ರಾಂಚಿ: ಇಲ್ಲಿನ ವಿಮಾನ ನಿಲ್ದಾಣದಲ್ಲಿ ವಿಶೇಷಚೇತನ ಮಗುವಿನ ಕುಟುಂಬದ ಪ್ರಯಾಣವನ್ನು ತಡೆದ ಇಂಡಿಗೋ ಸಂಸ್ಥೆಯ ನಡೆಯನ್ನು ವಿಮಾನಯಾನ ಸಚಿವ ಜ್ಯೋತಿರಾದಿತ್ಯ ಸಿಂಧಿಯಾ ಖಂಡಿಸಿದ್ದಾರೆ. ಅಲ್ಲದೇ, ಇಂತಹ ಘಟನೆಯನ್ನು ಸಹಿಸಲಾಗದು. ಮನುಷ್ಯರ ಜೊತೆ ಈ ರೀತಿ ನಡೆದುಕೊಳ್ಳಬಾರದು. ಘಟನೆಯನ್ನು ಸಂಸ್ಥೆಯೇ ತನಿಖೆ ನಡೆಸಿ ಕ್ರಮ ಕೈಗೊಳ್ಳಬೇಕು ಎಂದು ಸೂಚಿಸಿದ್ದಾರೆ.
ರಾಂಚಿ ವಿಮಾನ ನಿಲ್ದಾಣದಲ್ಲಿ ಭಾನುವಾರದಂದು ವಿಶೇಷಚೇತನ ಮಗುವನ್ನು ತಮ್ಮೊಂದಿಗೆ ಕರೆದುಕೊಂಡು ಬಂದಿದ್ದ ಕುಟುಂಬವನ್ನು ಇಂಡಿಗೋ ಏರ್ಲೈನ್ಸ್ ಸಿಬ್ಬಂದಿ ತಡೆದಿದ್ದರು. ಈ ಬಗ್ಗೆ ಫೇಸ್ಬುಕ್ನಲ್ಲಿ ಪೋಸ್ಟ್ ಹಾಕಿದ್ದ ಪ್ರಯಾಣಿಕನೊಬ್ಬ 'ಇದು ತಾರತಮ್ಯ ಮತ್ತು ಅವಮಾನದ ಘಟನೆ' ಎಂದು ಬೇಸರ ವ್ಯಕ್ತಪಡಿಸಿದ್ದರು. ಅಲ್ಲದೇ, ಈ ಕುರಿತು ಚಿತ್ರಗಳು ಮತ್ತು ವಿಡಿಯೋವನ್ನು ಹಂಚಿಕೊಂಡಿದ್ದರು.
-
There is zero tolerance towards such behaviour. No human being should have to go through this! Investigating the matter by myself, post which appropriate action will be taken. https://t.co/GJkeQcQ9iW
— Jyotiraditya M. Scindia (@JM_Scindia) May 9, 2022 " class="align-text-top noRightClick twitterSection" data="
">There is zero tolerance towards such behaviour. No human being should have to go through this! Investigating the matter by myself, post which appropriate action will be taken. https://t.co/GJkeQcQ9iW
— Jyotiraditya M. Scindia (@JM_Scindia) May 9, 2022There is zero tolerance towards such behaviour. No human being should have to go through this! Investigating the matter by myself, post which appropriate action will be taken. https://t.co/GJkeQcQ9iW
— Jyotiraditya M. Scindia (@JM_Scindia) May 9, 2022
ಇತರೆ ಪ್ರಯಾಣಿಕರ ಹಿತದೃಷ್ಟಿಯಿಂದ ವಿಶೇಷಚೇತನ ಮಗುವನ್ನು ವಿಮಾನದಲ್ಲಿ ಪ್ರಯಾಣ ಮಾಡಲು ಅವಕಾಶ ನೀಡಲಿಲ್ಲ ಎಂದು ಇಂಡಿಗೋ ಸಿಬ್ಬಂದಿ ಹೇಳಿಕೆ ನೀಡಿದ್ದಾರೆ. ಆದರೆ, ಈ ಘಟನೆಯನ್ನು ಟ್ವೀಟ್ ಮಾಡಿರುವ ಸಚಿವ ಜ್ಯೋತಿರಾದಿತ್ಯ ಸಿಂಧಿಯಾ, ಘಟನೆಯ ಬಗ್ಗೆ ತನಿಖೆ ನಡೆಸಲು ಏರ್ಲೈನ್ಸ್ಗೆ ಸೂಚಿಸಿದ್ದಾರೆ.
ಅಲ್ಲದೇ, ಘಟನೆಯ ಬಳಿಕ ವಿಮಾನಯಾನ ಸಂಸ್ಥೆಯು ಆ ಮಗುವಿನ ಕುಟುಂಬಕ್ಕೆ ಹೋಟೆಲ್ ವಾಸ್ತವ್ಯವನ್ನು ಒದಗಿಸಿದೆ. ಅವರು ಮರುದಿನ ತಮ್ಮ ಗಮ್ಯಸ್ಥಾನಕ್ಕೆ ತೆರಳಲು ಅನುವು ಮಾಡಿಕೊಟ್ಟಿದ್ದಾರೆ. ಅಲ್ಲದೇ, ಪ್ರಯಾಣಿಕರಿಗೆ ಉಂಟಾದ ಅನಾನುಕೂಲತೆಗಾಗಿ ನಾವು ವಿಷಾದಿಸುತ್ತೇವೆ ಎಂದು ಸಂಸ್ಥೆ ತಿಳಿಸಿದೆ.
ಓದಿ: ವಿಧಾನಸಭೆ ಗೇಟ್ನಲ್ಲಿ ಖಲಿಸ್ತಾನ್ ಧ್ವಜ ಹಾರಿಸಿದ್ದು ನಾವೇ: ಒಪ್ಪಿಕೊಂಡ SFJಯಿಂದ ವಿಡಿಯೋ!