ETV Bharat / bharat

ಕೇರಳ ಸ್ಪೋಟ: ಚಿಕಿತ್ಸೆ ಫಲಕಾರಿಯಾಗದೇ 12ರ ಬಾಲಕಿ ಸಾವು. ಮೃತರ ಸಂಖ್ಯೆ 3ಕ್ಕೆ ಏರಿಕೆ

author img

By ETV Bharat Karnataka Team

Published : Oct 30, 2023, 8:29 AM IST

Updated : Oct 30, 2023, 8:55 AM IST

ಕೇರಳದ ಕೊಚ್ಚಿಯ ಕಲಮಶ್ಶೇರಿ ಎಂಬಲ್ಲಿ ಪ್ರಾರ್ಥನಾ ಸಭೆ ವೇಳೆ ನಡೆದ ಸ್ಫೋಟದಲ್ಲಿ ಸಾವನ್ನಪ್ಪಿದವರ ಸಂಖ್ಯೆ 3ಕ್ಕೆ ಏರಿಕೆ ಆಗಿದೆ.

kerala-blast-3-dead-as-blasts-hit-event-in-ernakulam
ಕೇರಳ ಸ್ಪೋಟ : ಚಿಕಿತ್ಸೆ ಫಲಕಾರಿಯಾಗದೇ ಬಾಲಕಿ ಸಾವು. ಸಾವಿನ ಸಂಖ್ಯೆ 3ಕ್ಕೆ ಏರಿಕೆ

ಕೊಚ್ಚಿ (ಕೇರಳ) : ಕೊಚ್ಚಿಯ ಕಲಮಶ್ಶೇರಿ ಎಂಬಲ್ಲಿ ಭಾನುವಾರ ಬೆಳಿಗ್ಗೆ ಯೆಹೋವನ ಪ್ರಾರ್ಥನಾ ಸಭೆ ವೇಳೆ ಸಂಭವಿಸಿದ ಭೀಕರ ಸ್ಪೋಟದಲ್ಲಿ ಮೃತಪಟ್ಟವರ ಸಂಖ್ಯೆ 3ಕ್ಕೆ ಏರಿಕೆ ಆಗಿದೆ. ಘಟನೆಯಲ್ಲಿ ಒಟ್ಟು 52 ಮಂದಿ ಗಾಯಗೊಂಡಿದ್ದು, ವಿವಿಧ ಆಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ಕೊಡಿಸಲಾಗುತ್ತಿದೆ. ಗಂಭೀರ ಗಾಯಗೊಂಡು ಚಿಕಿತ್ಸೆ ಪಡೆಯುತ್ತಿದ್ದ ಮಲಯತ್ತೂರು ನಿವಾಸಿ ಲಿಬಿನಾ (12) ಎಂಬ ಬಾಲಕಿ ಚಿಕಿತ್ಸೆ ಫಲಕಾರಿಯಾಗದೇ ಸಾವನ್ನಪ್ಪಿದ್ದಾಳೆ.

ಶೇ. 95ರಷ್ಟು ಸುಟ್ಟಗಾಯಗಳಿಂದ ಬಳಲುತ್ತಿದ್ದ ಲಿಬಿನಾಗೆ ಕಲಮಸ್ಸೇರಿ ವೈದ್ಯಕೀಯ ಕಾಲೇಜಿನ ತುರ್ತು ನಿಗಾ ಘಟಕದಲ್ಲಿ ಚಿಕಿತ್ಸೆ ನೀಡಲಾಗುತ್ತಿತ್ತು. ಘಟನೆ ಸಂಭವಿಸಿದ ತಕ್ಷಣ ಬಾಲಕಿಯನ್ನು ಇಲ್ಲಿನ ವೈದ್ಯಕೀಯ ಕಾಲೇಜಿಗೆ ಕರೆತರಲಾಗಿತ್ತು. ಆದರೆ ಚಿಕಿತ್ಸೆ ಫಲಕಾರಿಯಾಗದೇ ಬಾಲಕಿ ರಾತ್ರಿ 12.40ಕ್ಕೆ ಮೃತಪಟ್ಟಿದ್ದಾಳೆ ಎಂದು ವೈದ್ಯರು ಮಾಹಿತಿ ನೀಡಿದ್ದಾರೆ.

ಕಳೆದ ದಿನ ಕರುಪ್ಪಂಪಾಡಿ ನಿವಾಸಿ ಲಿಯೋನಾ ಎಂಬವರು ಸ್ಪೋಟ ನಡೆದ ಸ್ಥಳದಲ್ಲೇ ಸಾವನ್ನಪ್ಪಿದ್ದರು. ಬಳಿಕ ತೊಡಪುಳ ನಿವಾಸಿ ಮೀನಾ ಕುಮಾರಿ ಎಂಬವರು ನಿನ್ನೆ( ಭಾನುವಾರ) ಸಂಜೆ ಕಲಮಶ್ಶೇರಿಯ ವೈದ್ಯಕೀಯ ಕಾಲೇಜಿನಲ್ಲಿ ಚಿಕಿತ್ಸೆ ಫಲಕಾರಿಯಾಗದೇ ಸಾವನ್ನಪ್ಪಿದ್ದರು. ಈ ಮೂಲಕ ಮೃತಪಟ್ಟವರ ಸಂಖ್ಯೆ ಮೂರಕ್ಕೆ ಏರಿಕೆ ಆಗಿದೆ. ಘಟನೆಯಲ್ಲಿ ಒಟ್ಟು 52 ಮಂದಿ ಗಾಯಗೊಂಡಿದ್ದು, 16 ಜನರ ಸ್ಥಿತಿ ಗಂಭೀರವಾಗಿದೆ. ಇದರಲ್ಲಿ 8 ಮಂದಿ ಕಲಮಶ್ಶೇರಿ ವೈದ್ಯಕೀಯ ಕಾಲೇಜಿನಲ್ಲಿ, ಇಬ್ಬರು ಸನ್​ರೈಸ್​ ಆಸ್ಪತ್ರೆಯಲ್ಲಿ, 4 ಮಂದಿ ರಾಜಗಿರಿ ಆಸ್ಪತ್ರೆಯಲ್ಲಿ ಹಾಗೂ ಇಬ್ಬರು ಮೆಡಿಸಿಟಿ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ.

ಇದೇ ವೇಳೆ, ಸ್ಪೋಟ ನಡೆಸಿದ ಶಂಕಿತ ಡೊಮಿನಿಕ್ ಮಾರ್ಟಿನ್​ನನ್ನು ಪೊಲೀಸರು ಕಣ್ಣೂರು ರೈಲ್ವೇ ನಿಲ್ದಾಣದಲ್ಲಿ ಬಂಧಿಸಿದ್ದು, ಇಂದು ನ್ಯಾಯಾಲಯಕ್ಕೆ ಹಾಜರುಪಡಿಸಲಿದ್ದಾರೆ. ಆರೋಪಿ ಮಾರ್ಟಿನ್​ ,ಈ ಸ್ಪೋಟವನ್ನು ನಾನೇ ಮಾಡಿದ್ದೇನೆ. ಇದರಲ್ಲಿ ಬೇರೆ ಯಾರದ್ದೇ ಕೈವಾಡ ಇಲ್ಲ. ತಾನೇ ಯೋಜನೆ ರೂಪಿಸಿ ಸ್ಪೋಟ ನಡೆಸಿದ್ದೇನೆ. ಯೂಟ್ಯೂಬ್​ ನೋಡಿ ಸ್ಪೋಟಕವನ್ನು ತಯಾರಿಸಿದ್ದೇನೆ ಎಂದು ಆರೋಪಿ ಹೇಳಿದ್ದಾನೆ ಎಂದು ತಿಳಿದುಬಂದಿದೆ. ಪೊಲೀಸರು ಪ್ರಕರಣದ ತನಿಖೆ ಕೈಗೆತ್ತಿಕೊಂಡಿದ್ದಾರೆ.

ಕೇರಳದ ಕಲಮಶ್ಶೇರಿ ಎಂಬಲ್ಲಿ ಜಿಹೋವನರ ಪ್ರಾರ್ಥನಾ ಸಭೆ ವೇಳೆ ಸರಣಿ ಸ್ಪೋಟ ಸಂಭವಿಸಿದೆ. ಪ್ರಾರ್ಥನಾ ಸಭೆಯಲ್ಲಿ ಸುಮಾರು 2000 ಜನ ಪಾಲ್ಗೊಂಡಿದ್ದರು. ಇದರಲ್ಲಿ ಮೂವರು ಸಾವನ್ನಪ್ಪಿದ್ದಾರೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ.

ಕಾಂಗ್ರೆಸ್​ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಖಂಡನೆ : ಕಾಂಗ್ರೆಸ್​ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಅವರು ಕೇರಳದಲ್ಲಿ ನಡೆದ ಸ್ಪೋಟ ಪ್ರಕರಣ ಖಂಡಿಸಿದ್ದಾರೆ. ನಾಗರಿಕ ಸಮಾಜದಲ್ಲಿ ದ್ವೇಷ, ಭಯೋತ್ಪಾದನೆಯನ್ನು ಒಪ್ಪಲು ಸಾಧ್ಯವಿಲ್ಲ. ಈ ರೀತಿ ಹಿಂಸಾಚಾರ ನಡೆಸುವವರ ವಿರುದ್ಧ ಕಠಿಣ ಕ್ರಮಕೈಗೊಳ್ಳಬೇಕು ಎಂದು ಒತ್ತಾಯಿಸಿದ್ದಾರೆ.

ಈ ಬಗ್ಗೆ ಎಕ್ಸ್​ನಲ್ಲಿ ಪೋಸ್ಟ್​ ಮಾಡಿರುವ ಖರ್ಗೆ , "ಕೇರಳದ ಎರ್ನಾಕುಲಂನಲ್ಲಿರುವ ಕನ್ವೆನ್ಷನ್ ಸೆಂಟರ್​ನಲ್ಲಿ ನಡೆದ ದಾಳಿಯನ್ನು ನಾವು ಬಲವಾಗಿ ಖಂಡಿಸುತ್ತೇವೆ. ದ್ವೇಷ , ಭಯೋತ್ಪಾದನೆ, ವಿಭಜನೆಗೆ ಸುಸಂಸ್ಕೃತ ಸಮಾಜದಲ್ಲಿ ಸ್ಥಾನವಿಲ್ಲ. ಹಿಂಸೆಯನ್ನು ನಡೆಸುವವರ ವಿರುದ್ಧ ಕಠಿಣ ಕ್ರಮಕೈಗೊಳ್ಳಬೇಕು. ನಾವು ಮೃತರ ಕುಟುಂಬಸ್ಥರಿಗೆ ಸಂತಾಪವನ್ನು ಸೂಚಿಸುತ್ತೇವೆ ಎಂದು ಹೇಳಿದಾರೆ.

ಇದನ್ನೂ ಓದಿ : ಕೇರಳ ಸ್ಫೋಟ: ಸಾವಿನ ಸಂಖ್ಯೆ 2ಕ್ಕೇರಿಕೆ, 52 ಮಂದಿಗೆ ತೀವ್ರ ಗಾಯ, 6 ಜನರ ಸ್ಥಿತಿ ಚಿಂತಾಜನಕ

ಕೊಚ್ಚಿ (ಕೇರಳ) : ಕೊಚ್ಚಿಯ ಕಲಮಶ್ಶೇರಿ ಎಂಬಲ್ಲಿ ಭಾನುವಾರ ಬೆಳಿಗ್ಗೆ ಯೆಹೋವನ ಪ್ರಾರ್ಥನಾ ಸಭೆ ವೇಳೆ ಸಂಭವಿಸಿದ ಭೀಕರ ಸ್ಪೋಟದಲ್ಲಿ ಮೃತಪಟ್ಟವರ ಸಂಖ್ಯೆ 3ಕ್ಕೆ ಏರಿಕೆ ಆಗಿದೆ. ಘಟನೆಯಲ್ಲಿ ಒಟ್ಟು 52 ಮಂದಿ ಗಾಯಗೊಂಡಿದ್ದು, ವಿವಿಧ ಆಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ಕೊಡಿಸಲಾಗುತ್ತಿದೆ. ಗಂಭೀರ ಗಾಯಗೊಂಡು ಚಿಕಿತ್ಸೆ ಪಡೆಯುತ್ತಿದ್ದ ಮಲಯತ್ತೂರು ನಿವಾಸಿ ಲಿಬಿನಾ (12) ಎಂಬ ಬಾಲಕಿ ಚಿಕಿತ್ಸೆ ಫಲಕಾರಿಯಾಗದೇ ಸಾವನ್ನಪ್ಪಿದ್ದಾಳೆ.

ಶೇ. 95ರಷ್ಟು ಸುಟ್ಟಗಾಯಗಳಿಂದ ಬಳಲುತ್ತಿದ್ದ ಲಿಬಿನಾಗೆ ಕಲಮಸ್ಸೇರಿ ವೈದ್ಯಕೀಯ ಕಾಲೇಜಿನ ತುರ್ತು ನಿಗಾ ಘಟಕದಲ್ಲಿ ಚಿಕಿತ್ಸೆ ನೀಡಲಾಗುತ್ತಿತ್ತು. ಘಟನೆ ಸಂಭವಿಸಿದ ತಕ್ಷಣ ಬಾಲಕಿಯನ್ನು ಇಲ್ಲಿನ ವೈದ್ಯಕೀಯ ಕಾಲೇಜಿಗೆ ಕರೆತರಲಾಗಿತ್ತು. ಆದರೆ ಚಿಕಿತ್ಸೆ ಫಲಕಾರಿಯಾಗದೇ ಬಾಲಕಿ ರಾತ್ರಿ 12.40ಕ್ಕೆ ಮೃತಪಟ್ಟಿದ್ದಾಳೆ ಎಂದು ವೈದ್ಯರು ಮಾಹಿತಿ ನೀಡಿದ್ದಾರೆ.

ಕಳೆದ ದಿನ ಕರುಪ್ಪಂಪಾಡಿ ನಿವಾಸಿ ಲಿಯೋನಾ ಎಂಬವರು ಸ್ಪೋಟ ನಡೆದ ಸ್ಥಳದಲ್ಲೇ ಸಾವನ್ನಪ್ಪಿದ್ದರು. ಬಳಿಕ ತೊಡಪುಳ ನಿವಾಸಿ ಮೀನಾ ಕುಮಾರಿ ಎಂಬವರು ನಿನ್ನೆ( ಭಾನುವಾರ) ಸಂಜೆ ಕಲಮಶ್ಶೇರಿಯ ವೈದ್ಯಕೀಯ ಕಾಲೇಜಿನಲ್ಲಿ ಚಿಕಿತ್ಸೆ ಫಲಕಾರಿಯಾಗದೇ ಸಾವನ್ನಪ್ಪಿದ್ದರು. ಈ ಮೂಲಕ ಮೃತಪಟ್ಟವರ ಸಂಖ್ಯೆ ಮೂರಕ್ಕೆ ಏರಿಕೆ ಆಗಿದೆ. ಘಟನೆಯಲ್ಲಿ ಒಟ್ಟು 52 ಮಂದಿ ಗಾಯಗೊಂಡಿದ್ದು, 16 ಜನರ ಸ್ಥಿತಿ ಗಂಭೀರವಾಗಿದೆ. ಇದರಲ್ಲಿ 8 ಮಂದಿ ಕಲಮಶ್ಶೇರಿ ವೈದ್ಯಕೀಯ ಕಾಲೇಜಿನಲ್ಲಿ, ಇಬ್ಬರು ಸನ್​ರೈಸ್​ ಆಸ್ಪತ್ರೆಯಲ್ಲಿ, 4 ಮಂದಿ ರಾಜಗಿರಿ ಆಸ್ಪತ್ರೆಯಲ್ಲಿ ಹಾಗೂ ಇಬ್ಬರು ಮೆಡಿಸಿಟಿ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ.

ಇದೇ ವೇಳೆ, ಸ್ಪೋಟ ನಡೆಸಿದ ಶಂಕಿತ ಡೊಮಿನಿಕ್ ಮಾರ್ಟಿನ್​ನನ್ನು ಪೊಲೀಸರು ಕಣ್ಣೂರು ರೈಲ್ವೇ ನಿಲ್ದಾಣದಲ್ಲಿ ಬಂಧಿಸಿದ್ದು, ಇಂದು ನ್ಯಾಯಾಲಯಕ್ಕೆ ಹಾಜರುಪಡಿಸಲಿದ್ದಾರೆ. ಆರೋಪಿ ಮಾರ್ಟಿನ್​ ,ಈ ಸ್ಪೋಟವನ್ನು ನಾನೇ ಮಾಡಿದ್ದೇನೆ. ಇದರಲ್ಲಿ ಬೇರೆ ಯಾರದ್ದೇ ಕೈವಾಡ ಇಲ್ಲ. ತಾನೇ ಯೋಜನೆ ರೂಪಿಸಿ ಸ್ಪೋಟ ನಡೆಸಿದ್ದೇನೆ. ಯೂಟ್ಯೂಬ್​ ನೋಡಿ ಸ್ಪೋಟಕವನ್ನು ತಯಾರಿಸಿದ್ದೇನೆ ಎಂದು ಆರೋಪಿ ಹೇಳಿದ್ದಾನೆ ಎಂದು ತಿಳಿದುಬಂದಿದೆ. ಪೊಲೀಸರು ಪ್ರಕರಣದ ತನಿಖೆ ಕೈಗೆತ್ತಿಕೊಂಡಿದ್ದಾರೆ.

ಕೇರಳದ ಕಲಮಶ್ಶೇರಿ ಎಂಬಲ್ಲಿ ಜಿಹೋವನರ ಪ್ರಾರ್ಥನಾ ಸಭೆ ವೇಳೆ ಸರಣಿ ಸ್ಪೋಟ ಸಂಭವಿಸಿದೆ. ಪ್ರಾರ್ಥನಾ ಸಭೆಯಲ್ಲಿ ಸುಮಾರು 2000 ಜನ ಪಾಲ್ಗೊಂಡಿದ್ದರು. ಇದರಲ್ಲಿ ಮೂವರು ಸಾವನ್ನಪ್ಪಿದ್ದಾರೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ.

ಕಾಂಗ್ರೆಸ್​ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಖಂಡನೆ : ಕಾಂಗ್ರೆಸ್​ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಅವರು ಕೇರಳದಲ್ಲಿ ನಡೆದ ಸ್ಪೋಟ ಪ್ರಕರಣ ಖಂಡಿಸಿದ್ದಾರೆ. ನಾಗರಿಕ ಸಮಾಜದಲ್ಲಿ ದ್ವೇಷ, ಭಯೋತ್ಪಾದನೆಯನ್ನು ಒಪ್ಪಲು ಸಾಧ್ಯವಿಲ್ಲ. ಈ ರೀತಿ ಹಿಂಸಾಚಾರ ನಡೆಸುವವರ ವಿರುದ್ಧ ಕಠಿಣ ಕ್ರಮಕೈಗೊಳ್ಳಬೇಕು ಎಂದು ಒತ್ತಾಯಿಸಿದ್ದಾರೆ.

ಈ ಬಗ್ಗೆ ಎಕ್ಸ್​ನಲ್ಲಿ ಪೋಸ್ಟ್​ ಮಾಡಿರುವ ಖರ್ಗೆ , "ಕೇರಳದ ಎರ್ನಾಕುಲಂನಲ್ಲಿರುವ ಕನ್ವೆನ್ಷನ್ ಸೆಂಟರ್​ನಲ್ಲಿ ನಡೆದ ದಾಳಿಯನ್ನು ನಾವು ಬಲವಾಗಿ ಖಂಡಿಸುತ್ತೇವೆ. ದ್ವೇಷ , ಭಯೋತ್ಪಾದನೆ, ವಿಭಜನೆಗೆ ಸುಸಂಸ್ಕೃತ ಸಮಾಜದಲ್ಲಿ ಸ್ಥಾನವಿಲ್ಲ. ಹಿಂಸೆಯನ್ನು ನಡೆಸುವವರ ವಿರುದ್ಧ ಕಠಿಣ ಕ್ರಮಕೈಗೊಳ್ಳಬೇಕು. ನಾವು ಮೃತರ ಕುಟುಂಬಸ್ಥರಿಗೆ ಸಂತಾಪವನ್ನು ಸೂಚಿಸುತ್ತೇವೆ ಎಂದು ಹೇಳಿದಾರೆ.

ಇದನ್ನೂ ಓದಿ : ಕೇರಳ ಸ್ಫೋಟ: ಸಾವಿನ ಸಂಖ್ಯೆ 2ಕ್ಕೇರಿಕೆ, 52 ಮಂದಿಗೆ ತೀವ್ರ ಗಾಯ, 6 ಜನರ ಸ್ಥಿತಿ ಚಿಂತಾಜನಕ

Last Updated : Oct 30, 2023, 8:55 AM IST
ETV Bharat Logo

Copyright © 2024 Ushodaya Enterprises Pvt. Ltd., All Rights Reserved.