ನವದೆಹಲಿ: ಆಪ್ ದೆಹಲಿ ಬಿಟ್ಟು ಉಳಿದ ರಾಜ್ಯಗಳತ್ತ ಚಿತ್ತ ನೆಟ್ಟಿದೆ. ಕಳೆದ ಚುನಾವಣೆಯಲ್ಲಿಯೇ ಪಂಜಾಬ್ನಲ್ಲಿ ಅಧಿಕಾರಕ್ಕೆ ಬರದಿದ್ದರೂ ಪ್ರತಿಪಕ್ಷದ ಸ್ಥಾನಕ್ಕೆ ಏರಿ ಕಮಾಲ್ ಮಾಡಿತ್ತು. ಕಳೆದ ಬಾರಿಯೇ ಆಪ್ ಅಧಿಕಾರಕ್ಕೆ ಏರಲಿದೆ ಎಂದು ಬಹುತೇಕ ಚುನಾವಣಾ ಪೂರ್ವ ಸಮೀಕ್ಷೆಗಳು ಭವಿಷ್ಯ ನುಡಿದಿದ್ದವು. ಆದರೆ 2017 ರಲ್ಲಿ ಫಲಿತಾಂಶ ಬಂದಾಗ ಕೇಜ್ರಿವಾಲ್ ನೇತೃತ್ವದ ಆಪ್ 20 ಸ್ಥಾನ ಪಡೆಯುವ ಮೂಲಕ ಪ್ರಬಲ ಪ್ರತಿಪಕ್ಷವಾಗಿ ಹೊರ ಹೊಮ್ಮಿತ್ತು.
ಈ ಬಾರಿ ಪಕ್ಷ ಮೊದಲೇ ಸಿಎಂ ಅಭ್ಯರ್ಥಿ ಘೋಷಣೆ ಮಾಡಿದೆ. ಭಗವಂತ್ ಮಾನ್ ಆಪ್ ಸಿಎಂ ಅಭ್ಯರ್ಥಿಯಾಗಿ ಘೋಷಿಸಲಾಗಿದೆ. ಇದೇ ಮಾದರಿಯಲ್ಲಿ ಈಗ ಗೋವಾದಲ್ಲೂ ಸಿಎಂ ಅಭ್ಯರ್ಥಿಯನ್ನು ಘೋಷಿಸಲು ಕೇಜ್ರಿವಾಲ್ ಮುಂದಾಗಿದ್ದಾರೆ.