ETV Bharat / bharat

ಅಂತಾರಾಷ್ಟ್ರೀಯ ಮ್ಯಾಗ್ಸೆಸೆ ಪ್ರಶಸ್ತಿ ನಿರಾಕರಿಸಿದ ಕೇರಳ ಮಾಜಿ ಸಚಿವೆ ಕೆಕೆ ಶೈಲಜಾ - ಕೇರಳ ಮಾಜಿ ಸಚಿವೆ ಕೆಕೆ ಶೈಲಜಾ

ಸಮಾಜಸೇವೆಗೆ ನೀಡಲಾಗುವ ಅಂತಾರಾಷ್ಟ್ರೀಯ ಪ್ರಶಸ್ತಿಯಾದ ರಾಮನ್​ ಮ್ಸಾಗ್ಸೆಸೆಯನ್ನು ಕೇರಳದ ಮಾಜಿ ಸಚಿವೆ ಕೆಕೆ ಶೈಲಜಾ ಅವರು ನಿರಾಕರಿಸಿದ್ದಾರೆ. ಪಕ್ಷದ ಸೂಚನೆಗೆ ಮೇರೆಗೆ ಅವರು ಈ ನಿರ್ಧಾರ ಕೈಗೊಂಡಿದ್ದಾರೆ. ಇದೊಂದು ಐತಿಹಾಸಿಕ ಪ್ರಮಾದ ಎಂದು ಟೀಕೆ ವ್ಯಕ್ತವಾಗಿದೆ.

kk-shailaja-rejects
ಕೇರಳ ಮಾಜಿ ಸಚಿವೆ ಕೆಕೆ ಶೈಲಜಾ
author img

By

Published : Sep 4, 2022, 5:04 PM IST

ತಿರುವನಂತಪುರಂ: ನಿಫಾ ಮತ್ತು ಕೋವಿಡ್​ ವಿರುದ್ಧ ಪರಿಣಾಮಕಾರಿಯಾಗಿ ಕೆಲಸ ಮಾಡಿದ್ದ ಕೇರಳ ಆರೋಗ್ಯ ಇಲಾಖೆ ಮಾಜಿ ಸಚಿವೆ ಕೆ.ಕೆ. ಶೈಲಜಾ ಅವರಿಗೆ ಘೋಷಿಸಲಾಗಿದ್ದ ರಾಮನ್​ ಮ್ಯಾಗ್ಸೆಸೆ ಪ್ರಶಸ್ತಿಯನ್ನು ಸ್ವೀಕರಿಸಲು ಅವರು ನಿರಾಕರಿಸಿದ್ದಾರೆ. ಸಿಪಿಎಂ ಕೇಂದ್ರ ನಾಯಕತ್ವವು ಪ್ರಶಸ್ತಿಯನ್ನು ಸ್ವೀಕರಿಸದಿರಲು ಸೂಚಿಸಿದ ಕಾರಣ ಅವರು ಈ ನಿರ್ಧಾರಕ್ಕೆ ಬಂದಿದ್ದಾರೆ.

ಕೇರಳದಲ್ಲಿ ಮಾರಕವಾಗಿ ಕಾಡಿದ್ದ ನಿಫಾ ಮತ್ತು ಕೋವಿಡ್​ ವಿರುದ್ಧ ಕೆಕೆ ಶೈಲಜಾ ಅವರು ಆರೋಗ್ಯ ಸಚಿವರಾಗಿದ್ದ ಅವಧಿಯಲ್ಲಿ ಸಲ್ಲಿಸಿದ ಸೇವೆಯು ಅಂತಾರಾಷ್ಟ್ರೀಯ ಮಟ್ಟದಲ್ಲಿ ಸುದ್ದಿಯಾಗಿತ್ತು. ಸಾರ್ವಜನಿಕ ಆರೋಗ್ಯ ವ್ಯವಸ್ಥೆ ಕಾಪಾಡುವ ಬದ್ಧತೆ ಮತ್ತು ಸೇವೆಯನ್ನು ಗುರುತಿಸಿದ ಪ್ರತಿಷ್ಠಾನವು 64ನೇ ಮ್ಯಾಗ್ಸೆಸೆ ಪ್ರಶಸ್ತಿ ನೀಡಲು ಮುಂದಾಗಿತ್ತು.

ಪ್ರಶಸ್ತಿ ಸ್ವೀಕರಿಸಲು ಶೈಲಜಾ ಅವರಲ್ಲಿ ಪ್ರತಿಷ್ಠಾನವು ಒಪ್ಪಿಗೆ ಕೇಳಿತ್ತು. ಬಳಿಕ ಶೈಲಜಾ ಅವರು ಪಕ್ಷದ ಕೇಂದ್ರ ನಾಯಕರಿಗೆ ಮಾಹಿತಿ ನೀಡಿದ್ದರು. ಈ ಬಗ್ಗೆ ಸಮಾಲೋಚನೆ ನಡೆದಿದ್ದು, ಅಂತಿಮವಾಗಿ ಪ್ರಶಸ್ತಿ ಪಡೆಯದಿರಲು ಹೈಕಮಾಂಡ್​ ಸೂಚಿಸಿದೆ. ಇದರ ಬೆನ್ನಲ್ಲೇ ಶೈಲಜಾ ಅವರು ಪ್ರಶಸ್ತಿ ಸ್ವೀಕರಿಸದಿರುವ ಬಗ್ಗೆ ಪ್ರತಿಷ್ಠಾನಕ್ಕೆ ಪತ್ರ ಬರೆದಿದ್ದಾರೆ.

ಸಮಾಜ ಸೇವೆಗೆ ನೀಡುವ ಪ್ರಶಸ್ತಿ: ರಾಮನ್ ಮ್ಯಾಗ್ಸೆಸೆ ಅಂತಾರಾಷ್ಟ್ರೀಯ ಪ್ರಶಸ್ತಿಯನ್ನು ವಿವಿಧ ಕ್ಷೇತ್ರಗಳಲ್ಲಿ ಸಮಾಜಕ್ಕಾಗಿ ನಿಸ್ವಾರ್ಥವಾಗಿ ಕೆಲಸ ಮಾಡುವ ವ್ಯಕ್ತಿಗಳು ಅಥವಾ ಸಂಸ್ಥೆಗಳಿಗೆ ನೀಡಲಾಗುತ್ತದೆ. ಶೈಲಜಾ ಅವರು ಪ್ರಶಸ್ತಿ ಸ್ವೀಕರಿಸಿದ್ದರೆ ಕೇರಳದ ಮೊದಲ ಮಹಿಳೆ ಮತ್ತು ಐದನೇ ಮಲಯಾಳಿ ಎಂಬ ಕೀರ್ತಿಗೆ ಪಾತ್ರರಾಗುತ್ತಿದ್ದರು. ಈ ಹಿಂದೆ ವರ್ಗೀಸ್ ಕುರಿಯನ್, ಎಂಎಸ್ ಸ್ವಾಮಿನಾಥನ್, ಬಿಜಿ ವರ್ಗೀಸ್ ಮತ್ತು ಟಿಎನ್ ಶೇಷನ್ ಅವರು ಪ್ರಶಸ್ತಿಯನ್ನು ಪಡೆದಿದ್ದಾರೆ.

ಪ್ರಶಸ್ತಿ ನಿರಾಕರಣೆ ಪಕ್ಷದ ನಿರ್ಧಾರ: ಈ ಬಗ್ಗೆ ಪ್ರತಿಕ್ರಿಯಿಸಿದ ಮಾಜಿ ಸಚಿವರ ಕೆ.ಕೆ.ಶೈಲಜಾ, ಮ್ಯಾಗ್ಸೆಸೆ ಪ್ರಶಸ್ತಿ ತಿರಸ್ಕರಿಸುವುದು ಸಿಪಿಎಂನ ನಿರ್ಧಾರವಾಗಿದೆ. ಕೇಂದ್ರ ಹಾಗೂ ರಾಜ್ಯ ನಾಯಕರ ಜತೆ ಚರ್ಚಿಸಿ ಈ ನಿರ್ಧಾರ ಕೈಗೊಳ್ಳಲಾಗಿದೆ. ಪ್ರತಿಷ್ಠಾನವು ನನ್ನನ್ನು ಪ್ರಶಸ್ತಿಗೆ ಪರಿಗಣಿಸಿದ್ದಕ್ಕೆ ಸಮಿತಿಗೆ ಧನ್ಯವಾದಗಳು ಎಂದು ಹೇಳಿದರು.

ಮ್ಯಾಗ್ಸೆಸೆ ಕಮ್ಯುನಿಸ್ಟ್ ವಿರೋಧಿ: ಸಿಪಿಎಂ ಪ್ರಧಾನ ಕಾರ್ಯದರ್ಶಿ ಸೀತಾರಾಂ ಯೆಚೂರಿ ಮಾತನಾಡಿ, ರಾಮನ್ ಮ್ಯಾಗ್ಸೆಸೆ ಅವರು ಕಮ್ಯುನಿಸ್ಟ್ ವಿರೋಧಿಯಾಗಿದ್ದಾರೆ. ಕೋವಿಡ್ ಸಾಂಕ್ರಾಮಿಕ ಸಮಯದಲ್ಲಿ ಕೆಕೆ ಶೈಲಜಾ ಅವರ ಕೆಲಸವನ್ನು ಪಕ್ಷ ವೈಯಕ್ತಿಕ ಸಾಧನೆಯಾಗಿ ನೋಡುವುದಿಲ್ಲ ಎಂದು ಯೆಚೂರಿ ಸ್ಪಷ್ಟಪಡಿಸಿದ್ದಾರೆ.

ಇದು ಕೇರಳ ಸರ್ಕಾರ ಮತ್ತು ಆರೋಗ್ಯ ಇಲಾಖೆಯ ಜಂಟಿ ಕೆಲಸವಾಗಿದೆ. ಹೀಗಾಗಿ ಶೈಲಜಾ ಅವರಿಗೆ ಬಂದ ಪ್ರಶಸ್ತಿಯನ್ನು ತಿರಸ್ಕರಿಸಲು ಇದೇ ಕಾರಣವಾಗಿದೆ ಎಂದಿದ್ದಾರೆ. ಅಂತಾರಾಷ್ಟ್ರೀಯ ಪ್ರಶಸ್ತಿಯನ್ನು ತಿರಸ್ಕರಿಸಿರುವುದನ್ನು ಐತಿಹಾಸಿಕ ಪ್ರಮಾದ ಎಂಬ ಟೀಕೆ ವ್ಯಕ್ತವಾಗಿದೆ. ಈ ಹಿಂದೆ ಪಕ್ಷದ ಹಿರಿಯ ನಾಯಕ ಜ್ಯೋತಿ ಬಸು ಅವರಿಗೆ ಪ್ರಧಾನಿ ಹುದ್ದೆ ಅಲಂಕರಿಸದಂತೆ ಪಕ್ಷ ಸೂಚಿಸಿ ಪ್ರಮಾದ ಮಾಡಿತ್ತು.

ಓದಿ: ರಸ್ತೆ ಅಪಘಾತದಲ್ಲಿ ಟಾಟಾ ಸಮೂಹದ ಮಾಜಿ ಅಧ್ಯಕ್ಷ ಸೈರಸ್ ಮಿಸ್ತ್ರಿ ಸಾವು

ತಿರುವನಂತಪುರಂ: ನಿಫಾ ಮತ್ತು ಕೋವಿಡ್​ ವಿರುದ್ಧ ಪರಿಣಾಮಕಾರಿಯಾಗಿ ಕೆಲಸ ಮಾಡಿದ್ದ ಕೇರಳ ಆರೋಗ್ಯ ಇಲಾಖೆ ಮಾಜಿ ಸಚಿವೆ ಕೆ.ಕೆ. ಶೈಲಜಾ ಅವರಿಗೆ ಘೋಷಿಸಲಾಗಿದ್ದ ರಾಮನ್​ ಮ್ಯಾಗ್ಸೆಸೆ ಪ್ರಶಸ್ತಿಯನ್ನು ಸ್ವೀಕರಿಸಲು ಅವರು ನಿರಾಕರಿಸಿದ್ದಾರೆ. ಸಿಪಿಎಂ ಕೇಂದ್ರ ನಾಯಕತ್ವವು ಪ್ರಶಸ್ತಿಯನ್ನು ಸ್ವೀಕರಿಸದಿರಲು ಸೂಚಿಸಿದ ಕಾರಣ ಅವರು ಈ ನಿರ್ಧಾರಕ್ಕೆ ಬಂದಿದ್ದಾರೆ.

ಕೇರಳದಲ್ಲಿ ಮಾರಕವಾಗಿ ಕಾಡಿದ್ದ ನಿಫಾ ಮತ್ತು ಕೋವಿಡ್​ ವಿರುದ್ಧ ಕೆಕೆ ಶೈಲಜಾ ಅವರು ಆರೋಗ್ಯ ಸಚಿವರಾಗಿದ್ದ ಅವಧಿಯಲ್ಲಿ ಸಲ್ಲಿಸಿದ ಸೇವೆಯು ಅಂತಾರಾಷ್ಟ್ರೀಯ ಮಟ್ಟದಲ್ಲಿ ಸುದ್ದಿಯಾಗಿತ್ತು. ಸಾರ್ವಜನಿಕ ಆರೋಗ್ಯ ವ್ಯವಸ್ಥೆ ಕಾಪಾಡುವ ಬದ್ಧತೆ ಮತ್ತು ಸೇವೆಯನ್ನು ಗುರುತಿಸಿದ ಪ್ರತಿಷ್ಠಾನವು 64ನೇ ಮ್ಯಾಗ್ಸೆಸೆ ಪ್ರಶಸ್ತಿ ನೀಡಲು ಮುಂದಾಗಿತ್ತು.

ಪ್ರಶಸ್ತಿ ಸ್ವೀಕರಿಸಲು ಶೈಲಜಾ ಅವರಲ್ಲಿ ಪ್ರತಿಷ್ಠಾನವು ಒಪ್ಪಿಗೆ ಕೇಳಿತ್ತು. ಬಳಿಕ ಶೈಲಜಾ ಅವರು ಪಕ್ಷದ ಕೇಂದ್ರ ನಾಯಕರಿಗೆ ಮಾಹಿತಿ ನೀಡಿದ್ದರು. ಈ ಬಗ್ಗೆ ಸಮಾಲೋಚನೆ ನಡೆದಿದ್ದು, ಅಂತಿಮವಾಗಿ ಪ್ರಶಸ್ತಿ ಪಡೆಯದಿರಲು ಹೈಕಮಾಂಡ್​ ಸೂಚಿಸಿದೆ. ಇದರ ಬೆನ್ನಲ್ಲೇ ಶೈಲಜಾ ಅವರು ಪ್ರಶಸ್ತಿ ಸ್ವೀಕರಿಸದಿರುವ ಬಗ್ಗೆ ಪ್ರತಿಷ್ಠಾನಕ್ಕೆ ಪತ್ರ ಬರೆದಿದ್ದಾರೆ.

ಸಮಾಜ ಸೇವೆಗೆ ನೀಡುವ ಪ್ರಶಸ್ತಿ: ರಾಮನ್ ಮ್ಯಾಗ್ಸೆಸೆ ಅಂತಾರಾಷ್ಟ್ರೀಯ ಪ್ರಶಸ್ತಿಯನ್ನು ವಿವಿಧ ಕ್ಷೇತ್ರಗಳಲ್ಲಿ ಸಮಾಜಕ್ಕಾಗಿ ನಿಸ್ವಾರ್ಥವಾಗಿ ಕೆಲಸ ಮಾಡುವ ವ್ಯಕ್ತಿಗಳು ಅಥವಾ ಸಂಸ್ಥೆಗಳಿಗೆ ನೀಡಲಾಗುತ್ತದೆ. ಶೈಲಜಾ ಅವರು ಪ್ರಶಸ್ತಿ ಸ್ವೀಕರಿಸಿದ್ದರೆ ಕೇರಳದ ಮೊದಲ ಮಹಿಳೆ ಮತ್ತು ಐದನೇ ಮಲಯಾಳಿ ಎಂಬ ಕೀರ್ತಿಗೆ ಪಾತ್ರರಾಗುತ್ತಿದ್ದರು. ಈ ಹಿಂದೆ ವರ್ಗೀಸ್ ಕುರಿಯನ್, ಎಂಎಸ್ ಸ್ವಾಮಿನಾಥನ್, ಬಿಜಿ ವರ್ಗೀಸ್ ಮತ್ತು ಟಿಎನ್ ಶೇಷನ್ ಅವರು ಪ್ರಶಸ್ತಿಯನ್ನು ಪಡೆದಿದ್ದಾರೆ.

ಪ್ರಶಸ್ತಿ ನಿರಾಕರಣೆ ಪಕ್ಷದ ನಿರ್ಧಾರ: ಈ ಬಗ್ಗೆ ಪ್ರತಿಕ್ರಿಯಿಸಿದ ಮಾಜಿ ಸಚಿವರ ಕೆ.ಕೆ.ಶೈಲಜಾ, ಮ್ಯಾಗ್ಸೆಸೆ ಪ್ರಶಸ್ತಿ ತಿರಸ್ಕರಿಸುವುದು ಸಿಪಿಎಂನ ನಿರ್ಧಾರವಾಗಿದೆ. ಕೇಂದ್ರ ಹಾಗೂ ರಾಜ್ಯ ನಾಯಕರ ಜತೆ ಚರ್ಚಿಸಿ ಈ ನಿರ್ಧಾರ ಕೈಗೊಳ್ಳಲಾಗಿದೆ. ಪ್ರತಿಷ್ಠಾನವು ನನ್ನನ್ನು ಪ್ರಶಸ್ತಿಗೆ ಪರಿಗಣಿಸಿದ್ದಕ್ಕೆ ಸಮಿತಿಗೆ ಧನ್ಯವಾದಗಳು ಎಂದು ಹೇಳಿದರು.

ಮ್ಯಾಗ್ಸೆಸೆ ಕಮ್ಯುನಿಸ್ಟ್ ವಿರೋಧಿ: ಸಿಪಿಎಂ ಪ್ರಧಾನ ಕಾರ್ಯದರ್ಶಿ ಸೀತಾರಾಂ ಯೆಚೂರಿ ಮಾತನಾಡಿ, ರಾಮನ್ ಮ್ಯಾಗ್ಸೆಸೆ ಅವರು ಕಮ್ಯುನಿಸ್ಟ್ ವಿರೋಧಿಯಾಗಿದ್ದಾರೆ. ಕೋವಿಡ್ ಸಾಂಕ್ರಾಮಿಕ ಸಮಯದಲ್ಲಿ ಕೆಕೆ ಶೈಲಜಾ ಅವರ ಕೆಲಸವನ್ನು ಪಕ್ಷ ವೈಯಕ್ತಿಕ ಸಾಧನೆಯಾಗಿ ನೋಡುವುದಿಲ್ಲ ಎಂದು ಯೆಚೂರಿ ಸ್ಪಷ್ಟಪಡಿಸಿದ್ದಾರೆ.

ಇದು ಕೇರಳ ಸರ್ಕಾರ ಮತ್ತು ಆರೋಗ್ಯ ಇಲಾಖೆಯ ಜಂಟಿ ಕೆಲಸವಾಗಿದೆ. ಹೀಗಾಗಿ ಶೈಲಜಾ ಅವರಿಗೆ ಬಂದ ಪ್ರಶಸ್ತಿಯನ್ನು ತಿರಸ್ಕರಿಸಲು ಇದೇ ಕಾರಣವಾಗಿದೆ ಎಂದಿದ್ದಾರೆ. ಅಂತಾರಾಷ್ಟ್ರೀಯ ಪ್ರಶಸ್ತಿಯನ್ನು ತಿರಸ್ಕರಿಸಿರುವುದನ್ನು ಐತಿಹಾಸಿಕ ಪ್ರಮಾದ ಎಂಬ ಟೀಕೆ ವ್ಯಕ್ತವಾಗಿದೆ. ಈ ಹಿಂದೆ ಪಕ್ಷದ ಹಿರಿಯ ನಾಯಕ ಜ್ಯೋತಿ ಬಸು ಅವರಿಗೆ ಪ್ರಧಾನಿ ಹುದ್ದೆ ಅಲಂಕರಿಸದಂತೆ ಪಕ್ಷ ಸೂಚಿಸಿ ಪ್ರಮಾದ ಮಾಡಿತ್ತು.

ಓದಿ: ರಸ್ತೆ ಅಪಘಾತದಲ್ಲಿ ಟಾಟಾ ಸಮೂಹದ ಮಾಜಿ ಅಧ್ಯಕ್ಷ ಸೈರಸ್ ಮಿಸ್ತ್ರಿ ಸಾವು

ETV Bharat Logo

Copyright © 2025 Ushodaya Enterprises Pvt. Ltd., All Rights Reserved.