ETV Bharat / bharat

ಮಹಾರಾಷ್ಟ್ರದಲ್ಲಿ 'ಮಹಾ' ಮಳೆಗೆ 89 ಮಂದಿ ಬಲಿ: ತೆಲಂಗಾಣದಲ್ಲೂ 10ಕ್ಕಿಂತ ಹೆಚ್ಚು ಜನ ಸಾವು

author img

By

Published : Jul 14, 2022, 7:49 AM IST

Updated : Jul 14, 2022, 8:58 AM IST

ಮಹಾರಾಷ್ಟ್ರದಲ್ಲಿ ಜೂನ್ 1 ರಿಂದ ಈವರೆಗೆ ಒಟ್ಟು 89 ಜನರು ಮಳೆ ಸಂಬಂಧಿತ ದುರ್ಘಟನೆಗಳಲ್ಲಿ ಪ್ರಾಣ ಕಳೆದುಕೊಂಡಿದ್ದಾರೆ. ತೆಲಂಗಾಣದಲ್ಲಿ10ಕ್ಕೂ ಹೆಚ್ಚು ಮಂದಿ ಸಾವನ್ನಪ್ಪಿದ್ದಾರೆ.

rain
ಮಳೆ

ಮುಂಬೈ/ಹೈದರಾಬಾದ್: ಕಳೆದ ಐದು ದಿನಗಳಿಂದ ತೆಲಂಗಾಣದಲ್ಲಿ ಎಡಬಿಡದೇ ಮಳೆ ಸುರಿಯುತ್ತಿದ್ದು ತಗ್ಗು ಪ್ರದೇಶದ ಬಡಾವಣೆಗಳು ಜಲಾವೃತಗೊಂಡಿವೆ. ಸುಮಾರು 10ಕ್ಕೂ ಹೆಚ್ಚು ಮಂದಿ ಮಳೆ ಸಂಬಂಧಿತ ದುರ್ಘಟನೆಗಳಲ್ಲಿ ಸಾವನ್ನಪ್ಪಿದ್ದಾರೆ. ಅದೇ ರೀತಿ, ಮಹಾರಾಷ್ಟ್ರದಲ್ಲೂ ಮಳೆ ಸಾಕಷ್ಟು ಸಾವುನೋವಿಗೆ ಕಾರಣವಾಗಿದೆ.

ತೆಲಂಗಾಣ ರಾಜ್ಯದ ಹಲವು ಜಿಲ್ಲೆಗಳಲ್ಲಿ ಭಾರಿ ಮಳೆಯಾಗುತ್ತಿದ್ದು ವಿದ್ಯುದಾಘಾತ, ಗೋಡೆ ಕುಸಿತ, ವ್ಯಕ್ತಿಗಳು ಕೊಚ್ಚಿಕೊಂಡು ಹೋಗಿರುವುದೂ ಸೇರಿದಂತೆ ಅತಿವೃಷ್ಟಿಯಿಂದ ಆಗಿರುವ ಹಾನಿಯನ್ನು ಅಂದಾಜಿಸಲಾಗುತ್ತಿದೆ. ಆದ್ರೆ, ಈ ಬಾರಿ ದೊಡ್ಡ ಪ್ರಮಾಣದಲ್ಲಿ ರಸ್ತೆಗಳಿಗೆ ಹಾನಿಯಾಗಿಲ್ಲ. ನಿರ್ಮಲ, ಕುಮ್ರಂ ಭೀಮ್, ಪೆದ್ದಪಲ್ಲಿ, ಆದಿಲಾಬಾದ್, ಜಯಶಂಕರ್, ಭೂಪಾಲಪಲ್ಲಿ, ಜಗ್ತಿಯಾಲ್, ಕರೀಂನಗರ ಸೇರಿದಂತೆ ಇತರೆ ಜಿಲ್ಲೆಗಳಲ್ಲಿ ಅತಿ ಹೆಚ್ಚು ಮಳೆಯಾಗಿದೆ ಎಂದು ಭಾರತೀಯ ಹವಾಮಾನ ಇಲಾಖೆ (ಐಎಂಡಿ) ತಿಳಿಸಿದೆ.

ಮಹಾರಾಷ್ಟ್ರದಲ್ಲಿ 89 ಮಂದಿ ಬಲಿ: ಮಹಾರಾಷ್ಟ್ರದಲ್ಲಿ ಜೂನ್ 1 ರಿಂದ ಈವರೆಗೆ ಒಟ್ಟು 89 ಜನರು ಮಳೆ ಸಂಬಂಧಿತ ದುರ್ಘಟನೆಗಳಲ್ಲಿ ಪ್ರಾಣ ಕಳೆದುಕೊಂಡಿದ್ದಾರೆ ಎಂದು ರಾಜ್ಯ ವಿಪತ್ತು ನಿರ್ವಹಣಾ ಪ್ರಾಧಿಕಾರ ಮಾಹಿತಿ ನೀಡಿದೆ. ಕಳೆದ 24 ಗಂಟೆಗಳಲ್ಲಿ 5 ಮಂದಿ ಮೃತಪಟ್ಟಿದ್ದು, ಮಳೆಯಿಂದಾಗಿ 1,412 ಮನೆಗಳಿಗೆ ಹಾನಿಯಾಗಿದೆ. 7,796 ಜನರನ್ನು ಸುರಕ್ಷಿತ ಸ್ಥಳಗಳಿಗೆ ಸ್ಥಳಾಂತರಿಸಲಾಗಿದೆ. ಪುನರ್ವಸತಿ ಇಲಾಖೆಯಿಂದ 35 ಪರಿಹಾರ ಶಿಬಿರಗಳನ್ನು ಸ್ಥಾಪಿಸಲಾಗಿದೆ.

ಇದನ್ನೂ ಓದಿ: ಕೇದಾರನಾಥದಿಂದ ವಾಪಸಾಗುತ್ತಿದ್ದಾಗ ಗಂಗಾ ನದಿಗೆ ಬಿದ್ದ ನಾಲ್ವರು ಪ್ರವಾಸಿಗರಿದ್ದ ಕಾರು

ಮುಂಬೈ/ಹೈದರಾಬಾದ್: ಕಳೆದ ಐದು ದಿನಗಳಿಂದ ತೆಲಂಗಾಣದಲ್ಲಿ ಎಡಬಿಡದೇ ಮಳೆ ಸುರಿಯುತ್ತಿದ್ದು ತಗ್ಗು ಪ್ರದೇಶದ ಬಡಾವಣೆಗಳು ಜಲಾವೃತಗೊಂಡಿವೆ. ಸುಮಾರು 10ಕ್ಕೂ ಹೆಚ್ಚು ಮಂದಿ ಮಳೆ ಸಂಬಂಧಿತ ದುರ್ಘಟನೆಗಳಲ್ಲಿ ಸಾವನ್ನಪ್ಪಿದ್ದಾರೆ. ಅದೇ ರೀತಿ, ಮಹಾರಾಷ್ಟ್ರದಲ್ಲೂ ಮಳೆ ಸಾಕಷ್ಟು ಸಾವುನೋವಿಗೆ ಕಾರಣವಾಗಿದೆ.

ತೆಲಂಗಾಣ ರಾಜ್ಯದ ಹಲವು ಜಿಲ್ಲೆಗಳಲ್ಲಿ ಭಾರಿ ಮಳೆಯಾಗುತ್ತಿದ್ದು ವಿದ್ಯುದಾಘಾತ, ಗೋಡೆ ಕುಸಿತ, ವ್ಯಕ್ತಿಗಳು ಕೊಚ್ಚಿಕೊಂಡು ಹೋಗಿರುವುದೂ ಸೇರಿದಂತೆ ಅತಿವೃಷ್ಟಿಯಿಂದ ಆಗಿರುವ ಹಾನಿಯನ್ನು ಅಂದಾಜಿಸಲಾಗುತ್ತಿದೆ. ಆದ್ರೆ, ಈ ಬಾರಿ ದೊಡ್ಡ ಪ್ರಮಾಣದಲ್ಲಿ ರಸ್ತೆಗಳಿಗೆ ಹಾನಿಯಾಗಿಲ್ಲ. ನಿರ್ಮಲ, ಕುಮ್ರಂ ಭೀಮ್, ಪೆದ್ದಪಲ್ಲಿ, ಆದಿಲಾಬಾದ್, ಜಯಶಂಕರ್, ಭೂಪಾಲಪಲ್ಲಿ, ಜಗ್ತಿಯಾಲ್, ಕರೀಂನಗರ ಸೇರಿದಂತೆ ಇತರೆ ಜಿಲ್ಲೆಗಳಲ್ಲಿ ಅತಿ ಹೆಚ್ಚು ಮಳೆಯಾಗಿದೆ ಎಂದು ಭಾರತೀಯ ಹವಾಮಾನ ಇಲಾಖೆ (ಐಎಂಡಿ) ತಿಳಿಸಿದೆ.

ಮಹಾರಾಷ್ಟ್ರದಲ್ಲಿ 89 ಮಂದಿ ಬಲಿ: ಮಹಾರಾಷ್ಟ್ರದಲ್ಲಿ ಜೂನ್ 1 ರಿಂದ ಈವರೆಗೆ ಒಟ್ಟು 89 ಜನರು ಮಳೆ ಸಂಬಂಧಿತ ದುರ್ಘಟನೆಗಳಲ್ಲಿ ಪ್ರಾಣ ಕಳೆದುಕೊಂಡಿದ್ದಾರೆ ಎಂದು ರಾಜ್ಯ ವಿಪತ್ತು ನಿರ್ವಹಣಾ ಪ್ರಾಧಿಕಾರ ಮಾಹಿತಿ ನೀಡಿದೆ. ಕಳೆದ 24 ಗಂಟೆಗಳಲ್ಲಿ 5 ಮಂದಿ ಮೃತಪಟ್ಟಿದ್ದು, ಮಳೆಯಿಂದಾಗಿ 1,412 ಮನೆಗಳಿಗೆ ಹಾನಿಯಾಗಿದೆ. 7,796 ಜನರನ್ನು ಸುರಕ್ಷಿತ ಸ್ಥಳಗಳಿಗೆ ಸ್ಥಳಾಂತರಿಸಲಾಗಿದೆ. ಪುನರ್ವಸತಿ ಇಲಾಖೆಯಿಂದ 35 ಪರಿಹಾರ ಶಿಬಿರಗಳನ್ನು ಸ್ಥಾಪಿಸಲಾಗಿದೆ.

ಇದನ್ನೂ ಓದಿ: ಕೇದಾರನಾಥದಿಂದ ವಾಪಸಾಗುತ್ತಿದ್ದಾಗ ಗಂಗಾ ನದಿಗೆ ಬಿದ್ದ ನಾಲ್ವರು ಪ್ರವಾಸಿಗರಿದ್ದ ಕಾರು

Last Updated : Jul 14, 2022, 8:58 AM IST
ETV Bharat Logo

Copyright © 2024 Ushodaya Enterprises Pvt. Ltd., All Rights Reserved.