ETV Bharat / bharat

ಹೆತ್ತ ಮಗಳ ಕತ್ತು ಸೀಳಿ ಕೊಂದ ತಂದೆ, ಮಗನಿಂದ ಹತಳಾದ ತಾಯಿ: ಆರೋಪಿಗಳ ಬಂಧನ

author img

By

Published : Apr 3, 2023, 7:43 PM IST

ಜಮ್ಮು ಕಾಶ್ಮೀರದಲ್ಲಿ ಒಂದೇ ದಿನ ಪತ್ತೆಯಾಗಿದ್ದ ಎರಡು ಕೊಲೆ ಪ್ರಕರಣಗಳನ್ನು ಪೊಲೀಸರು ಭೇದಿಸಿದ್ದಾರೆ.

ಕೊಲೆ ಪ್ರಕರಣ ಭೇದಿಸಿದ ಜಮ್ಮು ಕಾಶ್ಮೀರ ಪೊಲೀಸರು
ಕೊಲೆ ಪ್ರಕರಣ ಭೇದಿಸಿದ ಜಮ್ಮು ಕಾಶ್ಮೀರ ಪೊಲೀಸರು

ಕುಪ್ವಾರಾ(ಜಮ್ಮು- ಕಾಶ್ಮೀರ): ವಾರದ ಹಿಂದೆ ನಡೆದಿದ್ದ ಮಹಿಳೆ ಮತ್ತು 7 ವರ್ಷದ ಮಗುವಿನ ಭೀಕರ ಹತ್ಯೆ ಪ್ರಕರಣಗಳನ್ನು ಜಮ್ಮು ಕಾಶ್ಮೀರ ಪೊಲೀಸರು ಭೇದಿಸಿದ್ದಾರೆ. ಮಹಿಳೆಯನ್ನು ಮಗನೇ ಕತ್ತು ಹಿಸುಕಿ ಕೊಂದಿದ್ದರೆ, ಬಾಲಕಿಯನ್ನು ತಂದೆ ಕತ್ತು ಸೀಳಿ ಕೊಲೆ ಮಾಡಿದ್ದು ತನಿಖೆಯಲ್ಲಿ ಗೊತ್ತಾಗಿದೆ. ಆರೋಪಿಗಳು ತಮ್ಮ ದುಷ್ಕೃತ್ಯವನ್ನು ಒಪ್ಪಿಕೊಂಡಿದ್ದಾರೆ ಎಂದು ಪೊಲೀಸರು ಮಾಹಿತಿ ನೀಡಿದರು.

ಉತ್ತರ ಕಾಶ್ಮೀರದ ಕುಪ್ವಾರ ಜಿಲ್ಲೆಯ ಲೋಲಾಬ್‌ನ ಖುರ್ಹಾಮಾ ಝಾಬ್ ಪ್ರದೇಶದಲ್ಲಿ ಕಳೆದ ವಾರ 7 ವರ್ಷದ ಬಾಲಕಿಯನ್ನು ಕೊಲೆ ಮಾಡಿ ಮನೆಯ ಹಿಂಭಾಗದಲ್ಲಿನ ಶೆಡ್​​ನಲ್ಲಿ ಬಿಸಾಡಲಾಗಿತ್ತು. ಶವ ಪತ್ತೆಯಾದ ಬಳಿಕ ಪ್ರಕರಣ ದಾಖಲಿಸಿಕೊಂಡ ಪೊಲೀಸರು ತನಿಖೆ ನಡೆಸಿದಾಗ ಆಕೆಯ ತಂದೆಯೇ ಕತ್ತು ಸೀಳಿ ಕೊಲೆ ಮಾಡಿರುವುದು ಬಯಲಾಗಿದೆ. ಆರೋಪಿ ತಂದೆ ಹತ್ಯೆಯನ್ನು ಒಪ್ಪಿಕೊಂಡಿದ್ದಾನೆ ಎಂದು ಪೊಲೀಸರು ತಿಳಿಸಿದರು.

ಮಾರ್ಚ್​ 29 ರಂದು ರಾತ್ರಿ ವೇಳೆ ಬಾಲಕಿಯ ಶವ ಆಕೆಯ ನಿವಾಸದಿಂದ ಕೇವಲ 30 ಮೀಟರ್ ದೂರದಲ್ಲಿರುವ ಶೆಡ್‌ನಲ್ಲಿ ಪತ್ತೆಯಾಗಿತ್ತು. ಘಟನೆ ಬೆಳಕಿಗೆ ಬಂದ ಬಳಿಕ ಖುರ್ಹಾಮಾ ಝಾಬ್ ಆತಂಕದ ವಾತಾವರಣ ನಿರ್ಮಾಣವಾಗಿತ್ತು. ಸಮಾಜದ ವಿವಿಧ ವರ್ಗಗಳಿಂದ ಆಕ್ರೋಶ ಕೂಡ ವ್ಯಕ್ತವಾಗಿತ್ತು. ಆರೋಪಿಗಳ ವಿರುದ್ಧ ಕಠಿಣ ಕ್ರಮಕ್ಕೆ ಒತ್ತಡ ಬಂದಿತ್ತು. ಪ್ರಕರಣ ದಾಖಲಿಸಿಕೊಂಡ ಪೊಲೀಸರು ಕುಟುಂಬಸ್ಥರನ್ನು ವಿಚಾರಣೆ ನಡೆಸಿದರು. ಅನುಮಾನದ ಮೇಲೆ ಬಾಲಕಿಯ ತಂದೆಯನ್ನು ವಿಚಾರಣೆ ನಡೆಸಲು ಕಸ್ಟಡಿಗೆ ತೆಗೆದುಕೊಂಡಿದ್ದರು.

"ವಿಚಾರಣೆಯ ಸಮಯದಲ್ಲಿ ಆರೋಪಿ ತಂದೆ ಕೊಲೆ ಮಾಡಿದ್ದನ್ನು ಬಾಯ್ಬಿಟ್ಟಿದ್ದಾನೆ. ಅಪರಾಧಕ್ಕೆ ಬಳಸಿದ ಚಾಕುವನ್ನು ಸಹ ಆತನಿಂದ ವಶಪಡಿಸಿಕೊಳ್ಳಲಾಗಿದೆ. ಸಂಬಂಧಿತ ಸೆಕ್ಷನ್‌ಗಳ ಅಡಿ ಪ್ರಕರಣ ದಾಖಲಿಸಲಾಗಿದೆ. ಪ್ರಸ್ತುತ ಈ ಬಗ್ಗೆ ತನಿಖೆ ನಡೆಯುತ್ತಿದೆ. ಯಾಕಾಗಿ ತಂದೆಯೇ ಕೊಲೆ ಮಾಡಿದ ಎಂಬ ಬಗ್ಗೆ ಹೆಚ್ಚಿನ ತನಿಖೆ ನಡೆಸಲಾಗುತ್ತಿದೆ ಎಂದು ಕುಪ್ವಾರದ ಹಿರಿಯ ಪೊಲೀಸ್ ವರಿಷ್ಠಾಧಿಕಾರಿ ಯೂಗಲ್ ಮನ್ಹಾಸ್ ತಿಳಿಸಿದರು.

ತಾಯಿ ಕೊಂದ ಮಗ: ಇನ್ನೊಂದೆಡೆ ಅದೇ ದಿನದಂದು ಉತ್ತರ ಕಾಶ್ಮೀರದ ಸಮೀಪದ ಬಾರಾಮುಲ್ಲಾ ಜಿಲ್ಲೆಯ ಸೋಪೋರ್ ಪ್ರದೇಶದ ಡೇಂಗರ್‌ಪೋರಾದಲ್ಲಿ ಮಹಿಳೆಯ ಮೃತದೇಹ ಪತ್ತೆಯಾಗಿತ್ತು. ಪ್ರಕರಣ ದಾಖಲಾದ ಬಳಿಕ ತನಿಖೆ ನಡೆಸಿದ ಪೊಲೀಸರು, ಆರೋಪಿ ಶೋಕತ್ ಅಹ್ಮದ್ ಗನಾಯ್ ಎಂಬಾತನನ್ನು ಬಂಧಿಸಿದ್ದರು.

28 ವರ್ಷದ ವ್ಯಕ್ತಿ ವೃತ್ತಿಯಲ್ಲಿ ಚಾಲಕನಾಗಿದ್ದು, ಮಾದಕ ವ್ಯಸನಿಯಾಗಿದ್ದ. ಕೊಲೆಯಾದ ಮಹಿಳೆಯ ಪುತ್ರ ಎಂಬುದು ಆಘಾತಕಾರಿ ಸಂಗತಿ. ತನ್ನ 70 ವರ್ಷದ ತಾಯಿ ಆಶಾ ಬೇಗಂ ಅವರನ್ನು ಕತ್ತು ಹಿಸುಕಿ ಕೊಲೆ ಮಾಡಿದ್ದಾಗಿ ವಿಚಾರಣೆಯ ವೇಳೆ ಪಾಪಿ ಬಾಯ್ಬಿಟ್ಟಿದ್ದ. ಇದೀಗ ಆತನನ್ನು ಬಂಧಿಸಲಾಗಿದ್ದು, ಕೊಲೆ ಮಾಡಲು ನಿಖರ ಕಾರಣದ ಬಗ್ಗೆ ತನಿಖೆ ನಡೆಸಲಾಗುತ್ತಿದೆ ಎಂದು ಪೊಲೀಸ್​ ಅಧಿಕಾರಿಗಳು ತಿಳಿಸಿದ್ದಾರೆ.

ಬಾಲಕಿ ರೇಪ್​ ಮಾಡಿ ಕೊಲೆ: ನೆರೆ ಮನೆಯ ವ್ಯಕ್ತಿಯೋರ್ವ ಎಂಟು ವರ್ಷದ ಬಾಲಕಿ ಮೇಲೆ ಅತ್ಯಾಚಾರಗೈದು ಬಳಿಕ ತುಂಡು ತುಂಡಾಗಿ ಕತ್ತರಿಸಿ ನಿರ್ಜನ ಪ್ರದೇಶದಲ್ಲಿ ಎಸೆದಿರುವ ಅಮಾನವೀಯ ಘಟನೆ ರಾಜಸ್ಥಾನದ ಉದಯಪುರದಲ್ಲಿ ನಡೆದಿದೆ. ಪ್ರಕರಣದ ಸಂಬಂಧ ಸಂತ್ರಸ್ತ ಬಾಲಕಿಯ ನೆರೆಮನೆಯ ನಿವಾಸಿ ಕಮಲೇಶ್​ ಎಂಬಾತನನ್ನು ಪೊಲೀಸರು ಬಂಧಿಸಿದ್ದಾರೆ. ಬಂಧಿತ ಆರೋಪಿ ಬಾಲಕಿ ಮೇಲೆ ಅತ್ಯಾಚಾರ ಮಾಡಿ ನಿರ್ಜನ ಪ್ರದೇಶದಲ್ಲಿ ಬಿಸಾಡಿರುವುದಾಗಿ ಪೊಲೀಸರು ತಿಳಿಸಿದ್ದಾರೆ.

ಓದಿ: ಬೈಕ್​ಗೆ ಹಿಂಬದಿಯಿಂದ ಬಂದ ಕಾರು ಡಿಕ್ಕಿ: ಸ್ಥಳದಲ್ಲೇ ಮೃತಪಟ್ಟ ತಂದೆ - ಮಗಳು

ಕುಪ್ವಾರಾ(ಜಮ್ಮು- ಕಾಶ್ಮೀರ): ವಾರದ ಹಿಂದೆ ನಡೆದಿದ್ದ ಮಹಿಳೆ ಮತ್ತು 7 ವರ್ಷದ ಮಗುವಿನ ಭೀಕರ ಹತ್ಯೆ ಪ್ರಕರಣಗಳನ್ನು ಜಮ್ಮು ಕಾಶ್ಮೀರ ಪೊಲೀಸರು ಭೇದಿಸಿದ್ದಾರೆ. ಮಹಿಳೆಯನ್ನು ಮಗನೇ ಕತ್ತು ಹಿಸುಕಿ ಕೊಂದಿದ್ದರೆ, ಬಾಲಕಿಯನ್ನು ತಂದೆ ಕತ್ತು ಸೀಳಿ ಕೊಲೆ ಮಾಡಿದ್ದು ತನಿಖೆಯಲ್ಲಿ ಗೊತ್ತಾಗಿದೆ. ಆರೋಪಿಗಳು ತಮ್ಮ ದುಷ್ಕೃತ್ಯವನ್ನು ಒಪ್ಪಿಕೊಂಡಿದ್ದಾರೆ ಎಂದು ಪೊಲೀಸರು ಮಾಹಿತಿ ನೀಡಿದರು.

ಉತ್ತರ ಕಾಶ್ಮೀರದ ಕುಪ್ವಾರ ಜಿಲ್ಲೆಯ ಲೋಲಾಬ್‌ನ ಖುರ್ಹಾಮಾ ಝಾಬ್ ಪ್ರದೇಶದಲ್ಲಿ ಕಳೆದ ವಾರ 7 ವರ್ಷದ ಬಾಲಕಿಯನ್ನು ಕೊಲೆ ಮಾಡಿ ಮನೆಯ ಹಿಂಭಾಗದಲ್ಲಿನ ಶೆಡ್​​ನಲ್ಲಿ ಬಿಸಾಡಲಾಗಿತ್ತು. ಶವ ಪತ್ತೆಯಾದ ಬಳಿಕ ಪ್ರಕರಣ ದಾಖಲಿಸಿಕೊಂಡ ಪೊಲೀಸರು ತನಿಖೆ ನಡೆಸಿದಾಗ ಆಕೆಯ ತಂದೆಯೇ ಕತ್ತು ಸೀಳಿ ಕೊಲೆ ಮಾಡಿರುವುದು ಬಯಲಾಗಿದೆ. ಆರೋಪಿ ತಂದೆ ಹತ್ಯೆಯನ್ನು ಒಪ್ಪಿಕೊಂಡಿದ್ದಾನೆ ಎಂದು ಪೊಲೀಸರು ತಿಳಿಸಿದರು.

ಮಾರ್ಚ್​ 29 ರಂದು ರಾತ್ರಿ ವೇಳೆ ಬಾಲಕಿಯ ಶವ ಆಕೆಯ ನಿವಾಸದಿಂದ ಕೇವಲ 30 ಮೀಟರ್ ದೂರದಲ್ಲಿರುವ ಶೆಡ್‌ನಲ್ಲಿ ಪತ್ತೆಯಾಗಿತ್ತು. ಘಟನೆ ಬೆಳಕಿಗೆ ಬಂದ ಬಳಿಕ ಖುರ್ಹಾಮಾ ಝಾಬ್ ಆತಂಕದ ವಾತಾವರಣ ನಿರ್ಮಾಣವಾಗಿತ್ತು. ಸಮಾಜದ ವಿವಿಧ ವರ್ಗಗಳಿಂದ ಆಕ್ರೋಶ ಕೂಡ ವ್ಯಕ್ತವಾಗಿತ್ತು. ಆರೋಪಿಗಳ ವಿರುದ್ಧ ಕಠಿಣ ಕ್ರಮಕ್ಕೆ ಒತ್ತಡ ಬಂದಿತ್ತು. ಪ್ರಕರಣ ದಾಖಲಿಸಿಕೊಂಡ ಪೊಲೀಸರು ಕುಟುಂಬಸ್ಥರನ್ನು ವಿಚಾರಣೆ ನಡೆಸಿದರು. ಅನುಮಾನದ ಮೇಲೆ ಬಾಲಕಿಯ ತಂದೆಯನ್ನು ವಿಚಾರಣೆ ನಡೆಸಲು ಕಸ್ಟಡಿಗೆ ತೆಗೆದುಕೊಂಡಿದ್ದರು.

"ವಿಚಾರಣೆಯ ಸಮಯದಲ್ಲಿ ಆರೋಪಿ ತಂದೆ ಕೊಲೆ ಮಾಡಿದ್ದನ್ನು ಬಾಯ್ಬಿಟ್ಟಿದ್ದಾನೆ. ಅಪರಾಧಕ್ಕೆ ಬಳಸಿದ ಚಾಕುವನ್ನು ಸಹ ಆತನಿಂದ ವಶಪಡಿಸಿಕೊಳ್ಳಲಾಗಿದೆ. ಸಂಬಂಧಿತ ಸೆಕ್ಷನ್‌ಗಳ ಅಡಿ ಪ್ರಕರಣ ದಾಖಲಿಸಲಾಗಿದೆ. ಪ್ರಸ್ತುತ ಈ ಬಗ್ಗೆ ತನಿಖೆ ನಡೆಯುತ್ತಿದೆ. ಯಾಕಾಗಿ ತಂದೆಯೇ ಕೊಲೆ ಮಾಡಿದ ಎಂಬ ಬಗ್ಗೆ ಹೆಚ್ಚಿನ ತನಿಖೆ ನಡೆಸಲಾಗುತ್ತಿದೆ ಎಂದು ಕುಪ್ವಾರದ ಹಿರಿಯ ಪೊಲೀಸ್ ವರಿಷ್ಠಾಧಿಕಾರಿ ಯೂಗಲ್ ಮನ್ಹಾಸ್ ತಿಳಿಸಿದರು.

ತಾಯಿ ಕೊಂದ ಮಗ: ಇನ್ನೊಂದೆಡೆ ಅದೇ ದಿನದಂದು ಉತ್ತರ ಕಾಶ್ಮೀರದ ಸಮೀಪದ ಬಾರಾಮುಲ್ಲಾ ಜಿಲ್ಲೆಯ ಸೋಪೋರ್ ಪ್ರದೇಶದ ಡೇಂಗರ್‌ಪೋರಾದಲ್ಲಿ ಮಹಿಳೆಯ ಮೃತದೇಹ ಪತ್ತೆಯಾಗಿತ್ತು. ಪ್ರಕರಣ ದಾಖಲಾದ ಬಳಿಕ ತನಿಖೆ ನಡೆಸಿದ ಪೊಲೀಸರು, ಆರೋಪಿ ಶೋಕತ್ ಅಹ್ಮದ್ ಗನಾಯ್ ಎಂಬಾತನನ್ನು ಬಂಧಿಸಿದ್ದರು.

28 ವರ್ಷದ ವ್ಯಕ್ತಿ ವೃತ್ತಿಯಲ್ಲಿ ಚಾಲಕನಾಗಿದ್ದು, ಮಾದಕ ವ್ಯಸನಿಯಾಗಿದ್ದ. ಕೊಲೆಯಾದ ಮಹಿಳೆಯ ಪುತ್ರ ಎಂಬುದು ಆಘಾತಕಾರಿ ಸಂಗತಿ. ತನ್ನ 70 ವರ್ಷದ ತಾಯಿ ಆಶಾ ಬೇಗಂ ಅವರನ್ನು ಕತ್ತು ಹಿಸುಕಿ ಕೊಲೆ ಮಾಡಿದ್ದಾಗಿ ವಿಚಾರಣೆಯ ವೇಳೆ ಪಾಪಿ ಬಾಯ್ಬಿಟ್ಟಿದ್ದ. ಇದೀಗ ಆತನನ್ನು ಬಂಧಿಸಲಾಗಿದ್ದು, ಕೊಲೆ ಮಾಡಲು ನಿಖರ ಕಾರಣದ ಬಗ್ಗೆ ತನಿಖೆ ನಡೆಸಲಾಗುತ್ತಿದೆ ಎಂದು ಪೊಲೀಸ್​ ಅಧಿಕಾರಿಗಳು ತಿಳಿಸಿದ್ದಾರೆ.

ಬಾಲಕಿ ರೇಪ್​ ಮಾಡಿ ಕೊಲೆ: ನೆರೆ ಮನೆಯ ವ್ಯಕ್ತಿಯೋರ್ವ ಎಂಟು ವರ್ಷದ ಬಾಲಕಿ ಮೇಲೆ ಅತ್ಯಾಚಾರಗೈದು ಬಳಿಕ ತುಂಡು ತುಂಡಾಗಿ ಕತ್ತರಿಸಿ ನಿರ್ಜನ ಪ್ರದೇಶದಲ್ಲಿ ಎಸೆದಿರುವ ಅಮಾನವೀಯ ಘಟನೆ ರಾಜಸ್ಥಾನದ ಉದಯಪುರದಲ್ಲಿ ನಡೆದಿದೆ. ಪ್ರಕರಣದ ಸಂಬಂಧ ಸಂತ್ರಸ್ತ ಬಾಲಕಿಯ ನೆರೆಮನೆಯ ನಿವಾಸಿ ಕಮಲೇಶ್​ ಎಂಬಾತನನ್ನು ಪೊಲೀಸರು ಬಂಧಿಸಿದ್ದಾರೆ. ಬಂಧಿತ ಆರೋಪಿ ಬಾಲಕಿ ಮೇಲೆ ಅತ್ಯಾಚಾರ ಮಾಡಿ ನಿರ್ಜನ ಪ್ರದೇಶದಲ್ಲಿ ಬಿಸಾಡಿರುವುದಾಗಿ ಪೊಲೀಸರು ತಿಳಿಸಿದ್ದಾರೆ.

ಓದಿ: ಬೈಕ್​ಗೆ ಹಿಂಬದಿಯಿಂದ ಬಂದ ಕಾರು ಡಿಕ್ಕಿ: ಸ್ಥಳದಲ್ಲೇ ಮೃತಪಟ್ಟ ತಂದೆ - ಮಗಳು

ETV Bharat Logo

Copyright © 2024 Ushodaya Enterprises Pvt. Ltd., All Rights Reserved.