ETV Bharat / bharat

ದೇಶದ ಅಭಿವೃದ್ಧಿ ಕಾರ್ಯಗಳು ಮೋದಿಯವರು ಮಾಡಿದ ಪವಾಡದಂತಿವೆ: ರಾಜನಾಥ್ ಸಿಂಗ್ - ದೇಶದ ಅಭಿವೃದ್ಧಿ,

ದೇಶದಲ್ಲಿ ನಡೆಯುತ್ತಿರುವ ಅಭಿವೃದ್ಧಿ ಕಾರ್ಯಗಳು, ಜಗತ್ತಿನಲ್ಲಿ ಭಾರತದ ಪ್ರತಿಷ್ಠೆ ಹೆಚ್ಚಿಸುವಂತೆ ಮಾಡಿವೆ ಎಂದು ರಕ್ಷಣಾ ಸಚಿವ ರಾಜನಾಥ್ ಸಿಂಗ್ ಅಭಿಪ್ರಾಯಪಟ್ಟಿದ್ದಾರೆ.

ರಾಜನಾಥ್ ಸಿಂಗ್
ರಾಜನಾಥ್ ಸಿಂಗ್
author img

By

Published : Jul 5, 2021, 9:41 AM IST

ಲಖನೌ: ಜನರ ಆಶೀರ್ವಾದದಿಂದ ದೇಶದಲ್ಲಿ ಅಭಿವೃದ್ಧಿ ಕಾರ್ಯಗಳು ಉತ್ತಮವಾಗಿ ನಡೆಯುತ್ತಿದ್ದು, ಪ್ರಪಂಚದಾದ್ಯಂತ ಭಾರತದ ಪ್ರತಿಷ್ಠೆ ಹೆಚ್ಚಾಗಲು ಕಾರಣವಾಗಿದೆ ಎಂದು ರಕ್ಷಣಾ ಸಚಿವ ರಾಜನಾಥ್ ಸಿಂಗ್ ಹೇಳಿದ್ದಾರೆ.

ಔಟರ್​ರಿಂಗ್ ರೋಡ್​ ಮತ್ತು ವಿಕ್ಟೋರಿಯಾ ಸ್ಟ್ರೀಟ್​ ಫ್ಲೈ ಓವರ್ ನಿರ್ಮಾಣ ಕಾಮಗಾರಿ ಪರಿಶೀಲಿಸಲು ಲಖನೌಗೆ ಭೇಟಿ ನೀಡಿದ್ದ ರಾಜನಾಥ್ ಸಿಂಗ್​, ದೇಶದ ಮೂರು ಪ್ರಮುಖ ನಗರಗಳಲ್ಲಿ ಲಖನೌ ಕೂಡ ಇರಬೇಕು ಎಂದು ಹೇಳಿದರು.

‘ಇಂದು ನಾವು ನೋಡುತ್ತಿರುವ ಅಭಿವೃದ್ಧಿ ರಾಜ್ಯದ ಎಲ್ಲ ನಾಯಕರು ಮತ್ತು ಅಧಿಕಾರಿಗಳ ಪ್ರಯತ್ನದಿಂದ ಮಾತ್ರ ಸಾಧ್ಯ. ಯಾವ ಪ್ರದೇಶದಲ್ಲಿ ಮೂಲಸೌಕರ್ಯ ಅಭಿವೃದ್ಧಿ ಇರುತ್ತೋ, ಅಲ್ಲಿ ಆರ್ಥಿಕ ಪರಿಸ್ಥಿತಿಗಳು ಉತ್ತಮವಾಗಿರುತ್ತವೆ ಎಂದು ರಾಜನಾಥ್ ಸಿಂಗ್ ಅಭಿಪ್ರಾಯಪಟ್ಟಿದ್ದಾರೆ.

ಇದನ್ನೂ ಓದಿ:ಇರಾನ್​ನಲ್ಲಿ ಪೇಚಿಗೆ ಸಿಲುಕಿದ ಐವರು ಭಾರತೀಯರು.. ತವರಿಗೆ ಮರಳಲು ಸಹಾಯ ಮಾಡುವಂತೆ ಕೇಂದ್ರಕ್ಕೆ ಮನವಿ

ನಮ್ಮ ದೇಶದಲ್ಲಿ ಪ್ರಧಾನಿ ನರೇಂದ್ರ ಮೋದಿಯವರು ಮಾಡಿದ ಅಭಿವೃದ್ಧಿ ಕಾರ್ಯಗಳು ಒಂದು ಪವಾಡದಂತಿವೆ. ಜಗತ್ತಿನಾದ್ಯಂತ ಭಾರತದ ಪ್ರತಿಷ್ಠೆ ಹೆಚ್ಚಾಗಿದೆ. ನಾವು ವಿದೇಶಕ್ಕೆ ಹೋಗಿ ಪ್ರಶಂಸೆ ಪಡೆದಾಗ ನಮ್ಮ ದೇಶದ ಬಗ್ಗೆ ಹೆಮ್ಮೆಯಾಗುತ್ತದೆ. ತಮ್ಮ ತವರು ಕ್ಷೇತ್ರವಾದ ಲಖನೌನಲ್ಲಿ ಮೂಲಸೌಕರ್ಯವನ್ನು ಅಭಿವೃದ್ಧಿ ಪಡಿಸಲು ನಿರಂತರ ಪ್ರಯತ್ನಗಳು ನಡೆಯುತ್ತಿವೆ ಎಂದು ರಾಜನಾಥ್ ಸಿಂಗ್​ ಟ್ವೀಟ್ ನಲ್ಲಿ ತಿಳಿಸಿದ್ದಾರೆ.

  • आज लखनऊ में चल रहे कुछ विकास कार्यों की प्रगति को मौक़े पर पहुँच कर देखा। नगर में आधारभूत संरचना को मज़बूत करने की दिशा में लगातार प्रयास जारी हैं। इन सभी कार्यों को एक तय समय सीमा में पूरा किया जाएगा। pic.twitter.com/h9gC8WHV5k

    — Rajnath Singh (@rajnathsingh) July 4, 2021 " class="align-text-top noRightClick twitterSection" data=" ">

ಲಖನೌ: ಜನರ ಆಶೀರ್ವಾದದಿಂದ ದೇಶದಲ್ಲಿ ಅಭಿವೃದ್ಧಿ ಕಾರ್ಯಗಳು ಉತ್ತಮವಾಗಿ ನಡೆಯುತ್ತಿದ್ದು, ಪ್ರಪಂಚದಾದ್ಯಂತ ಭಾರತದ ಪ್ರತಿಷ್ಠೆ ಹೆಚ್ಚಾಗಲು ಕಾರಣವಾಗಿದೆ ಎಂದು ರಕ್ಷಣಾ ಸಚಿವ ರಾಜನಾಥ್ ಸಿಂಗ್ ಹೇಳಿದ್ದಾರೆ.

ಔಟರ್​ರಿಂಗ್ ರೋಡ್​ ಮತ್ತು ವಿಕ್ಟೋರಿಯಾ ಸ್ಟ್ರೀಟ್​ ಫ್ಲೈ ಓವರ್ ನಿರ್ಮಾಣ ಕಾಮಗಾರಿ ಪರಿಶೀಲಿಸಲು ಲಖನೌಗೆ ಭೇಟಿ ನೀಡಿದ್ದ ರಾಜನಾಥ್ ಸಿಂಗ್​, ದೇಶದ ಮೂರು ಪ್ರಮುಖ ನಗರಗಳಲ್ಲಿ ಲಖನೌ ಕೂಡ ಇರಬೇಕು ಎಂದು ಹೇಳಿದರು.

‘ಇಂದು ನಾವು ನೋಡುತ್ತಿರುವ ಅಭಿವೃದ್ಧಿ ರಾಜ್ಯದ ಎಲ್ಲ ನಾಯಕರು ಮತ್ತು ಅಧಿಕಾರಿಗಳ ಪ್ರಯತ್ನದಿಂದ ಮಾತ್ರ ಸಾಧ್ಯ. ಯಾವ ಪ್ರದೇಶದಲ್ಲಿ ಮೂಲಸೌಕರ್ಯ ಅಭಿವೃದ್ಧಿ ಇರುತ್ತೋ, ಅಲ್ಲಿ ಆರ್ಥಿಕ ಪರಿಸ್ಥಿತಿಗಳು ಉತ್ತಮವಾಗಿರುತ್ತವೆ ಎಂದು ರಾಜನಾಥ್ ಸಿಂಗ್ ಅಭಿಪ್ರಾಯಪಟ್ಟಿದ್ದಾರೆ.

ಇದನ್ನೂ ಓದಿ:ಇರಾನ್​ನಲ್ಲಿ ಪೇಚಿಗೆ ಸಿಲುಕಿದ ಐವರು ಭಾರತೀಯರು.. ತವರಿಗೆ ಮರಳಲು ಸಹಾಯ ಮಾಡುವಂತೆ ಕೇಂದ್ರಕ್ಕೆ ಮನವಿ

ನಮ್ಮ ದೇಶದಲ್ಲಿ ಪ್ರಧಾನಿ ನರೇಂದ್ರ ಮೋದಿಯವರು ಮಾಡಿದ ಅಭಿವೃದ್ಧಿ ಕಾರ್ಯಗಳು ಒಂದು ಪವಾಡದಂತಿವೆ. ಜಗತ್ತಿನಾದ್ಯಂತ ಭಾರತದ ಪ್ರತಿಷ್ಠೆ ಹೆಚ್ಚಾಗಿದೆ. ನಾವು ವಿದೇಶಕ್ಕೆ ಹೋಗಿ ಪ್ರಶಂಸೆ ಪಡೆದಾಗ ನಮ್ಮ ದೇಶದ ಬಗ್ಗೆ ಹೆಮ್ಮೆಯಾಗುತ್ತದೆ. ತಮ್ಮ ತವರು ಕ್ಷೇತ್ರವಾದ ಲಖನೌನಲ್ಲಿ ಮೂಲಸೌಕರ್ಯವನ್ನು ಅಭಿವೃದ್ಧಿ ಪಡಿಸಲು ನಿರಂತರ ಪ್ರಯತ್ನಗಳು ನಡೆಯುತ್ತಿವೆ ಎಂದು ರಾಜನಾಥ್ ಸಿಂಗ್​ ಟ್ವೀಟ್ ನಲ್ಲಿ ತಿಳಿಸಿದ್ದಾರೆ.

  • आज लखनऊ में चल रहे कुछ विकास कार्यों की प्रगति को मौक़े पर पहुँच कर देखा। नगर में आधारभूत संरचना को मज़बूत करने की दिशा में लगातार प्रयास जारी हैं। इन सभी कार्यों को एक तय समय सीमा में पूरा किया जाएगा। pic.twitter.com/h9gC8WHV5k

    — Rajnath Singh (@rajnathsingh) July 4, 2021 " class="align-text-top noRightClick twitterSection" data=" ">
ETV Bharat Logo

Copyright © 2025 Ushodaya Enterprises Pvt. Ltd., All Rights Reserved.