ETV Bharat / bharat

ವಾರಾಂತ್ಯದ ಕರ್ಫ್ಯೂ ತೆರವು: ಭಾರತೀಯ ಪ್ರಜೆಗಳು ರೈಲ್ವೆ ನಿಲ್ದಾಣಕ್ಕೆ ಬರುವಂತೆ ಸಲಹೆ - ಭಾರತೀಯ ಪ್ರಜೆಗಳು ರೈಲ್ವೆ ನಿಲ್ದಾಣಕ್ಕೆ ಬರುವಂತೆ ಸಲಹೆ

ಉಕ್ರೇನ್ ರಾಜಧಾನಿ ಕೀವ್​​​​​ನಲ್ಲಿ ವಾರಾಂತ್ಯದ ಕರ್ಫ್ಯೂ ತೆಗೆದುಹಾಕಿದ್ದು, ಈ ಅವಕಾಶವನ್ನು ಬಳಸಿಕೊಂಡು ಹೊರಬರಲು ಉಕ್ರೇನ್‌ನಲ್ಲಿ ಸಿಲುಕಿರುವ ದೇಶದ ವಿದ್ಯಾರ್ಥಿಗಳಿಗೆ ಭಾರತ ಸಲಹೆ ನೀಡಿದೆ. ರೈಲುಗಳ ವೇಳಾಪಟ್ಟಿ ಬದಲಾವಣೆ, ರದ್ದತಿ ಮತ್ತು ರೈಲುಗಳು ವಿಳಂಬವಾಗುವ ಸಾಧ್ಯತೆಯ ಬಗ್ಗೆ ಭಾರತೀಯರಿಗೆ ಎಚ್ಚರಿಕೆಯನ್ನು ಸಹ ನೀಡಲಾಗಿದೆ.

Indian nationals to head to Railway Station as curfew lifts in Kyiv
ಭಾರತೀಯ ಪ್ರಜೆಗಳು ರೈಲ್ವೆ ನಿಲ್ದಾಣಕ್ಕೆ ಬರುವಂತೆ ಸಲಹೆ
author img

By

Published : Feb 28, 2022, 8:52 PM IST

Updated : Mar 1, 2022, 2:01 PM IST

ಕೀವ್​​​: ಉಕ್ರೇನ್‌ನ ಕೀವ್​ ನಗರದಲ್ಲಿ ವಾರಾಂತ್ಯದ ಕರ್ಫ್ಯೂ ತೆಗೆದುಹಾಕಲಾಗಿದ್ದು, ಅಲ್ಲಿ ಸಿಲುಕಿರುವ ಭಾರತೀಯ ಪ್ರಜೆಗಳು ರೈಲ್ವೆ ನಿಲ್ದಾಣಕ್ಕೆ ಬರುವಂತೆ ಭಾರತೀಯ ರಾಯಭಾರ ಕಚೇರಿ ಸೋಮವಾರ ಸಲಹೆ ನೀಡಿದೆ. ಉಕ್ರೇನ್ ರೈಲ್ವೆಯು ಜನರನ್ನು ಸ್ಥಳಾಂತರಿಸಲು ವಿಶೇಷ ರೈಲುಗಳ ವ್ಯವಸ್ಥೆ ಮಾಡಿದೆ. ಕೀವ್​​​​ನಲ್ಲಿ ವಾರಾಂತ್ಯದ ಕರ್ಫ್ಯೂ ಹಿಂತೆಗೆದುಕೊಳ್ಳಲಾಗಿದೆ. ಎಲ್ಲ ವಿದ್ಯಾರ್ಥಿಗಳು ಪಶ್ಚಿಮ ಭಾಗಗಳಿಗೆ ಪ್ರಯಾಣಿಸಲು ರೈಲು ನಿಲ್ದಾಣಕ್ಕೆ ತೆರಳುವಂತೆ ಸೂಚಿಸಲಾಗಿದೆ ಎಂದು ರಾಯಭಾರ ಕಚೇರಿ ಹೇಳಿದೆ.

ರೈಲ್ವೆ ನಿಲ್ದಾಣಗಳಲ್ಲಿ ಹೆಚ್ಚಿನ ಜನಸಂದಣಿ ಉಂಟಾಗುವ ನಿರೀಕ್ಷೆ ಇದ್ದು, ಭಾರತೀಯ ಪ್ರಜೆಗಳು ಶಾಂತಿಯುತವಾಗಿ ಮತ್ತು ಒಗ್ಗಟ್ಟಿನಿಂದ ಇರುವಂತೆ ಸೂಚಿಸಲಾಗಿದೆ.

ಇದನ್ನೂ ಓದಿ: ರಷ್ಯಾ-ಉಕ್ರೇನ್​​ ಸಂಘರ್ಷದಲ್ಲಿ 102 ನಾಗರಿಕರು ಸಾವು ; 5 ಲಕ್ಷ ನಿರಾಶ್ರಿತರು ಉಕ್ರೇನ್​​ನಿಂದ ಪಲಾಯನ : ವಿಶ್ವಸಂಸ್ಥೆ

ರೈಲುಗಳ ವೇಳಾಪಟ್ಟಿಯಲ್ಲಿ ಬದಲಾವಣೆ, ರದ್ದತಿ ಮತ್ತು ವಿಳಂಬವಾಗುವ ಸಾಧ್ಯತೆಯ ಬಗ್ಗೆ ಭಾರತೀಯರಿಗೆ ಎಚ್ಚರಿಕೆ ನೀಡಲಾಗಿದೆ. ಭಾರತೀಯರು ತಮ್ಮ ಪಾಸ್‌ಪೋರ್ಟ್‌, ಹಣ, ಸೇವಿಸಲು ಆಹಾರ, ಚಳಿಗಾಲದ ಉಡುಪುಗಳು ಮತ್ತು ಅಗತ್ಯ ವಸ್ತುಗಳನ್ನು ತರುವಂತೆ ಸೂಚನೆ ನೀಡಲಾಗಿದೆ.

ಸರ್ಕಾರಿ ಅಧಿಕಾರಿಗಳೊಂದಿಗೆ ಯಾವುದೇ ರೀತಿಯ ಮಾತುಕತೆ ನಡೆಸದೇ, ಗಡಿ ಚೆಕ್​ಪೋಸ್ಟ್​ಗಳಿಗೆ ತೆರಳದಂತೆ ಕೀವ್​ನಲ್ಲಿರುವ ಭಾರತೀಯ ರಾಯಭಾರ ಕಚೇರಿ ಭಾರತೀಯರಿಗೆ ಸಲಹೆ ನೀಡಿದೆ.


ಕೀವ್​​​: ಉಕ್ರೇನ್‌ನ ಕೀವ್​ ನಗರದಲ್ಲಿ ವಾರಾಂತ್ಯದ ಕರ್ಫ್ಯೂ ತೆಗೆದುಹಾಕಲಾಗಿದ್ದು, ಅಲ್ಲಿ ಸಿಲುಕಿರುವ ಭಾರತೀಯ ಪ್ರಜೆಗಳು ರೈಲ್ವೆ ನಿಲ್ದಾಣಕ್ಕೆ ಬರುವಂತೆ ಭಾರತೀಯ ರಾಯಭಾರ ಕಚೇರಿ ಸೋಮವಾರ ಸಲಹೆ ನೀಡಿದೆ. ಉಕ್ರೇನ್ ರೈಲ್ವೆಯು ಜನರನ್ನು ಸ್ಥಳಾಂತರಿಸಲು ವಿಶೇಷ ರೈಲುಗಳ ವ್ಯವಸ್ಥೆ ಮಾಡಿದೆ. ಕೀವ್​​​​ನಲ್ಲಿ ವಾರಾಂತ್ಯದ ಕರ್ಫ್ಯೂ ಹಿಂತೆಗೆದುಕೊಳ್ಳಲಾಗಿದೆ. ಎಲ್ಲ ವಿದ್ಯಾರ್ಥಿಗಳು ಪಶ್ಚಿಮ ಭಾಗಗಳಿಗೆ ಪ್ರಯಾಣಿಸಲು ರೈಲು ನಿಲ್ದಾಣಕ್ಕೆ ತೆರಳುವಂತೆ ಸೂಚಿಸಲಾಗಿದೆ ಎಂದು ರಾಯಭಾರ ಕಚೇರಿ ಹೇಳಿದೆ.

ರೈಲ್ವೆ ನಿಲ್ದಾಣಗಳಲ್ಲಿ ಹೆಚ್ಚಿನ ಜನಸಂದಣಿ ಉಂಟಾಗುವ ನಿರೀಕ್ಷೆ ಇದ್ದು, ಭಾರತೀಯ ಪ್ರಜೆಗಳು ಶಾಂತಿಯುತವಾಗಿ ಮತ್ತು ಒಗ್ಗಟ್ಟಿನಿಂದ ಇರುವಂತೆ ಸೂಚಿಸಲಾಗಿದೆ.

ಇದನ್ನೂ ಓದಿ: ರಷ್ಯಾ-ಉಕ್ರೇನ್​​ ಸಂಘರ್ಷದಲ್ಲಿ 102 ನಾಗರಿಕರು ಸಾವು ; 5 ಲಕ್ಷ ನಿರಾಶ್ರಿತರು ಉಕ್ರೇನ್​​ನಿಂದ ಪಲಾಯನ : ವಿಶ್ವಸಂಸ್ಥೆ

ರೈಲುಗಳ ವೇಳಾಪಟ್ಟಿಯಲ್ಲಿ ಬದಲಾವಣೆ, ರದ್ದತಿ ಮತ್ತು ವಿಳಂಬವಾಗುವ ಸಾಧ್ಯತೆಯ ಬಗ್ಗೆ ಭಾರತೀಯರಿಗೆ ಎಚ್ಚರಿಕೆ ನೀಡಲಾಗಿದೆ. ಭಾರತೀಯರು ತಮ್ಮ ಪಾಸ್‌ಪೋರ್ಟ್‌, ಹಣ, ಸೇವಿಸಲು ಆಹಾರ, ಚಳಿಗಾಲದ ಉಡುಪುಗಳು ಮತ್ತು ಅಗತ್ಯ ವಸ್ತುಗಳನ್ನು ತರುವಂತೆ ಸೂಚನೆ ನೀಡಲಾಗಿದೆ.

ಸರ್ಕಾರಿ ಅಧಿಕಾರಿಗಳೊಂದಿಗೆ ಯಾವುದೇ ರೀತಿಯ ಮಾತುಕತೆ ನಡೆಸದೇ, ಗಡಿ ಚೆಕ್​ಪೋಸ್ಟ್​ಗಳಿಗೆ ತೆರಳದಂತೆ ಕೀವ್​ನಲ್ಲಿರುವ ಭಾರತೀಯ ರಾಯಭಾರ ಕಚೇರಿ ಭಾರತೀಯರಿಗೆ ಸಲಹೆ ನೀಡಿದೆ.


Last Updated : Mar 1, 2022, 2:01 PM IST
ETV Bharat Logo

Copyright © 2025 Ushodaya Enterprises Pvt. Ltd., All Rights Reserved.