ETV Bharat / bharat

ಜಮ್ಮು-ಕಾಶ್ಮೀರದಲ್ಲಿ ಭೀಕರ ರಸ್ತೆ ಅಪಘಾತ: 12ಕ್ಕೆ ಏರಿದ ಸಾವಿನ ಸಂಖ್ಯೆ - Etv bharat kannada

ಜಮ್ಮು-ಕಾಶ್ಮೀರದ ಪೂಂಚ್​ನಲ್ಲಿ ಸಂಭವಿಸಿರುವ ಭೀಕರ ರಸ್ತೆ ಅಪಘಾತದಲ್ಲಿ 11 ಮಂದಿ ದುರ್ಮರಣಕ್ಕೀಡಾಗಿದ್ದಾರೆ.

bus accident occurred in the Poonch
bus accident occurred in the Poonch
author img

By

Published : Sep 14, 2022, 10:34 AM IST

Updated : Sep 14, 2022, 2:58 PM IST

ಪೂಂಚ್​​(ಜಮ್ಮು-ಕಾಶ್ಮೀರ): ಕಣಿವೆ ನಾಡು ಜಮ್ಮು-ಕಾಶ್ಮೀರದ ಪೂಂಚ್​​ನ ಸಾವ್ಜಿಯಾನ್​ ಎಂಬಲ್ಲಿ ಮಿನಿ ಬಸ್​ ಅಪಘಾತಕ್ಕೀಡಾಗಿದೆ. ಪರಿಣಾಮ 11 ಮಂದಿ ಪ್ರಯಾಣಿಕರು ದುರ್ಮರಣಕ್ಕೀಡಾಗಿದ್ದಾರೆ. ಘಟನಾ ಸ್ಥಳದಲ್ಲಿ ಸೇನೆ, ಪೊಲೀಸ್ ಸಿಬ್ಬಂದಿ ತುರ್ತು ರಕ್ಷಣಾ ಕಾರ್ಯಾಚರಣೆ ನಡೆಸುತ್ತಿದ್ದಾರೆ. ಪ್ರಯಾಣಿಕರ ಹೊತ್ತು ಸಾಗುತ್ತಿದ್ದ ಬಸ್​ ಕಂದಕಕ್ಕೆ ಉರುಳಿ ಬಿದ್ದಿರುವ ಪರಿಣಾಮ ಈ ಅವಘಡ ನಡೆದಿದೆ.

ಘಟನೆಯಲ್ಲಿ ಗಾಯಗೊಂಡಿರುವ ಎಲ್ಲರನ್ನೂ ಸ್ಥಳೀಯ ಆಸ್ಪತ್ರೆಗೆ ದಾಖಲು ಮಾಡಲಾಗಿದೆ ಎಂದು ತಹಶೀಲ್ದಾರ್​ ಶಹಜಾದ್ ಲತೀಫ್ ಮಾಹಿತಿ ನೀಡಿದ್ದಾರೆ. ಪ್ರಯಾಣಿಕರನ್ನು ಕರೆದೊಯ್ಯುತ್ತಿದ್ದ ಬಸ್​​​ ಸಾವ್ಜಿಯಾನ್​​ನಿಂದ ಮಂಡಿಗೆ ತೆರಳುತ್ತಿತ್ತು. ಪ್ರಾಥಮಿಕ ಮಾಹಿತಿ ಪ್ರಕಾರ 25 ಮಂದಿ ಘಟನೆಯಲ್ಲಿ ಗಾಯಗೊಂಡಿದ್ದು, ಇದರಲ್ಲಿ ಕೆಲವರ ಸ್ಥಿತಿ ಚಿಂತಾಜನಕವಾಗಿದೆ ಎಂದು ಹೇಳಲಾಗ್ತಿದೆ.

Jammu & Kashmir A mini-bus accident occurred in the Poonch
ಜಮ್ಮು-ಕಾಶ್ಮೀರದಲ್ಲಿ ಭೀಕರ ರಸ್ತೆ ಅಪಘಾತ

ಪರಿಹಾರ ಘೋಷಣೆ: ಬಸ್​ ಅಪಘಾತದಲ್ಲಿ ಪ್ರಾಣ ಕಳೆದುಕೊಂಡವರ ಕುಟುಂಬಗಳಿಗೆ ಜಮ್ಮು-ಕಾಶ್ಮೀರ ಲೆ. ಗವರ್ನರ್ ಮನೋಜ್​ ಸಿನ್ಹಾ ತಲಾ 5 ಲಕ್ಷ ರೂಪಾಯಿ ಘೋಷಣೆ ಮಾಡಿದ್ದಾರೆ. ಇದರ ಜೊತೆಗೆ ಗಾಯಗೊಂಡಿರುವ ಪ್ರತಿಯೊಬ್ಬರಿಗೂ ಉತ್ತಮ ಚಿಕಿತ್ಸೆ ನೀಡುವಂತೆ ಸೂಚನೆ ನೀಡಿದ್ದಾರೆ. ಲೆಫ್ಟಿನೆಂಟ್​​ ಜನರಲ್​​ ಮನೋಜ್​ ಸಿನ್ಹಾ ಆಸ್ಪತ್ರೆಗೆ ಭೇಟಿ ನೀಡಿ ಗಾಯಾಳುಗಳ ಆರೋಗ್ಯ ಸ್ಥಿತಿ ವಿಚಾರಿಸಿದರು.​​

ಪೂಂಚ್​​(ಜಮ್ಮು-ಕಾಶ್ಮೀರ): ಕಣಿವೆ ನಾಡು ಜಮ್ಮು-ಕಾಶ್ಮೀರದ ಪೂಂಚ್​​ನ ಸಾವ್ಜಿಯಾನ್​ ಎಂಬಲ್ಲಿ ಮಿನಿ ಬಸ್​ ಅಪಘಾತಕ್ಕೀಡಾಗಿದೆ. ಪರಿಣಾಮ 11 ಮಂದಿ ಪ್ರಯಾಣಿಕರು ದುರ್ಮರಣಕ್ಕೀಡಾಗಿದ್ದಾರೆ. ಘಟನಾ ಸ್ಥಳದಲ್ಲಿ ಸೇನೆ, ಪೊಲೀಸ್ ಸಿಬ್ಬಂದಿ ತುರ್ತು ರಕ್ಷಣಾ ಕಾರ್ಯಾಚರಣೆ ನಡೆಸುತ್ತಿದ್ದಾರೆ. ಪ್ರಯಾಣಿಕರ ಹೊತ್ತು ಸಾಗುತ್ತಿದ್ದ ಬಸ್​ ಕಂದಕಕ್ಕೆ ಉರುಳಿ ಬಿದ್ದಿರುವ ಪರಿಣಾಮ ಈ ಅವಘಡ ನಡೆದಿದೆ.

ಘಟನೆಯಲ್ಲಿ ಗಾಯಗೊಂಡಿರುವ ಎಲ್ಲರನ್ನೂ ಸ್ಥಳೀಯ ಆಸ್ಪತ್ರೆಗೆ ದಾಖಲು ಮಾಡಲಾಗಿದೆ ಎಂದು ತಹಶೀಲ್ದಾರ್​ ಶಹಜಾದ್ ಲತೀಫ್ ಮಾಹಿತಿ ನೀಡಿದ್ದಾರೆ. ಪ್ರಯಾಣಿಕರನ್ನು ಕರೆದೊಯ್ಯುತ್ತಿದ್ದ ಬಸ್​​​ ಸಾವ್ಜಿಯಾನ್​​ನಿಂದ ಮಂಡಿಗೆ ತೆರಳುತ್ತಿತ್ತು. ಪ್ರಾಥಮಿಕ ಮಾಹಿತಿ ಪ್ರಕಾರ 25 ಮಂದಿ ಘಟನೆಯಲ್ಲಿ ಗಾಯಗೊಂಡಿದ್ದು, ಇದರಲ್ಲಿ ಕೆಲವರ ಸ್ಥಿತಿ ಚಿಂತಾಜನಕವಾಗಿದೆ ಎಂದು ಹೇಳಲಾಗ್ತಿದೆ.

Jammu & Kashmir A mini-bus accident occurred in the Poonch
ಜಮ್ಮು-ಕಾಶ್ಮೀರದಲ್ಲಿ ಭೀಕರ ರಸ್ತೆ ಅಪಘಾತ

ಪರಿಹಾರ ಘೋಷಣೆ: ಬಸ್​ ಅಪಘಾತದಲ್ಲಿ ಪ್ರಾಣ ಕಳೆದುಕೊಂಡವರ ಕುಟುಂಬಗಳಿಗೆ ಜಮ್ಮು-ಕಾಶ್ಮೀರ ಲೆ. ಗವರ್ನರ್ ಮನೋಜ್​ ಸಿನ್ಹಾ ತಲಾ 5 ಲಕ್ಷ ರೂಪಾಯಿ ಘೋಷಣೆ ಮಾಡಿದ್ದಾರೆ. ಇದರ ಜೊತೆಗೆ ಗಾಯಗೊಂಡಿರುವ ಪ್ರತಿಯೊಬ್ಬರಿಗೂ ಉತ್ತಮ ಚಿಕಿತ್ಸೆ ನೀಡುವಂತೆ ಸೂಚನೆ ನೀಡಿದ್ದಾರೆ. ಲೆಫ್ಟಿನೆಂಟ್​​ ಜನರಲ್​​ ಮನೋಜ್​ ಸಿನ್ಹಾ ಆಸ್ಪತ್ರೆಗೆ ಭೇಟಿ ನೀಡಿ ಗಾಯಾಳುಗಳ ಆರೋಗ್ಯ ಸ್ಥಿತಿ ವಿಚಾರಿಸಿದರು.​​

Last Updated : Sep 14, 2022, 2:58 PM IST
ETV Bharat Logo

Copyright © 2025 Ushodaya Enterprises Pvt. Ltd., All Rights Reserved.