ETV Bharat / bharat

ಕೊಯಮತ್ತೂರು ದಕ್ಷಿಣ ಕ್ಷೇತ್ರದಿಂದ ಕಣಕ್ಕಿಳಿದ ಕಮಲ್​ ಹಾಸನ್​​ - ಮಕ್ಕಳ್​ ನೀದಿ ಮೈಯಂ(ಎಂಎನ್​ಎಂ) ಮುಖ್ಯಸ್ಥ

ತಮಿಳುನಾಡು ವಿಧಾನಸಭೆ ಚುನಾವಣೆಯಲ್ಲಿ ರಾಜಕೀಯ ಜೀವನ ರೂಪಿಸಿಕೊಳ್ಳಲು ಮುಂದಾಗಿರುವ ತಮಿಳು ಹಿರಿಯ ನಟ ಕಮಲ್​ ಹಾಸನ್ ಇಂದು ನಾಮಪತ್ರ ಸಲ್ಲಿಕೆ ಮಾಡಿದ್ದಾರೆ.

Kamal Haasan files his nomination
Kamal Haasan files his nomination
author img

By

Published : Mar 15, 2021, 3:33 PM IST

ಚೆನ್ನೈ: ಮಕ್ಕಳ್​ ನೀದಿ ಮೈಯಂ(ಎಂಎನ್​ಎಂ) ಪಕ್ಷದ ಮುಖ್ಯಸ್ಥ ಹಾಗೂ ಚಿತ್ರನಟ ಕಮಲ್​ ಹಾಸನ್​​ ಕೊಯಮತ್ತೂರು ದಕ್ಷಿಣ ಕ್ಷೇತ್ರದಿಂದ ಕಣಕ್ಕಿಳಿದಿದ್ದು, ನಾಮಪತ್ರ ಸಲ್ಲಿಸಿದರು.

ಇದೇ ಮೊದಲ ರಾಜಕೀಯ ಅದೃಷ್ಟ ಪರೀಕ್ಷೆಗೆ ಮುಂದಾಗಿ ಕಣಕ್ಕಿಳಿದಿರುವ ಕಮಲ್​ ಹಾಸನ್​ ಈಗಾಗಲೇ ಚುನಾವಣಾ ಪ್ರಚಾರ ಕೂಡ ಆರಂಭಿಸಿದ್ದಾರೆ.

ಇದನ್ನೂ ಓದಿ: ಧರ್ಮದಂ ಕೇತ್ರದಿಂದ ನಾಮಪತ್ರ ಸಲ್ಲಿಸಿದ ಕೇರಳ ಸಿಎಂ ಪಿಣರಾಯಿ ವಿಜಯನ್

ತಮಿಳುನಾಡಿನ 234 ವಿಧಾನಸಭಾ ಕ್ಷೇತ್ರಗಳ ಪೈಕಿ 154 ಕ್ಷೇತ್ರಗಳಲ್ಲಿ ಕಮಲ್​ ಹಾಸನ್​​ ಪಕ್ಷ ಸ್ಪರ್ಧೆ ಮಾಡಲಿದ್ದು, 80 ಸ್ಥಾನಗಳನ್ನು ಮಿತ್ರಪಕ್ಷಗಳಿಗೆ ಬಿಟ್ಟು ಕೊಡಲಾಗಿದೆ. ಕಾಂಚೀಪುರದಲ್ಲಿ ಚುನಾವಣಾ ಪ್ರಚಾರ ಮುಗಿಸಿ ವಾಪಸ್​​ ಆಗುತ್ತಿದ್ದ ವೇಳೆ ಕಮಲ್ ಹಾಸನ್​ ಮೇಲೆ ದಾಳಿ ಸಹ ನಡೆದಿದ್ದು, ಕಾರಿನ ಗಾಜು ಪುಡಿಗೈಯಲಾಗಿದೆ.

ತಮಿಳುನಾಡಿನ 234 ಸ್ಥಾನಗಳಿಗೂ ಒಂದೇ ಹಂತದಲ್ಲಿ ಏಪ್ರಿಲ್​ 6ರಂದು ಚುನಾವಣೆ ನಡೆಯಲಿದೆ. ಎಐಎಡಿಎಂಕೆ, ಡಿಎಂಕೆ ಸೇರಿದಂತೆ ಸ್ಥಳೀಯ ಪಕ್ಷಗಳ ನಡುವೆ ನೇರ ಪೈಪೋಟಿ ಏರ್ಪಟ್ಟಿದೆ.

ಚೆನ್ನೈ: ಮಕ್ಕಳ್​ ನೀದಿ ಮೈಯಂ(ಎಂಎನ್​ಎಂ) ಪಕ್ಷದ ಮುಖ್ಯಸ್ಥ ಹಾಗೂ ಚಿತ್ರನಟ ಕಮಲ್​ ಹಾಸನ್​​ ಕೊಯಮತ್ತೂರು ದಕ್ಷಿಣ ಕ್ಷೇತ್ರದಿಂದ ಕಣಕ್ಕಿಳಿದಿದ್ದು, ನಾಮಪತ್ರ ಸಲ್ಲಿಸಿದರು.

ಇದೇ ಮೊದಲ ರಾಜಕೀಯ ಅದೃಷ್ಟ ಪರೀಕ್ಷೆಗೆ ಮುಂದಾಗಿ ಕಣಕ್ಕಿಳಿದಿರುವ ಕಮಲ್​ ಹಾಸನ್​ ಈಗಾಗಲೇ ಚುನಾವಣಾ ಪ್ರಚಾರ ಕೂಡ ಆರಂಭಿಸಿದ್ದಾರೆ.

ಇದನ್ನೂ ಓದಿ: ಧರ್ಮದಂ ಕೇತ್ರದಿಂದ ನಾಮಪತ್ರ ಸಲ್ಲಿಸಿದ ಕೇರಳ ಸಿಎಂ ಪಿಣರಾಯಿ ವಿಜಯನ್

ತಮಿಳುನಾಡಿನ 234 ವಿಧಾನಸಭಾ ಕ್ಷೇತ್ರಗಳ ಪೈಕಿ 154 ಕ್ಷೇತ್ರಗಳಲ್ಲಿ ಕಮಲ್​ ಹಾಸನ್​​ ಪಕ್ಷ ಸ್ಪರ್ಧೆ ಮಾಡಲಿದ್ದು, 80 ಸ್ಥಾನಗಳನ್ನು ಮಿತ್ರಪಕ್ಷಗಳಿಗೆ ಬಿಟ್ಟು ಕೊಡಲಾಗಿದೆ. ಕಾಂಚೀಪುರದಲ್ಲಿ ಚುನಾವಣಾ ಪ್ರಚಾರ ಮುಗಿಸಿ ವಾಪಸ್​​ ಆಗುತ್ತಿದ್ದ ವೇಳೆ ಕಮಲ್ ಹಾಸನ್​ ಮೇಲೆ ದಾಳಿ ಸಹ ನಡೆದಿದ್ದು, ಕಾರಿನ ಗಾಜು ಪುಡಿಗೈಯಲಾಗಿದೆ.

ತಮಿಳುನಾಡಿನ 234 ಸ್ಥಾನಗಳಿಗೂ ಒಂದೇ ಹಂತದಲ್ಲಿ ಏಪ್ರಿಲ್​ 6ರಂದು ಚುನಾವಣೆ ನಡೆಯಲಿದೆ. ಎಐಎಡಿಎಂಕೆ, ಡಿಎಂಕೆ ಸೇರಿದಂತೆ ಸ್ಥಳೀಯ ಪಕ್ಷಗಳ ನಡುವೆ ನೇರ ಪೈಪೋಟಿ ಏರ್ಪಟ್ಟಿದೆ.

ETV Bharat Logo

Copyright © 2025 Ushodaya Enterprises Pvt. Ltd., All Rights Reserved.