ETV Bharat / bharat

ಈ ನಗರದಲ್ಲಿ ಚಿರತೆ ಪ್ರತ್ಯಕ್ಷ: ಭೀತಿಯಲ್ಲಿ ಜನತೆ

author img

By

Published : Jun 1, 2021, 8:39 PM IST

ಮಹಾರಾಷ್ಟ್ರದ ನಾಗ್ಪುರ ಜಿಲ್ಲೆಯ ಮಹಾರಾಜಬಾಗ್ ಪ್ರದೇಶದಲ್ಲಿ ಚಿರತೆ ಕಾಣಿಸಿಕೊಂಡಿದ್ದು, ಭಯದ ವಾತಾವರಣ ನಿರ್ಮಾಣವಾಗಿದೆ. ಸದ್ಯ ಚಿರತೆ ಸೆರೆಗಾಗಿ ಅರಣ್ಯ ಇಲಾಖೆ ಸಿಬ್ಬಂದಿ ಕ್ರಮ ಕೈಗೊಂಡಿದ್ದಾರೆ.

Leopard scare in Nagpur
Leopard scare in Nagpur

ನಾಗ್ಪುರ( ಮಹಾರಾಷ್ಟ್ರ): ಇಲ್ಲಿನ ಮಹಾರಾಜಬಾಗ್ ಪ್ರದೇಶದಲ್ಲಿ ಚಿರತೆ ಪ್ರತ್ಯಕ್ಷವಾಗಿದ್ದು, ಜನರಲ್ಲಿ ಆತಂಕ ಶುರುವಾಗಿದೆ. ಚಿರತೆ ಓಡಾಟದ ದೃಶ್ಯ ಸಿಸಿಟಿವಿಯಲ್ಲಿ ಸೆರೆಯಾಗಿದ್ದು, ಅರಣ್ಯಾಧಿಕಾರಿಗಳು ಕ್ರಮ ಕೈಗೊಂಡಿದ್ದಾರೆ.

ಅರಣ್ಯ ಅಧಿಕಾರಿಗಳು ಚಿರತೆ ಸೆರೆಗಾಗಿ ಬೋನ್​ ಇರಿಸಿ ಕಾರ್ಯಾಚರಣೆ ಕೈಗೊಂಡಿದ್ದಾರೆ. ಇನ್ನು ಈ ಚಿರತೆ ನಾಗ್ಪುರದ ಗಾಯತ್ರಿ ನಗರ ಎನ್‌ಟಿಪಿಐ ವಸತಿ ಪ್ರದೇಶದಲ್ಲಿ ಕಂಡು ಬಂದಿತ್ತು. ಈ ಬಳಿಕ ಮಹಾರಾಜ್‌ಬಾಗ್ ಪ್ರದೇಶದ ಕಾಣಿಸಿಕೊಂಡಿದೆ. ಅಷ್ಟೇ ಅಲ್ಲದೆ, ಕೃಷಿ ಇಲಾಖೆಯ ಕಚೇರಿಯ ಬಳಿ ಚಿರತೆ ಬೇಟೆಯಾಡಿ ಹಂದಿಯನ್ನು ತಿಂದು ಹಾಕಿದೆ.

ಸದ್ಯ ಇಲಾಖೆ ಶೋಧ ಕಾರ್ಯಾಚರಣೆಯನ್ನು ಚುರುಕುಗೊಳಿಸಿದ್ದು, ಈ ಪ್ರದೇಶದಲ್ಲಿ ಬಲೆಗಳನ್ನು ಹಾಕಲಾಗಿದೆ ಎಂದು ಅರಣ್ಯ ಅಧಿಕಾರಿಯೊಬ್ಬರು ತಿಳಿಸಿದ್ದಾರೆ.

ನಾಗ್ಪುರ( ಮಹಾರಾಷ್ಟ್ರ): ಇಲ್ಲಿನ ಮಹಾರಾಜಬಾಗ್ ಪ್ರದೇಶದಲ್ಲಿ ಚಿರತೆ ಪ್ರತ್ಯಕ್ಷವಾಗಿದ್ದು, ಜನರಲ್ಲಿ ಆತಂಕ ಶುರುವಾಗಿದೆ. ಚಿರತೆ ಓಡಾಟದ ದೃಶ್ಯ ಸಿಸಿಟಿವಿಯಲ್ಲಿ ಸೆರೆಯಾಗಿದ್ದು, ಅರಣ್ಯಾಧಿಕಾರಿಗಳು ಕ್ರಮ ಕೈಗೊಂಡಿದ್ದಾರೆ.

ಅರಣ್ಯ ಅಧಿಕಾರಿಗಳು ಚಿರತೆ ಸೆರೆಗಾಗಿ ಬೋನ್​ ಇರಿಸಿ ಕಾರ್ಯಾಚರಣೆ ಕೈಗೊಂಡಿದ್ದಾರೆ. ಇನ್ನು ಈ ಚಿರತೆ ನಾಗ್ಪುರದ ಗಾಯತ್ರಿ ನಗರ ಎನ್‌ಟಿಪಿಐ ವಸತಿ ಪ್ರದೇಶದಲ್ಲಿ ಕಂಡು ಬಂದಿತ್ತು. ಈ ಬಳಿಕ ಮಹಾರಾಜ್‌ಬಾಗ್ ಪ್ರದೇಶದ ಕಾಣಿಸಿಕೊಂಡಿದೆ. ಅಷ್ಟೇ ಅಲ್ಲದೆ, ಕೃಷಿ ಇಲಾಖೆಯ ಕಚೇರಿಯ ಬಳಿ ಚಿರತೆ ಬೇಟೆಯಾಡಿ ಹಂದಿಯನ್ನು ತಿಂದು ಹಾಕಿದೆ.

ಸದ್ಯ ಇಲಾಖೆ ಶೋಧ ಕಾರ್ಯಾಚರಣೆಯನ್ನು ಚುರುಕುಗೊಳಿಸಿದ್ದು, ಈ ಪ್ರದೇಶದಲ್ಲಿ ಬಲೆಗಳನ್ನು ಹಾಕಲಾಗಿದೆ ಎಂದು ಅರಣ್ಯ ಅಧಿಕಾರಿಯೊಬ್ಬರು ತಿಳಿಸಿದ್ದಾರೆ.

ETV Bharat Logo

Copyright © 2024 Ushodaya Enterprises Pvt. Ltd., All Rights Reserved.