ್​​ನಲ್ಲಿ ಪದಕ ಗೆದ್ದಿರುವ ಎರಡು ತಂಡಗಳಿಗೆ ಪ್ರಧಾನಿ ನರೇಂದ್ರ ಮೋದಿ ಟ್ವೀಟ್ ಮೂಲಕ ಅಭಿನಂದನೆ ಸಲ್ಲಿಸಿದ್ದಾರೆ.

ETV Bharat Logo

Copyright © 2024 Ushodaya Enterprises Pvt. Ltd., All Rights Reserved.