ETV Bharat / bharat

ಕೇರಳ ಚುನಾವಣೆ: ಬಿಜೆಪಿ, ಕಾಂಗ್ರೆಸ್ ಅಭ್ಯರ್ಥಿಗಳ ಪಟ್ಟಿ ಶೀಘ್ರ ಬಿಡುಗಡೆ - ಲೆಫ್ಟ್​ ಡೆಮಾಕ್ರಟಿಕ್ ಫ್ರಂಟ್

ಕೇರಳ ಚುನಾವಣೆಗೆ ಕಾಂಗ್ರೆಸ್ ಪಕ್ಷವು ಅಭ್ಯರ್ಥಿಗಳ ಘೋಷಣೆ ಮಾಡಲು ಹರಸಾಹಸ ಪಡುತ್ತಿದ್ದು, ಕಳೆದ ಎರಡು ದಿನಗಳಿಂದ ಗುಪ್ತವಾಗಿ ಚರ್ಚಿಸುತ್ತಿದ್ದಾರೆ.

Kerala
ಕೇರಳ ಚುನಾವಣೆ
author img

By

Published : Mar 12, 2021, 9:55 AM IST

ತಿರುವನಂತಪುರಂ: ಲೆಫ್ಟ್ ಡೆಮಾಕ್ರಟಿಕ್ ಫ್ರಂಟ್ (ಎಲ್‌ಡಿಎಫ್) ಅಭ್ಯರ್ಥಿ ಆಯ್ಕೆಯ ಬಗ್ಗೆ ವಿವಾದಗಳು ನಡೆಯುತ್ತಿರುವ ಮಧ್ಯೆ, ಕೇರಳದ ಹಲವಾರು ಕ್ಷೇತ್ರಗಳಲ್ಲಿ ಪ್ರಚಾರ ಜೋರಾಗಿ ನಡೆಯುತ್ತಿದೆ.

ಈ ಮಧ್ಯೆ, ಕಾಂಗ್ರೆಸ್ ಪಕ್ಷವು ಅಭ್ಯರ್ಥಿಗಳ ಆಯ್ಕೆಗಾಗಿ ಕಸರತ್ತು ಮುಂದುವರೆಸಿದೆ. ಅಭ್ಯರ್ಥಿಗಳ ಬಗ್ಗೆ ನಿರ್ಧಾರ ತೆಗೆದುಕೊಳ್ಳಲು ದೆಹಲಿಗೆ ತೆರಳಿದ ಕಾಂಗ್ರೆಸ್ ನಾಯಕರು ಎರಡು ದಿನಗಳಿಂದ ಗುಪ್ತವಾಗಿ ಚರ್ಚಿಸುತ್ತಿದ್ದಾರೆ. ಕಳೆದ ಬಾರಿ ಕಾಂಗ್ರೆಸ್ ಕಳೆದುಕೊಂಡಿದ್ದ ನೆಮೊಮ್ ಮತ್ತು ಕಳಕ್ಕೂಟ್ಟಂ ಸ್ಥಾನಗಳನ್ನು ಮರಳಿ ಪಡೆಯಲು ಪ್ರಬಲ ಅಭ್ಯರ್ಥಿಗಳನ್ನು ಆಯ್ಕೆ ಮಾಡುವಂತೆ ಕಾಂಗ್ರೆಸ್ ರಾಷ್ಟ್ರೀಯ ನಾಯಕತ್ವ ರಾಜ್ಯ ನಾಯಕರಿಗೆ ನಿರ್ದೇಶನ ನೀಡಿದೆ.

ಕಳೆದ ಬಾರಿ ಕಾಂಗ್ರೆಸ್ ಸೋಲನುಭವಿಸಿದ ಮೂವತ್ತುಪುಳ, ಚಲಕ್ಕುಡಿ, ಪೊನ್ನಾನಿ, ನೀಲಾಂಬೂರ್ ಮತ್ತು ಕೊಂಗಾಡ್ ಸ್ಥಾನಗಳಲ್ಲಿ ಹೊಸ ಅಭ್ಯರ್ಥಿಗಳನ್ನು ಕಣಕ್ಕಿಳಿಸಲು ಕಾಂಗ್ರೆಸ್ ರಾಷ್ಟ್ರೀಯ ನಾಯಕರು ಶಿಫಾರಸು ಮಾಡಿದ್ದಾರೆ. ಇನ್ನು ರಾಜ್ಯ ನಾಯಕರು ನೆಮೊಮ್, ಕಳಕ್ಕೂಟ್ಟಂ ಮತ್ತು ವಟ್ಟಿಯೂರ್ಕಾವ್ ಸ್ಥಾನಗಳಿಂದ ಸ್ಪರ್ಧಿಸಲು ಸಿದ್ಧರಿದ್ದೀರಾ ಎಂದು ಕೇಳಲಾಗಿದೆ. ಉಮೇದುವಾರಿಕೆಗೆ ಒಮ್ಮತದ ಕೊರತೆಯಿಂದಾಗಿ ಅಭ್ಯರ್ಥಿಗಳನ್ನು ಕಣಕ್ಕಿಳಿಸುವ ನಿರ್ಧಾರ ವಿಳಂಬವಾಗುತ್ತಿದೆ ಎಂದು ತಿಳಿಯಲಾಗುತ್ತಿದೆ.

ಈ ಮಧ್ಯೆ ರಾಜ್ಯ ನಾಯಕತ್ವವು ನಾಳೆ ಸಂಜೆ ವೇಳೆಗೆ ಪಕ್ಷದ ಅಭ್ಯರ್ಥಿಗಳ ಪಟ್ಟಿಯನ್ನು ಘೋಷಿಸಲು ಸಜ್ಜಾಗಿದೆ. ಕಾಂಗ್ರೆಸ್ ನೇತೃತ್ವದ ಯುನೈಟೆಡ್ ಡೆಮಾಕ್ರಟಿಕ್ ಫ್ರಂಟ್ (ಯುಡಿಎಫ್)ನ ಎರಡನೇ ಮಿತ್ರಪಕ್ಷವಾದ ಇಂಡಿಯನ್ ಯೂನಿಯನ್ ಆಫ್ ಮುಸ್ಲಿಂ ಲೀಗ್ (ಐಯುಎಂಎಲ್) ಕೂಡ ಶುಕ್ರವಾರ ವಿಧಾನಸಭಾ ಚುನಾವಣೆಗೆ ಲೀಗ್ ಅಭ್ಯರ್ಥಿಗಳನ್ನು ಘೋಷಿಸಲಿದೆ.

ಭಾರತೀಯ ಜನತಾ ಪಕ್ಷ (ಬಿಜೆಪಿ) ರಾಜ್ಯ ನಾಯಕತ್ವದ ಪ್ರಕಾರ ಅಭ್ಯರ್ಥಿಗಳ ಘೋಷಣೆ ಶೀಘ್ರದಲ್ಲೇ ನಡೆಯಲಿದೆ. ಅಂತಿಮ ಪಟ್ಟಿಗಾಗಿ ಸಂಭವನೀಯ ಪಟ್ಟಿಯನ್ನು ರಾಷ್ಟ್ರೀಯ ನಾಯಕತ್ವಕ್ಕೆ ಹಸ್ತಾಂತರಿಸಲಾಗಿದೆ ಎಂದು ರಾಜ್ಯ ನಾಯಕರು ಹೇಳಿದ್ದಾರೆ.

ತಿರುವನಂತಪುರಂ: ಲೆಫ್ಟ್ ಡೆಮಾಕ್ರಟಿಕ್ ಫ್ರಂಟ್ (ಎಲ್‌ಡಿಎಫ್) ಅಭ್ಯರ್ಥಿ ಆಯ್ಕೆಯ ಬಗ್ಗೆ ವಿವಾದಗಳು ನಡೆಯುತ್ತಿರುವ ಮಧ್ಯೆ, ಕೇರಳದ ಹಲವಾರು ಕ್ಷೇತ್ರಗಳಲ್ಲಿ ಪ್ರಚಾರ ಜೋರಾಗಿ ನಡೆಯುತ್ತಿದೆ.

ಈ ಮಧ್ಯೆ, ಕಾಂಗ್ರೆಸ್ ಪಕ್ಷವು ಅಭ್ಯರ್ಥಿಗಳ ಆಯ್ಕೆಗಾಗಿ ಕಸರತ್ತು ಮುಂದುವರೆಸಿದೆ. ಅಭ್ಯರ್ಥಿಗಳ ಬಗ್ಗೆ ನಿರ್ಧಾರ ತೆಗೆದುಕೊಳ್ಳಲು ದೆಹಲಿಗೆ ತೆರಳಿದ ಕಾಂಗ್ರೆಸ್ ನಾಯಕರು ಎರಡು ದಿನಗಳಿಂದ ಗುಪ್ತವಾಗಿ ಚರ್ಚಿಸುತ್ತಿದ್ದಾರೆ. ಕಳೆದ ಬಾರಿ ಕಾಂಗ್ರೆಸ್ ಕಳೆದುಕೊಂಡಿದ್ದ ನೆಮೊಮ್ ಮತ್ತು ಕಳಕ್ಕೂಟ್ಟಂ ಸ್ಥಾನಗಳನ್ನು ಮರಳಿ ಪಡೆಯಲು ಪ್ರಬಲ ಅಭ್ಯರ್ಥಿಗಳನ್ನು ಆಯ್ಕೆ ಮಾಡುವಂತೆ ಕಾಂಗ್ರೆಸ್ ರಾಷ್ಟ್ರೀಯ ನಾಯಕತ್ವ ರಾಜ್ಯ ನಾಯಕರಿಗೆ ನಿರ್ದೇಶನ ನೀಡಿದೆ.

ಕಳೆದ ಬಾರಿ ಕಾಂಗ್ರೆಸ್ ಸೋಲನುಭವಿಸಿದ ಮೂವತ್ತುಪುಳ, ಚಲಕ್ಕುಡಿ, ಪೊನ್ನಾನಿ, ನೀಲಾಂಬೂರ್ ಮತ್ತು ಕೊಂಗಾಡ್ ಸ್ಥಾನಗಳಲ್ಲಿ ಹೊಸ ಅಭ್ಯರ್ಥಿಗಳನ್ನು ಕಣಕ್ಕಿಳಿಸಲು ಕಾಂಗ್ರೆಸ್ ರಾಷ್ಟ್ರೀಯ ನಾಯಕರು ಶಿಫಾರಸು ಮಾಡಿದ್ದಾರೆ. ಇನ್ನು ರಾಜ್ಯ ನಾಯಕರು ನೆಮೊಮ್, ಕಳಕ್ಕೂಟ್ಟಂ ಮತ್ತು ವಟ್ಟಿಯೂರ್ಕಾವ್ ಸ್ಥಾನಗಳಿಂದ ಸ್ಪರ್ಧಿಸಲು ಸಿದ್ಧರಿದ್ದೀರಾ ಎಂದು ಕೇಳಲಾಗಿದೆ. ಉಮೇದುವಾರಿಕೆಗೆ ಒಮ್ಮತದ ಕೊರತೆಯಿಂದಾಗಿ ಅಭ್ಯರ್ಥಿಗಳನ್ನು ಕಣಕ್ಕಿಳಿಸುವ ನಿರ್ಧಾರ ವಿಳಂಬವಾಗುತ್ತಿದೆ ಎಂದು ತಿಳಿಯಲಾಗುತ್ತಿದೆ.

ಈ ಮಧ್ಯೆ ರಾಜ್ಯ ನಾಯಕತ್ವವು ನಾಳೆ ಸಂಜೆ ವೇಳೆಗೆ ಪಕ್ಷದ ಅಭ್ಯರ್ಥಿಗಳ ಪಟ್ಟಿಯನ್ನು ಘೋಷಿಸಲು ಸಜ್ಜಾಗಿದೆ. ಕಾಂಗ್ರೆಸ್ ನೇತೃತ್ವದ ಯುನೈಟೆಡ್ ಡೆಮಾಕ್ರಟಿಕ್ ಫ್ರಂಟ್ (ಯುಡಿಎಫ್)ನ ಎರಡನೇ ಮಿತ್ರಪಕ್ಷವಾದ ಇಂಡಿಯನ್ ಯೂನಿಯನ್ ಆಫ್ ಮುಸ್ಲಿಂ ಲೀಗ್ (ಐಯುಎಂಎಲ್) ಕೂಡ ಶುಕ್ರವಾರ ವಿಧಾನಸಭಾ ಚುನಾವಣೆಗೆ ಲೀಗ್ ಅಭ್ಯರ್ಥಿಗಳನ್ನು ಘೋಷಿಸಲಿದೆ.

ಭಾರತೀಯ ಜನತಾ ಪಕ್ಷ (ಬಿಜೆಪಿ) ರಾಜ್ಯ ನಾಯಕತ್ವದ ಪ್ರಕಾರ ಅಭ್ಯರ್ಥಿಗಳ ಘೋಷಣೆ ಶೀಘ್ರದಲ್ಲೇ ನಡೆಯಲಿದೆ. ಅಂತಿಮ ಪಟ್ಟಿಗಾಗಿ ಸಂಭವನೀಯ ಪಟ್ಟಿಯನ್ನು ರಾಷ್ಟ್ರೀಯ ನಾಯಕತ್ವಕ್ಕೆ ಹಸ್ತಾಂತರಿಸಲಾಗಿದೆ ಎಂದು ರಾಜ್ಯ ನಾಯಕರು ಹೇಳಿದ್ದಾರೆ.

ETV Bharat Logo

Copyright © 2025 Ushodaya Enterprises Pvt. Ltd., All Rights Reserved.