ETV Bharat / bharat

ಉಕ್ರೇನ್​ನಿಂದ ಭಾರತಕ್ಕೆ ಬಂದಿಳಿದ 241 ಭಾರತೀಯರು: ಹೇಳಿದ್ದೇನು?

author img

By

Published : Feb 23, 2022, 7:28 AM IST

Updated : Feb 23, 2022, 8:29 AM IST

ಭಾರತೀಯ ಪ್ರಜೆಗಳನ್ನು ಕರೆತರಲು ಕೇಂದ್ರ ಸರ್ಕಾರ ಏರ್​ ಇಂಡಿಯಾದ ಮೂರು ವಿಮಾನಗಳನ್ನು ವ್ಯವಸ್ಥೆ ಮಾಡಿದೆ. ಅದರಲ್ಲಿ ಮೊದಲ ವಿಮಾನ ಕಳೆದ ರಾತ್ರಿ ಉಕ್ರೇನ್​ನಿಂದ ಭಾರತೀಯರನ್ನು ಹೊತ್ತು ತಂದಿದೆ. ಉದ್ಯೋಗ, ಶಿಕ್ಷಣ ನಿಮಿತ್ತ ಅಲ್ಲಿಗೆ ತೆರಳಿರುವ ಭಾರತೀಯರಲ್ಲಿ ಕೆಲವರು ಯುದ್ಧ ಕಾರ್ಮೋಡವಿರುವ ದೇಶದ ಬಗ್ಗೆ ಮಾಧ್ಯಮ ಪ್ರತಿನಿಧಿಗಳಿಗೆ ಪ್ರತಿಕ್ರಿಯಿಸಿದರು.

Indian students
ಭಾರತೀಯರು

ನವದೆಹಲಿ: ರಷ್ಯಾ ಮತ್ತು ಉಕ್ರೇನ್ ಮಧ್ಯೆ ಯುದ್ಧ ಉದ್ವಿಗ್ನತೆ ಉಂಟಾದ ಕಾರಣ ಉಕ್ರೇನ್​ನಲ್ಲಿ ನೆಲೆಸಿದ್ದ ವಿದ್ಯಾರ್ಥಿಗಳು ಸೇರಿದಂತೆ 241 ಭಾರತೀಯರನ್ನು ಹೊತ್ತ ಏರ್​ ಇಂಡಿಯಾ ವಿಶೇಷ ವಿಮಾನ ಮಂಗಳವಾರ ರಾತ್ರಿ 11.45 ರ ಸುಮಾರಿಗೆ ದೆಹಲಿಗೆ ಬಂದಿಳಿದಿದೆ.


ಭಾರತೀಯ ಪ್ರಜೆಗಳನ್ನು ಕರೆತರಲು ಕೇಂದ್ರ ಸರ್ಕಾರ ಏರ್​ ಇಂಡಿಯಾದ ಮೂರು ವಿಮಾನಗಳನ್ನು ವ್ಯವಸ್ಥೆ ಮಾಡಿದೆ. ಅದರಲ್ಲಿ ಮೊದಲ ವಿಮಾನ ನಿನ್ನೆ ರಾತ್ರಿ ಉಕ್ರೇನ್​ನಿಂದ 241 ಭಾರತೀಯರನ್ನು ಹೊತ್ತು ತಂದಿದೆ.

ಉಕ್ರೇನ್​ನಲ್ಲಿ ಅಸಾಧಾರಣ ಪರಿಸ್ಥಿತಿ ಉಂಟಾದ ಹಿನ್ನೆಲೆಯಲ್ಲಿ ದೇಶ ತೊರೆಯುವಂತೆ ಭಾರತೀಯ ರಾಯಭಾರಿ ಕಚೇರಿ ಭಾರತೀಯರನ್ನು ಕೇಳಿಕೊಂಡಿತ್ತು. ಅದರಂತೆ ವಿದ್ಯಾರ್ಥಿಗಳು ಸೇರಿದಂತೆ ಹಲವಾರು ನಾಗರಿಕರು ಭಾರತಕ್ಕೆ ಬಂದಿಳಿದಿದ್ದಾರೆ.

ಇದಲ್ಲದೇ ಫೆಬ್ರವರಿ 22, 24, 26 ರಂದು ಇನ್ನೂ ಮೂರು ವಿಮಾನಗಳು ಭಾರತೀಯರನ್ನು ಕರೆತರುವ ಕಾರ್ಯಾಚರಣೆ ನಡೆಸಲಿವೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ.

ವಿಮಾನ ನಿಲ್ದಾಣಕ್ಕೆ ಬಂದಿಳಿದ ವಿದ್ಯಾರ್ಥಿಗಳ ಮಾತು: ಉಕ್ರೇನ್​ನಿಂದ ದೆಹಲಿ ವಿಮಾನ ನಿಲ್ದಾಣಕ್ಕೆ ಬಂದಿಳಿದ ಹಲವಾರು ವಿದ್ಯಾರ್ಥಿಗಳು, ಪ್ರಜೆಗಳು ತಾಯ್ನಾಡಿಗೆ ವಾಪಸ್​ ಆಗಿದ್ದು ಸಂತಸ ತಂದಿದೆ. ಭಾರತೀಯ ರಾಯಭಾರಿ ಕಚೇರಿಯ ಮನವಿಯ ಮೇರೆಗೆ ನಾವು ಇಲ್ಲಿಗೆ ಮರಳಿದ್ದೇವೆ ಎಂದು ತಿಳಿಸಿದ್ದಾರೆ.

ವೈದ್ಯಕೀಯ ವಿದ್ಯಾರ್ಥಿ ಅನಿಲ್​ ರಪ್ರಿಯಾ ಮಾತನಾಡಿ, ಉಕ್ರೇನ್​ನಲ್ಲಿ ಸದ್ಯಕ್ಕೆ ಗಂಭೀರ ಪರಿಸ್ಥಿತಿ ಇಲ್ಲ. ಯುದ್ಧ ಪರಿಸ್ಥಿತಿ ಉಂಟಾಗುವ ಸಾಧ್ಯತೆಯಿಂದಾಗಿ ಭಾರತೀಯ ರಾಯಭಾರಿ ಕಚೇರಿಯ ನಿರ್ದೇಶನದ ಮೇರೆಗೆ ನಾವು ಭಾರತಕ್ಕೆ ವಾಪಸ್​ ಬಂದಿದ್ದೇವೆ ಎಂದರು.

ಸದ್ಯಕ್ಕೆ ಉಕ್ರೇನ್​ನಲ್ಲಿ ಸಾಮಾನ್ಯ ಸ್ಥಿತಿ ಇದ್ದರೂ ನಾವು ಅಲ್ಲಿರುವುದು ಉತ್ತಮವಲ್ಲ ಎಂದು ನಮ್ಮ ಪೋಷಕರು ತಿಳಿಸಿದ್ದರು. ಹೀಗಾಗಿ ಭಾರತಕ್ಕೆ ವಾಪಸ್​ ಆಗಿದ್ದೇವೆ ಎಂದು ಉಕ್ರೇನ್​ನಲ್ಲಿ ವ್ಯಾಸಂಗ ಮಾಡುವ ದೆಹಲಿಯ ವಿದ್ಯಾರ್ಥಿಯೊಬ್ಬರು ತಿಳಿಸಿದರು.

ಇದನ್ನೂ ಓದಿ: 'ರಷ್ಯಾದಿಂದ ಉಕ್ರೇನ್ ಮೇಲೆ ಅತಿಕ್ರಮಣ': ಹಲವು ರೀತಿಯ ಆರ್ಥಿಕ ನಿರ್ಬಂಧ ವಿಧಿಸಿದ ಅಮೆರಿಕ

ನವದೆಹಲಿ: ರಷ್ಯಾ ಮತ್ತು ಉಕ್ರೇನ್ ಮಧ್ಯೆ ಯುದ್ಧ ಉದ್ವಿಗ್ನತೆ ಉಂಟಾದ ಕಾರಣ ಉಕ್ರೇನ್​ನಲ್ಲಿ ನೆಲೆಸಿದ್ದ ವಿದ್ಯಾರ್ಥಿಗಳು ಸೇರಿದಂತೆ 241 ಭಾರತೀಯರನ್ನು ಹೊತ್ತ ಏರ್​ ಇಂಡಿಯಾ ವಿಶೇಷ ವಿಮಾನ ಮಂಗಳವಾರ ರಾತ್ರಿ 11.45 ರ ಸುಮಾರಿಗೆ ದೆಹಲಿಗೆ ಬಂದಿಳಿದಿದೆ.


ಭಾರತೀಯ ಪ್ರಜೆಗಳನ್ನು ಕರೆತರಲು ಕೇಂದ್ರ ಸರ್ಕಾರ ಏರ್​ ಇಂಡಿಯಾದ ಮೂರು ವಿಮಾನಗಳನ್ನು ವ್ಯವಸ್ಥೆ ಮಾಡಿದೆ. ಅದರಲ್ಲಿ ಮೊದಲ ವಿಮಾನ ನಿನ್ನೆ ರಾತ್ರಿ ಉಕ್ರೇನ್​ನಿಂದ 241 ಭಾರತೀಯರನ್ನು ಹೊತ್ತು ತಂದಿದೆ.

ಉಕ್ರೇನ್​ನಲ್ಲಿ ಅಸಾಧಾರಣ ಪರಿಸ್ಥಿತಿ ಉಂಟಾದ ಹಿನ್ನೆಲೆಯಲ್ಲಿ ದೇಶ ತೊರೆಯುವಂತೆ ಭಾರತೀಯ ರಾಯಭಾರಿ ಕಚೇರಿ ಭಾರತೀಯರನ್ನು ಕೇಳಿಕೊಂಡಿತ್ತು. ಅದರಂತೆ ವಿದ್ಯಾರ್ಥಿಗಳು ಸೇರಿದಂತೆ ಹಲವಾರು ನಾಗರಿಕರು ಭಾರತಕ್ಕೆ ಬಂದಿಳಿದಿದ್ದಾರೆ.

ಇದಲ್ಲದೇ ಫೆಬ್ರವರಿ 22, 24, 26 ರಂದು ಇನ್ನೂ ಮೂರು ವಿಮಾನಗಳು ಭಾರತೀಯರನ್ನು ಕರೆತರುವ ಕಾರ್ಯಾಚರಣೆ ನಡೆಸಲಿವೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ.

ವಿಮಾನ ನಿಲ್ದಾಣಕ್ಕೆ ಬಂದಿಳಿದ ವಿದ್ಯಾರ್ಥಿಗಳ ಮಾತು: ಉಕ್ರೇನ್​ನಿಂದ ದೆಹಲಿ ವಿಮಾನ ನಿಲ್ದಾಣಕ್ಕೆ ಬಂದಿಳಿದ ಹಲವಾರು ವಿದ್ಯಾರ್ಥಿಗಳು, ಪ್ರಜೆಗಳು ತಾಯ್ನಾಡಿಗೆ ವಾಪಸ್​ ಆಗಿದ್ದು ಸಂತಸ ತಂದಿದೆ. ಭಾರತೀಯ ರಾಯಭಾರಿ ಕಚೇರಿಯ ಮನವಿಯ ಮೇರೆಗೆ ನಾವು ಇಲ್ಲಿಗೆ ಮರಳಿದ್ದೇವೆ ಎಂದು ತಿಳಿಸಿದ್ದಾರೆ.

ವೈದ್ಯಕೀಯ ವಿದ್ಯಾರ್ಥಿ ಅನಿಲ್​ ರಪ್ರಿಯಾ ಮಾತನಾಡಿ, ಉಕ್ರೇನ್​ನಲ್ಲಿ ಸದ್ಯಕ್ಕೆ ಗಂಭೀರ ಪರಿಸ್ಥಿತಿ ಇಲ್ಲ. ಯುದ್ಧ ಪರಿಸ್ಥಿತಿ ಉಂಟಾಗುವ ಸಾಧ್ಯತೆಯಿಂದಾಗಿ ಭಾರತೀಯ ರಾಯಭಾರಿ ಕಚೇರಿಯ ನಿರ್ದೇಶನದ ಮೇರೆಗೆ ನಾವು ಭಾರತಕ್ಕೆ ವಾಪಸ್​ ಬಂದಿದ್ದೇವೆ ಎಂದರು.

ಸದ್ಯಕ್ಕೆ ಉಕ್ರೇನ್​ನಲ್ಲಿ ಸಾಮಾನ್ಯ ಸ್ಥಿತಿ ಇದ್ದರೂ ನಾವು ಅಲ್ಲಿರುವುದು ಉತ್ತಮವಲ್ಲ ಎಂದು ನಮ್ಮ ಪೋಷಕರು ತಿಳಿಸಿದ್ದರು. ಹೀಗಾಗಿ ಭಾರತಕ್ಕೆ ವಾಪಸ್​ ಆಗಿದ್ದೇವೆ ಎಂದು ಉಕ್ರೇನ್​ನಲ್ಲಿ ವ್ಯಾಸಂಗ ಮಾಡುವ ದೆಹಲಿಯ ವಿದ್ಯಾರ್ಥಿಯೊಬ್ಬರು ತಿಳಿಸಿದರು.

ಇದನ್ನೂ ಓದಿ: 'ರಷ್ಯಾದಿಂದ ಉಕ್ರೇನ್ ಮೇಲೆ ಅತಿಕ್ರಮಣ': ಹಲವು ರೀತಿಯ ಆರ್ಥಿಕ ನಿರ್ಬಂಧ ವಿಧಿಸಿದ ಅಮೆರಿಕ

Last Updated : Feb 23, 2022, 8:29 AM IST
ETV Bharat Logo

Copyright © 2024 Ushodaya Enterprises Pvt. Ltd., All Rights Reserved.