ಭೋಪಾಲ್(ಮಧ್ಯಪ್ರದೇಶ): ಮಧ್ಯಪ್ರದೇಶ ಕಾಂಗ್ರೆಸ್ನಲ್ಲಿ ಭಾರಿ ಬದಲಾವಣೆಯಾಗಿದೆ. ಮಾಜಿ ಮುಖ್ಯಮಂತ್ರಿ ಕಮಲ್ ನಾಥ್ ಶಾಸಕಾಂಗ ಪಕ್ಷದ ನಾಯಕನ ಸ್ಥಾನಕ್ಕೆ ರಾಜೀನಾಮೆ ನೀಡಿದ್ದಾರೆ. ಗೋವಿಂದ್ ಸಿಂಗ್ ಅವರನ್ನು ಹೊಸ ಸಿಎಲ್ಪಿ ನಾಯಕರನ್ನಾಗಿ ನೇಮಿಸಲಾಗಿದೆ.
ಕಮಲ್ ನಾಥ್ ಪ್ರಸ್ತುತ ರಾಜ್ಯ ಕಾಂಗ್ರೆಸ್ ಘಟಕದ ಅಧ್ಯಕ್ಷರೂ ಆಗಿದ್ದು, ಒಬ್ಬ ವ್ಯಕ್ತಿ, ಒಂದು ಹುದ್ದೆ ನಿಯಮದಡಿ ಈ ಬದಲಾವಣೆ ಮಾಡಲಾಗಿದೆ. ಈಗಾಗಲೇ ರಾಜೀನಾಮೆಯನ್ನು ಪಕ್ಷದ ಹಂಗಾಮಿ ಅಧ್ಯಕ್ಷೆ ಸೋನಿಯಾ ಗಾಂಧಿ ಅಂಗೀಕರಿಸಿದ್ದಾರೆ. ಭಿಂದ್ ಜಿಲ್ಲೆಯ ಲಹರ್ ಕ್ಷೇತ್ರದ ಶಾಸಕ ಗೋವಿಂದ್ ಸಿಂಗ್ ಅವರನ್ನು ನಾಯಕನ ಸ್ಥಾನಕ್ಕೆ ಆಯ್ಕೆ ಮಾಡಲಾಗಿದೆ.
ಮುಂಬರುವ 2023ರ ವಿಧಾನಸಭಾ ಚುನಾವಣೆಯ ದೃಷ್ಟಿಯಲ್ಲಿರಿಸಿಕೊಂಡು ಕಾಂಗ್ರೆಸ್ ಹೈಕಮಾಂಡ್ ಈ ನಿರ್ಧಾರ ತೆಗೆದುಕೊಂಡಿದೆ. ರಾಜ್ಯ ಕಾಂಗ್ರೆಸ್ ಘಟಕದ ಅಧ್ಯಕ್ಷರಾಗಿ ಕಮಲ್ ನಾಥ್ ಅವರೇ ಮುಂದುವರೆಯಲಿದ್ದಾರೆ ಎಂದು ಎಐಸಿಸಿಯ ಪ್ರಧಾನ ಕಾರ್ಯದರ್ಶಿ ಕೆ.ಸಿ.ವೇಣುಗೋಪಾಲ್ ತಿಳಿಸಿದ್ದಾರೆ.
ಇದನ್ನೂ ಓದಿ: 'ನಮ್ಮಲ್ಲಿ ಯೋಗಿ ಇಲ್ಲ, ಭೋಗಿಗಳಿದ್ದಾರೆ': ಯುಪಿ ಸರ್ಕಾರಕ್ಕೆ ರಾಜ್ ಠಾಕ್ರೆ ಮೆಚ್ಚುಗೆ