ETV Bharat / bharat

1990ರಲ್ಲಿ ಕಾಶ್ಮೀರಿ ಪಂಡಿತರ ಹತ್ಯೆ, ಹಿಂಸಾಚಾರ; ಸಿಬಿಐ,ಎನ್​​ಐಎ ತನಿಖೆ ಕೋರಿ ಸುಪ್ರೀಂಗೆ ಅರ್ಜಿ

author img

By

Published : Mar 24, 2022, 9:32 PM IST

ಕಾಶ್ಮೀರಿ ಪಂಡಿತರ ಮೇಲೆ ಪಾಕಿಸ್ತಾನಪ್ರೇರಿತ ಕಾಶ್ಮೀರ ಮುಸ್ಲಿಮರು ನಡೆಸಿದ ಭೀಕರ ಹತ್ಯಾಕಾಂಡದ ತನಿಖೆ ನಡೆಸುವಂತೆ ಕೋರಿ ಸುಪ್ರೀಂಕೋರ್ಟ್​​ನಲ್ಲಿ ಅರ್ಜಿ ಸಲ್ಲಿಕೆಯಾಗಿದೆ.

A Kashmiri Pandits group moves SC
A Kashmiri Pandits group moves SC

ನವದೆಹಲಿ: 1990ರಲ್ಲಿ ಜಮ್ಮು-ಕಾಶ್ಮೀರದಲ್ಲಿ ಕಾಶ್ಮೀರಿ ಪಂಡಿತರ ಮೇಲೆ ನಡೆದಿರುವ ಭೀಕರ ಹಿಂಸಾಚಾರ, ಸಾಮೂಹಿಕ ಹತ್ಯೆಯ ಕಥಾನಕ ಹೊಂದಿರುವ 'ದಿ ಕಾಶ್ಮೀರಿ ಫೈಲ್ಸ್​' ಚಿತ್ರ ರಿಲೀಸ್​​ ಆದಾಗಿನಿಂದಲೂ ಪರ-ವಿರೋಧಾಭಾಸಗಳು ವ್ಯಕ್ತವಾಗುತ್ತಿವೆ. ಆಡಳಿತಾರೂಢ ಬಿಜೆಪಿ ಹಾಗೂ ಪ್ರತಿಪಕ್ಷಗಳ ನಡುವಿನ ವಾಕ್ಸಮರಕ್ಕೂ ಇದು ದಾರಿ ಮಾಡಿಕೊಟ್ಟಿದೆ. ಇದೀಗ ಮಹತ್ವದ ಬೆಳವಣಿಗೆಯೊಂದರಲ್ಲಿ ಕಾಶ್ಮೀರಿ ಪಂಡಿತರ ಹತ್ಯೆಯ ಬಗ್ಗೆ ವಿಸ್ತೃತ ತನಿಖೆ ನಡೆಸುವಂತೆ ರೂಟ್ಸ್​ ಇನ್ ಕಾಶ್ಮೀರ ಸಂಸ್ಥೆ ಸುಪ್ರೀಂಕೋರ್ಟ್​​ನಲ್ಲಿ ಪರಿಹಾರಾತ್ಮಕ(ಕ್ಯುರೇಟಿವ್) ಅರ್ಜಿ ಸಲ್ಲಿಸಿದೆ.

ಕಾಶ್ಮೀರಿ ಪಂಡಿತರ ಮೇಲಿನ ದೌರ್ಜನ್ಯಕ್ಕೆ ಸಂಬಂಧಿಸಿದಂತೆ ಕೇಂದ್ರೀಯ ತನಿಖಾ ದಳ(ಸಿಬಿಐ) ಅಥವಾ ರಾಷ್ಟ್ರೀಯ ತನಿಖಾ ಸಂಸ್ಥೆ(ಎನ್​ಐಎ)ಯಿಂದ ತನಿಖೆ ನಡೆಸುವಂತೆ ರೂಟ್ಸ್ ಇನ್ ಕಾಶ್ಮೀರ ಸುಪ್ರೀಂಕೋರ್ಟ್​​ಗೆ ಮನವಿ ಮಾಡಿದೆ. ಈ ಅರ್ಜಿಯನ್ನು ಸರ್ವೋಚ್ಛ ನ್ಯಾಯಾಲಯ ವಿಚಾರಣೆ ನಡೆಸುವ ಸಾಧ್ಯತೆ ಇದೆ.

ಇದನ್ನೂ ಓದಿ: ಚಲಿಸುತ್ತಲೇ ಸ್ವಯಂಚಾಲಿತ ಚಾರ್ಜ್​.. ಸೋಲಾರ್​ ಬೈಕ್​ ಅಭಿವೃದ್ಧಿಪಡಿಸಿದ MSc ವಿದ್ಯಾರ್ಥಿ!

ಪ್ರಕರಣಕ್ಕೆ ಸಂಬಂಧಿಸಿದಂತೆ 2017ರಲ್ಲಿ ಪರಿಹಾರಾತ್ಮಕ ಅರ್ಜಿ ಸಲ್ಲಿಕೆ ಮಾಡಲಾಗಿತ್ತು. ಆದರೆ, ಘಟನೆ ನಡೆದು ಅನೇಕ ವರ್ಷಗಳು ಕಳೆದು ಹೋಗಿವೆ ಎಂಬ ಕಾರಣ ನೀಡಿ ಸುಪ್ರೀಂಕೋರ್ಟ್​​ ಅರ್ಜಿ ವಜಾಗೊಳಿಸಿತ್ತು. ಜೊತೆಗೆ, ತನಿಖೆ ನಡೆಸಲು ಸಮಗ್ರ ಸಾಕ್ಷ್ಯ ಸಂಗ್ರಹಿಸುವುದು ಕಷ್ಟ ಎಂದು ಹೇಳಿತ್ತು. 1989ರಿಂದ 1998ರ ಅವಧಿಯಲ್ಲಿ 700ಕ್ಕೂ ಹೆಚ್ಚು ಕಾಶ್ಮೀರಿ ಪಂಡಿತರ ಹತ್ಯೆ ಮಾಡಲಾಗಿತ್ತು ಎಂದು ಹೇಳಲಾಗಿದ್ದು, ಆ ಸಂದರ್ಭದಲ್ಲಿ ಯಾವುದೇ ರೀತಿಯ ಎಫ್​ಐಆರ್ ದಾಖಲಾಗಿಲ್ಲ. ಹೀಗಾಗಿ ಸುಪ್ರೀಂಕೋರ್ಟ್​​ನಲ್ಲಿ ವಿಚಾರಣೆ ನಡೆದಿರಲಿಲ್ಲ.

ಇದೀಗ ದಿ ಕಾಶ್ಮೀರಿ ಫೈಲ್ಸ್ ಚಿತ್ರ ಕಾಶ್ಮೀರಿ ಪಂಡಿತರ ಮೇಲೆ ನಡೆದಿರುವ ಕ್ರೂರ ಘಟನೆಗಳನ್ನಾಧರಿಸಿ ತೆರೆ ಕಂಡಿದ್ದು, ಇದನ್ನು ಆಧಾರವಾಗಿಟ್ಟುಕೊಂಡು ಸುಪ್ರೀಂಕೋರ್ಟ್​​ನಲ್ಲಿ ವಿಚಾರಣೆ ಒತ್ತಾಯಿಸಿ ಅರ್ಜಿ ಸಲ್ಲಿಸಲಾಗಿದೆ.

ನವದೆಹಲಿ: 1990ರಲ್ಲಿ ಜಮ್ಮು-ಕಾಶ್ಮೀರದಲ್ಲಿ ಕಾಶ್ಮೀರಿ ಪಂಡಿತರ ಮೇಲೆ ನಡೆದಿರುವ ಭೀಕರ ಹಿಂಸಾಚಾರ, ಸಾಮೂಹಿಕ ಹತ್ಯೆಯ ಕಥಾನಕ ಹೊಂದಿರುವ 'ದಿ ಕಾಶ್ಮೀರಿ ಫೈಲ್ಸ್​' ಚಿತ್ರ ರಿಲೀಸ್​​ ಆದಾಗಿನಿಂದಲೂ ಪರ-ವಿರೋಧಾಭಾಸಗಳು ವ್ಯಕ್ತವಾಗುತ್ತಿವೆ. ಆಡಳಿತಾರೂಢ ಬಿಜೆಪಿ ಹಾಗೂ ಪ್ರತಿಪಕ್ಷಗಳ ನಡುವಿನ ವಾಕ್ಸಮರಕ್ಕೂ ಇದು ದಾರಿ ಮಾಡಿಕೊಟ್ಟಿದೆ. ಇದೀಗ ಮಹತ್ವದ ಬೆಳವಣಿಗೆಯೊಂದರಲ್ಲಿ ಕಾಶ್ಮೀರಿ ಪಂಡಿತರ ಹತ್ಯೆಯ ಬಗ್ಗೆ ವಿಸ್ತೃತ ತನಿಖೆ ನಡೆಸುವಂತೆ ರೂಟ್ಸ್​ ಇನ್ ಕಾಶ್ಮೀರ ಸಂಸ್ಥೆ ಸುಪ್ರೀಂಕೋರ್ಟ್​​ನಲ್ಲಿ ಪರಿಹಾರಾತ್ಮಕ(ಕ್ಯುರೇಟಿವ್) ಅರ್ಜಿ ಸಲ್ಲಿಸಿದೆ.

ಕಾಶ್ಮೀರಿ ಪಂಡಿತರ ಮೇಲಿನ ದೌರ್ಜನ್ಯಕ್ಕೆ ಸಂಬಂಧಿಸಿದಂತೆ ಕೇಂದ್ರೀಯ ತನಿಖಾ ದಳ(ಸಿಬಿಐ) ಅಥವಾ ರಾಷ್ಟ್ರೀಯ ತನಿಖಾ ಸಂಸ್ಥೆ(ಎನ್​ಐಎ)ಯಿಂದ ತನಿಖೆ ನಡೆಸುವಂತೆ ರೂಟ್ಸ್ ಇನ್ ಕಾಶ್ಮೀರ ಸುಪ್ರೀಂಕೋರ್ಟ್​​ಗೆ ಮನವಿ ಮಾಡಿದೆ. ಈ ಅರ್ಜಿಯನ್ನು ಸರ್ವೋಚ್ಛ ನ್ಯಾಯಾಲಯ ವಿಚಾರಣೆ ನಡೆಸುವ ಸಾಧ್ಯತೆ ಇದೆ.

ಇದನ್ನೂ ಓದಿ: ಚಲಿಸುತ್ತಲೇ ಸ್ವಯಂಚಾಲಿತ ಚಾರ್ಜ್​.. ಸೋಲಾರ್​ ಬೈಕ್​ ಅಭಿವೃದ್ಧಿಪಡಿಸಿದ MSc ವಿದ್ಯಾರ್ಥಿ!

ಪ್ರಕರಣಕ್ಕೆ ಸಂಬಂಧಿಸಿದಂತೆ 2017ರಲ್ಲಿ ಪರಿಹಾರಾತ್ಮಕ ಅರ್ಜಿ ಸಲ್ಲಿಕೆ ಮಾಡಲಾಗಿತ್ತು. ಆದರೆ, ಘಟನೆ ನಡೆದು ಅನೇಕ ವರ್ಷಗಳು ಕಳೆದು ಹೋಗಿವೆ ಎಂಬ ಕಾರಣ ನೀಡಿ ಸುಪ್ರೀಂಕೋರ್ಟ್​​ ಅರ್ಜಿ ವಜಾಗೊಳಿಸಿತ್ತು. ಜೊತೆಗೆ, ತನಿಖೆ ನಡೆಸಲು ಸಮಗ್ರ ಸಾಕ್ಷ್ಯ ಸಂಗ್ರಹಿಸುವುದು ಕಷ್ಟ ಎಂದು ಹೇಳಿತ್ತು. 1989ರಿಂದ 1998ರ ಅವಧಿಯಲ್ಲಿ 700ಕ್ಕೂ ಹೆಚ್ಚು ಕಾಶ್ಮೀರಿ ಪಂಡಿತರ ಹತ್ಯೆ ಮಾಡಲಾಗಿತ್ತು ಎಂದು ಹೇಳಲಾಗಿದ್ದು, ಆ ಸಂದರ್ಭದಲ್ಲಿ ಯಾವುದೇ ರೀತಿಯ ಎಫ್​ಐಆರ್ ದಾಖಲಾಗಿಲ್ಲ. ಹೀಗಾಗಿ ಸುಪ್ರೀಂಕೋರ್ಟ್​​ನಲ್ಲಿ ವಿಚಾರಣೆ ನಡೆದಿರಲಿಲ್ಲ.

ಇದೀಗ ದಿ ಕಾಶ್ಮೀರಿ ಫೈಲ್ಸ್ ಚಿತ್ರ ಕಾಶ್ಮೀರಿ ಪಂಡಿತರ ಮೇಲೆ ನಡೆದಿರುವ ಕ್ರೂರ ಘಟನೆಗಳನ್ನಾಧರಿಸಿ ತೆರೆ ಕಂಡಿದ್ದು, ಇದನ್ನು ಆಧಾರವಾಗಿಟ್ಟುಕೊಂಡು ಸುಪ್ರೀಂಕೋರ್ಟ್​​ನಲ್ಲಿ ವಿಚಾರಣೆ ಒತ್ತಾಯಿಸಿ ಅರ್ಜಿ ಸಲ್ಲಿಸಲಾಗಿದೆ.

ETV Bharat Logo

Copyright © 2024 Ushodaya Enterprises Pvt. Ltd., All Rights Reserved.