ETV Bharat / bharat

ಪಾಕ್​ ನೆಲದಲ್ಲಿ ಭಾರತದ ಕ್ಷಿಪಣಿ: ರಾಜ್ಯಸಭೆಗೆ ಸಚಿವ ರಾಜನಾಥ್​ ಸಿಂಗ್ ನೀಡಿದ ವಿವರಣೆ ಏನು?  ​

author img

By

Published : Mar 15, 2022, 12:55 PM IST

Updated : Mar 15, 2022, 1:24 PM IST

ಭಾರತ ಕ್ಷಿಪಣಿಯು ಪಾಕಿಸ್ತಾನದಲ್ಲಿ ಬಂದಿರುವ ಕುರಿತು ಈಗಾಗಲೇ ತನಿಖೆ ಪ್ರಾರಂಭಿಸಲಾಗಿದೆ. ಈ ತನಿಖೆ ಪೂರ್ಣಗೊಂಡ ನಂತರವಷ್ಟೇ ಕ್ಷಿಪಣಿ ಆಕಸ್ಮಿಕವಾಗಿ ಹಾರಿರುವುದರ ಹಿಂದಿನ ನಿಖರ ಕಾರಣವೂ ತಿಳಿಯಲಿದೆ ಎಂದು ರಾಜನಾಥ್ ಸಿಂಗ್ ಹೇಳಿದರು.

Rajnath Singh
Rajnath Singh

ನವದೆಹಲಿ: ಪಾಕಿಸ್ತಾನದ ಗಡಿಯೊಳಗೆ ಭಾರತದ ಕ್ಷಿಪಣಿ ಬಿದ್ದಿರುವುದು ಆಕಸ್ಮಿಕವಾಗಿದ್ದು, ಈ ಬಗ್ಗೆ ತನಿಖೆ ನಡೆಸಲಾಗುತ್ತಿದೆ. ತನಿಖೆ ಬಳಿಕ ನಿಖರವಾದ ಕಾರಣ ತಿಳಿಯಲಿದೆ ಎಂದು ರಕ್ಷಣಾ ಸಚಿವ ರಾಜನಾಥ್ ಸಿಂಗ್ ಮಂಗಳವಾರ ರಾಜ್ಯಸಭೆಯಲ್ಲಿ ಹೇಳಿಕೆ ನೀಡಿದರು.

ಪಾಕಿಸ್ತಾನಕ್ಕೆ ಭಾರತದ ಕ್ಷಿಪಣಿ ಹಾರಿರುವ ಸಂಬಂಧ ರಾಜ್ಯಸಭೆಯಲ್ಲಿ ವಿವರಣೆ ನೀಡಿರುವ ಅವರು, ಮಾರ್ಚ್ 9ರಂದು ರಾತ್ರಿ 7 ಗಂಟೆ ಸುಮಾರಿಗೆ ಭಾರತದ ಕ್ಷಿಪಣಿ ನಿರ್ವಹಣೆ ಮತ್ತು ತಪಾಸಣೆ ವೇಳೆ ಆಕಸ್ಮಿಕವಾಗಿ ಬಿಡುಗಡೆಯಾಗಿ, ಪಾಕಿಸ್ತಾನಕ್ಕೆ ಬಂದಿದೆ ಎಂದು ತಿಳಿಸಿದರು. ಭಾರತ ಕ್ಷಿಪಣಿಯು ಪಾಕಿಸ್ತಾನದಲ್ಲಿ ಬಂದಿರುವ ಕುರಿತು ಈಗಾಗಲೇ ತನಿಖೆ ಪ್ರಾರಂಭಿಸಲಾಗಿದೆ. ಈ ತನಿಖೆ ಪೂರ್ಣಗೊಂಡ ನಂತರವಷ್ಟೇ ಕ್ಷಿಪಣಿ ಆಕಸ್ಮಿಕವಾಗಿ ಹಾರಿರುವುದರ ಹಿಂದಿನ ನಿಖರ ಕಾರಣವೂ ತಿಳಿಯಲಿದೆ ಎಂದರು.

ದೇಶದ ಕ್ಷಿಪಣಿ ವ್ಯವಸ್ಥೆಯು ಭದ್ರತೆ ಮತ್ತು ಸುರಕ್ಷಿತವಾಗಿದೆ ಎಂದು ಭರವಸೆ ನೀಡಿದ ರಾಜನಾಥ್​ ಸಿಂಗ್​, ದೇಶದ ಶಸ್ತ್ರಾಸ್ತ್ರ ವ್ಯವಸ್ಥೆಗಳ ಸುರಕ್ಷತೆ ಮತ್ತು ಭದ್ರತೆಗೆ ಸರ್ಕಾರವು ಹೆಚ್ಚಿನ ಆದ್ಯತೆ ನೀಡಲಾಗುತ್ತಿದೆ. ಪಾಕಿಸ್ತಾನಕ್ಕೆ ಕ್ಷಿಪಣಿ ಹಾರಿರುವ ಘಟನೆಯಲ್ಲಿ ಯಾರಿಗೂ ಗಾಯಗಳಾಗದಿರುವುದು ಸಮಾಧಾನದ ಸಂಗತಿ ಎಂದಿದ್ದಾರೆ.

ಇದನ್ನೂ ಓದಿ: ಸರ್ಕಾರಿ ಶಾಲೆಗಳಲ್ಲಿ ಇಂಟರ್​ನೆಟ್​​ ಸೌಲಭ್ಯ: ಯಾವ ರಾಜ್ಯದಲ್ಲಿ ಎಷ್ಟಿದೆ ಗೊತ್ತಾ?

ನವದೆಹಲಿ: ಪಾಕಿಸ್ತಾನದ ಗಡಿಯೊಳಗೆ ಭಾರತದ ಕ್ಷಿಪಣಿ ಬಿದ್ದಿರುವುದು ಆಕಸ್ಮಿಕವಾಗಿದ್ದು, ಈ ಬಗ್ಗೆ ತನಿಖೆ ನಡೆಸಲಾಗುತ್ತಿದೆ. ತನಿಖೆ ಬಳಿಕ ನಿಖರವಾದ ಕಾರಣ ತಿಳಿಯಲಿದೆ ಎಂದು ರಕ್ಷಣಾ ಸಚಿವ ರಾಜನಾಥ್ ಸಿಂಗ್ ಮಂಗಳವಾರ ರಾಜ್ಯಸಭೆಯಲ್ಲಿ ಹೇಳಿಕೆ ನೀಡಿದರು.

ಪಾಕಿಸ್ತಾನಕ್ಕೆ ಭಾರತದ ಕ್ಷಿಪಣಿ ಹಾರಿರುವ ಸಂಬಂಧ ರಾಜ್ಯಸಭೆಯಲ್ಲಿ ವಿವರಣೆ ನೀಡಿರುವ ಅವರು, ಮಾರ್ಚ್ 9ರಂದು ರಾತ್ರಿ 7 ಗಂಟೆ ಸುಮಾರಿಗೆ ಭಾರತದ ಕ್ಷಿಪಣಿ ನಿರ್ವಹಣೆ ಮತ್ತು ತಪಾಸಣೆ ವೇಳೆ ಆಕಸ್ಮಿಕವಾಗಿ ಬಿಡುಗಡೆಯಾಗಿ, ಪಾಕಿಸ್ತಾನಕ್ಕೆ ಬಂದಿದೆ ಎಂದು ತಿಳಿಸಿದರು. ಭಾರತ ಕ್ಷಿಪಣಿಯು ಪಾಕಿಸ್ತಾನದಲ್ಲಿ ಬಂದಿರುವ ಕುರಿತು ಈಗಾಗಲೇ ತನಿಖೆ ಪ್ರಾರಂಭಿಸಲಾಗಿದೆ. ಈ ತನಿಖೆ ಪೂರ್ಣಗೊಂಡ ನಂತರವಷ್ಟೇ ಕ್ಷಿಪಣಿ ಆಕಸ್ಮಿಕವಾಗಿ ಹಾರಿರುವುದರ ಹಿಂದಿನ ನಿಖರ ಕಾರಣವೂ ತಿಳಿಯಲಿದೆ ಎಂದರು.

ದೇಶದ ಕ್ಷಿಪಣಿ ವ್ಯವಸ್ಥೆಯು ಭದ್ರತೆ ಮತ್ತು ಸುರಕ್ಷಿತವಾಗಿದೆ ಎಂದು ಭರವಸೆ ನೀಡಿದ ರಾಜನಾಥ್​ ಸಿಂಗ್​, ದೇಶದ ಶಸ್ತ್ರಾಸ್ತ್ರ ವ್ಯವಸ್ಥೆಗಳ ಸುರಕ್ಷತೆ ಮತ್ತು ಭದ್ರತೆಗೆ ಸರ್ಕಾರವು ಹೆಚ್ಚಿನ ಆದ್ಯತೆ ನೀಡಲಾಗುತ್ತಿದೆ. ಪಾಕಿಸ್ತಾನಕ್ಕೆ ಕ್ಷಿಪಣಿ ಹಾರಿರುವ ಘಟನೆಯಲ್ಲಿ ಯಾರಿಗೂ ಗಾಯಗಳಾಗದಿರುವುದು ಸಮಾಧಾನದ ಸಂಗತಿ ಎಂದಿದ್ದಾರೆ.

ಇದನ್ನೂ ಓದಿ: ಸರ್ಕಾರಿ ಶಾಲೆಗಳಲ್ಲಿ ಇಂಟರ್​ನೆಟ್​​ ಸೌಲಭ್ಯ: ಯಾವ ರಾಜ್ಯದಲ್ಲಿ ಎಷ್ಟಿದೆ ಗೊತ್ತಾ?

Last Updated : Mar 15, 2022, 1:24 PM IST
ETV Bharat Logo

Copyright © 2024 Ushodaya Enterprises Pvt. Ltd., All Rights Reserved.