ETV Bharat / bharat

ಪಿಎಂ ಮೋದಿ, ಸಿಎಂ ಯೋಗಿ ವಿರುದ್ಧ ಕಾಮೆಂಟ್: ಇನ್ಸ್‌ಪೆಕ್ಟರ್​​ಗೆ ಕಡ್ಡಾಯ ನಿವೃತ್ತಿ

author img

By

Published : Aug 3, 2022, 9:37 AM IST

ಸಾಮಾಜಿಕ ಜಾಲತಾಣದಲ್ಲಿ ಪ್ರಧಾನಿ ಮೋದಿ ಮತ್ತು ಸಿಎಂ ಯೋಗಿ ವಿರುದ್ಧ ಕಾಮೆಂಟ್ ಮಾಡಿದ್ದ ಇನ್ಸ್‌ಪೆಕ್ಟರ್​​ ನಾಗೇಂದ್ರ ಸಿಂಗ್ ಯಾದವ್ ಅವರನ್ನು ಕಡ್ಡಾಯವಾಗಿ ನಿವೃತ್ತಿಗೊಳಿಸಲಾಗಿದೆ.

Inspector got compulsory retirement
ಸಾಂದರ್ಭಿಕ ಚಿತ್ರ

ಕಾನ್ಪುರ(ಉತ್ತರ ಪ್ರದೇಶ): ಸಿಎಂ ಯೋಗಿ ಆದಿತ್ಯನಾಥ್ ಮತ್ತು ಪ್ರಧಾನಿ ನರೇಂದ್ರ ಮೋದಿ ವಿರುದ್ಧ ಟೀಕೆ ಮಾಡಿದ್ದ ಇನ್ಸ್‌ಪೆಕ್ಟರ್​​ ನಾಗೇಂದ್ರ ಸಿಂಗ್ ಯಾದವ್ ಅವರನ್ನು ಕಡ್ಡಾಯವಾಗಿ ನಿವೃತ್ತಿಗೊಳಿಸಲಾಗಿದೆ. ಇನ್ಸ್‌ಪೆಕ್ಟರ್​​ ವಿರುದ್ಧ ಹಲವು ದೂರುಗಳು ಬಂದಿದ್ದು, ತನಿಖೆ ನಡೆಸಿ ಕ್ರಮ ಕೈಗೊಳ್ಳಲಾಗಿದೆ ಎಂದು ಹೆಚ್ಚುವರಿ ಪೊಲೀಸ್ ಆಯುಕ್ತ ಆನಂದ ಕುಲಕರ್ಣಿ ತಿಳಿಸಿದ್ದಾರೆ.

ದೂರಿನನ್ವಯ ಪೊಲೀಸ್ ಇಲಾಖೆಯಲ್ಲಿ ಗಂಭೀರವಾಗಿ ತನಿಖೆ ನಡೆದಿದೆ. ಅವರ ವಿರುದ್ಧ ನಿರಂತರವಾಗಿ ದೂರುಗಳು ಬರುತ್ತಿದ್ದವು. ಮೂರು ಬಾರಿ ದುರ್ನಡತೆ ಪ್ರದರ್ಶಿಸಿದ್ದಾರೆ. ಇಷ್ಟು ಮಾತ್ರವಲ್ಲದೇ ತಮ್ಮ ಫೇಸ್‌ಬುಕ್, ಟ್ವಿಟರ್ ಸೇರಿದಂತೆ ಇತರ ಸಾಮಾಜಿಕ ಜಾಲತಾಣಗಳಲ್ಲಿ ಪ್ರಧಾನಿ ನರೇಂದ್ರ ಮೋದಿ ಹಾಗೂ ಮುಖ್ಯಮಂತ್ರಿ ಯೋಗಿ ಆದಿತ್ಯನಾಥ್ ವಿರುದ್ಧ ನಿರಂತರವಾಗಿ ಅಸಭ್ಯ ಟೀಕೆಗಳನ್ನು ಮಾಡುತ್ತಿದ್ದರು.

ಇದರೊಂದಿಗೆ ಅಧಿಕಾರಿಗಳೊಂದಿಗೆ ಅನುಚಿತವಾಗಿ ವರ್ತಿಸುವುದು, ಕರ್ತವ್ಯದಲ್ಲಿರುವಾಗ ಮದ್ಯಪಾನ ಮಾಡುವುದು, ರಾಜಕೀಯ ಪಕ್ಷಗಳ ಕಾರ್ಯಕ್ರಮಗಳಲ್ಲಿ ಭಾಗವಹಿಸುವುದು, ಮಾಹಿತಿ ನೀಡದೇ ಕರ್ತವ್ಯಕ್ಕೆ ಹಾಜರಾಗದೇ ಇರುವುದು ಸೇರಿದಂತೆ ಹಲವು ಆರೋಪಗಳನ್ನು ತನಿಖಾ ಸಮಿತಿ ಪತ್ತೆ ಮಾಡಿದೆ.

ಸಾಕ್ಷ್ಯಾಧಾರಗಳ ಆಧಾರದ ಮೇಲೆ ಸಮಿತಿಯ ಸದಸ್ಯರು ಇನ್ಸ್‌ಪೆಕ್ಟರ್ ನಾಗೇಂದ್ರ ಸಿಂಗ್ ಯಾದವ್ ಅವರು ಇನ್ನು ಮುಂದೆ ಸೇವೆಗೆ ಅರ್ಹರಲ್ಲ ಎಂದು 50ನೇ ವಯಸ್ಸಿನಲ್ಲಿ ಕಡ್ಡಾಯವಾಗಿ ನಿವೃತ್ತಿಗೊಳಿಸಲಾಗಿದೆ.

ಇದನ್ನೂ ಓದಿ: ಕಟ್ಟಡ ಕಾಮಗಾರಿ ವೇಳೆ ದುರಂತ: ಟವರ್ ಕ್ರೇನ್‌ನಿಂದ ಬಿದ್ದು ನಾಲ್ವರು ಕಾರ್ಮಿಕರು ಸಾವು, ಒಬ್ಬ ಗಂಭೀರ

ಕಾನ್ಪುರ(ಉತ್ತರ ಪ್ರದೇಶ): ಸಿಎಂ ಯೋಗಿ ಆದಿತ್ಯನಾಥ್ ಮತ್ತು ಪ್ರಧಾನಿ ನರೇಂದ್ರ ಮೋದಿ ವಿರುದ್ಧ ಟೀಕೆ ಮಾಡಿದ್ದ ಇನ್ಸ್‌ಪೆಕ್ಟರ್​​ ನಾಗೇಂದ್ರ ಸಿಂಗ್ ಯಾದವ್ ಅವರನ್ನು ಕಡ್ಡಾಯವಾಗಿ ನಿವೃತ್ತಿಗೊಳಿಸಲಾಗಿದೆ. ಇನ್ಸ್‌ಪೆಕ್ಟರ್​​ ವಿರುದ್ಧ ಹಲವು ದೂರುಗಳು ಬಂದಿದ್ದು, ತನಿಖೆ ನಡೆಸಿ ಕ್ರಮ ಕೈಗೊಳ್ಳಲಾಗಿದೆ ಎಂದು ಹೆಚ್ಚುವರಿ ಪೊಲೀಸ್ ಆಯುಕ್ತ ಆನಂದ ಕುಲಕರ್ಣಿ ತಿಳಿಸಿದ್ದಾರೆ.

ದೂರಿನನ್ವಯ ಪೊಲೀಸ್ ಇಲಾಖೆಯಲ್ಲಿ ಗಂಭೀರವಾಗಿ ತನಿಖೆ ನಡೆದಿದೆ. ಅವರ ವಿರುದ್ಧ ನಿರಂತರವಾಗಿ ದೂರುಗಳು ಬರುತ್ತಿದ್ದವು. ಮೂರು ಬಾರಿ ದುರ್ನಡತೆ ಪ್ರದರ್ಶಿಸಿದ್ದಾರೆ. ಇಷ್ಟು ಮಾತ್ರವಲ್ಲದೇ ತಮ್ಮ ಫೇಸ್‌ಬುಕ್, ಟ್ವಿಟರ್ ಸೇರಿದಂತೆ ಇತರ ಸಾಮಾಜಿಕ ಜಾಲತಾಣಗಳಲ್ಲಿ ಪ್ರಧಾನಿ ನರೇಂದ್ರ ಮೋದಿ ಹಾಗೂ ಮುಖ್ಯಮಂತ್ರಿ ಯೋಗಿ ಆದಿತ್ಯನಾಥ್ ವಿರುದ್ಧ ನಿರಂತರವಾಗಿ ಅಸಭ್ಯ ಟೀಕೆಗಳನ್ನು ಮಾಡುತ್ತಿದ್ದರು.

ಇದರೊಂದಿಗೆ ಅಧಿಕಾರಿಗಳೊಂದಿಗೆ ಅನುಚಿತವಾಗಿ ವರ್ತಿಸುವುದು, ಕರ್ತವ್ಯದಲ್ಲಿರುವಾಗ ಮದ್ಯಪಾನ ಮಾಡುವುದು, ರಾಜಕೀಯ ಪಕ್ಷಗಳ ಕಾರ್ಯಕ್ರಮಗಳಲ್ಲಿ ಭಾಗವಹಿಸುವುದು, ಮಾಹಿತಿ ನೀಡದೇ ಕರ್ತವ್ಯಕ್ಕೆ ಹಾಜರಾಗದೇ ಇರುವುದು ಸೇರಿದಂತೆ ಹಲವು ಆರೋಪಗಳನ್ನು ತನಿಖಾ ಸಮಿತಿ ಪತ್ತೆ ಮಾಡಿದೆ.

ಸಾಕ್ಷ್ಯಾಧಾರಗಳ ಆಧಾರದ ಮೇಲೆ ಸಮಿತಿಯ ಸದಸ್ಯರು ಇನ್ಸ್‌ಪೆಕ್ಟರ್ ನಾಗೇಂದ್ರ ಸಿಂಗ್ ಯಾದವ್ ಅವರು ಇನ್ನು ಮುಂದೆ ಸೇವೆಗೆ ಅರ್ಹರಲ್ಲ ಎಂದು 50ನೇ ವಯಸ್ಸಿನಲ್ಲಿ ಕಡ್ಡಾಯವಾಗಿ ನಿವೃತ್ತಿಗೊಳಿಸಲಾಗಿದೆ.

ಇದನ್ನೂ ಓದಿ: ಕಟ್ಟಡ ಕಾಮಗಾರಿ ವೇಳೆ ದುರಂತ: ಟವರ್ ಕ್ರೇನ್‌ನಿಂದ ಬಿದ್ದು ನಾಲ್ವರು ಕಾರ್ಮಿಕರು ಸಾವು, ಒಬ್ಬ ಗಂಭೀರ

ETV Bharat Logo

Copyright © 2024 Ushodaya Enterprises Pvt. Ltd., All Rights Reserved.