ETV Bharat / bharat

ಹೋಟೆಲ್​ನಲ್ಲಿ ದಂಪತಿ ಆತ್ಮಹತ್ಯೆ.. ಡೆತ್​ನೋಟ್​ನಲ್ಲಿ ಮೂರು ಪಕ್ಷಗಳ ಮುಖಂಡರ ವಿರುದ್ಧ ಗಂಭೀರ ಆರೋಪ

author img

By

Published : Nov 23, 2022, 4:15 PM IST

ಕೇರಳದ ಎರ್ನಾಕುಲಂನ ಪಲ್ಲೂರುತಿ ಗ್ರಾಮದ ದಂಪತಿಗಳು ತಮಿಳುನಾಡಿನ ಪಳನಿ ದೇವಸ್ಥಾನದ ಬಳಿಯ ಖಾಸಗಿ ಹೋಟೆಲ್​ನಲ್ಲಿ ಆತ್ಮಹತ್ಯೆ ಮಾಡಿಕೊಂಡಿದ್ದಾರೆ.

ಕೇರಳ ಮೂಲದ ದಂಪತಿ
ಕೇರಳ ಮೂಲದ ದಂಪತಿ

ದಿಂಡಿಗಲ್(ತಮಿಳುನಾಡು): ಜಿಲ್ಲೆಯ ಪಳನಿ ದೇವಾಲಯಕ್ಕೆ ಭೇಟಿ ನೀಡಿದ್ದ ಕೇರಳ ಮೂಲದ ದಂಪತಿ ಖಾಸಗಿ ಹೋಟೆಲ್​ನಲ್ಲಿ ಆತ್ಮಹತ್ಯೆಗೆ ಶರಣಾಗಿರುವ ಪ್ರಕರಣ ಬೆಳಕಿಗೆ ಬಂದಿದೆ. ರಘುರಾಮ್​(46) ಮತ್ತು ಉಷಾ(44) ನೇಣು ಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡಿರುವ ದಂಪತಿ.

ಕೇರಳದ ಎರ್ನಾಕುಲಂ ಜಿಲ್ಲೆಯ ಪಲ್ಲುರ್ತಿಯವರಾದ ರಘುರಾಮ್​ ಮತ್ತು ಉಷಾ ನ.21 ರಂದು ಪಳನಿ ದೇವಸ್ಥಾನಕ್ಕೆ ಬಂದಿದ್ದರು. ಇವರಿಗೆ ಇಬ್ಬರು ಹೆಣ್ಣುಮಕ್ಕಳು ಸಹ ಇದ್ದಾರೆ. ಹೋಟೆಲ್​ನಲ್ಲಿ ತಂಗಿದ್ದ ಈ ದಂಪತಿ ನ.22 ರಂದು ರೂಮಿನ ಬಾಗಿಲು ತೆರೆಯದ ಹಿನ್ನೆಲೆ ಹೋಟೆಲ್​ನವರು ಪೊಲೀಸರಿಗೆ ಕರೆ ಮಾಡಿ ಮಾಹಿತಿ ನೀಡಿದ್ದರು.

ತಕ್ಷಣ ಪೊಲೀಸರು ಸ್ಥಳಕ್ಕಾಗಮಿಸಿ ಬಾಗಿಲನ್ನು ಒಡೆದು ನೋಡಿದಾಗ ದಂಪತಿ ನೇಣುಬಿಗಿದುಕೊಂಡು ಸಾವನ್ನಪ್ಪಿರುವುದು ಗೊತ್ತಾಗಿದೆ. ಪೊಲೀಸರು ಮೃತದೇಹಗಳನ್ನು ಮರಣೋತ್ತರ ಪರೀಕ್ಷೆಗಾಗಿ ಪಳನಿ ಸರ್ಕಾರಿ ಆಸ್ಪತ್ರೆಗೆ ಸಾಗಿಸಿದರು. ಸ್ಥಳದಲ್ಲಿ ಡೆತ್​ನೋಟ್​ ಪತ್ತೆಯಾಗಿದ್ದು, ಪೊಲೀಸರು ಅದನ್ನು ವಶಕ್ಕೆ ಪಡೆದಿದ್ದಾರೆ.

ಮೂರು ಪಕ್ಷಗಳ ಮುಖಂಡರ ವಿರುದ್ಧ ಆರೋಪ: ಪತ್ತೆಯಾಗಿರುವ ಡೆತ್​ನೋಟ್​ನಲ್ಲಿ 'ಕಾಂಗ್ರೆಸ್​ , ಬಿಜೆಪಿ ಮತ್ತು ಸಿಪಿಎಂ ಪಕ್ಷದ 10 ಜನ ಮುಖಂಡರು ಕ್ಷುಲ್ಲಕ ಕಾರಣಕ್ಕೆ ತಮ್ಮನ್ನು ನ್ಯಾಯಾಲಯಕ್ಕೆ ಅಲೆದಾಡುವಂತೆ ಮಾಡಿದರು. ಇದರಿಂದ ನಾವು ತುಂಬಾ ನೊಂದಿದ್ದೇವೆ. ನಮ್ಮ ಸಾವಿಗೆ ಈ 10 ಜನ ಮುಖಂಡರೇ ಕಾರಣ. ಅವರ ವಿರುದ್ಧ ಕ್ರಮ ತೆಗೆದುಕೊಳ್ಳಬೇಕು' ಎಂದು ದಂಪತಿ ಬರೆದಿದ್ದಾರೆ ಎಂದು ಪೊಲೀಸರು ತಿಳಿಸಿದ್ದಾರೆ.

ಓದಿ: ವಸತಿ ನಿಲಯದಲ್ಲಿ ನೇಣು ಬಿಗಿದುಕೊಂಡು ವಿದ್ಯಾರ್ಥಿ ಆತ್ಮಹತ್ಯೆ

ದಿಂಡಿಗಲ್(ತಮಿಳುನಾಡು): ಜಿಲ್ಲೆಯ ಪಳನಿ ದೇವಾಲಯಕ್ಕೆ ಭೇಟಿ ನೀಡಿದ್ದ ಕೇರಳ ಮೂಲದ ದಂಪತಿ ಖಾಸಗಿ ಹೋಟೆಲ್​ನಲ್ಲಿ ಆತ್ಮಹತ್ಯೆಗೆ ಶರಣಾಗಿರುವ ಪ್ರಕರಣ ಬೆಳಕಿಗೆ ಬಂದಿದೆ. ರಘುರಾಮ್​(46) ಮತ್ತು ಉಷಾ(44) ನೇಣು ಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡಿರುವ ದಂಪತಿ.

ಕೇರಳದ ಎರ್ನಾಕುಲಂ ಜಿಲ್ಲೆಯ ಪಲ್ಲುರ್ತಿಯವರಾದ ರಘುರಾಮ್​ ಮತ್ತು ಉಷಾ ನ.21 ರಂದು ಪಳನಿ ದೇವಸ್ಥಾನಕ್ಕೆ ಬಂದಿದ್ದರು. ಇವರಿಗೆ ಇಬ್ಬರು ಹೆಣ್ಣುಮಕ್ಕಳು ಸಹ ಇದ್ದಾರೆ. ಹೋಟೆಲ್​ನಲ್ಲಿ ತಂಗಿದ್ದ ಈ ದಂಪತಿ ನ.22 ರಂದು ರೂಮಿನ ಬಾಗಿಲು ತೆರೆಯದ ಹಿನ್ನೆಲೆ ಹೋಟೆಲ್​ನವರು ಪೊಲೀಸರಿಗೆ ಕರೆ ಮಾಡಿ ಮಾಹಿತಿ ನೀಡಿದ್ದರು.

ತಕ್ಷಣ ಪೊಲೀಸರು ಸ್ಥಳಕ್ಕಾಗಮಿಸಿ ಬಾಗಿಲನ್ನು ಒಡೆದು ನೋಡಿದಾಗ ದಂಪತಿ ನೇಣುಬಿಗಿದುಕೊಂಡು ಸಾವನ್ನಪ್ಪಿರುವುದು ಗೊತ್ತಾಗಿದೆ. ಪೊಲೀಸರು ಮೃತದೇಹಗಳನ್ನು ಮರಣೋತ್ತರ ಪರೀಕ್ಷೆಗಾಗಿ ಪಳನಿ ಸರ್ಕಾರಿ ಆಸ್ಪತ್ರೆಗೆ ಸಾಗಿಸಿದರು. ಸ್ಥಳದಲ್ಲಿ ಡೆತ್​ನೋಟ್​ ಪತ್ತೆಯಾಗಿದ್ದು, ಪೊಲೀಸರು ಅದನ್ನು ವಶಕ್ಕೆ ಪಡೆದಿದ್ದಾರೆ.

ಮೂರು ಪಕ್ಷಗಳ ಮುಖಂಡರ ವಿರುದ್ಧ ಆರೋಪ: ಪತ್ತೆಯಾಗಿರುವ ಡೆತ್​ನೋಟ್​ನಲ್ಲಿ 'ಕಾಂಗ್ರೆಸ್​ , ಬಿಜೆಪಿ ಮತ್ತು ಸಿಪಿಎಂ ಪಕ್ಷದ 10 ಜನ ಮುಖಂಡರು ಕ್ಷುಲ್ಲಕ ಕಾರಣಕ್ಕೆ ತಮ್ಮನ್ನು ನ್ಯಾಯಾಲಯಕ್ಕೆ ಅಲೆದಾಡುವಂತೆ ಮಾಡಿದರು. ಇದರಿಂದ ನಾವು ತುಂಬಾ ನೊಂದಿದ್ದೇವೆ. ನಮ್ಮ ಸಾವಿಗೆ ಈ 10 ಜನ ಮುಖಂಡರೇ ಕಾರಣ. ಅವರ ವಿರುದ್ಧ ಕ್ರಮ ತೆಗೆದುಕೊಳ್ಳಬೇಕು' ಎಂದು ದಂಪತಿ ಬರೆದಿದ್ದಾರೆ ಎಂದು ಪೊಲೀಸರು ತಿಳಿಸಿದ್ದಾರೆ.

ಓದಿ: ವಸತಿ ನಿಲಯದಲ್ಲಿ ನೇಣು ಬಿಗಿದುಕೊಂಡು ವಿದ್ಯಾರ್ಥಿ ಆತ್ಮಹತ್ಯೆ

ETV Bharat Logo

Copyright © 2024 Ushodaya Enterprises Pvt. Ltd., All Rights Reserved.