ETV Bharat / bharat

ಆಡಳಿತ ನಡೆಸ್ತಿರುವುದು ನೆಹರು ಸರ್ಕಾರ ಅಲ್ಲ, ನರೇಂದ್ರ ಮೋದಿ: ಪ್ರಿಯಾಂಕಾ ವಾದ್ರಾ ವಾಗ್ದಾಳಿ

author img

By

Published : Apr 21, 2021, 3:56 PM IST

Updated : Apr 21, 2021, 4:37 PM IST

ದೇಶದಲ್ಲಿ ಆಡಳಿತ ನಡೆಸುತ್ತಿರುವುದು ನರೇಂದ್ರ ಮೋದಿ ಸರ್ಕಾರವೇ ಹೊರತು ನೆಹರು ಸರ್ಕಾರವಲ್ಲ ಎಂದು ಪ್ರಿಯಾಂಕಾ ಗಾಂಧಿ ಕೇಂದ್ರದ ವಿರುದ್ಧ ವಾಗ್ದಾಳಿ ನಡೆಸಿದ್ದಾರೆ.

Priyanka Gandhi
Priyanka Gandhi

ನವದೆಹಲಿ: ಮಹಾಮಾರಿ ಕೊರೊನಾ ಸಂದರ್ಭದಲ್ಲಿ ಜನರ ಬಗ್ಗೆ ಕೇಂದ್ರ ಸರ್ಕಾರ ಸೂಕ್ಷ್ಮತೆ ತೋರಿಸುತ್ತಿಲ್ಲವೆಂದು ಕಾಂಗ್ರೆಸ್​ ಮುಖಂಡ ಪ್ರಿಯಾಂಕಾ ಗಾಂಧಿ ವಾದ್ರಾ ವಾಗ್ದಾಳಿ ನಡೆಸಿದ್ದಾರೆ. ದೇಶದಲ್ಲಿ ಇದೀಗ ಆಡಳಿತ ನಡೆಸುತ್ತಿರುವುದು ನರೇಂದ್ರ ಮೋದಿ ಹೊರತು ಜವಾಹರಲಾಲ್​ ನೆಹರು ಅಲ್ಲ ಎಂದು ಅವರು ಹೇಳಿದ್ದಾರೆ.

ಮೋದಿ ವಿರುದ್ಧ ಪ್ರಿಯಾಂಕಾ ಗಾಂಧಿ ವಾಗ್ದಾಳಿ

ದೇಶದಲ್ಲಿ ಉಂಟಾಗಿರುವ ಲಸಿಕೆಗಳ ಕೊರತೆ ಮತ್ತು ಜೀವ ಉಳಿಸುವ ಕೋವಿಡ್​ ವಿರೋಧಿ ಡ್ರಗ್ಸ್​ ಔಷಧಗಳ ಬಗ್ಗೆ ಪ್ರತಿಕ್ರಿಯೆ ನೀಡಿರುವ ಪ್ರಿಯಾಂಕಾ ಗಾಂಧಿ, ವೈದ್ಯಕೀಯ ಉತ್ಪನ್ನಗಳ ರಫ್ತು ಕುರಿತು ಸರ್ಕಾರ ನೀತಿಗಳಲ್ಲಿ ಬದಲಾವಣೆ ಮಾಡಿಕೊಳ್ಳಬೇಕು ಎಂದರು.

ಇದನ್ನೂ ಓದಿ: ಮಹಾರಾಷ್ಟ್ರ ಆಸ್ಪತ್ರೆಯಲ್ಲಿ ಆಕ್ಸಿಜನ್​ ಸೋರಿಕೆ.. 22 ಜನರ ದುರ್ಮರಣ!

ಐದು ದಿನಗಳ ಹಿಂದೆಯೇ ರಫ್ತು ನಿಲ್ಲಿಸಲಾಗಿದೆ, ಏಕೆ? ಯಾರ ಮೇಲೆ ಆರೋಪ ಮಾಡಬಹುದು? ಜವಾಹರಲಾಲ್ ನೆಹರು ಆಡಳಿತ ದೇಶದಲ್ಲಿಲ್ಲ. ಇರುವುದು ನರೇಂದ್ರ ಮೋದಿ. ಈ ವಿಚಾರವಾಗಿ ದಿಟ್ಟ ಹೆಜ್ಜೆ ಇಡಬೇಕು ಎಂದು ಅವರು ತಿಳಿಸಿದ್ದಾರೆ. ಭಾರತದಲ್ಲಿ ಆಕ್ಸಿಜನ್ ಉತ್ಪಾದನೆ ವಿಶ್ವದಲ್ಲಿಯೇ ಬೃಹತ್ ಪ್ರಮಾಣದ್ದರೂ, ಕೊರತೆ ಉಂಟಾಗಲು ಕಾರಣವೇನು? ಜನವರಿಯಿಂದ ಮಾರ್ಚ್ ಮಧ್ಯೆ ಕೇಂದ್ರ ಸರ್ಕಾರ 6 ಕೋಟಿ ಲಸಿಕೆ ವಿದೇಶಕ್ಕೆ ರಫ್ತು ಮಾಡಿದೆ. ಈ ಸಮಯದಲ್ಲಿ 3ರಿಂದ 4 ಕೋಟಿ ಭಾರತೀಯರಿಗೆ ಲಸಿಕೆ ಹಾಕಲಾಗಿದೆ. ಭಾರತೀಯರಿಗೆ ಏಕೆ ಪ್ರಾಧಾನ್ಯತೆ ಕೊಡಲಿಲ್ಲ ಎಂದು ಪ್ರಶ್ನೆ ಮಾಡಿದ್ದಾರೆ.

ಕೋವಿಡ್​ ಸೋಂಕು ಉಲ್ಭಣವಾಗುತ್ತಿರುವ ಸಂದರ್ಭದಲ್ಲಿ ಕೇಂದ್ರ ಸಚಿವರು ಚುನಾವಣಾ ಪ್ರಚಾರ ನಡೆಸುವುದರಲ್ಲಿ ಬ್ಯುಸಿಯಾಗಿದ್ದು, ವೇದಿಕೆ ಮೇಲೆ ನಿಂತುಕೊಂಡು ವಿರೋಧ ಪಕ್ಷಗಳನ್ನ ಟೀಕೆ ಮಾಡ್ತಿದ್ದಾರೆ. ಇವರಿಗೆ ದೇಶದಲ್ಲಿ ಉಂಟಾಗಿರುವ ಆರೋಗ್ಯ ಸಮಸ್ಯೆ ಬಗ್ಗೆ ಗಾಂಭೀರ್ಯತೆ ಇಲ್ಲ ಎಂದಿದ್ದಾರೆ.

ನವದೆಹಲಿ: ಮಹಾಮಾರಿ ಕೊರೊನಾ ಸಂದರ್ಭದಲ್ಲಿ ಜನರ ಬಗ್ಗೆ ಕೇಂದ್ರ ಸರ್ಕಾರ ಸೂಕ್ಷ್ಮತೆ ತೋರಿಸುತ್ತಿಲ್ಲವೆಂದು ಕಾಂಗ್ರೆಸ್​ ಮುಖಂಡ ಪ್ರಿಯಾಂಕಾ ಗಾಂಧಿ ವಾದ್ರಾ ವಾಗ್ದಾಳಿ ನಡೆಸಿದ್ದಾರೆ. ದೇಶದಲ್ಲಿ ಇದೀಗ ಆಡಳಿತ ನಡೆಸುತ್ತಿರುವುದು ನರೇಂದ್ರ ಮೋದಿ ಹೊರತು ಜವಾಹರಲಾಲ್​ ನೆಹರು ಅಲ್ಲ ಎಂದು ಅವರು ಹೇಳಿದ್ದಾರೆ.

ಮೋದಿ ವಿರುದ್ಧ ಪ್ರಿಯಾಂಕಾ ಗಾಂಧಿ ವಾಗ್ದಾಳಿ

ದೇಶದಲ್ಲಿ ಉಂಟಾಗಿರುವ ಲಸಿಕೆಗಳ ಕೊರತೆ ಮತ್ತು ಜೀವ ಉಳಿಸುವ ಕೋವಿಡ್​ ವಿರೋಧಿ ಡ್ರಗ್ಸ್​ ಔಷಧಗಳ ಬಗ್ಗೆ ಪ್ರತಿಕ್ರಿಯೆ ನೀಡಿರುವ ಪ್ರಿಯಾಂಕಾ ಗಾಂಧಿ, ವೈದ್ಯಕೀಯ ಉತ್ಪನ್ನಗಳ ರಫ್ತು ಕುರಿತು ಸರ್ಕಾರ ನೀತಿಗಳಲ್ಲಿ ಬದಲಾವಣೆ ಮಾಡಿಕೊಳ್ಳಬೇಕು ಎಂದರು.

ಇದನ್ನೂ ಓದಿ: ಮಹಾರಾಷ್ಟ್ರ ಆಸ್ಪತ್ರೆಯಲ್ಲಿ ಆಕ್ಸಿಜನ್​ ಸೋರಿಕೆ.. 22 ಜನರ ದುರ್ಮರಣ!

ಐದು ದಿನಗಳ ಹಿಂದೆಯೇ ರಫ್ತು ನಿಲ್ಲಿಸಲಾಗಿದೆ, ಏಕೆ? ಯಾರ ಮೇಲೆ ಆರೋಪ ಮಾಡಬಹುದು? ಜವಾಹರಲಾಲ್ ನೆಹರು ಆಡಳಿತ ದೇಶದಲ್ಲಿಲ್ಲ. ಇರುವುದು ನರೇಂದ್ರ ಮೋದಿ. ಈ ವಿಚಾರವಾಗಿ ದಿಟ್ಟ ಹೆಜ್ಜೆ ಇಡಬೇಕು ಎಂದು ಅವರು ತಿಳಿಸಿದ್ದಾರೆ. ಭಾರತದಲ್ಲಿ ಆಕ್ಸಿಜನ್ ಉತ್ಪಾದನೆ ವಿಶ್ವದಲ್ಲಿಯೇ ಬೃಹತ್ ಪ್ರಮಾಣದ್ದರೂ, ಕೊರತೆ ಉಂಟಾಗಲು ಕಾರಣವೇನು? ಜನವರಿಯಿಂದ ಮಾರ್ಚ್ ಮಧ್ಯೆ ಕೇಂದ್ರ ಸರ್ಕಾರ 6 ಕೋಟಿ ಲಸಿಕೆ ವಿದೇಶಕ್ಕೆ ರಫ್ತು ಮಾಡಿದೆ. ಈ ಸಮಯದಲ್ಲಿ 3ರಿಂದ 4 ಕೋಟಿ ಭಾರತೀಯರಿಗೆ ಲಸಿಕೆ ಹಾಕಲಾಗಿದೆ. ಭಾರತೀಯರಿಗೆ ಏಕೆ ಪ್ರಾಧಾನ್ಯತೆ ಕೊಡಲಿಲ್ಲ ಎಂದು ಪ್ರಶ್ನೆ ಮಾಡಿದ್ದಾರೆ.

ಕೋವಿಡ್​ ಸೋಂಕು ಉಲ್ಭಣವಾಗುತ್ತಿರುವ ಸಂದರ್ಭದಲ್ಲಿ ಕೇಂದ್ರ ಸಚಿವರು ಚುನಾವಣಾ ಪ್ರಚಾರ ನಡೆಸುವುದರಲ್ಲಿ ಬ್ಯುಸಿಯಾಗಿದ್ದು, ವೇದಿಕೆ ಮೇಲೆ ನಿಂತುಕೊಂಡು ವಿರೋಧ ಪಕ್ಷಗಳನ್ನ ಟೀಕೆ ಮಾಡ್ತಿದ್ದಾರೆ. ಇವರಿಗೆ ದೇಶದಲ್ಲಿ ಉಂಟಾಗಿರುವ ಆರೋಗ್ಯ ಸಮಸ್ಯೆ ಬಗ್ಗೆ ಗಾಂಭೀರ್ಯತೆ ಇಲ್ಲ ಎಂದಿದ್ದಾರೆ.

Last Updated : Apr 21, 2021, 4:37 PM IST
ETV Bharat Logo

Copyright © 2024 Ushodaya Enterprises Pvt. Ltd., All Rights Reserved.