ETV Bharat / bharat

ಇಸ್ರೇಲ್​ನಲ್ಲಿ ಕಾರ್ಮಿಕರ ಕೊರತೆ: ತಿಂಗಳಿಗೆ ₹1.25 ಲಕ್ಷ ಸಂಬಳ ನೀಡಿ ಭಾರತದಿಂದ ನೇಮಕ

author img

By ETV Bharat Karnataka Team

Published : Dec 27, 2023, 10:01 AM IST

ಪ್ಯಾಲೆಸ್ಟೈನಿಯನ್ನರ ಮೇಲೆ ಅವಲಂಬಿತವಾಗಿದ್ದ ಇಸ್ರೇಲ್​ ಯುದ್ಧದಿಂದಾಗಿ ಕಾರ್ಮಿಕರ ಕೊರತೆ ಎದುರಿಸುತ್ತಿದೆ. ಹೀಗಾಗಿ ಭಾರತದಿಂದ ಕಾರ್ಮಿಕರನ್ನು ನೇಮಕ ಮಾಡಿಕೊಳ್ಳುತ್ತಿದೆ.

ಇಸ್ರೇಲ್​ನಲ್ಲಿ ಕಾರ್ಮಿಕರ ಕೊರತೆ
ಇಸ್ರೇಲ್​ನಲ್ಲಿ ಕಾರ್ಮಿಕರ ಕೊರತೆ

ಲಖನೌ (ಉತ್ತರಪ್ರದೇಶ) : ಹಮಾಸ್​ ವಿರುದ್ಧ ಯುದ್ಧ ನಡೆಸುತ್ತಿರುವ ಇಸ್ರೇಲ್​, ಕಾರ್ಮಿಕರ ತೀವ್ರ ಕೊರತೆ ಎದುರಿಸುತ್ತಿದೆ. ಕಟ್ಟಡ ನಿರ್ಮಾಣ, ಬಡಗಿ, ಕಮ್ಮಾರ ಕೆಲಸದಾಳುಗಳಿಗೆ ಎಲ್ಲಿಲ್ಲದ ಬೇಡಿಕೆ ಇದೆ. ಹೀಗಾಗಿ ಕಾರ್ಮಿಕರನ್ನು ಒದಗಿಸಲು ಅಲ್ಲಿನ ಸರ್ಕಾರ ಭಾರತಕ್ಕೆ ಮನವಿ ಮಾಡಿದ್ದು, ಉತ್ತರಪ್ರದೇಶದಿಂದ 16 ಸಾವಿರ ಕಾರ್ಮಿಕರು ಇಸ್ರೇಲ್​ಗೆ ತೆರಳಲು ಸಜ್ಜಾಗಿದ್ದಾರೆ.

ನುರಿತ ಉದ್ಯೋಗಿಗಳ ತೀವ್ರ ಕೊರತೆಯನ್ನು ಎದುರಿಸುತ್ತಿರುವ, ಅದರಲ್ಲೂ ಪ್ಯಾಲೆಸ್ಟೈನ್​ ಕಾರ್ಮಿಕರನ್ನೇ ನೆಚ್ಚಿಕೊಂಡಿರುವ ಇಸ್ರೇಲ್​, ಭಾರತದಿಂದ ಕಾರ್ಮಿಕರ ಕಳುಹಿಸಲು ಕೋರಿದೆ. ಹೀಗಾಗಿ ಮುಂದಿನ ತಿಂಗಳಿನಿಂದ ವಿವಿಧ ರಾಜ್ಯಗಳಿಂದ ಕಾರ್ಮಿಕರು ಅಲ್ಲಿಗೆ ತೆರಳಲಿದ್ದಾರೆ. ಅದರಲ್ಲಿ ಉತ್ತರಪ್ರದೇಶ ಒಂದರಿಂದಲೇ 16 ಸಾವಿರ ಜನರು ಗುಳೆ ಹೋಗಲಿದ್ದಾರೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ.

ಜನವರಿಯಲ್ಲಿ ಇಸ್ರೇಲ್​ಗೆ ಕಾರ್ಮಿಕರು: ಮೊದಲ ಹಂತದಲ್ಲಿ 10 ಸಾವಿರ ನುರಿತ ಉದ್ಯೋಗಿಗಳನ್ನು ರಾಜ್ಯದಿಂದ ಕಳುಹಿಸಲಾಗುವುದು. ಇಲ್ಲಿಯವರೆಗೆ 16 ಸಾವಿರ ಕಾರ್ಮಿಕರ ಪಟ್ಟಿಯನ್ನು ಅಂತಿಮಗೊಳಿಸಲಾಗಿದೆ. ಇಸ್ರೇಲ್‌ಗೆ ಕಳುಹಿಸಲು ಉದ್ದೇಶಿಸಿರುವ ಕಾರ್ಮಿಕರ ಪೈಕಿ ಉತ್ತರ ಪ್ರದೇಶವೇ ಅತಿದೊಡ್ಡ ಪೂರೈಕೆದಾರನಾಗಲಿದೆ ಎಂದು ಉತ್ತರ ಪ್ರದೇಶದ ಕಾರ್ಮಿಕ ಸಚಿವ ಅನಿಲ್ ರಾಜ್‌ಭರ್ ಹೇಳಿದ್ದಾರೆ.

ಕಾರ್ಮಿಕರ ನೋಂದಣಿಗೆ ಲಖನೌದಲ್ಲಿ ಕೇಂದ್ರ ತೆರೆಯಲು ಕೇಂದ್ರ ಕಾರ್ಮಿಕ ಸಚಿವಾಲಯವನ್ನು ರಾಜ್ಯ ಸರ್ಕಾರ ಕೋರಿದೆ. ಇಸ್ರೇಲ್‌ನಲ್ಲಿ ಮೇಸ್ತ್ರಿಗಳು, ಬಡಗಿಗಳು ಮತ್ತು ಕಟ್ಟಡ ಕಾರ್ಮಿಕರಿಗೆ ಹೆಚ್ಚಿನ ಬೇಡಿಕೆಯಿದೆ. ಇಸ್ರೇಲ್ ಸರ್ಕಾರ ಕೇಳಿದ ಕಾರ್ಮಿಕರನ್ನು ಪೂರೈಸಲು ಅಧಿಕಾರಿಗಳು ಅಂತಿಮ ಸಿದ್ಧತೆ ನಡೆಸುತ್ತಿದ್ದಾರೆ. ಈ ಪ್ರಕ್ರಿಯೆಯು ಜನವರಿ 10 ರೊಳಗೆ ಮುಗಿಯುತ್ತದೆ. ಜನವರಿ ಅಂತ್ಯದ ವೇಳೆಗೆ ಕಾರ್ಮಿಕರು ಇಸ್ರೇಲ್‌ಗೆ ತೆರಳಲಿದ್ದಾರೆ ಎಂದು ಅವರು ಮಾಹಿತಿ ನೀಡಿದರು.

ಮಾಸಿಕ 1.25 ಲಕ್ಷ ರೂಪಾಯಿ ಸಂಬಳ: ಸಹಾಯಕ ಕಾರ್ಮಿಕ ಆಯುಕ್ತ ಶಿಪ್ರಾ ಚತುರ್ವೇದಿ ಮಾತನಾಡಿ, ಉತ್ತರ ಪ್ರದೇಶದ ಕಾರ್ಮಿಕರು ಪ್ರತಿ ಮಾಸ ಬೋನಸ್ ಆಗಿ 15,000 ರೂಪಾಯಿಗಳ ಜೊತೆಗೆ ಭಾರತೀಯ ಕರೆನ್ಸಿಯ ಪ್ರಕಾರ ತಿಂಗಳಿಗೆ 1.25 ಲಕ್ಷ ರೂಪಾಯಿ ಸಂಬಳ ಪಡೆಯಲಿದ್ದಾರೆ. ಈ ಮೊತ್ತವನ್ನು ಕಂಪನಿಯ ಖಾತೆಗೆ ಜಮಾ ಮಾಡಲಾಗುವುದು. ಕೆಲಸ ಮುಗಿದ ನಂತರ ಆಯಾ ಕಾರ್ಮಿಕರಿಗೆ ಇದನ್ನು ನೀಡಲಾಗುತ್ತದೆ ಎಂದು ತಿಳಿಸಿದರು.

ಆಸಕ್ತ ಕಾರ್ಮಿಕರು ತಕ್ಷಣವೇ ಪಾಸ್‌ಪೋರ್ಟ್‌ಗೆ ಅರ್ಜಿ ಸಲ್ಲಿಸುವಂತೆ ಉತ್ತರ ಪ್ರದೇಶ ಸರ್ಕಾರ ಸೂಚಿಸಿದೆ. ಕಾರ್ಮಿಕರು ಕನಿಷ್ಠ ಒಂದು ವರ್ಷ ಮತ್ತು ಗರಿಷ್ಠ ಐದು ವರ್ಷಗಳವರೆಗೆ ಸೇವೆ ಸಲ್ಲಿಸಬೇಕಾಗುತ್ತದೆ. ಕಾರ್ಮಿಕರು ಇಂಗ್ಲಿಷ್ ಓದಲು, ಮಾತನಾಡಲು ಮತ್ತು ಅರ್ಥಮಾಡಿಕೊಳ್ಳಲು ಶಕ್ತರಾಗಿರಬೇಕು. ಇಸ್ರೇಲ್‌ನಲ್ಲಿ ಇದಕ್ಕೂ ಮೊದಲು ಕೆಲಸ ಮಾಡದ ಅರ್ಜಿದಾರರನ್ನು ಮಾತ್ರ ನೇಮಕ ಮಾಡಿಕೊಳ್ಳಲಾಗುತ್ತದೆ. 21 ರಿಂದ 45 ವರ್ಷದವರಾಗಿರಬೇಕು. ಇಸ್ರೇಲ್​ನಲ್ಲಿ ಕೆಲಸಕ್ಕೆ ಇರುವಷ್ಟು ದಿನ ಪ್ರತಿಯೊಬ್ಬ ಕಾರ್ಮಿಕರಿಗೆ ಊಟ ಮತ್ತು ವಸತಿಯ ವ್ಯವಸ್ಥೆ ಮಾಡಲಾಗುವುದು ಎಂದು ಚತುರ್ವೇದಿ ಹೇಳಿದರು.

ಹಮಾಸ್ ದಾಳಿಯ ಬಳಿಕ ಮಧ್ಯಪ್ರಾಚ್ಯ ದೇಶದಲ್ಲಿ ನಿರ್ಮಾಣ ಕಾರ್ಯಗಳು ನಿಂತು ಹೋಗಿವೆ. ಇದು ದೇಶದ ಆರ್ಥಿಕತೆಯನ್ನೂ ಕುಗ್ಗಿಸಿದೆ. ವೆಸ್ಟ್​ಬ್ಯಾಂಕ್​, ಗಾಜಾದ ಪ್ಯಾಲೆಸ್ಟೈನಿಯನ್ನರ ಮೇಲೆ ನಿಷೇಧ ಹೇರಿದ್ದರಿಂದ ಕಾರ್ಮಿಕರ ಕೊರತೆ ಉಂಟಾಗಿದೆ. ಅಂದಾಜಿನ ಪ್ರಕಾರ, ಯುದ್ಧಕ್ಕೂ ಮೊದಲು ದೇಶದ ನಿರ್ಮಾಣ ಉದ್ಯಮದಲ್ಲಿ 82 ಸಾವಿರ ಪ್ಯಾಲೆಸ್ಟೈನಿಯನ್ನರು ಕೆಲಸ ಮಾಡುತ್ತಿದ್ದರು ಎಂದು ತಿಳಿದು ಬಂದಿದೆ.

ಇದನ್ನೂ ಓದಿ: 'ಮದುವೆಯನ್ನೇ ನುಂಗಿದ ಮಟನ್​ ಊಟ': ತೆಲಂಗಾಣದಲ್ಲಿ ಮಾಂಸದೂಟ ನೀಡದ್ದಕ್ಕೆ ವಿವಾಹವೇ ರದ್ದು!

ಲಖನೌ (ಉತ್ತರಪ್ರದೇಶ) : ಹಮಾಸ್​ ವಿರುದ್ಧ ಯುದ್ಧ ನಡೆಸುತ್ತಿರುವ ಇಸ್ರೇಲ್​, ಕಾರ್ಮಿಕರ ತೀವ್ರ ಕೊರತೆ ಎದುರಿಸುತ್ತಿದೆ. ಕಟ್ಟಡ ನಿರ್ಮಾಣ, ಬಡಗಿ, ಕಮ್ಮಾರ ಕೆಲಸದಾಳುಗಳಿಗೆ ಎಲ್ಲಿಲ್ಲದ ಬೇಡಿಕೆ ಇದೆ. ಹೀಗಾಗಿ ಕಾರ್ಮಿಕರನ್ನು ಒದಗಿಸಲು ಅಲ್ಲಿನ ಸರ್ಕಾರ ಭಾರತಕ್ಕೆ ಮನವಿ ಮಾಡಿದ್ದು, ಉತ್ತರಪ್ರದೇಶದಿಂದ 16 ಸಾವಿರ ಕಾರ್ಮಿಕರು ಇಸ್ರೇಲ್​ಗೆ ತೆರಳಲು ಸಜ್ಜಾಗಿದ್ದಾರೆ.

ನುರಿತ ಉದ್ಯೋಗಿಗಳ ತೀವ್ರ ಕೊರತೆಯನ್ನು ಎದುರಿಸುತ್ತಿರುವ, ಅದರಲ್ಲೂ ಪ್ಯಾಲೆಸ್ಟೈನ್​ ಕಾರ್ಮಿಕರನ್ನೇ ನೆಚ್ಚಿಕೊಂಡಿರುವ ಇಸ್ರೇಲ್​, ಭಾರತದಿಂದ ಕಾರ್ಮಿಕರ ಕಳುಹಿಸಲು ಕೋರಿದೆ. ಹೀಗಾಗಿ ಮುಂದಿನ ತಿಂಗಳಿನಿಂದ ವಿವಿಧ ರಾಜ್ಯಗಳಿಂದ ಕಾರ್ಮಿಕರು ಅಲ್ಲಿಗೆ ತೆರಳಲಿದ್ದಾರೆ. ಅದರಲ್ಲಿ ಉತ್ತರಪ್ರದೇಶ ಒಂದರಿಂದಲೇ 16 ಸಾವಿರ ಜನರು ಗುಳೆ ಹೋಗಲಿದ್ದಾರೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ.

ಜನವರಿಯಲ್ಲಿ ಇಸ್ರೇಲ್​ಗೆ ಕಾರ್ಮಿಕರು: ಮೊದಲ ಹಂತದಲ್ಲಿ 10 ಸಾವಿರ ನುರಿತ ಉದ್ಯೋಗಿಗಳನ್ನು ರಾಜ್ಯದಿಂದ ಕಳುಹಿಸಲಾಗುವುದು. ಇಲ್ಲಿಯವರೆಗೆ 16 ಸಾವಿರ ಕಾರ್ಮಿಕರ ಪಟ್ಟಿಯನ್ನು ಅಂತಿಮಗೊಳಿಸಲಾಗಿದೆ. ಇಸ್ರೇಲ್‌ಗೆ ಕಳುಹಿಸಲು ಉದ್ದೇಶಿಸಿರುವ ಕಾರ್ಮಿಕರ ಪೈಕಿ ಉತ್ತರ ಪ್ರದೇಶವೇ ಅತಿದೊಡ್ಡ ಪೂರೈಕೆದಾರನಾಗಲಿದೆ ಎಂದು ಉತ್ತರ ಪ್ರದೇಶದ ಕಾರ್ಮಿಕ ಸಚಿವ ಅನಿಲ್ ರಾಜ್‌ಭರ್ ಹೇಳಿದ್ದಾರೆ.

ಕಾರ್ಮಿಕರ ನೋಂದಣಿಗೆ ಲಖನೌದಲ್ಲಿ ಕೇಂದ್ರ ತೆರೆಯಲು ಕೇಂದ್ರ ಕಾರ್ಮಿಕ ಸಚಿವಾಲಯವನ್ನು ರಾಜ್ಯ ಸರ್ಕಾರ ಕೋರಿದೆ. ಇಸ್ರೇಲ್‌ನಲ್ಲಿ ಮೇಸ್ತ್ರಿಗಳು, ಬಡಗಿಗಳು ಮತ್ತು ಕಟ್ಟಡ ಕಾರ್ಮಿಕರಿಗೆ ಹೆಚ್ಚಿನ ಬೇಡಿಕೆಯಿದೆ. ಇಸ್ರೇಲ್ ಸರ್ಕಾರ ಕೇಳಿದ ಕಾರ್ಮಿಕರನ್ನು ಪೂರೈಸಲು ಅಧಿಕಾರಿಗಳು ಅಂತಿಮ ಸಿದ್ಧತೆ ನಡೆಸುತ್ತಿದ್ದಾರೆ. ಈ ಪ್ರಕ್ರಿಯೆಯು ಜನವರಿ 10 ರೊಳಗೆ ಮುಗಿಯುತ್ತದೆ. ಜನವರಿ ಅಂತ್ಯದ ವೇಳೆಗೆ ಕಾರ್ಮಿಕರು ಇಸ್ರೇಲ್‌ಗೆ ತೆರಳಲಿದ್ದಾರೆ ಎಂದು ಅವರು ಮಾಹಿತಿ ನೀಡಿದರು.

ಮಾಸಿಕ 1.25 ಲಕ್ಷ ರೂಪಾಯಿ ಸಂಬಳ: ಸಹಾಯಕ ಕಾರ್ಮಿಕ ಆಯುಕ್ತ ಶಿಪ್ರಾ ಚತುರ್ವೇದಿ ಮಾತನಾಡಿ, ಉತ್ತರ ಪ್ರದೇಶದ ಕಾರ್ಮಿಕರು ಪ್ರತಿ ಮಾಸ ಬೋನಸ್ ಆಗಿ 15,000 ರೂಪಾಯಿಗಳ ಜೊತೆಗೆ ಭಾರತೀಯ ಕರೆನ್ಸಿಯ ಪ್ರಕಾರ ತಿಂಗಳಿಗೆ 1.25 ಲಕ್ಷ ರೂಪಾಯಿ ಸಂಬಳ ಪಡೆಯಲಿದ್ದಾರೆ. ಈ ಮೊತ್ತವನ್ನು ಕಂಪನಿಯ ಖಾತೆಗೆ ಜಮಾ ಮಾಡಲಾಗುವುದು. ಕೆಲಸ ಮುಗಿದ ನಂತರ ಆಯಾ ಕಾರ್ಮಿಕರಿಗೆ ಇದನ್ನು ನೀಡಲಾಗುತ್ತದೆ ಎಂದು ತಿಳಿಸಿದರು.

ಆಸಕ್ತ ಕಾರ್ಮಿಕರು ತಕ್ಷಣವೇ ಪಾಸ್‌ಪೋರ್ಟ್‌ಗೆ ಅರ್ಜಿ ಸಲ್ಲಿಸುವಂತೆ ಉತ್ತರ ಪ್ರದೇಶ ಸರ್ಕಾರ ಸೂಚಿಸಿದೆ. ಕಾರ್ಮಿಕರು ಕನಿಷ್ಠ ಒಂದು ವರ್ಷ ಮತ್ತು ಗರಿಷ್ಠ ಐದು ವರ್ಷಗಳವರೆಗೆ ಸೇವೆ ಸಲ್ಲಿಸಬೇಕಾಗುತ್ತದೆ. ಕಾರ್ಮಿಕರು ಇಂಗ್ಲಿಷ್ ಓದಲು, ಮಾತನಾಡಲು ಮತ್ತು ಅರ್ಥಮಾಡಿಕೊಳ್ಳಲು ಶಕ್ತರಾಗಿರಬೇಕು. ಇಸ್ರೇಲ್‌ನಲ್ಲಿ ಇದಕ್ಕೂ ಮೊದಲು ಕೆಲಸ ಮಾಡದ ಅರ್ಜಿದಾರರನ್ನು ಮಾತ್ರ ನೇಮಕ ಮಾಡಿಕೊಳ್ಳಲಾಗುತ್ತದೆ. 21 ರಿಂದ 45 ವರ್ಷದವರಾಗಿರಬೇಕು. ಇಸ್ರೇಲ್​ನಲ್ಲಿ ಕೆಲಸಕ್ಕೆ ಇರುವಷ್ಟು ದಿನ ಪ್ರತಿಯೊಬ್ಬ ಕಾರ್ಮಿಕರಿಗೆ ಊಟ ಮತ್ತು ವಸತಿಯ ವ್ಯವಸ್ಥೆ ಮಾಡಲಾಗುವುದು ಎಂದು ಚತುರ್ವೇದಿ ಹೇಳಿದರು.

ಹಮಾಸ್ ದಾಳಿಯ ಬಳಿಕ ಮಧ್ಯಪ್ರಾಚ್ಯ ದೇಶದಲ್ಲಿ ನಿರ್ಮಾಣ ಕಾರ್ಯಗಳು ನಿಂತು ಹೋಗಿವೆ. ಇದು ದೇಶದ ಆರ್ಥಿಕತೆಯನ್ನೂ ಕುಗ್ಗಿಸಿದೆ. ವೆಸ್ಟ್​ಬ್ಯಾಂಕ್​, ಗಾಜಾದ ಪ್ಯಾಲೆಸ್ಟೈನಿಯನ್ನರ ಮೇಲೆ ನಿಷೇಧ ಹೇರಿದ್ದರಿಂದ ಕಾರ್ಮಿಕರ ಕೊರತೆ ಉಂಟಾಗಿದೆ. ಅಂದಾಜಿನ ಪ್ರಕಾರ, ಯುದ್ಧಕ್ಕೂ ಮೊದಲು ದೇಶದ ನಿರ್ಮಾಣ ಉದ್ಯಮದಲ್ಲಿ 82 ಸಾವಿರ ಪ್ಯಾಲೆಸ್ಟೈನಿಯನ್ನರು ಕೆಲಸ ಮಾಡುತ್ತಿದ್ದರು ಎಂದು ತಿಳಿದು ಬಂದಿದೆ.

ಇದನ್ನೂ ಓದಿ: 'ಮದುವೆಯನ್ನೇ ನುಂಗಿದ ಮಟನ್​ ಊಟ': ತೆಲಂಗಾಣದಲ್ಲಿ ಮಾಂಸದೂಟ ನೀಡದ್ದಕ್ಕೆ ವಿವಾಹವೇ ರದ್ದು!

ETV Bharat Logo

Copyright © 2024 Ushodaya Enterprises Pvt. Ltd., All Rights Reserved.