ETV Bharat / bharat

ಏ. 22ರಿಂದ 29ರವರೆಗೆ ಜಾರ್ಖಂಡ್​​ನಲ್ಲಿ ಲಾಕ್​ಡೌನ್​: ಸಿಎಂ ಮಹತ್ವದ ಘೋಷಣೆ

author img

By

Published : Apr 20, 2021, 4:02 PM IST

ಜಾರ್ಖಂಡ್​ನಲ್ಲಿ ಸದ್ಯ 30,477 ಸಕ್ರಿಯ ಪ್ರಕರಣಗಳಿದ್ದು, ಕಳೆದ 24 ಗಂಟೆಯಲ್ಲಿ 2,467 ಕೋವಿಡ್​ ಕೇಸ್ ದಾಖಲಾಗಿವೆ.

Jharkhand government
Jharkhand government

ರಾಂಚಿ: ಕಳೆದ ಕೆಲ ದಿನಗಳಿಂದ ಎರಡನೇ ಹಂತದ ಕೋವಿಡ್ ಅಲೆ ಹೆಚ್ಚಾಗುತ್ತಿರುವ ಕಾರಣ ಜಾರ್ಖಂಡ್​​ನಲ್ಲಿ 8 ದಿನಗಳ ಕಾಲ ಲಾಕ್​ಡೌನ್​ ಘೋಷಣೆ ಮಾಡಲಾಗಿದೆ. ಏಪ್ರಿಲ್​ 22ರಿಂದ 29ರವರೆಗೆ ಲಾಕ್​ಡೌನ್ ಜಾರಿಯಲ್ಲಿರಲಿದೆ.

  • राज्य में बढ़ते कोरोना संक्रमण की Chain को तोड़ना नितांत आवश्यक है। इसलिए राज्य में 'स्वास्थ्य सुरक्षा सप्ताह' हेतु निर्णय लिया गया है। यह 22 अप्रैल सुबह 6 बजे से 29 अप्रैल सुबह 6 बजे तक लागू होगा। आप सभी से अपील है कृपया नियमों का कड़ाई से पालन करें।

    सर्तक रहें, सुरक्षित रहें। pic.twitter.com/jMBGQ35SU5

    — Hemant Soren (@HemantSorenJMM) April 20, 2021 " class="align-text-top noRightClick twitterSection" data=" ">

ಇದಕ್ಕೆ ಸಂಬಂಧಿಸಿದಂತೆ ಮುಖ್ಯಮಂತ್ರಿ ಹೇಮಂತ್ ಸೊರೆನ್​ ಈ ಆದೇಶ ಹೊರಹಾಕಿದ್ದು, ಟ್ವೀಟರ್​ನಲ್ಲಿ ಮಾಹಿತಿ ಶೇರ್​ ಮಾಡಿಕೊಂಡಿದ್ದಾರೆ. ಅಲ್ಲಿನ ಸಚಿವರು ಹಾಗೂ ಅಧಿಕಾರಿಗಳೊಂದಿಗೆ ಮಹತ್ವದ ಸಭೆ ನಡೆಸಿದ ಬಳಿಕ ಈ ನಿರ್ಧಾರ ಕೈಗೊಳ್ಳಲಾಗಿದ್ದು, ಏಪ್ರಿಲ್​. 22ರ ಬೆಳಗ್ಗೆ 6 ಗಂಟೆಯಿಂದ ಏಪ್ರಿಲ್​ 29ರವರೆಗೆ ಬೆಳಗ್ಗೆ 6 ಗಂಟೆವರೆಗೆ ಈ ಲಾಕ್​ಡೌನ್​ ಜಾರಿಯಲ್ಲಿರುತ್ತದೆ.

ಲಾಕ್​ಡೌನ್ ಜಾರಿಗೊಂಡಿರುವ ಕಾರಣ ಜಾರ್ಖಂಡ್​ನಲ್ಲಿ ಎಲ್ಲ ಪರೀಕ್ಷೆ ಮುಂದೂಡಿಕೆ ಮಾಡಿ ಮಹತ್ವದ ಆದೇಶ ಹೊರಹಾಕಲಾಗಿದೆ. ಮದುವೆಯಲ್ಲಿ ಕೇವಲ 50 ಜನರು ಭಾಗಿಯಾಗಲು ಅವಕಾಶ ನೀಡಲಾಗಿದ್ದು, ಕಟ್ಟುನಿಟ್ಟಿನ ನಿಯಮ ಜಾರಿಗೊಳಿಸಲಾಗಿದೆ.

ಇದನ್ನೂ ಓದಿ: ಎಐಸಿಸಿ ಮಾಜಿ ಅಧ್ಯಕ್ಷ ರಾಹುಲ್ ಗಾಂಧಿಗೂ ಕೊರೊನಾ ಸೋಂಕು ದೃಢ

ಈಗಾಗಲೇ ರಾಷ್ಟ್ರ ರಾಜಧಾನಿ ದೆಹಲಿಯಲ್ಲೂ ಒಂದು ವಾರಗಳ ಕಾಲ ಲಾಕ್​ಡೌನ್​ ಘೋಷಣೆ ಮಾಡಲಾಗಿದ್ದು, ಕೆಲವೊಂದು ರಾಜ್ಯಗಳಲ್ಲಿ ನೈಟ್ ಕರ್ಫ್ಯೂ ಜಾರಿಗೊಂಡಿವೆ. ಮಹಾರಾಷ್ಟ್ರದಲ್ಲಿ ಸೆಕ್ಷನ್​ 144 ಜಾರಿಯಲ್ಲಿದ್ದು, ಇಂದಿನಿಂದ ಮತ್ತಷ್ಟು ಕಠಿಣ ನಿಯಮ ಜಾರಿಗೊಂಡಿವೆ.

ರಾಂಚಿ: ಕಳೆದ ಕೆಲ ದಿನಗಳಿಂದ ಎರಡನೇ ಹಂತದ ಕೋವಿಡ್ ಅಲೆ ಹೆಚ್ಚಾಗುತ್ತಿರುವ ಕಾರಣ ಜಾರ್ಖಂಡ್​​ನಲ್ಲಿ 8 ದಿನಗಳ ಕಾಲ ಲಾಕ್​ಡೌನ್​ ಘೋಷಣೆ ಮಾಡಲಾಗಿದೆ. ಏಪ್ರಿಲ್​ 22ರಿಂದ 29ರವರೆಗೆ ಲಾಕ್​ಡೌನ್ ಜಾರಿಯಲ್ಲಿರಲಿದೆ.

  • राज्य में बढ़ते कोरोना संक्रमण की Chain को तोड़ना नितांत आवश्यक है। इसलिए राज्य में 'स्वास्थ्य सुरक्षा सप्ताह' हेतु निर्णय लिया गया है। यह 22 अप्रैल सुबह 6 बजे से 29 अप्रैल सुबह 6 बजे तक लागू होगा। आप सभी से अपील है कृपया नियमों का कड़ाई से पालन करें।

    सर्तक रहें, सुरक्षित रहें। pic.twitter.com/jMBGQ35SU5

    — Hemant Soren (@HemantSorenJMM) April 20, 2021 " class="align-text-top noRightClick twitterSection" data=" ">

ಇದಕ್ಕೆ ಸಂಬಂಧಿಸಿದಂತೆ ಮುಖ್ಯಮಂತ್ರಿ ಹೇಮಂತ್ ಸೊರೆನ್​ ಈ ಆದೇಶ ಹೊರಹಾಕಿದ್ದು, ಟ್ವೀಟರ್​ನಲ್ಲಿ ಮಾಹಿತಿ ಶೇರ್​ ಮಾಡಿಕೊಂಡಿದ್ದಾರೆ. ಅಲ್ಲಿನ ಸಚಿವರು ಹಾಗೂ ಅಧಿಕಾರಿಗಳೊಂದಿಗೆ ಮಹತ್ವದ ಸಭೆ ನಡೆಸಿದ ಬಳಿಕ ಈ ನಿರ್ಧಾರ ಕೈಗೊಳ್ಳಲಾಗಿದ್ದು, ಏಪ್ರಿಲ್​. 22ರ ಬೆಳಗ್ಗೆ 6 ಗಂಟೆಯಿಂದ ಏಪ್ರಿಲ್​ 29ರವರೆಗೆ ಬೆಳಗ್ಗೆ 6 ಗಂಟೆವರೆಗೆ ಈ ಲಾಕ್​ಡೌನ್​ ಜಾರಿಯಲ್ಲಿರುತ್ತದೆ.

ಲಾಕ್​ಡೌನ್ ಜಾರಿಗೊಂಡಿರುವ ಕಾರಣ ಜಾರ್ಖಂಡ್​ನಲ್ಲಿ ಎಲ್ಲ ಪರೀಕ್ಷೆ ಮುಂದೂಡಿಕೆ ಮಾಡಿ ಮಹತ್ವದ ಆದೇಶ ಹೊರಹಾಕಲಾಗಿದೆ. ಮದುವೆಯಲ್ಲಿ ಕೇವಲ 50 ಜನರು ಭಾಗಿಯಾಗಲು ಅವಕಾಶ ನೀಡಲಾಗಿದ್ದು, ಕಟ್ಟುನಿಟ್ಟಿನ ನಿಯಮ ಜಾರಿಗೊಳಿಸಲಾಗಿದೆ.

ಇದನ್ನೂ ಓದಿ: ಎಐಸಿಸಿ ಮಾಜಿ ಅಧ್ಯಕ್ಷ ರಾಹುಲ್ ಗಾಂಧಿಗೂ ಕೊರೊನಾ ಸೋಂಕು ದೃಢ

ಈಗಾಗಲೇ ರಾಷ್ಟ್ರ ರಾಜಧಾನಿ ದೆಹಲಿಯಲ್ಲೂ ಒಂದು ವಾರಗಳ ಕಾಲ ಲಾಕ್​ಡೌನ್​ ಘೋಷಣೆ ಮಾಡಲಾಗಿದ್ದು, ಕೆಲವೊಂದು ರಾಜ್ಯಗಳಲ್ಲಿ ನೈಟ್ ಕರ್ಫ್ಯೂ ಜಾರಿಗೊಂಡಿವೆ. ಮಹಾರಾಷ್ಟ್ರದಲ್ಲಿ ಸೆಕ್ಷನ್​ 144 ಜಾರಿಯಲ್ಲಿದ್ದು, ಇಂದಿನಿಂದ ಮತ್ತಷ್ಟು ಕಠಿಣ ನಿಯಮ ಜಾರಿಗೊಂಡಿವೆ.

ETV Bharat Logo

Copyright © 2024 Ushodaya Enterprises Pvt. Ltd., All Rights Reserved.