ETV Bharat / bharat

#JeeneDo: ಗೋವಾದಲ್ಲಿ ಅಪ್ರಾಪ್ತರ ಮೇಲೆ ಸಾಮೂಹಿಕ ಅತ್ಯಾಚಾರ ವಿಚಾರ.. ಗೋವಾ ಸಿಎಂ ಹೇಳಿಕೆ ವಿರುದ್ಧ ಅಭಿಯಾನ

author img

By

Published : Aug 2, 2021, 9:31 PM IST

ಗೋವಾದಲ್ಲಿ ಇಬ್ಬರು ಅಪ್ರಾಪ್ತ ವಯಸ್ಕರ ಮೇಲೆ ನಡೆದ ಸಾಮೂಹಿಕ ಅತ್ಯಾಚಾರದ ನಂತರ, ಮಹಿಳೆಯರ ಸುರಕ್ಷತೆಯ ಕುರಿತು ಕಳವಳ ವ್ಯಕ್ತವಾಗಿದೆ. ಜೊತೆಗೆ ಗೋವಾ ಮುಖ್ಯಮಂತ್ರಿ ಪ್ರಮೋದ್ ಸಾವಂತ್ ನೀಡಿದ ಹೇಳಿಕೆಗೆ ಇದೀಗ ವಿರೋಧ ವ್ಯಕ್ತವಾಗುತ್ತಿದೆ.

JeeneDo
JeeneDo

ಪಣಜಿ (ಗೋವಾ): ಗೋವಾದಲ್ಲಿ ಇಬ್ಬರು ಅಪ್ರಾಪ್ತ ವಯಸ್ಕರ ಮೇಲೆ ನಡೆದ ಸಾಮೂಹಿಕ ಅತ್ಯಾಚಾರದ ನಂತರ, ದೇಶದ ಅತ್ಯಂತ ಪ್ರಸಿದ್ಧ ಪ್ರವಾಸಿ ತಾಣವಾಗಿರುವ ಆ ರಾಜ್ಯದಲ್ಲಿ ಮಹಿಳೆಯರ ಸುರಕ್ಷತೆಯ ಕುರಿತು ಕಳವಳ ವ್ಯಕ್ತವಾಗಿದೆ. ಸಮಸ್ಯೆಯು ಭದ್ರತೆಗೆ ಸಂಬಂಧಿಸಿರುವುದರಿಂದ, ಸರ್ಕಾರವನ್ನು ಪ್ರಶ್ನಿಸಲಾಗುತ್ತಿದೆ. ಆದರೆ, ಗೋವಾ ಮುಖ್ಯಮಂತ್ರಿ ಪ್ರಮೋದ್ ಸಾವಂತ್ ನೀಡಿದ ಹೇಳಿಕೆಯು ಇದೀಗ ವಿವಾದಕ್ಕೆ ಎಡೆ ಮಾಡಿ ಕೊಟ್ಟಿದೆ.

ಕಳೆದ ಭಾನುವಾರ ಗೋವಾದ ಕಡಲತೀರದಲ್ಲಿ ಇಬ್ಬರು ಬಾಲಕಿಯರು ಸಾಮೂಹಿಕ ಅತ್ಯಾಚಾರಕ್ಕೊಳಗಾದರು. ಆದರೆ, ಅದರ ಬಗ್ಗೆ ಮುಖ್ಯಮಂತ್ರಿಯನ್ನು ಪ್ರಶ್ನಿಸಿದಾಗ ಅವರು ಹುಡುಗಿಯರು ಮತ್ತು ಅವರ ಕುಟುಂಬದವರನ್ನು ದೂಷಿಸಿದ್ದರು.

ಜೀನೆ ದೋ ಅಭಿಯಾನ

ಗೋವಾ ಮುಖ್ಯಮಂತ್ರಿ ಪ್ರಮೋದ್ ಸಾವಂತ್ ಹೇಳಿದ್ದೇನು?

ಗೋವಾ ಮುಖ್ಯಮಂತ್ರಿ ಪ್ರಮೋದ್ ಸಾವಂತ್ ಅವರು ಹುಡುಗಿಯರು ಇಷ್ಟು ದಿನ ಏಕೆ ಹೊರಗಿದ್ದರು ಮತ್ತು ಅವರ ಮಕ್ಕಳ ಸುರಕ್ಷತೆಯನ್ನು ಕಾಪಾಡುವುದು ಪೋಷಕರ ಜವಾಬ್ದಾರಿಯಾಗಿದೆ ಎಂದು ಹೇಳಿದ್ದರು. ಮುಖ್ಯಮಂತ್ರಿಯ ಈ ಹೇಳಿಕೆಯನ್ನು ರಾಜಕೀಯ ಪಕ್ಷಗಳಿಂದ ಹಿಡಿದು ಸಾಮಾಜಿಕ ಮಾಧ್ಯಮಗಳಲ್ಲಿ ಎಲ್ಲೆಡೆ ಖಂಡಿಸಲಾಗುತ್ತಿದೆ. ಗೋವಾ ಶಾಸಕಾಂಗ ಸಭೆಯಲ್ಲಿ ಮುಖ್ಯಮಂತ್ರಿ ಪ್ರಮೋದ್ ಸಾವಂತ್ ಈ ವಿಷಯದ ಬಗ್ಗೆ ಹೇಳಿಕೆ ನೀಡುತ್ತಾ, ರಾತ್ರಿ ವೇಳೆ ಹುಡುಗಿಯರು ಸಮುದ್ರತೀರದಲ್ಲಿ ನಡೆಯುತ್ತಿದ್ದರೆ, ಅವರ ಪೋಷಕರು ಆತ್ಮಾವಲೋಕನ ಮಾಡಿಕೊಳ್ಳಬೇಕು ಎಂದು ಹೇಳಿದ್ದರು.

ಪ್ರಶ್ನೆ ಎತ್ತಿದ ಪ್ರತಿಪಕ್ಷ, ಸಿಎಂ ರಾಜೀನಾಮೆಗೆ ಒತ್ತಾಯ:

ಪ್ರತಿಪಕ್ಷದವರು ಗೋವಾದ ಕಾನೂನು ಮತ್ತು ಸುವ್ಯವಸ್ಥೆ ಸಮಸ್ಯೆ ಹಾಗೂ ಮುಖ್ಯಮಂತ್ರಿಯ ಹೇಳಿಕೆ ಖಂಡಿಸಿ, ಅದನ್ನೇ ಅಸ್ತ್ರವಾಗಿ ಮಾಡಿಕೊಳ್ಳಲಾರಿಂಬಿಸಿದ್ದಾರೆ. ಕಾಂಗ್ರೆಸ್ ವಕ್ತಾರ ಎಲ್ಟನ್ ಡಿ'ಕೋಸ್ತಾ, ನಾವು ಹೊರಗೆ ಹೋಗಲು ಏಕೆ ಹೆದರಬೇಕು? ಗೋವಾದಲ್ಲಿ ಕಾನೂನು ಸುವ್ಯವಸ್ಥೆ ಉತ್ತಮವಾಗಿಲ್ಲ. ಕ್ರಿಮಿನಲ್‌ಗಳು ಜೈಲಿನಲ್ಲಿರಬೇಕು. ಇದರಿಂದ ಕಾನೂನು ಪಾಲಿಸುವ ಜನರು ಮುಕ್ತವಾಗಿ ಹೊರಗೆ ತಿರುಗಾಡಬಹುದು ಎಂದಿದ್ದಾರೆ.

ಗೋವಾ ಫಾರ್ವರ್ಡ್ ಪಕ್ಷದ ಶಾಸಕ ವಿಜಯ್ ಸರ್ದೇಸಾಯಿ, ಮುಖ್ಯಮಂತ್ರಿಯವರ ಹೇಳಿಕೆ ಪೂರ್ವಗ್ರಹ ಪೀಡಿತವಾಗಿದೆ. ನಾಗರಿಕರ ಸುರಕ್ಷತೆಯ ಜವಾಬ್ದಾರಿ ಪೊಲೀಸ್ ಮತ್ತು ರಾಜ್ಯ ಸರ್ಕಾರದ ಮೇಲಿದೆ. ಅವರು ನಮ್ಮನ್ನು ರಕ್ಷಿಸಲು ಸಾಧ್ಯವಾಗದಿದ್ದರೆ, ಮುಖ್ಯಮಂತ್ರಿ ಕುರ್ಚಿಯ ಮೇಲೆ ಕುಳಿತುಕೊಳ್ಳುವ ಯಾವುದೇ ನೈತಿಕ ಹಕ್ಕಿಲ್ಲ ಎಂದು ಹೇಳಿದ್ದಾರೆ.

ನಾವು ನೇರವಾಗಿ ಪೊಲೀಸರನ್ನು ದೂಷಿಸುತ್ತೇವೆ ಎಂದು ಸಿಎಂ ಪ್ರಮೋದ್ ಸಾವಂತ್ ಹೇಳಿದ್ದಾರೆ. 10 ಹುಡುಗಿಯರು ಬೀಚ್ ಪಾರ್ಟಿಗೆ ಹೋಗುತ್ತಾರೆ, ಅವರಲ್ಲಿ 4 ಜನರು ಸಮುದ್ರ ತೀರದಲ್ಲಿ ತಂಗುತ್ತಾರೆ ಮತ್ತು 6 ಹುಡುಗಿಯರು ಮನೆಗೆ ಮರಳುತ್ತಾರೆ. ಇಬ್ಬರು ಹುಡುಗರು ಮತ್ತು ಒಬ್ಬ ಹುಡುಗಿ ಸಮುದ್ರ ತೀರದಲ್ಲಿ ರಾತ್ರಿ ತಂಗಿದ್ದರು. ಮಕ್ಕಳು ಸಮುದ್ರತೀರದಲ್ಲಿ ಅಷ್ಟು ಹೊತ್ತು ಕಳೆಯಬಾರದು. ಪ್ರಕರಣದ ನಾಲ್ವರು ಆರೋಪಿಗಳನ್ನು ಬಂಧಿಸಲಾಗಿದೆ ಎಂದು ಸಾವಂತ್ ವಿಧಾನಸಭೆಗೆ ತಿಳಿಸಿದ್ದಾರೆ.

ಗೋವಾ ಮುಖ್ಯಮಂತ್ರಿ ಮತ್ತು ರಾಜ್ಯದ ಕಾನೂನು ಸುವ್ಯವಸ್ಥೆ ವಿರುದ್ಧ ಪ್ರಶ್ನೆಗಳ ಸುರಿಮಳೆ:

ಗೋವಾದ ಬೆನೌಲಿಮ್ ಕಡಲತೀರದಲ್ಲಿ ಇಬ್ಬರು ಬಾಲಕಿಯರ ಮೇಲೆ ಸಾಮೂಹಿಕ ಅತ್ಯಾಚಾರ ಮತ್ತು ಅದರ ಬಳಿಕ ಮುಖ್ಯಮಂತ್ರಿಯ ಹೇಳಿಕೆಯನ್ನು ಎಲ್ಲೆಡೆ ವಿರೋಧಿಸಲಾಗುತ್ತಿದೆ. ಗೋವಾ ಮಹಿಳಾ ಕಾಂಗ್ರೆಸ್ ಶುಕ್ರವಾರ ಮುಖ್ಯಮಂತ್ರಿ ನಿವಾಸದ ಮುಂದೆ ಪ್ರತಿಭಟನೆ ಮುಖ್ಯಮಂತ್ರಿ ರಾಜೀನಾಮೆಗೆ ಒತ್ತಾಯಿಸಿತು. ಗೋವಾ ಮಹಿಳಾ ಕಾಂಗ್ರೆಸ್ ಅಧ್ಯಕ್ಷೆ ಬೀನಾ ನಾಯಕ್, ಗೋವಾ ಶಾಂತಿಪ್ರಿಯ ರಾಜ್ಯವಾಗಿದೆ.

ಆದರೆ, ರಾಜ್ಯದಲ್ಲಿ ಬಿಜೆಪಿ ಸರ್ಕಾರ ರಚನೆಯಾದಾಗಿನಿಂದ ಗೋವಾದಲ್ಲಿ ಭಯದ ವಾತಾವರಣವಿದೆ. ರಾಜ್ಯದಲ್ಲಿ ಅಪರಾಧಿಗಳು ನಿರ್ಭೀತರಾಗಿದ್ದು, ಮಹಿಳೆಯರ ವಿರುದ್ಧದ ಕೊಲೆಗಳು ಸೇರಿದಂತೆ ಗಂಭೀರ ಅಪರಾಧಗಳನ್ನು ನಿಯಂತ್ರಿಸಲಾಗುತ್ತಿಲ್ಲ ಎಂದರು. ಆಮ್ ಆದ್ಮಿ ಪಕ್ಷದ ನಾಯಕಿ ಅನುರಾಧಾ ಗವಾಡೆ, ಗೋವಾದಲ್ಲಿ ಒಂದು ವಾರದಲ್ಲಿ ಸರಾಸರಿ 4 ಮಹಿಳೆಯರ ವಿರುದ್ಧ ಅಪರಾಧ ಪ್ರಕರಣಗಳು ವರದಿಯಾಗುತ್ತಿವೆ. ಗೋವಾದಲ್ಲಿ ಮಹಿಳೆಯರು ಸುರಕ್ಷಿತವಾಗಿದ್ದಾರೆಯೇ ಎಂದು ಪ್ರಶ್ನಿಸಿದ್ದಾರೆ.

ಕೆಲಸಕ್ಕೆ ಹೋಗುವ ಮಹಿಳೆಯರಿಂದಲೂ ಪ್ರಶ್ನೆ:

ಕೆಲಸ ಮಾಡುವ ಮಹಿಳೆಯರು ಕೂಡ ಗೋವಾದ ಕಾನೂನು ಮತ್ತು ಸುವ್ಯವಸ್ಥೆ ಹಾಗೂ ಮುಖ್ಯಮಂತ್ರಿಯ ಹೇಳಿಕೆಗೆ ಸಂಬಂಧಿಸಿದಂತೆ ಪ್ರಶ್ನೆಗಳನ್ನು ಎತ್ತಿದ್ದಾರೆ. ಗೋವಾದ ಪ್ರತಿಭಾ ಬೋರ್ಕರ್ ಮುಖ್ಯಮಂತ್ರಿಯವರ ಹೇಳಿಕೆಯನ್ನು ಖಂಡಿಸಿದರು ಮತ್ತು ಗೃಹ ಸಚಿವರಾಗಿ ಗೋವಾದಲ್ಲಿ ಕಾನೂನು ಮತ್ತು ಸುವ್ಯವಸ್ಥೆಯ ಜವಾಬ್ದಾರಿ ಮುಖ್ಯಮಂತ್ರಿಯದ್ದಾಗಿದೆ. ಇದು ಅವರ ನೈತಿಕ ಹೊಣೆಗಾರಿಕೆ ಎಂದು ಆಕ್ರೋಶ ಹೊರಹಾಕಿದ್ದಾರೆ.

ಗೋವಾದ ಕೆಲಸದ ಮಹಿಳೆಯರು ತಮ್ಮ ಭದ್ರತೆಯ ಬಗ್ಗೆ ಪ್ರಶ್ನೆಗಳನ್ನು ಕೇಳುತ್ತಿದ್ದಾರೆ. ಇಂದಿನ ಯುಗದಲ್ಲಿ ಮಹಿಳೆಯರು ಏನು ಬೇಕಾದರೂ ಧರಿಸಬಹುದು ಮತ್ತು ಎಲ್ಲಿಯಾದರೂ ತಿರುಗಾಡಬಹುದು, ಇಂದು ಅನೇಕ ಮಹಿಳೆಯರು ಉದ್ಯೋಗ ಅಥವಾ ಯಾವುದೇ ವೃತ್ತಿಗೆ ಸಂಬಂಧಿಸಿರುವುದರಿಂದ ಅವರು ಮನೆಯಿಂದ ಹೊರಗೆ ಹೋಗಬೇಕು ಎಂದು ಮುಖ್ಯಮಂತ್ರಿಯ ಹೇಳಿಕೆಯನ್ನು ತಿರಸ್ಕರಿಸಿದರು.

ಗೋವಾದ ಪ್ರವಾಸಿಗರು ಏನು ಹೇಳುತ್ತಾರೆ?

ಗೋವಾ ಭಾರತದ ನೆಚ್ಚಿನ ಪ್ರವಾಸಿ ತಾಣಗಳಲ್ಲಿ ಒಂದಾಗಿದೆ. ಹೆಚ್ಚಿನ ಪ್ರವಾಸಿಗರು ಪ್ರತಿ ವರ್ಷ ಭಾರತದಿಂದ ಮಾತ್ರವಲ್ಲದೇ ವಿದೇಶದಿಂದಲೂ ಇಲ್ಲಿಗೆ ಆಗಮಿಸುತ್ತಾರೆ. ಇದರಲ್ಲಿ ಗಮನಾರ್ಹ ಸಂಖ್ಯೆಯ ಮಹಿಳೆಯರು ಕೂಡ ಇದ್ದಾರೆ. ಗೋವಾ ಸಮುದ್ರ ತೀರದಲ್ಲಿ ಅಪ್ರಾಪ್ತ ಬಾಲಕಿಯರ ಮೇಲೆ ನಡೆದ ಸಾಮೂಹಿಕ ಅತ್ಯಾಚಾರ ಮತ್ತು ನಂತರ ಮುಖ್ಯಮಂತ್ರಿಯ ಹೇಳಿಕೆಯ ಕುರಿತು ಪ್ರವಾಸಿಗರು ವಿರೋಧ ವ್ಯಕ್ತಪಡಿಸಿದ್ದಾರೆ.

ಗೋವಾಕ್ಕೆ ಆಗಮಿಸುವ ಪ್ರವಾಸಿಗರು ಸುರಕ್ಷತೆಯನ್ನು ದೊಡ್ಡ ಸಮಸ್ಯೆಯೆಂದು ಪರಿಗಣಿಸುತ್ತಾರೆ. ಅವರ ಪ್ರಕಾರ, ಕಾನೂನು ಸುವ್ಯವಸ್ಥೆ ಕಾಪಾಡುವುದು ರಾಜ್ಯ ಸರ್ಕಾರ ಮತ್ತು ಪೊಲೀಸರ ಜವಾಬ್ದಾರಿ. ಕಾನೂನು ಸುವ್ಯವಸ್ಥೆ ಉತ್ತಮವಾಗಿದ್ದರೆ, ಮಹಿಳೆಯರ ಮೇಲಿನ ಅಪರಾಧಗಳನ್ನು ತಡೆಯಲು ಹಾಗೂ ಗೋವಾ ತಲುಪುವ ಪ್ರವಾಸಿಗರು ಭಯವಿಲ್ಲದೆ ತಿರುಗಾಡಲು ಸಾಧ್ಯವಾಗುತ್ತದೆ.

ಪಣಜಿ (ಗೋವಾ): ಗೋವಾದಲ್ಲಿ ಇಬ್ಬರು ಅಪ್ರಾಪ್ತ ವಯಸ್ಕರ ಮೇಲೆ ನಡೆದ ಸಾಮೂಹಿಕ ಅತ್ಯಾಚಾರದ ನಂತರ, ದೇಶದ ಅತ್ಯಂತ ಪ್ರಸಿದ್ಧ ಪ್ರವಾಸಿ ತಾಣವಾಗಿರುವ ಆ ರಾಜ್ಯದಲ್ಲಿ ಮಹಿಳೆಯರ ಸುರಕ್ಷತೆಯ ಕುರಿತು ಕಳವಳ ವ್ಯಕ್ತವಾಗಿದೆ. ಸಮಸ್ಯೆಯು ಭದ್ರತೆಗೆ ಸಂಬಂಧಿಸಿರುವುದರಿಂದ, ಸರ್ಕಾರವನ್ನು ಪ್ರಶ್ನಿಸಲಾಗುತ್ತಿದೆ. ಆದರೆ, ಗೋವಾ ಮುಖ್ಯಮಂತ್ರಿ ಪ್ರಮೋದ್ ಸಾವಂತ್ ನೀಡಿದ ಹೇಳಿಕೆಯು ಇದೀಗ ವಿವಾದಕ್ಕೆ ಎಡೆ ಮಾಡಿ ಕೊಟ್ಟಿದೆ.

ಕಳೆದ ಭಾನುವಾರ ಗೋವಾದ ಕಡಲತೀರದಲ್ಲಿ ಇಬ್ಬರು ಬಾಲಕಿಯರು ಸಾಮೂಹಿಕ ಅತ್ಯಾಚಾರಕ್ಕೊಳಗಾದರು. ಆದರೆ, ಅದರ ಬಗ್ಗೆ ಮುಖ್ಯಮಂತ್ರಿಯನ್ನು ಪ್ರಶ್ನಿಸಿದಾಗ ಅವರು ಹುಡುಗಿಯರು ಮತ್ತು ಅವರ ಕುಟುಂಬದವರನ್ನು ದೂಷಿಸಿದ್ದರು.

ಜೀನೆ ದೋ ಅಭಿಯಾನ

ಗೋವಾ ಮುಖ್ಯಮಂತ್ರಿ ಪ್ರಮೋದ್ ಸಾವಂತ್ ಹೇಳಿದ್ದೇನು?

ಗೋವಾ ಮುಖ್ಯಮಂತ್ರಿ ಪ್ರಮೋದ್ ಸಾವಂತ್ ಅವರು ಹುಡುಗಿಯರು ಇಷ್ಟು ದಿನ ಏಕೆ ಹೊರಗಿದ್ದರು ಮತ್ತು ಅವರ ಮಕ್ಕಳ ಸುರಕ್ಷತೆಯನ್ನು ಕಾಪಾಡುವುದು ಪೋಷಕರ ಜವಾಬ್ದಾರಿಯಾಗಿದೆ ಎಂದು ಹೇಳಿದ್ದರು. ಮುಖ್ಯಮಂತ್ರಿಯ ಈ ಹೇಳಿಕೆಯನ್ನು ರಾಜಕೀಯ ಪಕ್ಷಗಳಿಂದ ಹಿಡಿದು ಸಾಮಾಜಿಕ ಮಾಧ್ಯಮಗಳಲ್ಲಿ ಎಲ್ಲೆಡೆ ಖಂಡಿಸಲಾಗುತ್ತಿದೆ. ಗೋವಾ ಶಾಸಕಾಂಗ ಸಭೆಯಲ್ಲಿ ಮುಖ್ಯಮಂತ್ರಿ ಪ್ರಮೋದ್ ಸಾವಂತ್ ಈ ವಿಷಯದ ಬಗ್ಗೆ ಹೇಳಿಕೆ ನೀಡುತ್ತಾ, ರಾತ್ರಿ ವೇಳೆ ಹುಡುಗಿಯರು ಸಮುದ್ರತೀರದಲ್ಲಿ ನಡೆಯುತ್ತಿದ್ದರೆ, ಅವರ ಪೋಷಕರು ಆತ್ಮಾವಲೋಕನ ಮಾಡಿಕೊಳ್ಳಬೇಕು ಎಂದು ಹೇಳಿದ್ದರು.

ಪ್ರಶ್ನೆ ಎತ್ತಿದ ಪ್ರತಿಪಕ್ಷ, ಸಿಎಂ ರಾಜೀನಾಮೆಗೆ ಒತ್ತಾಯ:

ಪ್ರತಿಪಕ್ಷದವರು ಗೋವಾದ ಕಾನೂನು ಮತ್ತು ಸುವ್ಯವಸ್ಥೆ ಸಮಸ್ಯೆ ಹಾಗೂ ಮುಖ್ಯಮಂತ್ರಿಯ ಹೇಳಿಕೆ ಖಂಡಿಸಿ, ಅದನ್ನೇ ಅಸ್ತ್ರವಾಗಿ ಮಾಡಿಕೊಳ್ಳಲಾರಿಂಬಿಸಿದ್ದಾರೆ. ಕಾಂಗ್ರೆಸ್ ವಕ್ತಾರ ಎಲ್ಟನ್ ಡಿ'ಕೋಸ್ತಾ, ನಾವು ಹೊರಗೆ ಹೋಗಲು ಏಕೆ ಹೆದರಬೇಕು? ಗೋವಾದಲ್ಲಿ ಕಾನೂನು ಸುವ್ಯವಸ್ಥೆ ಉತ್ತಮವಾಗಿಲ್ಲ. ಕ್ರಿಮಿನಲ್‌ಗಳು ಜೈಲಿನಲ್ಲಿರಬೇಕು. ಇದರಿಂದ ಕಾನೂನು ಪಾಲಿಸುವ ಜನರು ಮುಕ್ತವಾಗಿ ಹೊರಗೆ ತಿರುಗಾಡಬಹುದು ಎಂದಿದ್ದಾರೆ.

ಗೋವಾ ಫಾರ್ವರ್ಡ್ ಪಕ್ಷದ ಶಾಸಕ ವಿಜಯ್ ಸರ್ದೇಸಾಯಿ, ಮುಖ್ಯಮಂತ್ರಿಯವರ ಹೇಳಿಕೆ ಪೂರ್ವಗ್ರಹ ಪೀಡಿತವಾಗಿದೆ. ನಾಗರಿಕರ ಸುರಕ್ಷತೆಯ ಜವಾಬ್ದಾರಿ ಪೊಲೀಸ್ ಮತ್ತು ರಾಜ್ಯ ಸರ್ಕಾರದ ಮೇಲಿದೆ. ಅವರು ನಮ್ಮನ್ನು ರಕ್ಷಿಸಲು ಸಾಧ್ಯವಾಗದಿದ್ದರೆ, ಮುಖ್ಯಮಂತ್ರಿ ಕುರ್ಚಿಯ ಮೇಲೆ ಕುಳಿತುಕೊಳ್ಳುವ ಯಾವುದೇ ನೈತಿಕ ಹಕ್ಕಿಲ್ಲ ಎಂದು ಹೇಳಿದ್ದಾರೆ.

ನಾವು ನೇರವಾಗಿ ಪೊಲೀಸರನ್ನು ದೂಷಿಸುತ್ತೇವೆ ಎಂದು ಸಿಎಂ ಪ್ರಮೋದ್ ಸಾವಂತ್ ಹೇಳಿದ್ದಾರೆ. 10 ಹುಡುಗಿಯರು ಬೀಚ್ ಪಾರ್ಟಿಗೆ ಹೋಗುತ್ತಾರೆ, ಅವರಲ್ಲಿ 4 ಜನರು ಸಮುದ್ರ ತೀರದಲ್ಲಿ ತಂಗುತ್ತಾರೆ ಮತ್ತು 6 ಹುಡುಗಿಯರು ಮನೆಗೆ ಮರಳುತ್ತಾರೆ. ಇಬ್ಬರು ಹುಡುಗರು ಮತ್ತು ಒಬ್ಬ ಹುಡುಗಿ ಸಮುದ್ರ ತೀರದಲ್ಲಿ ರಾತ್ರಿ ತಂಗಿದ್ದರು. ಮಕ್ಕಳು ಸಮುದ್ರತೀರದಲ್ಲಿ ಅಷ್ಟು ಹೊತ್ತು ಕಳೆಯಬಾರದು. ಪ್ರಕರಣದ ನಾಲ್ವರು ಆರೋಪಿಗಳನ್ನು ಬಂಧಿಸಲಾಗಿದೆ ಎಂದು ಸಾವಂತ್ ವಿಧಾನಸಭೆಗೆ ತಿಳಿಸಿದ್ದಾರೆ.

ಗೋವಾ ಮುಖ್ಯಮಂತ್ರಿ ಮತ್ತು ರಾಜ್ಯದ ಕಾನೂನು ಸುವ್ಯವಸ್ಥೆ ವಿರುದ್ಧ ಪ್ರಶ್ನೆಗಳ ಸುರಿಮಳೆ:

ಗೋವಾದ ಬೆನೌಲಿಮ್ ಕಡಲತೀರದಲ್ಲಿ ಇಬ್ಬರು ಬಾಲಕಿಯರ ಮೇಲೆ ಸಾಮೂಹಿಕ ಅತ್ಯಾಚಾರ ಮತ್ತು ಅದರ ಬಳಿಕ ಮುಖ್ಯಮಂತ್ರಿಯ ಹೇಳಿಕೆಯನ್ನು ಎಲ್ಲೆಡೆ ವಿರೋಧಿಸಲಾಗುತ್ತಿದೆ. ಗೋವಾ ಮಹಿಳಾ ಕಾಂಗ್ರೆಸ್ ಶುಕ್ರವಾರ ಮುಖ್ಯಮಂತ್ರಿ ನಿವಾಸದ ಮುಂದೆ ಪ್ರತಿಭಟನೆ ಮುಖ್ಯಮಂತ್ರಿ ರಾಜೀನಾಮೆಗೆ ಒತ್ತಾಯಿಸಿತು. ಗೋವಾ ಮಹಿಳಾ ಕಾಂಗ್ರೆಸ್ ಅಧ್ಯಕ್ಷೆ ಬೀನಾ ನಾಯಕ್, ಗೋವಾ ಶಾಂತಿಪ್ರಿಯ ರಾಜ್ಯವಾಗಿದೆ.

ಆದರೆ, ರಾಜ್ಯದಲ್ಲಿ ಬಿಜೆಪಿ ಸರ್ಕಾರ ರಚನೆಯಾದಾಗಿನಿಂದ ಗೋವಾದಲ್ಲಿ ಭಯದ ವಾತಾವರಣವಿದೆ. ರಾಜ್ಯದಲ್ಲಿ ಅಪರಾಧಿಗಳು ನಿರ್ಭೀತರಾಗಿದ್ದು, ಮಹಿಳೆಯರ ವಿರುದ್ಧದ ಕೊಲೆಗಳು ಸೇರಿದಂತೆ ಗಂಭೀರ ಅಪರಾಧಗಳನ್ನು ನಿಯಂತ್ರಿಸಲಾಗುತ್ತಿಲ್ಲ ಎಂದರು. ಆಮ್ ಆದ್ಮಿ ಪಕ್ಷದ ನಾಯಕಿ ಅನುರಾಧಾ ಗವಾಡೆ, ಗೋವಾದಲ್ಲಿ ಒಂದು ವಾರದಲ್ಲಿ ಸರಾಸರಿ 4 ಮಹಿಳೆಯರ ವಿರುದ್ಧ ಅಪರಾಧ ಪ್ರಕರಣಗಳು ವರದಿಯಾಗುತ್ತಿವೆ. ಗೋವಾದಲ್ಲಿ ಮಹಿಳೆಯರು ಸುರಕ್ಷಿತವಾಗಿದ್ದಾರೆಯೇ ಎಂದು ಪ್ರಶ್ನಿಸಿದ್ದಾರೆ.

ಕೆಲಸಕ್ಕೆ ಹೋಗುವ ಮಹಿಳೆಯರಿಂದಲೂ ಪ್ರಶ್ನೆ:

ಕೆಲಸ ಮಾಡುವ ಮಹಿಳೆಯರು ಕೂಡ ಗೋವಾದ ಕಾನೂನು ಮತ್ತು ಸುವ್ಯವಸ್ಥೆ ಹಾಗೂ ಮುಖ್ಯಮಂತ್ರಿಯ ಹೇಳಿಕೆಗೆ ಸಂಬಂಧಿಸಿದಂತೆ ಪ್ರಶ್ನೆಗಳನ್ನು ಎತ್ತಿದ್ದಾರೆ. ಗೋವಾದ ಪ್ರತಿಭಾ ಬೋರ್ಕರ್ ಮುಖ್ಯಮಂತ್ರಿಯವರ ಹೇಳಿಕೆಯನ್ನು ಖಂಡಿಸಿದರು ಮತ್ತು ಗೃಹ ಸಚಿವರಾಗಿ ಗೋವಾದಲ್ಲಿ ಕಾನೂನು ಮತ್ತು ಸುವ್ಯವಸ್ಥೆಯ ಜವಾಬ್ದಾರಿ ಮುಖ್ಯಮಂತ್ರಿಯದ್ದಾಗಿದೆ. ಇದು ಅವರ ನೈತಿಕ ಹೊಣೆಗಾರಿಕೆ ಎಂದು ಆಕ್ರೋಶ ಹೊರಹಾಕಿದ್ದಾರೆ.

ಗೋವಾದ ಕೆಲಸದ ಮಹಿಳೆಯರು ತಮ್ಮ ಭದ್ರತೆಯ ಬಗ್ಗೆ ಪ್ರಶ್ನೆಗಳನ್ನು ಕೇಳುತ್ತಿದ್ದಾರೆ. ಇಂದಿನ ಯುಗದಲ್ಲಿ ಮಹಿಳೆಯರು ಏನು ಬೇಕಾದರೂ ಧರಿಸಬಹುದು ಮತ್ತು ಎಲ್ಲಿಯಾದರೂ ತಿರುಗಾಡಬಹುದು, ಇಂದು ಅನೇಕ ಮಹಿಳೆಯರು ಉದ್ಯೋಗ ಅಥವಾ ಯಾವುದೇ ವೃತ್ತಿಗೆ ಸಂಬಂಧಿಸಿರುವುದರಿಂದ ಅವರು ಮನೆಯಿಂದ ಹೊರಗೆ ಹೋಗಬೇಕು ಎಂದು ಮುಖ್ಯಮಂತ್ರಿಯ ಹೇಳಿಕೆಯನ್ನು ತಿರಸ್ಕರಿಸಿದರು.

ಗೋವಾದ ಪ್ರವಾಸಿಗರು ಏನು ಹೇಳುತ್ತಾರೆ?

ಗೋವಾ ಭಾರತದ ನೆಚ್ಚಿನ ಪ್ರವಾಸಿ ತಾಣಗಳಲ್ಲಿ ಒಂದಾಗಿದೆ. ಹೆಚ್ಚಿನ ಪ್ರವಾಸಿಗರು ಪ್ರತಿ ವರ್ಷ ಭಾರತದಿಂದ ಮಾತ್ರವಲ್ಲದೇ ವಿದೇಶದಿಂದಲೂ ಇಲ್ಲಿಗೆ ಆಗಮಿಸುತ್ತಾರೆ. ಇದರಲ್ಲಿ ಗಮನಾರ್ಹ ಸಂಖ್ಯೆಯ ಮಹಿಳೆಯರು ಕೂಡ ಇದ್ದಾರೆ. ಗೋವಾ ಸಮುದ್ರ ತೀರದಲ್ಲಿ ಅಪ್ರಾಪ್ತ ಬಾಲಕಿಯರ ಮೇಲೆ ನಡೆದ ಸಾಮೂಹಿಕ ಅತ್ಯಾಚಾರ ಮತ್ತು ನಂತರ ಮುಖ್ಯಮಂತ್ರಿಯ ಹೇಳಿಕೆಯ ಕುರಿತು ಪ್ರವಾಸಿಗರು ವಿರೋಧ ವ್ಯಕ್ತಪಡಿಸಿದ್ದಾರೆ.

ಗೋವಾಕ್ಕೆ ಆಗಮಿಸುವ ಪ್ರವಾಸಿಗರು ಸುರಕ್ಷತೆಯನ್ನು ದೊಡ್ಡ ಸಮಸ್ಯೆಯೆಂದು ಪರಿಗಣಿಸುತ್ತಾರೆ. ಅವರ ಪ್ರಕಾರ, ಕಾನೂನು ಸುವ್ಯವಸ್ಥೆ ಕಾಪಾಡುವುದು ರಾಜ್ಯ ಸರ್ಕಾರ ಮತ್ತು ಪೊಲೀಸರ ಜವಾಬ್ದಾರಿ. ಕಾನೂನು ಸುವ್ಯವಸ್ಥೆ ಉತ್ತಮವಾಗಿದ್ದರೆ, ಮಹಿಳೆಯರ ಮೇಲಿನ ಅಪರಾಧಗಳನ್ನು ತಡೆಯಲು ಹಾಗೂ ಗೋವಾ ತಲುಪುವ ಪ್ರವಾಸಿಗರು ಭಯವಿಲ್ಲದೆ ತಿರುಗಾಡಲು ಸಾಧ್ಯವಾಗುತ್ತದೆ.

ETV Bharat Logo

Copyright © 2024 Ushodaya Enterprises Pvt. Ltd., All Rights Reserved.