ETV Bharat / bharat

ಬನಿಹಾಲ್​ ಬಳಿ ಭಾರೀ ಭೂಕುಸಿತ ಜಮ್ಮು ಮತ್ತು ಶ್ರೀನಗರ ನಡುವಿನ ಸಂಚಾರ ಸ್ಥಗಿತ

author img

By

Published : Jun 17, 2022, 5:00 PM IST

ಶ್ರೀನಗರದ ಬನಿಹಾಲ್​ ಬಳಿ ಭಾರೀ ಭೂಕುಸಿತವಾಗಿದೆ. ವಾಹನಗಳ ಸಂಚಾರ ಸಂಪೂರ್ಣವಾಗಿ ಸ್ಥಗಿತಗೊಂಡಿದೆ. ರಸ್ತೆ ತೆರವು ಮಾಡಲು ಕನಿಷ್ಠ 4 ಗಂಟೆ ಸಮಯ ಬೇಕಾಗುತ್ತದೆ ಎಂದು ಉಪ ಪೊಲೀಸ್​ ವರಿಷ್ಠಾಧಿಕಾರಿ ಅಸ್ಗರ್​ ತಿಳಿಸಿದ್ದಾರೆ..

landslide
ಭೂಕುಸಿತ

ಶ್ರೀನಗರ : ಬನಿಹಾಲ್​ ಬಳಿ ಭಾರೀ ಭೂಕುಸಿತ ಸಂಭವಿಸಿದೆ. ಜಮ್ಮು ಮತ್ತು ಶ್ರೀನಗರ ನಡುವಿನ ರಾಷ್ಟ್ರೀಯ ಹೆದ್ದಾರಿ ಸಂಚಾರ ಸಂಪೂರ್ಣವಾಗಿ ಸ್ಥಗಿತಗೊಂಡಿದೆ. ಇದರಿಂದ ಸಾವಿರಾರು ವಾಹನಗಳು ರಸ್ತೆಯ ಮಧ್ಯದಲ್ಲಿ ಸಿಲುಕಿಕೊಂಡಿವೆ ಎಂದು ಮೂಲಗಳು ತಿಳಿಸಿವೆ. ದೇಶದ ಇತರ ಭಾಗಗಳಿಗೆ ಸಂಪರ್ಕ ಕಲ್ಪಿಸುವ ಏಕೈಕ ರಸ್ತೆ ಇದಾಗಿದೆ. ಭೂಕುಸಿತದಿಂದ ಸುಮಾರು 270 ಕಿ.ಮೀ ಉದ್ದದ ಹೆದ್ದಾರಿಯ ಸಂಚಾರ ಸ್ಥಗಿತಗೊಂಡಿದೆ.

ಬೆಳಗ್ಗೆ 11ರ ಸುಮಾರು ಚತುಷ್ಪಥ ಯೋಜನೆಯ ಕಾಮಗಾರಿ ನಡೆಯುತ್ತಿದ್ದಂತಹ ಸಂದರ್ಭದಲ್ಲಿ ಭೂಕುಸಿತವಾಗಿದೆ. ರಸ್ತೆಯ ತೆರವು ಕಾರ್ಯಾಚರಣೆ ಆರಂಭಿಸಲಾಗಿದೆ. ರಸ್ತೆಯ ಮೇಲೆ ದೊಡ್ಡ ಬಂಡೆಗಳು ಉರುಳಿ ಬಿದ್ದಿರುವ ಕಾರಣ, ಸಂಚಾರ ಸರಿಪಡಿಸಲು ಕನಿಷ್ಠ 4 ಗಂಟೆಗಳ ಸಮಯ ಬೇಕಾಗುತ್ತದೆ ಎಂದು ರಾಷ್ಟ್ರೀಯ ಹೆದ್ದಾರಿ ಟ್ರಾಫಿಕ್ ಉಪ​ ಪೊಲೀಸ್​ ವರಿಷ್ಠಾಧಿಕಾರಿ ಅಸ್ಗರ್​ ಮಲಿಕ್​ ತಿಳಿಸಿದ್ದಾರೆ.

ಹೆದ್ದಾರಿಯ ಎರಡೂ ಬದಿಯಲ್ಲಿ ವಾಹನ ಸಂಚಾರ ಸ್ಥಗಿತಗೊಂಡಿದೆ. ನಿರ್ಮಾಣ ಹಂತದಲ್ಲಿರುವ ರೈಲ್ವೆ ಟನಲ್​ಗೆ ಯಾವುದೇ ಹಾನಿಯಾಗದಂತೆ ರಸ್ತೆ ತೆರವು ಕಾರ್ಯವನ್ನು ಎಚ್ಚರಿಕೆಯಿಂದ ಮಾಡುವಂತೆ ಅಧಿಕಾರಿಗಳು ಸೂಚಿಸಿದ್ದಾರೆ ಎಂದು ಮಲಿಕ್​ ಹೇಳಿದ್ದಾರೆ.

ಇದನ್ನೂ ಓದಿ: ಬಿಜೆಪಿಯ ವಿರುದ್ಧ ರಾಜ್ಯಾದ್ಯಂತ ಕಾಂಗ್ರೆಸ್ ಪ್ರತಿಭಟನೆ : ಕಾರ್ಯಕರ್ತರುಗಳ ಬಂಧನ

ಶ್ರೀನಗರ : ಬನಿಹಾಲ್​ ಬಳಿ ಭಾರೀ ಭೂಕುಸಿತ ಸಂಭವಿಸಿದೆ. ಜಮ್ಮು ಮತ್ತು ಶ್ರೀನಗರ ನಡುವಿನ ರಾಷ್ಟ್ರೀಯ ಹೆದ್ದಾರಿ ಸಂಚಾರ ಸಂಪೂರ್ಣವಾಗಿ ಸ್ಥಗಿತಗೊಂಡಿದೆ. ಇದರಿಂದ ಸಾವಿರಾರು ವಾಹನಗಳು ರಸ್ತೆಯ ಮಧ್ಯದಲ್ಲಿ ಸಿಲುಕಿಕೊಂಡಿವೆ ಎಂದು ಮೂಲಗಳು ತಿಳಿಸಿವೆ. ದೇಶದ ಇತರ ಭಾಗಗಳಿಗೆ ಸಂಪರ್ಕ ಕಲ್ಪಿಸುವ ಏಕೈಕ ರಸ್ತೆ ಇದಾಗಿದೆ. ಭೂಕುಸಿತದಿಂದ ಸುಮಾರು 270 ಕಿ.ಮೀ ಉದ್ದದ ಹೆದ್ದಾರಿಯ ಸಂಚಾರ ಸ್ಥಗಿತಗೊಂಡಿದೆ.

ಬೆಳಗ್ಗೆ 11ರ ಸುಮಾರು ಚತುಷ್ಪಥ ಯೋಜನೆಯ ಕಾಮಗಾರಿ ನಡೆಯುತ್ತಿದ್ದಂತಹ ಸಂದರ್ಭದಲ್ಲಿ ಭೂಕುಸಿತವಾಗಿದೆ. ರಸ್ತೆಯ ತೆರವು ಕಾರ್ಯಾಚರಣೆ ಆರಂಭಿಸಲಾಗಿದೆ. ರಸ್ತೆಯ ಮೇಲೆ ದೊಡ್ಡ ಬಂಡೆಗಳು ಉರುಳಿ ಬಿದ್ದಿರುವ ಕಾರಣ, ಸಂಚಾರ ಸರಿಪಡಿಸಲು ಕನಿಷ್ಠ 4 ಗಂಟೆಗಳ ಸಮಯ ಬೇಕಾಗುತ್ತದೆ ಎಂದು ರಾಷ್ಟ್ರೀಯ ಹೆದ್ದಾರಿ ಟ್ರಾಫಿಕ್ ಉಪ​ ಪೊಲೀಸ್​ ವರಿಷ್ಠಾಧಿಕಾರಿ ಅಸ್ಗರ್​ ಮಲಿಕ್​ ತಿಳಿಸಿದ್ದಾರೆ.

ಹೆದ್ದಾರಿಯ ಎರಡೂ ಬದಿಯಲ್ಲಿ ವಾಹನ ಸಂಚಾರ ಸ್ಥಗಿತಗೊಂಡಿದೆ. ನಿರ್ಮಾಣ ಹಂತದಲ್ಲಿರುವ ರೈಲ್ವೆ ಟನಲ್​ಗೆ ಯಾವುದೇ ಹಾನಿಯಾಗದಂತೆ ರಸ್ತೆ ತೆರವು ಕಾರ್ಯವನ್ನು ಎಚ್ಚರಿಕೆಯಿಂದ ಮಾಡುವಂತೆ ಅಧಿಕಾರಿಗಳು ಸೂಚಿಸಿದ್ದಾರೆ ಎಂದು ಮಲಿಕ್​ ಹೇಳಿದ್ದಾರೆ.

ಇದನ್ನೂ ಓದಿ: ಬಿಜೆಪಿಯ ವಿರುದ್ಧ ರಾಜ್ಯಾದ್ಯಂತ ಕಾಂಗ್ರೆಸ್ ಪ್ರತಿಭಟನೆ : ಕಾರ್ಯಕರ್ತರುಗಳ ಬಂಧನ

ETV Bharat Logo

Copyright © 2024 Ushodaya Enterprises Pvt. Ltd., All Rights Reserved.