ETV Bharat / bharat

1971ರ ಭಾರತ-ಪಾಕ್ ಯುದ್ಧ: ಭಾರತೀಯ ಸೇನೆಯ ಪರಾಕ್ರಮದ ಅನಾವರಣ

author img

By

Published : Dec 16, 2021, 8:31 AM IST

1971ರ ಡಿಸೆಂಬರ್ 3ರಂದು ಆರಂಭವಾಗಿದ್ದ ಯುದ್ಧ ಸುಮಾರು 13 ದಿನಗಳ ಕಾಲ ನಡೆದು ಡಿಸೆಂಬರ್ 16ರಂದು ಕೊನೆಗೊಂಡಿದ್ದು, ಭಾರತೀಯ ಸೇನೆಯ ಪರಾಕ್ರಮವನ್ನು ಅನಾವರಣಗೊಳಿಸಿತ್ತು.

Indo pakistan war 1971 special
1971 ಭಾರತ-ಪಾಕ್ ಯುದ್ಧ: ಭಾರತೀಯ ಸೇನೆಯ ಪರಾಕ್ರಮದ ಅನಾವರಣ

ಪಾಕಿಸ್ತಾನದ ವಿರುದ್ಧ ಭಾರತ ಗೆದ್ದ 1971ರ ಯುದ್ಧ ನಡೆದು ಅರ್ಧ ಶತಮಾನವಾಗಿದೆ. ಅಂದು ಭಾರತದ ಪ್ರಧಾನಿಯಾಗಿದ್ದ ಇಂದಿರಾ ಗಾಂಧಿಯವರ ದೃಢನಿರ್ಧಾರದಿಂದಾಗಿ ಬಾಂಗ್ಲಾದೇಶ ಹೊಸ ರಾಷ್ಟ್ರವಾಗಿ ಉದಯವಾಗಿದ್ದು ಮಾತ್ರವಲ್ಲದೇ ಭಾರತೀಯ ಸೇನೆಯ ಶಕ್ತಿ, ಪರಾಕ್ರಮ ಜಗತ್ತಿಗೆ ಗೊತ್ತಾಗುವಂತೆ ಮಾಡಿದ ಯುದ್ಧ ಅದಾಗಿತ್ತು.

ಡಿಸೆಂಬರ್ 3ರಂದು ಆರಂಭವಾಗಿದ್ದ ಯುದ್ಧ ಡಿಸೆಂಬರ್ 16ರಂದು ಅಂತ್ಯಗೊಂಡಿತ್ತು. ಈ ಯುದ್ಧದಲ್ಲಿ ಭಾರತ ಜಯಭೇರಿ ಸಾಧಿಸಿ 50 ವರ್ಷಗಳಾದ ಹಿನ್ನೆಲೆಯಲ್ಲಿ ಸ್ವರ್ಣಿಮ್ ವಿಜಯ ದಿವಸ ಎಂದು ಆಚರಿಸಲು ಭಾರತ ಸರ್ಕಾರ ನಿರ್ಧಾರ ಮಾಡಿದೆ.

ದೇಶ ವಿಭಜನೆಯಾದ ನಂತರ ಬಾಂಗ್ಲಾದೇಶ ಕೂಡಾ ಪಾಕಿಸ್ತಾನದ ಭಾಗವಾಗಿತ್ತು. 1971ರವರೆಗೆ ಅದನ್ನು ಪೂರ್ವ ಪಾಕಿಸ್ತಾನ ಎಂದೇ ಕರೆಯಲಾಗುತ್ತಿತ್ತು. ಪಾಕಿಸ್ತಾನದ ಸೇನಾಪಡೆಯ ಹಿಂಸಾಚಾರದ ಕಾರಣದಿಂದಾಗಿ ಅಲ್ಲಿನ ಜನರು ಸಾಕಷ್ಟು ತೊಂದರೆಗೆ ಒಳಗಾಗುವಂತಾಗಿತ್ತು.

ಇದು ಭಾರತಕ್ಕೂ ತಲೆನೋವಾಗಿತ್ತು. ಏಕೆಂದರೆ ಲಕ್ಷಾಂತರ ಮಂದಿ ಅಲ್ಲಿನ ಸೇನಾಪಡೆಯ ಹಿಂಸಾಚಾರ ತಾಳಲಾಗದೇ ಭಾರತದೊಳಗೆ ನುಸುಳಿದ್ದರು. ಅಲ್ಲಿಯೂ ಕೂಡಾ ಸೇನೆಯ ವಿರುದ್ಧ ದಂಗೆಗಳು ಆರಂಭವಾಗಿದ್ದು, ಅಲ್ಲಿನ ಪ್ರಬಲ ಪಕ್ಷವಾದ ಅವಾಮಿ ಲೀಗ್ ಕೂಡಾ ಈಗಿನ ಪಾಕಿಸ್ತಾನದ ಸೇನೆಯ ಕಪಿಮುಷ್ಟಿಯಲ್ಲಿ ನರಳುವಂತಾಗಿತ್ತು.

ಈ ವೇಳೆ ಭಾರತದ ಪ್ರಧಾನಿಯಾಗಿದ್ದ ಇಂದಿರಾಗಾಂಧಿ ಬಾಂಗ್ಲಾ ಸ್ವಾತಂತ್ರ್ಯಕ್ಕೆ ಬೆಂಬಲ ನೀಡಿದರು. ಅವಾಮಿ ಲೀಗ್​ನ ಸದಸ್ಯರ ಬಂಧನದ ಜೊತೆಗೆ, ಸಾಕಷ್ಟು ಮಂದಿ ಭಾರತಕ್ಕೆ ಪಲಾಯನ ಮಾಡಿದ್ದರು. ಕೆಲವರನ್ನು ಬಂಧಿಸಿ, ಈಗಿನ ಪಾಕಿಸ್ತಾನವಾದ ಆಗಿನ ಪಶ್ಚಿಮ ಪಾಕಿಸ್ತಾನಕ್ಕೆ ಕರೆದೊಯ್ಯಲಾಗಿತ್ತು.

ಬಾಂಗ್ಲಾದಲ್ಲಿ ಸ್ವಾತಂತ್ರ್ಯ ಹೋರಾಟದ ಕಿಚ್ಚು ಹೆಚ್ಚಾಗುತ್ತಿದ್ದಂತೆ ಇಂದಿರಾಗಾಂಧಿ ಅಲ್ಲಿನ ಸ್ವಾತಂತ್ರ್ಯ ಹೋರಾಟಗಾರರಿಗೆ ಬೆಂಬಲ ನೀಡಿದ್ದರು. ಭಾರತ ಮತ್ತು ಬಾಂಗ್ಲಾದ ಗಡಿಗಳಲ್ಲಿ ನಿರಾಶ್ರಿತರಿಗೆ ನಿರಾಶ್ರಿತರ ಕೇಂದ್ರಗಳನ್ನು ತೆರೆಯಲಾಗಿತ್ತು. ಪಶ್ಚಿಮ ಬಂಗಾಳ, ಅಸ್ಸೋಂ, ಬಿಹಾರ, ಮೇಘಾಲಯ ಮುಂತಾದ ಕಡೆಗಳಲ್ಲಿ ನಿರಾಶ್ರಿತರ ಕೇಂದ್ರಗಳು ಆರಂಭವಾಗಿದ್ದವು.

ಭಾರತ ಬಾಂಗ್ಲಾ ಸ್ವಾತಂತ್ರ್ಯಕ್ಕೆ ಬೆಂಬಲಸೂಚಿಸುತ್ತಿದ್ದ ಕಾರಣದಿಂದ ಅಸಮಾಧಾನಗೊಂಡಿದ್ದ ಪಾಕಿಸ್ತಾನ ಡಿಸೆಂಬರ್ ಮೂರರಂದು ಭಾರತದ ಮೇಲೆ ದಾಳಿ ಮಾಡಲು ಮುಂದಾಗಿತ್ತು. ಇದನ್ನರಿತ ಪ್ರಧಾನಿ ಇಂದಿರಾಗಾಂಧಿ ಪಾಕ್ ವಿರುದ್ಧ ಯುದ್ಧ ಸಾರಿದರು.

ಡಿಸೆಂಬರ್ ಮೂರರಂದು ಆರಂಭವಾಗಿದ್ದ ಯುದ್ಧ ಸುಮಾರು 13 ದಿನಗಳ ಕಾಲ ನಡೆದು ಡಿಸೆಂಬರ್ 16ರಂದು ಕೊನೆಗೊಂಡಿತು. ಬಾಂಗ್ಲಾ ಸ್ವಾತಂತ್ರ್ಯ ಹೋರಾಟಗಾರರೂ ಪಾಕ್ ಸೇನೆಯ ವಿರುದ್ಧ ತಿರುಗಿಬಿದ್ದ ಕಾರಣದಿಂದ ಬಾಂಗ್ಲಾದೇಶವೂ ಸ್ವಾತಂತ್ರ್ಯ ಪಡೆಯಿತು. ಈಗ ಆ ಯುದ್ಧಕ್ಕೆ 50 ವರ್ಷ ಪೂರ್ಣಗೊಂಡಿದ್ದು, ಭಾರತೀಯ ಸೇನೆಯ ಪರಾಕ್ರಮಗಳನ್ನು ನೆನಪಿಸುತ್ತದೆ.

ಇದನ್ನೂ ಓದಿ: Kulgam Encounter: ಇಬ್ಬರು ಉಗ್ರರನ್ನು ಬೇಟೆಯಾಡಿದ ವೀರ ಸೈನಿಕರು

ಪಾಕಿಸ್ತಾನದ ವಿರುದ್ಧ ಭಾರತ ಗೆದ್ದ 1971ರ ಯುದ್ಧ ನಡೆದು ಅರ್ಧ ಶತಮಾನವಾಗಿದೆ. ಅಂದು ಭಾರತದ ಪ್ರಧಾನಿಯಾಗಿದ್ದ ಇಂದಿರಾ ಗಾಂಧಿಯವರ ದೃಢನಿರ್ಧಾರದಿಂದಾಗಿ ಬಾಂಗ್ಲಾದೇಶ ಹೊಸ ರಾಷ್ಟ್ರವಾಗಿ ಉದಯವಾಗಿದ್ದು ಮಾತ್ರವಲ್ಲದೇ ಭಾರತೀಯ ಸೇನೆಯ ಶಕ್ತಿ, ಪರಾಕ್ರಮ ಜಗತ್ತಿಗೆ ಗೊತ್ತಾಗುವಂತೆ ಮಾಡಿದ ಯುದ್ಧ ಅದಾಗಿತ್ತು.

ಡಿಸೆಂಬರ್ 3ರಂದು ಆರಂಭವಾಗಿದ್ದ ಯುದ್ಧ ಡಿಸೆಂಬರ್ 16ರಂದು ಅಂತ್ಯಗೊಂಡಿತ್ತು. ಈ ಯುದ್ಧದಲ್ಲಿ ಭಾರತ ಜಯಭೇರಿ ಸಾಧಿಸಿ 50 ವರ್ಷಗಳಾದ ಹಿನ್ನೆಲೆಯಲ್ಲಿ ಸ್ವರ್ಣಿಮ್ ವಿಜಯ ದಿವಸ ಎಂದು ಆಚರಿಸಲು ಭಾರತ ಸರ್ಕಾರ ನಿರ್ಧಾರ ಮಾಡಿದೆ.

ದೇಶ ವಿಭಜನೆಯಾದ ನಂತರ ಬಾಂಗ್ಲಾದೇಶ ಕೂಡಾ ಪಾಕಿಸ್ತಾನದ ಭಾಗವಾಗಿತ್ತು. 1971ರವರೆಗೆ ಅದನ್ನು ಪೂರ್ವ ಪಾಕಿಸ್ತಾನ ಎಂದೇ ಕರೆಯಲಾಗುತ್ತಿತ್ತು. ಪಾಕಿಸ್ತಾನದ ಸೇನಾಪಡೆಯ ಹಿಂಸಾಚಾರದ ಕಾರಣದಿಂದಾಗಿ ಅಲ್ಲಿನ ಜನರು ಸಾಕಷ್ಟು ತೊಂದರೆಗೆ ಒಳಗಾಗುವಂತಾಗಿತ್ತು.

ಇದು ಭಾರತಕ್ಕೂ ತಲೆನೋವಾಗಿತ್ತು. ಏಕೆಂದರೆ ಲಕ್ಷಾಂತರ ಮಂದಿ ಅಲ್ಲಿನ ಸೇನಾಪಡೆಯ ಹಿಂಸಾಚಾರ ತಾಳಲಾಗದೇ ಭಾರತದೊಳಗೆ ನುಸುಳಿದ್ದರು. ಅಲ್ಲಿಯೂ ಕೂಡಾ ಸೇನೆಯ ವಿರುದ್ಧ ದಂಗೆಗಳು ಆರಂಭವಾಗಿದ್ದು, ಅಲ್ಲಿನ ಪ್ರಬಲ ಪಕ್ಷವಾದ ಅವಾಮಿ ಲೀಗ್ ಕೂಡಾ ಈಗಿನ ಪಾಕಿಸ್ತಾನದ ಸೇನೆಯ ಕಪಿಮುಷ್ಟಿಯಲ್ಲಿ ನರಳುವಂತಾಗಿತ್ತು.

ಈ ವೇಳೆ ಭಾರತದ ಪ್ರಧಾನಿಯಾಗಿದ್ದ ಇಂದಿರಾಗಾಂಧಿ ಬಾಂಗ್ಲಾ ಸ್ವಾತಂತ್ರ್ಯಕ್ಕೆ ಬೆಂಬಲ ನೀಡಿದರು. ಅವಾಮಿ ಲೀಗ್​ನ ಸದಸ್ಯರ ಬಂಧನದ ಜೊತೆಗೆ, ಸಾಕಷ್ಟು ಮಂದಿ ಭಾರತಕ್ಕೆ ಪಲಾಯನ ಮಾಡಿದ್ದರು. ಕೆಲವರನ್ನು ಬಂಧಿಸಿ, ಈಗಿನ ಪಾಕಿಸ್ತಾನವಾದ ಆಗಿನ ಪಶ್ಚಿಮ ಪಾಕಿಸ್ತಾನಕ್ಕೆ ಕರೆದೊಯ್ಯಲಾಗಿತ್ತು.

ಬಾಂಗ್ಲಾದಲ್ಲಿ ಸ್ವಾತಂತ್ರ್ಯ ಹೋರಾಟದ ಕಿಚ್ಚು ಹೆಚ್ಚಾಗುತ್ತಿದ್ದಂತೆ ಇಂದಿರಾಗಾಂಧಿ ಅಲ್ಲಿನ ಸ್ವಾತಂತ್ರ್ಯ ಹೋರಾಟಗಾರರಿಗೆ ಬೆಂಬಲ ನೀಡಿದ್ದರು. ಭಾರತ ಮತ್ತು ಬಾಂಗ್ಲಾದ ಗಡಿಗಳಲ್ಲಿ ನಿರಾಶ್ರಿತರಿಗೆ ನಿರಾಶ್ರಿತರ ಕೇಂದ್ರಗಳನ್ನು ತೆರೆಯಲಾಗಿತ್ತು. ಪಶ್ಚಿಮ ಬಂಗಾಳ, ಅಸ್ಸೋಂ, ಬಿಹಾರ, ಮೇಘಾಲಯ ಮುಂತಾದ ಕಡೆಗಳಲ್ಲಿ ನಿರಾಶ್ರಿತರ ಕೇಂದ್ರಗಳು ಆರಂಭವಾಗಿದ್ದವು.

ಭಾರತ ಬಾಂಗ್ಲಾ ಸ್ವಾತಂತ್ರ್ಯಕ್ಕೆ ಬೆಂಬಲಸೂಚಿಸುತ್ತಿದ್ದ ಕಾರಣದಿಂದ ಅಸಮಾಧಾನಗೊಂಡಿದ್ದ ಪಾಕಿಸ್ತಾನ ಡಿಸೆಂಬರ್ ಮೂರರಂದು ಭಾರತದ ಮೇಲೆ ದಾಳಿ ಮಾಡಲು ಮುಂದಾಗಿತ್ತು. ಇದನ್ನರಿತ ಪ್ರಧಾನಿ ಇಂದಿರಾಗಾಂಧಿ ಪಾಕ್ ವಿರುದ್ಧ ಯುದ್ಧ ಸಾರಿದರು.

ಡಿಸೆಂಬರ್ ಮೂರರಂದು ಆರಂಭವಾಗಿದ್ದ ಯುದ್ಧ ಸುಮಾರು 13 ದಿನಗಳ ಕಾಲ ನಡೆದು ಡಿಸೆಂಬರ್ 16ರಂದು ಕೊನೆಗೊಂಡಿತು. ಬಾಂಗ್ಲಾ ಸ್ವಾತಂತ್ರ್ಯ ಹೋರಾಟಗಾರರೂ ಪಾಕ್ ಸೇನೆಯ ವಿರುದ್ಧ ತಿರುಗಿಬಿದ್ದ ಕಾರಣದಿಂದ ಬಾಂಗ್ಲಾದೇಶವೂ ಸ್ವಾತಂತ್ರ್ಯ ಪಡೆಯಿತು. ಈಗ ಆ ಯುದ್ಧಕ್ಕೆ 50 ವರ್ಷ ಪೂರ್ಣಗೊಂಡಿದ್ದು, ಭಾರತೀಯ ಸೇನೆಯ ಪರಾಕ್ರಮಗಳನ್ನು ನೆನಪಿಸುತ್ತದೆ.

ಇದನ್ನೂ ಓದಿ: Kulgam Encounter: ಇಬ್ಬರು ಉಗ್ರರನ್ನು ಬೇಟೆಯಾಡಿದ ವೀರ ಸೈನಿಕರು

ETV Bharat Logo

Copyright © 2024 Ushodaya Enterprises Pvt. Ltd., All Rights Reserved.