ನವದೆಹಲಿ: ಸ್ವರ ಸಾಮ್ರಾಟ ದಿ.ಎಸ್.ಪಿ.ಬಾಲಸುಬ್ರಹ್ಮಣ್ಯಂ ಅವರಿಗೆ ಕೇಂದ್ರ ಸರ್ಕಾರ ಮರಣೋತ್ತರ ಪದ್ಮವಿಭೂಷಣ ಪ್ರಶಸ್ತಿ ಘೋಷಿಸಿದೆ. ಸಂಗೀತ ಕ್ಷೇತ್ರದಲ್ಲಿ ಅವರು ಮಾಡಿದ ಮಹೋನ್ನತ ಸಾಧನೆಗಾಗಿ ಈ ಪ್ರಶಸ್ತಿ ನೀಡಲಾಗಿದೆ. ನೂರಾರು ಪ್ರಶಸ್ತಿಗಳನ್ನು ಒಲಿಸಿಕೊಂಡಿರುವ ಗಾನ ಗಾರುಡಿಗನಿಗೆ ಈಗ ದೇಶದ 2ನೇ ಅತ್ಯುನ್ನತ ಪ್ರಶಸ್ತಿ ಸಂದಿದೆ.
ಎಸ್ಪಿಬಿ ಅವರು ವಿಶ್ವದ ವಿವಿಧ ಭಾಷೆಗಳಲ್ಲಿ 40 ಸಾವಿರಕ್ಕೂ ಅಧಿಕ ಹಾಡುಗಳನ್ನು ಹಾಡಿದ್ದಾರೆ. ಮೂಲತ: ಆಂಧ್ರದವರಾದರೂ ಕರ್ನಾಟಕದಲ್ಲಿ ಕೋಟ್ಯಂತರ ಅಭಿಮಾನಿಗಳನ್ನು ಅವರು ಹೊಂದಿದ್ದಾರೆ. ಅಷ್ಟೇ ಅಲ್ಲದೆ, ಕರ್ನಾಟಕವನ್ನೇ ತನ್ನ ತವರು ಎಂದು ಹೆಮ್ಮೆಯಿಂದ ಹೇಳುತ್ತಿದ್ದರು.
ಎಸ್.ಪಿ.ಬಿ ಅವರು ಕಳೆದ ಸೆಪ್ಟೆಂಬರ್ 25ರಂದು ಚೆನ್ನೈನ ಆಸ್ಪತ್ರೆಯಲ್ಲಿ ನಿಧನರಾದರು.