ETV Bharat / bharat

ಧಾರ್ಮಿಕ ಅವಹೇಳನ: ಕಮಲ್ ಹಾಸನ್ ವಿರುದ್ಧದ ಪ್ರಕರಣ ರದ್ದುಗೊಳಿಸಿದ ಕೋರ್ಟ್ - High court quashes the case

ಮಹಾಭಾರತದ ಕುರಿತು ಅವಹೇಳನಕಾರಿ ಹೇಳಿಕೆ ನೀಡಿದ್ದಾರೆಂದು ದಾಖಲಿಸಿದ್ದ ಪ್ರಕರಣ ಸೇರಿದಂತೆ, ನಟ, ರಾಜಕಾರಣಿ ಕಮಲ್ ಹಾಸನ್ ವಿರುದ್ಧ ದಾಖಲಾಗಿದ್ದ ಎರಡೂ ಪ್ರಕರಣಗಳನ್ನು ನ್ಯಾಯಾಲಯ ರದ್ದುಗೊಳಿಸಿದೆ.

High court quashes Kamal Haasan case
ಕಮಲ್ ಹಾಸನ್ ವಿರುದ್ಧದ ಪ್ರಕರಣ ರದ್ದುಗೊಳಿಸಿದ ಕೋರ್ಟ್
author img

By

Published : May 22, 2021, 12:07 PM IST

ಮಧುರೈ: ಹಿಂದೂಗಳ ಬಗ್ಗೆ ಅವಹೇಳನಕಾರಿ ಹೇಳಿಕೆ ನೀಡಿದ್ದಾರೆ ಎಂದು ಆರೋಪಿಸಿ ಎಂಎನ್​ಎಂ ಮುಖ್ಯಸ್ಥ ಕಮಲ್ ಹಾಸನ್ ವಿರುದ್ಧ ದಾಖಲಿಸಲಾಗಿದ್ದ ಪ್ರಕರಣವನ್ನು​ ಕೋರ್ಟ್ ರದ್ದುಗೊಳಿಸಿದೆ.

ತಮಿಳು ಚಾನಲ್​ಗೆ ನೀಡಿದ ಸಂದರ್ಶನದಲ್ಲಿ ಹಿಂದೂಗಳ ಪವಿತ್ರ ಗ್ರಂಥ ಮಹಾಭಾರತವನ್ನು ಅವಮಾನಿಸಿದ್ದಾರೆ. ಹಾಗಾಗಿ, ಕಮಲ್ ವಿರುದ್ಧ ಕ್ರಮ ಕೈಗೊಳ್ಳುವಂತೆ 2017 ರಲ್ಲಿ ತಿರುನೆಲ್ವೇಲಿಯ ಆದಿನಾಥ ಸುಂದರಂ ಎಂಬುವರು ದೂರು​ ದಾಖಲಿಸಿದ್ದರು.

ಈ ಸಂಬಂಧ ಮದ್ರಾಸ್ ಹೈಕೋರ್ಟ್​ನ ಮಧುರೈ ಪೀಠಕ್ಕೆ ಅರ್ಜಿ ಸಲ್ಲಿಸಿದ್ದ ಕಮಲ್ ಹಾಸನ್, ತನ್ನ ವಿರುದ್ಧದ ಪ್ರಕರಣವನ್ನು ರದ್ದುಗೊಳಿಸಬೇಕು ಮತ್ತು ನ್ಯಾಯಾಲಯಕ್ಕೆ ನೇರವಾಗಿ ಹಾಜರಾಗುವುದರಿಂದ ವಿನಾಯಿತಿ ನೀಡಬೇಕೆಂದು ಕೋರಿದ್ದರು.

ಓದಿ : ಮಾವೋವಾದಿಗಳೊಂದಿಗೆ ನಂಟು ಆರೋಪ.. ಏಳು ಮಂದಿ ವಿರುದ್ಧ ಎನ್​​ಐಎ ಚಾರ್ಜ್ ಶೀಟ್​

ಕಮಲ್ ಅರ್ಜಿ ವಿಚಾರಣೆ ನಡೆಸಿದ ಮದ್ರಾಸ್ ಹೈಕೋರ್ಟ್​ನ ಮಧುರೈ ಪೀಠ, ಕಮಲ್ ನ್ಯಾಯಾಲಯಕ್ಕೆ ನೇರವಾಗಿ ಹಾಜರಾಗುವುದರಿಂದ ವಿನಾಯಿತಿ ನೀಡಿ ಮಧ್ಯಂತರ ಆದೇಶ ಹೊರಡಿಸಿತ್ತು. ಇದಾದ ಬಳಿಕ, 21 ಮೇ 2021 ರಂದು ನ್ಯಾಯಮೂರ್ತಿಗಳಾದ ಜಿ. ಇಲಂಗೋವನ್ ನೇತೃತ್ವದ ಪೀಠದ ಮುಂದೆ ಪ್ರಕರಣ ವಿಚಾರಣೆಗೆ ಬಂದಿತ್ತು. ಪ್ರಕರಣದ ವಿಚಾರಣೆ ನಡೆಸಿದ ನ್ಯಾಯಮೂರ್ತಿಗಳು, ಸಾಕ್ಷ್ಯಾಧಾರಗಳ ಕೊರತೆ ಹಿನ್ನೆಲೆ ಕಮಲ್ ವಿರುದ್ಧದ ಪ್ರಕರಣಗಳನ್ನು ರದ್ದುಗೊಳಿಸಿದ್ದಾರೆ. ವಲಿಯೂರು ನ್ಯಾಯಾಲಯದಲ್ಲಿ ಕಮಲ್ ವಿರುದ್ಧ ಮಾನಹಾನಿ ಪ್ರಕರಣ ಕೂಡ ದಾಖಲಾಗಿತ್ತು. ಅದನ್ನೂ ಕೋರ್ಟ್ ವಜಾಗೊಳಿಸಿದೆ.

ಮಧುರೈ: ಹಿಂದೂಗಳ ಬಗ್ಗೆ ಅವಹೇಳನಕಾರಿ ಹೇಳಿಕೆ ನೀಡಿದ್ದಾರೆ ಎಂದು ಆರೋಪಿಸಿ ಎಂಎನ್​ಎಂ ಮುಖ್ಯಸ್ಥ ಕಮಲ್ ಹಾಸನ್ ವಿರುದ್ಧ ದಾಖಲಿಸಲಾಗಿದ್ದ ಪ್ರಕರಣವನ್ನು​ ಕೋರ್ಟ್ ರದ್ದುಗೊಳಿಸಿದೆ.

ತಮಿಳು ಚಾನಲ್​ಗೆ ನೀಡಿದ ಸಂದರ್ಶನದಲ್ಲಿ ಹಿಂದೂಗಳ ಪವಿತ್ರ ಗ್ರಂಥ ಮಹಾಭಾರತವನ್ನು ಅವಮಾನಿಸಿದ್ದಾರೆ. ಹಾಗಾಗಿ, ಕಮಲ್ ವಿರುದ್ಧ ಕ್ರಮ ಕೈಗೊಳ್ಳುವಂತೆ 2017 ರಲ್ಲಿ ತಿರುನೆಲ್ವೇಲಿಯ ಆದಿನಾಥ ಸುಂದರಂ ಎಂಬುವರು ದೂರು​ ದಾಖಲಿಸಿದ್ದರು.

ಈ ಸಂಬಂಧ ಮದ್ರಾಸ್ ಹೈಕೋರ್ಟ್​ನ ಮಧುರೈ ಪೀಠಕ್ಕೆ ಅರ್ಜಿ ಸಲ್ಲಿಸಿದ್ದ ಕಮಲ್ ಹಾಸನ್, ತನ್ನ ವಿರುದ್ಧದ ಪ್ರಕರಣವನ್ನು ರದ್ದುಗೊಳಿಸಬೇಕು ಮತ್ತು ನ್ಯಾಯಾಲಯಕ್ಕೆ ನೇರವಾಗಿ ಹಾಜರಾಗುವುದರಿಂದ ವಿನಾಯಿತಿ ನೀಡಬೇಕೆಂದು ಕೋರಿದ್ದರು.

ಓದಿ : ಮಾವೋವಾದಿಗಳೊಂದಿಗೆ ನಂಟು ಆರೋಪ.. ಏಳು ಮಂದಿ ವಿರುದ್ಧ ಎನ್​​ಐಎ ಚಾರ್ಜ್ ಶೀಟ್​

ಕಮಲ್ ಅರ್ಜಿ ವಿಚಾರಣೆ ನಡೆಸಿದ ಮದ್ರಾಸ್ ಹೈಕೋರ್ಟ್​ನ ಮಧುರೈ ಪೀಠ, ಕಮಲ್ ನ್ಯಾಯಾಲಯಕ್ಕೆ ನೇರವಾಗಿ ಹಾಜರಾಗುವುದರಿಂದ ವಿನಾಯಿತಿ ನೀಡಿ ಮಧ್ಯಂತರ ಆದೇಶ ಹೊರಡಿಸಿತ್ತು. ಇದಾದ ಬಳಿಕ, 21 ಮೇ 2021 ರಂದು ನ್ಯಾಯಮೂರ್ತಿಗಳಾದ ಜಿ. ಇಲಂಗೋವನ್ ನೇತೃತ್ವದ ಪೀಠದ ಮುಂದೆ ಪ್ರಕರಣ ವಿಚಾರಣೆಗೆ ಬಂದಿತ್ತು. ಪ್ರಕರಣದ ವಿಚಾರಣೆ ನಡೆಸಿದ ನ್ಯಾಯಮೂರ್ತಿಗಳು, ಸಾಕ್ಷ್ಯಾಧಾರಗಳ ಕೊರತೆ ಹಿನ್ನೆಲೆ ಕಮಲ್ ವಿರುದ್ಧದ ಪ್ರಕರಣಗಳನ್ನು ರದ್ದುಗೊಳಿಸಿದ್ದಾರೆ. ವಲಿಯೂರು ನ್ಯಾಯಾಲಯದಲ್ಲಿ ಕಮಲ್ ವಿರುದ್ಧ ಮಾನಹಾನಿ ಪ್ರಕರಣ ಕೂಡ ದಾಖಲಾಗಿತ್ತು. ಅದನ್ನೂ ಕೋರ್ಟ್ ವಜಾಗೊಳಿಸಿದೆ.

ETV Bharat Logo

Copyright © 2025 Ushodaya Enterprises Pvt. Ltd., All Rights Reserved.