ETV Bharat / bharat

ಕೋರ್ಟ್​​ನಿಂದ ತಡೆಯಾಜ್ಞೆ ತಂದಿರುವ ಆರು ಸಚಿವರು ರಾಜೀನಾಮೆ ನೀಡಲಿ: ಸಿದ್ದರಾಮಯ್ಯ ಆಗ್ರಹ

ಸಚಿವರೇ ಭಯದಲ್ಲಿ ಇರುವಾಗ ಕ್ಷೇತ್ರದ, ರಾಜ್ಯದ ಜನರಿಗೆ ಹೇಗೆ ರಕ್ಷಣೆ ನೀಡಲು ಸಾಧ್ಯ ಎಂದು ಸಿದ್ದರಾಮಯ್ಯ ಪ್ರಶ್ನೆ ಮಾಡಿದ್ದಾರೆ.

author img

By

Published : Mar 23, 2021, 12:02 AM IST

Siddaramaiah
Siddaramaiah

ಬೆಂಗಳೂರು: ಸಿಡಿ ಪ್ರಕರಣ ಸಂಬಂಧ 'ಕುಂಬಳಕಾಯಿ ಕಳ್ಳ ಅಂದ್ರೆ, ಹೆಗಲು ಮುಟ್ಟಿ ನೋಡಿಕೊಳ್ಳುತ್ತಿದ್ದಾರೆ'. ನ್ಯಾಯಾಲಯದಿಂದ ತಡೆಯಾಜ್ಞೆ ತಂದಿರುವ ಆರು ಸಚಿವರು ಮುಂದುವರೆಯಲು ಅನರ್ಹರಾಗಿದ್ದು, ರಾಜೀನಾಮೆ ನೀಡಬೇಕೆಂದು ಪ್ರತಿಪಕ್ಷದ ನಾಯಕ, ಮಾಜಿ ಸಿಎಂ ಸಿದ್ದರಾಮಯ್ಯ ಒತ್ತಾಯಿಸಿದ್ದಾರೆ.

ವಿಧಾನಸೌಧದಲ್ಲಿ ಮಾಧ್ಯಮಗಳಿಗೆ ಪ್ರತಿಕ್ರಿಯೆ ನೀಡಿದ ಅವರು, ಲೈಂಗಿಕ ಹಗರಣ ಸಿಡಿ ಬಗ್ಗೆ ಸದನದಲ್ಲಿ ಪ್ರಸ್ತಾಪ ಮಾಡಿದೆ. ಆರು ಮಂದಿ ಮಂತ್ರಿಗಳು ಸಿವಿಲ್ ಕೋರ್ಟ್‌ಗೆ ಹೋಗಿ ಇಂಜಕ್ಷನ್ ತಂದಿದ್ದಾರೆ. ಯಾವುದೇ ಖಾಸಗಿ ಆಕ್ಷೇಪ ಇಲ್ಲದೆ ರಮೇಶ್ ಜಾರಕಿಹೊಳಿ ರೀತಿಯಲ್ಲಿ ನಮಗೂ ಆಗಬಹುದೆಂದು ಆತಂಕಗೊಂಡು ಕೋರ್ಟ್​ಗೆ ಹೋಗಿದ್ದಾರೆ ಎಂದರು.

ಆರು ಸಚಿವರ ರಾಜೀನಾಮೆಗೆ ಸಿದ್ದರಾಮಯ್ಯ ಆಗ್ರಹ

ಭಯ, ರಾಗದ್ವೇಶ ಇಲ್ಲದೆ ನಿಷ್ಪಕ್ಷ್ಯಪಾತವಾಗಿ ಕೆಲಸ ಮಾಡುವುದಾಗಿ ಹೇಳಿ ಪ್ರಮಾಣವಚನ ತೆಗೆದುಕೊಂಡಿದ್ದಾರೆ. ಆದರೆ ಇದೀಗ ಮಾನಹಾನಿ ಆಗಬಹುದೆಂದು ಕೋರ್ಟ್​​ನಿಂದ ತಡೆಯಾಜ್ಞೆ ತಂದಿದ್ದಾರೆ. ಮಾರ್ಚ್​​​ 2 ರಿಂದ 9 ರವರೆಗೂ ಯಾವುದೇ ಕ್ರಮ ತೆಗೆದುಕೊಂಡಿಲ್ಲ. ಇದು ಷಡ್ಯಂತ್ರವೆಂದು ರಮೇಶ್ ಜಾರಕಿಹೊಳಿ ಗೃಹ ಸಚಿವರಿಗೆ ಪತ್ರ ಬರೆದು ಕಾನೂನು ಕ್ರಮಕ್ಕೆ ಮನವಿ ಮಾಡಿದ್ದಾರೆ. ಎಡಿಜಿಪಿ ಸೌಮೇಂದು ಮುಖರ್ಜಿ ನೇತೃತ್ವದಲ್ಲಿ ತನಿಖೆ ಮಾಡಿ, ವರದಿ ಕೊಡುವಂತೆ ಹೇಳಿದ್ದಾರೆ. ಆದರೆ, ಪತ್ರದಲ್ಲಿ ಸಿಡಿ ಬಗ್ಗೆ ಯಾವುದೇ ಉಲ್ಲೇಖ ಇಲ್ಲ ಎಂದು ಸಂಶಯ ವ್ಯಕ್ತಪಡಿಸಿದರು.

ಇದನ್ನೂ ಓದಿ: ಮೇಟಿಗೆ ಬೆಣ್ಣೆ ಕೊಟ್ಟು, ರಮೇಶ್ ಜಾರಕಿಹೊಳಿಗೆ ಸುಣ್ಣ ಯಾಕೆ?: ಸಚಿವ ಬಸವರಾಜ ಬೊಮ್ಮಾಯಿ ಪ್ರಶ್ನೆ

ಮಾಜಿ ಶಾಸಕ ನಾಗರಾಜ್ ಅವರಿಂದ ಮಾರ್ಚ್ 14 ರಂದು ಸದಾಶಿವನಗರ ಠಾಣೆಯಲ್ಲಿ ದೂರು ಕೊಡಿಸ್ತಾರೆ. ಆದರೆ, ಮಾ.13ನೇ ತಾರೀಖಿನಂದೇ ಸಂತ್ರಸ್ತೆ ವಿಡಿಯೋ ಮಾಡಿದ್ದಾಳೆ. ಕೆಲಸ ಕೇಳಿಕೊಂಡು ಬಂದಾಗ ನನ್ನನ್ನು ಬಳಸಿಕೊಂಡ್ರು ಅಂತ ಹೇಳಿದ್ದಾಳೆ. ಲೈಂಗಿಕ ದೌರ್ಜನ್ಯ ನಡೆಸಿರುವುದಾಗಿ ಹೇಳಿದ್ದಾಳೆ. ಹೀಗಾಗಿ ಇದು ಅತ್ಯಾಚಾರ ಪ್ರಕರಣದಡಿಯಲ್ಲಿ ಬರಲಿದೆ. ಪೊಲೀಸರು ಕೂಡಲೇ ಎಫ್ಐಆರ್ ದಾಖಲಿಸಿ ಕ್ರಮ ಕೈಗೊಳ್ಳಬೇಕಿತ್ತು. ಆದರೆ ದೂರು ದಾಖಲಿಸಿಕೊಂಡಿಲ್ಲ, ರಮೇಶ್ ಜಾರಕಿಹೊಳಿ ದೂರು ಮಾತ್ರ ದಾಖಲಿಸಿಕೊಂಡಿದ್ದಾರೆ. ಹಾಗಾಗಿ, ಅತ್ಯಾಚಾರ ಪ್ರಕರಣದಡಿ ದೂರು ದಾಖಲಿಸಿಕೊಳ್ಳಬೇಕು ಎಂದು ಆಗ್ರಹಿಸಿದರು.

ಇನ್ನು ಕರ್ನಾಟಕ ಇತಿಹಾಸದಲ್ಲಿ ಕೋರ್ಟ್​ಗೆ ಹೋಗಿ ತಡೆಯಾಜ್ಞೆ ತಂದಿದ್ದು ಇದೇ ಮೊದಲು. ಹಾಗಾಗಿ, ಆರು ಮಂದಿ ಮಂತ್ರಿಗಳ ಬಗ್ಗೆಯೂ ತನಿಖೆ ಆಗಬೇಕು. ಸಂಪೂರ್ಣ ಹಾಗೂ ಸ್ವತಂತ್ರ ತನಿಖೆ ಆಗಬೇಕು. ಹೀಗಾಗಿ, ಸಿಜೆ ನೇತೃತ್ವದಲ್ಲಿ ತನಿಖೆ ಮಾಡಿಸಬೇಕೆಂದು ಒತ್ತಾಯಿಸಿದರು.

ನಾಳೆಯೂ ಧರಣಿ : ಈ ಪ್ರಕರಣ ಗಂಭೀರವಾಗಿರುವುದರಿಂದ ಸದನದಲ್ಲಿ ನಾಳೆಯೂ ಧರಣಿ ಮುಂದುವರೆಸುತ್ತೇವೆ ಎಂದು ಸಿದ್ದರಾಮಯ್ಯ ಇದೇ ವೇಳೆ ಹೇಳಿದರು.

ಬೆಂಗಳೂರು: ಸಿಡಿ ಪ್ರಕರಣ ಸಂಬಂಧ 'ಕುಂಬಳಕಾಯಿ ಕಳ್ಳ ಅಂದ್ರೆ, ಹೆಗಲು ಮುಟ್ಟಿ ನೋಡಿಕೊಳ್ಳುತ್ತಿದ್ದಾರೆ'. ನ್ಯಾಯಾಲಯದಿಂದ ತಡೆಯಾಜ್ಞೆ ತಂದಿರುವ ಆರು ಸಚಿವರು ಮುಂದುವರೆಯಲು ಅನರ್ಹರಾಗಿದ್ದು, ರಾಜೀನಾಮೆ ನೀಡಬೇಕೆಂದು ಪ್ರತಿಪಕ್ಷದ ನಾಯಕ, ಮಾಜಿ ಸಿಎಂ ಸಿದ್ದರಾಮಯ್ಯ ಒತ್ತಾಯಿಸಿದ್ದಾರೆ.

ವಿಧಾನಸೌಧದಲ್ಲಿ ಮಾಧ್ಯಮಗಳಿಗೆ ಪ್ರತಿಕ್ರಿಯೆ ನೀಡಿದ ಅವರು, ಲೈಂಗಿಕ ಹಗರಣ ಸಿಡಿ ಬಗ್ಗೆ ಸದನದಲ್ಲಿ ಪ್ರಸ್ತಾಪ ಮಾಡಿದೆ. ಆರು ಮಂದಿ ಮಂತ್ರಿಗಳು ಸಿವಿಲ್ ಕೋರ್ಟ್‌ಗೆ ಹೋಗಿ ಇಂಜಕ್ಷನ್ ತಂದಿದ್ದಾರೆ. ಯಾವುದೇ ಖಾಸಗಿ ಆಕ್ಷೇಪ ಇಲ್ಲದೆ ರಮೇಶ್ ಜಾರಕಿಹೊಳಿ ರೀತಿಯಲ್ಲಿ ನಮಗೂ ಆಗಬಹುದೆಂದು ಆತಂಕಗೊಂಡು ಕೋರ್ಟ್​ಗೆ ಹೋಗಿದ್ದಾರೆ ಎಂದರು.

ಆರು ಸಚಿವರ ರಾಜೀನಾಮೆಗೆ ಸಿದ್ದರಾಮಯ್ಯ ಆಗ್ರಹ

ಭಯ, ರಾಗದ್ವೇಶ ಇಲ್ಲದೆ ನಿಷ್ಪಕ್ಷ್ಯಪಾತವಾಗಿ ಕೆಲಸ ಮಾಡುವುದಾಗಿ ಹೇಳಿ ಪ್ರಮಾಣವಚನ ತೆಗೆದುಕೊಂಡಿದ್ದಾರೆ. ಆದರೆ ಇದೀಗ ಮಾನಹಾನಿ ಆಗಬಹುದೆಂದು ಕೋರ್ಟ್​​ನಿಂದ ತಡೆಯಾಜ್ಞೆ ತಂದಿದ್ದಾರೆ. ಮಾರ್ಚ್​​​ 2 ರಿಂದ 9 ರವರೆಗೂ ಯಾವುದೇ ಕ್ರಮ ತೆಗೆದುಕೊಂಡಿಲ್ಲ. ಇದು ಷಡ್ಯಂತ್ರವೆಂದು ರಮೇಶ್ ಜಾರಕಿಹೊಳಿ ಗೃಹ ಸಚಿವರಿಗೆ ಪತ್ರ ಬರೆದು ಕಾನೂನು ಕ್ರಮಕ್ಕೆ ಮನವಿ ಮಾಡಿದ್ದಾರೆ. ಎಡಿಜಿಪಿ ಸೌಮೇಂದು ಮುಖರ್ಜಿ ನೇತೃತ್ವದಲ್ಲಿ ತನಿಖೆ ಮಾಡಿ, ವರದಿ ಕೊಡುವಂತೆ ಹೇಳಿದ್ದಾರೆ. ಆದರೆ, ಪತ್ರದಲ್ಲಿ ಸಿಡಿ ಬಗ್ಗೆ ಯಾವುದೇ ಉಲ್ಲೇಖ ಇಲ್ಲ ಎಂದು ಸಂಶಯ ವ್ಯಕ್ತಪಡಿಸಿದರು.

ಇದನ್ನೂ ಓದಿ: ಮೇಟಿಗೆ ಬೆಣ್ಣೆ ಕೊಟ್ಟು, ರಮೇಶ್ ಜಾರಕಿಹೊಳಿಗೆ ಸುಣ್ಣ ಯಾಕೆ?: ಸಚಿವ ಬಸವರಾಜ ಬೊಮ್ಮಾಯಿ ಪ್ರಶ್ನೆ

ಮಾಜಿ ಶಾಸಕ ನಾಗರಾಜ್ ಅವರಿಂದ ಮಾರ್ಚ್ 14 ರಂದು ಸದಾಶಿವನಗರ ಠಾಣೆಯಲ್ಲಿ ದೂರು ಕೊಡಿಸ್ತಾರೆ. ಆದರೆ, ಮಾ.13ನೇ ತಾರೀಖಿನಂದೇ ಸಂತ್ರಸ್ತೆ ವಿಡಿಯೋ ಮಾಡಿದ್ದಾಳೆ. ಕೆಲಸ ಕೇಳಿಕೊಂಡು ಬಂದಾಗ ನನ್ನನ್ನು ಬಳಸಿಕೊಂಡ್ರು ಅಂತ ಹೇಳಿದ್ದಾಳೆ. ಲೈಂಗಿಕ ದೌರ್ಜನ್ಯ ನಡೆಸಿರುವುದಾಗಿ ಹೇಳಿದ್ದಾಳೆ. ಹೀಗಾಗಿ ಇದು ಅತ್ಯಾಚಾರ ಪ್ರಕರಣದಡಿಯಲ್ಲಿ ಬರಲಿದೆ. ಪೊಲೀಸರು ಕೂಡಲೇ ಎಫ್ಐಆರ್ ದಾಖಲಿಸಿ ಕ್ರಮ ಕೈಗೊಳ್ಳಬೇಕಿತ್ತು. ಆದರೆ ದೂರು ದಾಖಲಿಸಿಕೊಂಡಿಲ್ಲ, ರಮೇಶ್ ಜಾರಕಿಹೊಳಿ ದೂರು ಮಾತ್ರ ದಾಖಲಿಸಿಕೊಂಡಿದ್ದಾರೆ. ಹಾಗಾಗಿ, ಅತ್ಯಾಚಾರ ಪ್ರಕರಣದಡಿ ದೂರು ದಾಖಲಿಸಿಕೊಳ್ಳಬೇಕು ಎಂದು ಆಗ್ರಹಿಸಿದರು.

ಇನ್ನು ಕರ್ನಾಟಕ ಇತಿಹಾಸದಲ್ಲಿ ಕೋರ್ಟ್​ಗೆ ಹೋಗಿ ತಡೆಯಾಜ್ಞೆ ತಂದಿದ್ದು ಇದೇ ಮೊದಲು. ಹಾಗಾಗಿ, ಆರು ಮಂದಿ ಮಂತ್ರಿಗಳ ಬಗ್ಗೆಯೂ ತನಿಖೆ ಆಗಬೇಕು. ಸಂಪೂರ್ಣ ಹಾಗೂ ಸ್ವತಂತ್ರ ತನಿಖೆ ಆಗಬೇಕು. ಹೀಗಾಗಿ, ಸಿಜೆ ನೇತೃತ್ವದಲ್ಲಿ ತನಿಖೆ ಮಾಡಿಸಬೇಕೆಂದು ಒತ್ತಾಯಿಸಿದರು.

ನಾಳೆಯೂ ಧರಣಿ : ಈ ಪ್ರಕರಣ ಗಂಭೀರವಾಗಿರುವುದರಿಂದ ಸದನದಲ್ಲಿ ನಾಳೆಯೂ ಧರಣಿ ಮುಂದುವರೆಸುತ್ತೇವೆ ಎಂದು ಸಿದ್ದರಾಮಯ್ಯ ಇದೇ ವೇಳೆ ಹೇಳಿದರು.

ETV Bharat Logo

Copyright © 2024 Ushodaya Enterprises Pvt. Ltd., All Rights Reserved.