ETV Bharat / bharat

ಖೂಬಾ ಸೇರಿ ಕರ್ನಾಟಕದ ಈ ನಾಲ್ವರಿಗೆ ಮೋದಿ ಸಂಪುಟದಲ್ಲಿ ಮಂತ್ರಿಗಿರಿ ಬಹುತೇಕ ಖಚಿತ

ಮೋದಿ ಕ್ಯಾಬಿನೆಟ್​ ಇಂದು ವಿಸ್ತರಣೆಯಾಗುತ್ತಿದ್ದು, ಈಟಿವಿ ಭಾರತಕ್ಕೆ ಬಂದಿರುವ ಉನ್ನತ ಮೂಲಗಳ ಮಾಹಿತಿ ಪ್ರಕಾರ, ಕರ್ನಾಟಕದ ನಾಲ್ವರಿಗೆ ಸಚಿವ ಸ್ಥಾನ ನೀಡಲು ನಿರ್ಧರಿಸಲಾಗಿದೆ ಎಂದು ತಿಳಿದು ಬಂದಿದೆ.

author img

By

Published : Jul 7, 2021, 3:13 PM IST

Updated : Jul 7, 2021, 3:40 PM IST

Karnataka MP
Karnataka MP

ನವದೆಹಲಿ: ಪ್ರಧಾನಿ ನರೇಂದ್ರ ಮೋದಿ ನೇತೃತ್ವದ ಕೇಂದ್ರ ಸಚಿವ ಸಂಪುಟ ಇಂದು ಪುನರ್​ ರಚನೆ ಆಗುತ್ತಿದೆ. ಅನೇಕ ಹೊಸ ಮುಖಗಳಿಗೆ ಅವಕಾಶ ಸಿಗುವುದು ಬಹುತೇಕ ಖಚಿತವಾಗುತ್ತಿದೆ. ಲಭ್ಯವಾಗಿರುವ ಮಾಹಿತಿ ಪ್ರಕಾರ, ಕರ್ನಾಟಕದ ನಾಲ್ವರಿಗೆ ನಮೋ ಕ್ಯಾಬಿನೆಟ್​​ನಲ್ಲಿ ಸ್ಥಾನ ನೀಡಲು ನಿರ್ಧಾರ ಕೈಗೊಳ್ಳಲಾಗಿದೆ ಎಂದು ತಿಳಿದು ಬಂದಿದೆ.

Rajeev Chandrasekhar
ರಾಜೀವ್​ ಚಂದ್ರಶೇಖರ್​

'ಈಟಿವಿ ಭಾರತ'ಗೆ ಲಭ್ಯವಾಗಿರುವ ಉನ್ನತ ಮೂಲಗಳ ಮಾಹಿತಿ ಪ್ರಕಾರ, ಬೀದರ್​ ಬಿಜೆಪಿ ಸಂಸದ ಭಗವಂತ್​ ಖೂಬಾ, ಚಿತ್ರದುರ್ಗದ ಸಂಸದ ಆನೇಕಲ್​ ನಾರಾಯಣಸ್ವಾಮಿ ಹಾಗೂ ಉಡುಪಿ-ಚಿಕ್ಕಮಗಳೂರು ಸಂಸದೆ ಶೋಭಾ ಕರಂದ್ಲಾಜೆ ಹಾಗೂ ರಾಜ್ಯಸಭೆ ಸದಸ್ಯರಾಗಿರುವ ರಾಜೀವ್​​ ಚಂದ್ರಶೇಖರ್ ಅವರಿಗೆ ಮಂತ್ರಿಗಿರಿ ನೀಡಲಾಗುತ್ತಿದ್ದು, ಮೋದಿ ಸಂಪುಟದಲ್ಲಿ ಇವರಿಗೆ ರಾಜ್ಯ ಖಾತೆ ನೀಡಲು ನಿರ್ಧರಿಸಲಾಗಿದೆ.

ಇದನ್ನೂ ಓದಿರಿ: ಕೇಂದ್ರ ಆರೋಗ್ಯ ಸಚಿವ ಡಾ.ಹರ್ಷವರ್ಧನ್​ ರಾಜೀನಾಮೆ

ಈಗಾಗಲೇ ಮೋದಿ ಕ್ಯಾಬಿನೆಟ್​ನಲ್ಲಿ ಸಚಿವರಾಗಿದ್ದ ರಮೇಶ್ ಪೋಖ್ರಿಯಾಲ್‌ ನಿಶಾಂಕ್‌, ಹರ್ಷವರ್ಧನ್, ಡಿ.ವಿ ಸದಾನಂದ ಗೌಡ ಸೇರಿದಂತೆ 10ಕ್ಕೂ ಹೆಚ್ಚು ಸಚಿವರು​​ ತಮ್ಮ ಸ್ಥಾನಕ್ಕೆ ರಾಜೀನಾಮೆ ನೀಡಿದ್ದು, ಹೊಸ ಮುಖಗಳಿಗೆ ಅವಕಾಶ ಮಾಡಿಕೊಟ್ಟಿದ್ದಾರೆ.

ಕರ್ನಾಟಕದ ನಾಲ್ವರ ಜೊತೆಗೆ ಮಧ್ಯಪ್ರದೇಶದ ಜ್ಯೋತಿರಾದಿತ್ಯ ಸಿಂಧಿಯಾ, ಸರ್ಬಾನಂದ ಸೋನೋವಾಲ್, ಪಶುಪತಿನಾಥ್ ಪಾರಸ್, ನಾರಾಯಣ ರಾಣೆ ಹೆಸರೂ ಸಹ ಕೇಳಿ ಬರುತ್ತಿವೆ.

ಇಂದು ಸಂಜೆ 6 ಗಂಟೆಗೆ ಸಚಿವ ಸಂಪುಟ ಪುನರ್​ ರಚನೆಯಾಗುತ್ತಿದೆ. ಪ್ರಮುಖವಾಗಿ ಯುವಕರಿಗೆ ಮಣೆ ಹಾಕಲು ಮೋದಿ ನಿರ್ಧರಿಸಿದ್ದಾರೆ ಎನ್ನಲಾಗಿದೆ.

ನವದೆಹಲಿ: ಪ್ರಧಾನಿ ನರೇಂದ್ರ ಮೋದಿ ನೇತೃತ್ವದ ಕೇಂದ್ರ ಸಚಿವ ಸಂಪುಟ ಇಂದು ಪುನರ್​ ರಚನೆ ಆಗುತ್ತಿದೆ. ಅನೇಕ ಹೊಸ ಮುಖಗಳಿಗೆ ಅವಕಾಶ ಸಿಗುವುದು ಬಹುತೇಕ ಖಚಿತವಾಗುತ್ತಿದೆ. ಲಭ್ಯವಾಗಿರುವ ಮಾಹಿತಿ ಪ್ರಕಾರ, ಕರ್ನಾಟಕದ ನಾಲ್ವರಿಗೆ ನಮೋ ಕ್ಯಾಬಿನೆಟ್​​ನಲ್ಲಿ ಸ್ಥಾನ ನೀಡಲು ನಿರ್ಧಾರ ಕೈಗೊಳ್ಳಲಾಗಿದೆ ಎಂದು ತಿಳಿದು ಬಂದಿದೆ.

Rajeev Chandrasekhar
ರಾಜೀವ್​ ಚಂದ್ರಶೇಖರ್​

'ಈಟಿವಿ ಭಾರತ'ಗೆ ಲಭ್ಯವಾಗಿರುವ ಉನ್ನತ ಮೂಲಗಳ ಮಾಹಿತಿ ಪ್ರಕಾರ, ಬೀದರ್​ ಬಿಜೆಪಿ ಸಂಸದ ಭಗವಂತ್​ ಖೂಬಾ, ಚಿತ್ರದುರ್ಗದ ಸಂಸದ ಆನೇಕಲ್​ ನಾರಾಯಣಸ್ವಾಮಿ ಹಾಗೂ ಉಡುಪಿ-ಚಿಕ್ಕಮಗಳೂರು ಸಂಸದೆ ಶೋಭಾ ಕರಂದ್ಲಾಜೆ ಹಾಗೂ ರಾಜ್ಯಸಭೆ ಸದಸ್ಯರಾಗಿರುವ ರಾಜೀವ್​​ ಚಂದ್ರಶೇಖರ್ ಅವರಿಗೆ ಮಂತ್ರಿಗಿರಿ ನೀಡಲಾಗುತ್ತಿದ್ದು, ಮೋದಿ ಸಂಪುಟದಲ್ಲಿ ಇವರಿಗೆ ರಾಜ್ಯ ಖಾತೆ ನೀಡಲು ನಿರ್ಧರಿಸಲಾಗಿದೆ.

ಇದನ್ನೂ ಓದಿರಿ: ಕೇಂದ್ರ ಆರೋಗ್ಯ ಸಚಿವ ಡಾ.ಹರ್ಷವರ್ಧನ್​ ರಾಜೀನಾಮೆ

ಈಗಾಗಲೇ ಮೋದಿ ಕ್ಯಾಬಿನೆಟ್​ನಲ್ಲಿ ಸಚಿವರಾಗಿದ್ದ ರಮೇಶ್ ಪೋಖ್ರಿಯಾಲ್‌ ನಿಶಾಂಕ್‌, ಹರ್ಷವರ್ಧನ್, ಡಿ.ವಿ ಸದಾನಂದ ಗೌಡ ಸೇರಿದಂತೆ 10ಕ್ಕೂ ಹೆಚ್ಚು ಸಚಿವರು​​ ತಮ್ಮ ಸ್ಥಾನಕ್ಕೆ ರಾಜೀನಾಮೆ ನೀಡಿದ್ದು, ಹೊಸ ಮುಖಗಳಿಗೆ ಅವಕಾಶ ಮಾಡಿಕೊಟ್ಟಿದ್ದಾರೆ.

ಕರ್ನಾಟಕದ ನಾಲ್ವರ ಜೊತೆಗೆ ಮಧ್ಯಪ್ರದೇಶದ ಜ್ಯೋತಿರಾದಿತ್ಯ ಸಿಂಧಿಯಾ, ಸರ್ಬಾನಂದ ಸೋನೋವಾಲ್, ಪಶುಪತಿನಾಥ್ ಪಾರಸ್, ನಾರಾಯಣ ರಾಣೆ ಹೆಸರೂ ಸಹ ಕೇಳಿ ಬರುತ್ತಿವೆ.

ಇಂದು ಸಂಜೆ 6 ಗಂಟೆಗೆ ಸಚಿವ ಸಂಪುಟ ಪುನರ್​ ರಚನೆಯಾಗುತ್ತಿದೆ. ಪ್ರಮುಖವಾಗಿ ಯುವಕರಿಗೆ ಮಣೆ ಹಾಕಲು ಮೋದಿ ನಿರ್ಧರಿಸಿದ್ದಾರೆ ಎನ್ನಲಾಗಿದೆ.

Last Updated : Jul 7, 2021, 3:40 PM IST
ETV Bharat Logo

Copyright © 2024 Ushodaya Enterprises Pvt. Ltd., All Rights Reserved.