ETV Bharat / bharat

ಸಂಸತ್​​ನಲ್ಲಿ ಮಾಧ್ಯಮಗಳಿಗೆ ಕೇಂದ್ರದ ನಿರ್ಬಂಧ.. ರಾಜ್ಯಸಭಾ ಅಧ್ಯಕ್ಷರಿಗೆ ಖರ್ಗೆ ಪತ್ರ

ಕೊರೊನಾ ವೈರಸ್​ ಹಿನ್ನೆಲೆಯಲ್ಲಿ ಸಂಸತ್​​​​ನ ಪ್ರೆಸ್​​ ಗ್ಯಾಲರಿಯಲ್ಲಿ ಪ್ರವೇಶ ಮಾಡಲು ಮಾಧ್ಯಮಗಳಿಗೆ ನಿರ್ಬಂಧ ವಿಧಿಸಲಾಗಿದ್ದು, ಇದೇ ವಿಚಾರವಾಗಿ ಮಲ್ಲಿಕಾರ್ಜುನ್ ಖರ್ಗೆ ರಾಜ್ಯಸಭಾ ಅಧ್ಯಕ್ಷರಿಗೆ ಪತ್ರ ಬರೆದಿದ್ದಾರೆ.

author img

By

Published : Dec 1, 2021, 6:43 PM IST

Kharge writes to RS Chairman Naidu
Kharge writes to RS Chairman Naidu

ನವದೆಹಲಿ: ಕಳೆದ ಸೋಮವಾರದಿಂದ ಸಂಸತ್​​ ಚಳಿಗಾಲದ ಅಧಿವೇಶನ ಆರಂಭಗೊಂಡಿದ್ದು, ವಿವಿಧ ವಿಷಯಗಳನ್ನಿಟ್ಟುಕೊಂಡು ಕೇಂದ್ರದ ವಿರುದ್ಧ ಪ್ರತಿಪಕ್ಷಗಳು ಹರಿಹಾಯುತ್ತಿವೆ. ಇದೀಗ ಸಂಸತ್​​​ನಲ್ಲಿ ಮಾಧ್ಯಮಗಳ ಮೇಲೆ ಹಾಕಿರುವ ನಿರ್ಬಂಧ ವಿಚಾರಕ್ಕೆ ಸಂಬಂಧಿಸಿದಂತೆ ರಾಜ್ಯಸಭಾ ಅಧ್ಯಕ್ಷರಿಗೆ ಮಲ್ಲಿಕಾರ್ಜುನ​ ಖರ್ಗೆ ಪತ್ರ ಬರೆದಿದ್ದಾರೆ.

Kharge writes to RS Chairman Naidu
ಮಾಧ್ಯಮ ನಿರ್ಬಂಧ ವಿಚಾರವಾಗಿ ರಾಜ್ಯಸಭಾ ಅಧ್ಯಕ್ಷರಿಗೆ ಖರ್ಗೆ ಪತ್ರ

ರಾಜ್ಯಸಭೆ ಅಧ್ಯಕ್ಷರಾಗಿರುವ ಎಂ. ವೆಂಕಯ್ಯ ನಾಯ್ಡು ಅವರಿಗೆ ಪತ್ರ ಬರೆದಿರುವ ಮಲ್ಲಿಕಾರ್ಜುನ ಖರ್ಗೆ, ಪತ್ರಕರ್ತರ ಮೇಲೆ ಹಾಕಿರುವ ನಿರ್ಬಂಧ ತಕ್ಷಣವೇ ತೆಗೆದು ಹಾಕುವಂತೆ ಮನವಿ ಮಾಡಿದ್ದಾರೆ. ಸಂಸತ್​​​ನಲ್ಲಿ ಕೋವಿಡ್ ಮಹಾಮಾರಿ ತಡೆಯುವ ಉದ್ದೇಶದಿಂದ ಪ್ರೆಸ್​ ಗ್ಯಾಲರಿಯಲ್ಲಿ ಪತ್ರಕರ್ತರ ಪ್ರವೇಶಕ್ಕೆ ನಿರ್ಬಂಧ ವಿಧಿಸಲಾಗಿದೆ. ಇದು ತೀವ್ರ ದುಃಖ ಮತ್ತು ಆಘಾತಕಾರಿ ಸಂಗತಿ ಎಂದು ರಾಜ್ಯಸಭೆ ವಿರೋಧ ಪಕ್ಷದ ನಾಯಕ ಮಲ್ಲಿಕಾರ್ಜುನ​​ ಖರ್ಗೆ ಪತ್ರದಲ್ಲಿ ತಿಳಿಸಿದ್ದಾರೆ.

ಇದನ್ನೂ ಓದಿರಿ: ಕೃಷಿ ಕಾಯ್ದೆಗಳ ವಿರುದ್ಧ ಹೋರಾಡಿ ಮೃತಪಟ್ಟ ರೈತರ ದಾಖಲೆ ಇಲ್ಲ, ಪರಿಹಾರವೂ ಇಲ್ಲ: ಕೇಂದ್ರ ಸರ್ಕಾರ

ಸಂಸತ್ತಿನ ಪ್ರೆಸ್​ ಗ್ಯಾಲರಿಯಲ್ಲಿ ಮಾಧ್ಯಮ ಪ್ರವೇಶ ನಿರ್ಬಂಧಿಸುವ ಮೋದಿ ಸರ್ಕಾರದ ಕ್ರಮ ಪತ್ರಕರ್ತರ ಗುಂಪು ಖಂಡಿಸಿದ್ದು, ಪ್ರತಿಭಟನೆ ಸಹ ನಡೆಸಿತು. ಅಧಿವೇಶನದಲ್ಲಿ ಬೆರಳೆಣಿಕೆಯಷ್ಟು ಮಾಧ್ಯಮ ಸಂಸ್ಥೆಗಳಿಗೆ ಮಾತ್ರ ಅವಕಾಶ ನೀಡಲಾಗಿದ್ದು, ಇದು ತೀವ್ರ ನೋವಿನ ವಿಚಾರವಾಗಿದೆ ಎಂದಿದ್ದಾರೆ.

ಅಧಿವೇಶನದ ಸಂದರ್ಭದಲ್ಲಿ ಸಂಸತ್ತು ದೇಶದ ರಾಜಕೀಯ ಚಟುವಟಿಕೆಗಳ ಕೇಂದ್ರಬಿಂದುವಾಗಿದ್ದು, ಜ್ವಲಂತ ಸಾರ್ವಜನಿಕ ಸಮಸ್ಯೆಗಳನ್ನ ಜನರಿಗೆ ತಿಳಿಸುವ ಜವಾಬ್ದಾರಿಯನ್ನ ಮಾಧ್ಯಮಗಳು ಮಾಡ್ತಿವೆ ಎಂದು ತಿಳಿಸಿದ್ದಾರೆ.

ನವದೆಹಲಿ: ಕಳೆದ ಸೋಮವಾರದಿಂದ ಸಂಸತ್​​ ಚಳಿಗಾಲದ ಅಧಿವೇಶನ ಆರಂಭಗೊಂಡಿದ್ದು, ವಿವಿಧ ವಿಷಯಗಳನ್ನಿಟ್ಟುಕೊಂಡು ಕೇಂದ್ರದ ವಿರುದ್ಧ ಪ್ರತಿಪಕ್ಷಗಳು ಹರಿಹಾಯುತ್ತಿವೆ. ಇದೀಗ ಸಂಸತ್​​​ನಲ್ಲಿ ಮಾಧ್ಯಮಗಳ ಮೇಲೆ ಹಾಕಿರುವ ನಿರ್ಬಂಧ ವಿಚಾರಕ್ಕೆ ಸಂಬಂಧಿಸಿದಂತೆ ರಾಜ್ಯಸಭಾ ಅಧ್ಯಕ್ಷರಿಗೆ ಮಲ್ಲಿಕಾರ್ಜುನ​ ಖರ್ಗೆ ಪತ್ರ ಬರೆದಿದ್ದಾರೆ.

Kharge writes to RS Chairman Naidu
ಮಾಧ್ಯಮ ನಿರ್ಬಂಧ ವಿಚಾರವಾಗಿ ರಾಜ್ಯಸಭಾ ಅಧ್ಯಕ್ಷರಿಗೆ ಖರ್ಗೆ ಪತ್ರ

ರಾಜ್ಯಸಭೆ ಅಧ್ಯಕ್ಷರಾಗಿರುವ ಎಂ. ವೆಂಕಯ್ಯ ನಾಯ್ಡು ಅವರಿಗೆ ಪತ್ರ ಬರೆದಿರುವ ಮಲ್ಲಿಕಾರ್ಜುನ ಖರ್ಗೆ, ಪತ್ರಕರ್ತರ ಮೇಲೆ ಹಾಕಿರುವ ನಿರ್ಬಂಧ ತಕ್ಷಣವೇ ತೆಗೆದು ಹಾಕುವಂತೆ ಮನವಿ ಮಾಡಿದ್ದಾರೆ. ಸಂಸತ್​​​ನಲ್ಲಿ ಕೋವಿಡ್ ಮಹಾಮಾರಿ ತಡೆಯುವ ಉದ್ದೇಶದಿಂದ ಪ್ರೆಸ್​ ಗ್ಯಾಲರಿಯಲ್ಲಿ ಪತ್ರಕರ್ತರ ಪ್ರವೇಶಕ್ಕೆ ನಿರ್ಬಂಧ ವಿಧಿಸಲಾಗಿದೆ. ಇದು ತೀವ್ರ ದುಃಖ ಮತ್ತು ಆಘಾತಕಾರಿ ಸಂಗತಿ ಎಂದು ರಾಜ್ಯಸಭೆ ವಿರೋಧ ಪಕ್ಷದ ನಾಯಕ ಮಲ್ಲಿಕಾರ್ಜುನ​​ ಖರ್ಗೆ ಪತ್ರದಲ್ಲಿ ತಿಳಿಸಿದ್ದಾರೆ.

ಇದನ್ನೂ ಓದಿರಿ: ಕೃಷಿ ಕಾಯ್ದೆಗಳ ವಿರುದ್ಧ ಹೋರಾಡಿ ಮೃತಪಟ್ಟ ರೈತರ ದಾಖಲೆ ಇಲ್ಲ, ಪರಿಹಾರವೂ ಇಲ್ಲ: ಕೇಂದ್ರ ಸರ್ಕಾರ

ಸಂಸತ್ತಿನ ಪ್ರೆಸ್​ ಗ್ಯಾಲರಿಯಲ್ಲಿ ಮಾಧ್ಯಮ ಪ್ರವೇಶ ನಿರ್ಬಂಧಿಸುವ ಮೋದಿ ಸರ್ಕಾರದ ಕ್ರಮ ಪತ್ರಕರ್ತರ ಗುಂಪು ಖಂಡಿಸಿದ್ದು, ಪ್ರತಿಭಟನೆ ಸಹ ನಡೆಸಿತು. ಅಧಿವೇಶನದಲ್ಲಿ ಬೆರಳೆಣಿಕೆಯಷ್ಟು ಮಾಧ್ಯಮ ಸಂಸ್ಥೆಗಳಿಗೆ ಮಾತ್ರ ಅವಕಾಶ ನೀಡಲಾಗಿದ್ದು, ಇದು ತೀವ್ರ ನೋವಿನ ವಿಚಾರವಾಗಿದೆ ಎಂದಿದ್ದಾರೆ.

ಅಧಿವೇಶನದ ಸಂದರ್ಭದಲ್ಲಿ ಸಂಸತ್ತು ದೇಶದ ರಾಜಕೀಯ ಚಟುವಟಿಕೆಗಳ ಕೇಂದ್ರಬಿಂದುವಾಗಿದ್ದು, ಜ್ವಲಂತ ಸಾರ್ವಜನಿಕ ಸಮಸ್ಯೆಗಳನ್ನ ಜನರಿಗೆ ತಿಳಿಸುವ ಜವಾಬ್ದಾರಿಯನ್ನ ಮಾಧ್ಯಮಗಳು ಮಾಡ್ತಿವೆ ಎಂದು ತಿಳಿಸಿದ್ದಾರೆ.

ETV Bharat Logo

Copyright © 2024 Ushodaya Enterprises Pvt. Ltd., All Rights Reserved.