ETV Bharat / bharat

ಲಾಕ್‌ಡೌನ್‌ಗೆ ಸಿದ್ಧತೆ ಮಾಡಿಕೊಳ್ಳಿ ಎಂದು ಅಧಿಕಾರಿಗಳಿಗೆ ಸೂಚಿಸಿದ ಉದ್ಧವ್ ಠಾಕ್ರೆ! - Chief Minister Uddhav Thackeray

ಜನರು ಕೊರೊನಾ ನಿಯಮಗಳನ್ನು ಪಾಲಿಸದ ಕಾರಣ ರಾಜ್ಯದಲ್ಲಿ 2ನೇ ಲಾಕ್‌ಡೌನ್​ ಹೇರಲು ಸಿದ್ಧತೆ ಮಾಡಿಕೊಳ್ಳುವಂತೆ ಮುಖ್ಯಮಂತ್ರಿ ಉದ್ಧವ್ ಠಾಕ್ರೆ ಅಧಿಕಾರಿಗಳಿಗೆ ಸೂಚನೆ ನೀಡಿದ್ದಾರೆ. ಹೆಚ್ಚುತ್ತಿರುವ ಕೊರೊನಾದ ಪ್ರಕರಣದಿಂದಾಗಿ ಆರೋಗ್ಯ ಸೌಲಭ್ಯಗಳು ಕಡಿಮೆಯಾಗುತ್ತಿವೆ. ಇದನ್ನು ಗಮನದಲ್ಲಿಟ್ಟುಕೊಂಡು ಅವರು ಈ ನಿರ್ಧಾರವನ್ನು ತೆಗೆದುಕೊಳ್ಳುತ್ತಿದ್ದಾರೆ ಎಂದು ಅಧಿಕೃತ ಮೂಲಗಳು ತಿಳಿಸಿವೆ.

Maha CM
ಮುಖ್ಯಮಂತ್ರಿ ಉದ್ಧವ್ ಠಾಕ್ರೆ
author img

By

Published : Mar 28, 2021, 7:34 PM IST

ನವದೆಹಲಿ: ಮಹಾರಾಷ್ಟ್ರದಲ್ಲಿ ಕೊರೊನಾ ಪ್ರಕರಣಗಳು ದಿನೇ ದಿನೇ ಹೆಚ್ಚುತ್ತಿವೆ. ಈ ನಡುವೆ ಜನರು ಕೋವಿಡ್ ನಿಯಮಗಳನ್ನು ಪಾಲಿಸದ ಕಾರಣ ಲಾಕ್​ಡೌನ್ ಜಾರಿಗೆ ತರಲು ಯೋಜನೆ ರೂಪಿಸುವಂತೆ ಮುಖ್ಯಮಂತ್ರಿ ಉದ್ಧವ್ ಠಾಕ್ರೆ ಅಧಿಕಾರಿಗಳಿಗೆ ಸೂಚಿಸಿದ್ದಾರೆ ಎಂದು ಅಧಿಕೃತ ಮೂಲಗಳು ತಿಳಿಸಿವೆ.

ಮುಖ್ಯಮಂತ್ರಿ ಉದ್ಧವ್ ಠಾಕ್ರೆ, ಆರೋಗ್ಯ ಸಚಿವ ರಾಜೇಶ್ ಟೋಪೆ, ಮುಖ್ಯ ಕಾರ್ಯದರ್ಶಿ ಸೀತಾರಾಮ್ ಕುಂಟೆ, ವೈದ್ಯರು ಮತ್ತು ಇತರ ಅಧಿಕಾರಿಗಳು ಭಾಗವಹಿಸಿದ್ದ ಸಭೆಯಲ್ಲಿ ಈ ಕುರಿತ ಮಹತ್ವದ ಚರ್ಚೆ ನಡೆದಿದೆ.

ಸಭೆಯಲ್ಲಿ ಅಧಿಕಾರಿಗಳು ಮತ್ತು ಕೋವಿಡ್ ಕಾರ್ಯಪಡೆಯ ಸದಸ್ಯರು, ಹೆಚ್ಚುತ್ತಿರುವ ಪ್ರಕರಣಗಳ ಬಗ್ಗೆ ಕಳವಳ ವ್ಯಕ್ತಪಡಿಸಿದ್ದಾರೆ. ಸೋಂಕಿತ ಪ್ರಕರಣಗಳ ಹೆಚ್ಚಳ ರಾಜ್ಯದಲ್ಲಿ ಕೋವಿಡ್ ಸಂಬಂಧಿತ ಸಾವುಗಳ ಹೆಚ್ಚಳಕ್ಕೆ ಕಾರಣವಾಗಬಹುದು ಎಂದು ಕಾರ್ಯಪಡೆಯ ಅಧಿಕಾರಿಗಳು ಎಚ್ಚರಿಸಿದ್ದಾರೆ ಎಂದು ತಿಳಿದುಬಂದಿದೆ.

ಸೋಂಕು ಪ್ರಕರಣಗಳ ತೀವ್ರ ಏರಿಕೆಯಿಂದಾಗಿ, ರಾಜ್ಯವು ಆರೋಗ್ಯ ಬಿಕ್ಕಟ್ಟು ಎದುರಿಸಬಹುದು ಮತ್ತು ಕೋವಿಡ್​-19 ರೋಗಿಗಳಿಗೆ ಚಿಕಿತ್ಸೆ ನೀಡಲು ಉದ್ದೇಶಿಸಿರುವ ಮೂಲಸೌಕರ್ಯಗಳ ಕೊರತೆ ಉಂಟಾಗಬಹುದು ಎಂದು ಉದ್ಧವ್ ಠಾಕ್ರೆ ಕಳವಳ ವ್ಯಕ್ತಪಡಿಸಿದ್ದಾರೆ ಎಂಬ ಮಾಹಿತಿ ದೊರೆತಿದೆ.

ಇದನ್ನೂ ಓದಿ: ಒಂದೇ ದಿನಕ್ಕೆ 3082 ಮಂದಿಗೆ ಸೋಂಕು.. 12 ಮಂದಿ ಬಲಿ

ಸರ್ಕಾರಿ ಕಚೇರಿಗಳು ಮತ್ತು ರಾಜ್ಯ ಸಚಿವಾಲಯಗಳಲ್ಲಿ ಸಾರ್ವಜನಿಕರ ಪ್ರವೇಶಕ್ಕೆ ನಿಷೇಧ ಹೇರಲು ಅಧಿಕಾರಿಗಳಿಗೆ ಈಗಾಗಲೇ ಸೂಚನೆ ನೀಡಲಾಗಿದೆ.

ಜನರು ಕೊರೊನಾ ನಿಯಮಗಳನ್ನು ಪಾಲಿಸದ ಕಾರಣ ಸರ್ಕಾರ ಲಾಕ್​ಡೌನ್​ ವಿಧಿಸಲು ಮುಂದಾಗಿದೆ ಎಂದು ಆರೋಗ್ಯ ಸಚಿವ ರಾಜೇಶ್ ಟೋಪೆ ಹೇಳಿದ್ದಾರೆ.

ಪ್ರಸ್ತುತ ಲಭ್ಯವಿರುವ 3.75 ಲಕ್ಷ ಪ್ರತ್ಯೇಕ ಹಾಸಿಗೆಗಳಲ್ಲಿ 1.07 ಲಕ್ಷ ಹಾಸಿಗೆಗಳು ಈಗಾಗಲೇ ಭರ್ತಿ​ ಆಗಿವೆ. ಉಳಿದವು ವೇಗವಾಗಿ ಭರ್ತಿಯಾಗುತ್ತಿವೆ ಎಂದು ಪ್ರಧಾನ ಕಾರ್ಯದರ್ಶಿ (ಆರೋಗ್ಯ) ಡಾ.ಪ್ರದೀಪ್ ವ್ಯಾಸ್ ತಿಳಿಸಿದ್ದಾರೆ.

ಕಳೆದ ಕೆಲವು ದಿನಗಳಿಂದ ರಾಜ್ಯದಲ್ಲಿ ಹೆಚ್ಚು ಕೊರೊನಾ ಪ್ರಕರಣಗಳು ವರದಿಯಾಗುತ್ತಿವೆ. ಶನಿವಾರ ಮುಂಬೈನಲ್ಲಿ 6,123 ಹೊಸ ಕೋವಿಡ್​-19 ಪ್ರಕರಣಗಳನ್ನು ವರದಿಯಾಗಿದ್ದು,12 ಸಾವುಗಳು ಸಂಭವಿಸಿವೆ. ಆರೋಗ್ಯ ಇಲಾಖೆಯ ವರದಿ ಪ್ರಕಾರ, ಶನಿವಾರ ಮಹಾರಾಷ್ಟ್ರದಲ್ಲಿ 35,726 ಹೊಸ ಕೋವಿಡ್​ -19 ಪ್ರಕರಣಗಳು ದೃಢಪಟ್ಟಿವೆ.

ನವದೆಹಲಿ: ಮಹಾರಾಷ್ಟ್ರದಲ್ಲಿ ಕೊರೊನಾ ಪ್ರಕರಣಗಳು ದಿನೇ ದಿನೇ ಹೆಚ್ಚುತ್ತಿವೆ. ಈ ನಡುವೆ ಜನರು ಕೋವಿಡ್ ನಿಯಮಗಳನ್ನು ಪಾಲಿಸದ ಕಾರಣ ಲಾಕ್​ಡೌನ್ ಜಾರಿಗೆ ತರಲು ಯೋಜನೆ ರೂಪಿಸುವಂತೆ ಮುಖ್ಯಮಂತ್ರಿ ಉದ್ಧವ್ ಠಾಕ್ರೆ ಅಧಿಕಾರಿಗಳಿಗೆ ಸೂಚಿಸಿದ್ದಾರೆ ಎಂದು ಅಧಿಕೃತ ಮೂಲಗಳು ತಿಳಿಸಿವೆ.

ಮುಖ್ಯಮಂತ್ರಿ ಉದ್ಧವ್ ಠಾಕ್ರೆ, ಆರೋಗ್ಯ ಸಚಿವ ರಾಜೇಶ್ ಟೋಪೆ, ಮುಖ್ಯ ಕಾರ್ಯದರ್ಶಿ ಸೀತಾರಾಮ್ ಕುಂಟೆ, ವೈದ್ಯರು ಮತ್ತು ಇತರ ಅಧಿಕಾರಿಗಳು ಭಾಗವಹಿಸಿದ್ದ ಸಭೆಯಲ್ಲಿ ಈ ಕುರಿತ ಮಹತ್ವದ ಚರ್ಚೆ ನಡೆದಿದೆ.

ಸಭೆಯಲ್ಲಿ ಅಧಿಕಾರಿಗಳು ಮತ್ತು ಕೋವಿಡ್ ಕಾರ್ಯಪಡೆಯ ಸದಸ್ಯರು, ಹೆಚ್ಚುತ್ತಿರುವ ಪ್ರಕರಣಗಳ ಬಗ್ಗೆ ಕಳವಳ ವ್ಯಕ್ತಪಡಿಸಿದ್ದಾರೆ. ಸೋಂಕಿತ ಪ್ರಕರಣಗಳ ಹೆಚ್ಚಳ ರಾಜ್ಯದಲ್ಲಿ ಕೋವಿಡ್ ಸಂಬಂಧಿತ ಸಾವುಗಳ ಹೆಚ್ಚಳಕ್ಕೆ ಕಾರಣವಾಗಬಹುದು ಎಂದು ಕಾರ್ಯಪಡೆಯ ಅಧಿಕಾರಿಗಳು ಎಚ್ಚರಿಸಿದ್ದಾರೆ ಎಂದು ತಿಳಿದುಬಂದಿದೆ.

ಸೋಂಕು ಪ್ರಕರಣಗಳ ತೀವ್ರ ಏರಿಕೆಯಿಂದಾಗಿ, ರಾಜ್ಯವು ಆರೋಗ್ಯ ಬಿಕ್ಕಟ್ಟು ಎದುರಿಸಬಹುದು ಮತ್ತು ಕೋವಿಡ್​-19 ರೋಗಿಗಳಿಗೆ ಚಿಕಿತ್ಸೆ ನೀಡಲು ಉದ್ದೇಶಿಸಿರುವ ಮೂಲಸೌಕರ್ಯಗಳ ಕೊರತೆ ಉಂಟಾಗಬಹುದು ಎಂದು ಉದ್ಧವ್ ಠಾಕ್ರೆ ಕಳವಳ ವ್ಯಕ್ತಪಡಿಸಿದ್ದಾರೆ ಎಂಬ ಮಾಹಿತಿ ದೊರೆತಿದೆ.

ಇದನ್ನೂ ಓದಿ: ಒಂದೇ ದಿನಕ್ಕೆ 3082 ಮಂದಿಗೆ ಸೋಂಕು.. 12 ಮಂದಿ ಬಲಿ

ಸರ್ಕಾರಿ ಕಚೇರಿಗಳು ಮತ್ತು ರಾಜ್ಯ ಸಚಿವಾಲಯಗಳಲ್ಲಿ ಸಾರ್ವಜನಿಕರ ಪ್ರವೇಶಕ್ಕೆ ನಿಷೇಧ ಹೇರಲು ಅಧಿಕಾರಿಗಳಿಗೆ ಈಗಾಗಲೇ ಸೂಚನೆ ನೀಡಲಾಗಿದೆ.

ಜನರು ಕೊರೊನಾ ನಿಯಮಗಳನ್ನು ಪಾಲಿಸದ ಕಾರಣ ಸರ್ಕಾರ ಲಾಕ್​ಡೌನ್​ ವಿಧಿಸಲು ಮುಂದಾಗಿದೆ ಎಂದು ಆರೋಗ್ಯ ಸಚಿವ ರಾಜೇಶ್ ಟೋಪೆ ಹೇಳಿದ್ದಾರೆ.

ಪ್ರಸ್ತುತ ಲಭ್ಯವಿರುವ 3.75 ಲಕ್ಷ ಪ್ರತ್ಯೇಕ ಹಾಸಿಗೆಗಳಲ್ಲಿ 1.07 ಲಕ್ಷ ಹಾಸಿಗೆಗಳು ಈಗಾಗಲೇ ಭರ್ತಿ​ ಆಗಿವೆ. ಉಳಿದವು ವೇಗವಾಗಿ ಭರ್ತಿಯಾಗುತ್ತಿವೆ ಎಂದು ಪ್ರಧಾನ ಕಾರ್ಯದರ್ಶಿ (ಆರೋಗ್ಯ) ಡಾ.ಪ್ರದೀಪ್ ವ್ಯಾಸ್ ತಿಳಿಸಿದ್ದಾರೆ.

ಕಳೆದ ಕೆಲವು ದಿನಗಳಿಂದ ರಾಜ್ಯದಲ್ಲಿ ಹೆಚ್ಚು ಕೊರೊನಾ ಪ್ರಕರಣಗಳು ವರದಿಯಾಗುತ್ತಿವೆ. ಶನಿವಾರ ಮುಂಬೈನಲ್ಲಿ 6,123 ಹೊಸ ಕೋವಿಡ್​-19 ಪ್ರಕರಣಗಳನ್ನು ವರದಿಯಾಗಿದ್ದು,12 ಸಾವುಗಳು ಸಂಭವಿಸಿವೆ. ಆರೋಗ್ಯ ಇಲಾಖೆಯ ವರದಿ ಪ್ರಕಾರ, ಶನಿವಾರ ಮಹಾರಾಷ್ಟ್ರದಲ್ಲಿ 35,726 ಹೊಸ ಕೋವಿಡ್​ -19 ಪ್ರಕರಣಗಳು ದೃಢಪಟ್ಟಿವೆ.

ETV Bharat Logo

Copyright © 2025 Ushodaya Enterprises Pvt. Ltd., All Rights Reserved.