ETV Bharat / bharat

ಮಹಾರಾಷ್ಟ್ರದಲ್ಲೂ ಲಾಕ್​ಡೌನ್?​: ನಾಳೆ ಹೊರಬೀಳಲಿದೆ ಮಹತ್ವದ ನಿರ್ಧಾರ!

author img

By

Published : Apr 20, 2021, 7:09 PM IST

ಡೆಡ್ಲಿ ವೈರಸ್​ ಕೊರೊನಾ ಹಾವಳಿ ಮಹಾರಾಷ್ಟ್ರದಲ್ಲಿ ಕೈ ಮೀರಿ ಹೋಗಿದ್ದು, ಅದರ ನಿಯಂತ್ರಣಕ್ಕೆ ಇದೀಗ ಸಂಪೂರ್ಣ ಲಾಕ್​ಡೌನ್ ಘೋಷಣೆ ಮಾಡುವ ಸಾಧ್ಯತೆ ದಟ್ಟವಾಗಿದೆ.

minister Rajesh Tope
minister Rajesh Tope

ಮುಂಬೈ: ಮಹಾರಾಷ್ಟ್ರದಲ್ಲಿ ಕೊರೊನಾ ವೈರಸ್ ಹಾವಳಿ ಮೀತಿ ಮೀರಿದ್ದು, ಈಗಾಗಲೇ ಸೆಕ್ಷನ್​ 144 ಜಾರಿಗೊಳಿಸಿ ಅಲ್ಲಿನ ಮುಖ್ಯಮಂತ್ರಿ ಉದ್ಧವ್​ ಠಾಕ್ರೆ ಮಹತ್ವದ ಆದೇಶ ಹೊರಡಿಸಿದ್ದಾರೆ. ಇದರ ಮಧ್ಯೆ ನಾಳೆ ಮತ್ತೊಂದು ಮಹತ್ವದ ನಿರ್ಧಾರ ಹೊರಬೀಳುವ ಸಾಧ್ಯತೆ ಇದೆ. ರಾಜ್ಯದಲ್ಲಿ ಮಹಾಮಾರಿ ಕೊರೊನಾ ವೈರಸ್ ಹಾವಳಿ ಹೆಚ್ಚಾಗಿರುವ ಕಾರಣ ಸಂಪೂರ್ಣ ಲಾಕ್​ಡೌನ್​ ಘೋಷಣೆ ಮಾಡುವ ಸಾಧ್ಯತೆ ಇದ್ದು, ನಾಳೆ ಇದರ ಬಗ್ಗೆ ನಿರ್ಧಾರ ಹೊರಬರುವ ಸಾಧ್ಯತೆ ಇದೆ.

ರಾಜ್ಯದಲ್ಲಿ ಮುಖ್ಯಮಂತ್ರಿ ಉದ್ಧವ್ ಠಾಕ್ರೆ ನೇತೃತ್ವದಲ್ಲಿ ಸಚಿವ ಸಂಪುಟ ಸಭೆ ನಡೆಸಲಾಗಿದ್ದು, ಅದರಲ್ಲಿ ರಾಜ್ಯದಲ್ಲಿ ಬೆಡ್​ ಹಾಗೂ ಆಕ್ಸಿಜನ್ ಕೊರತೆ ಉಂಟಾಗಿರುವ ಬಗ್ಗೆ ಆತಂಕ ವ್ಯಕ್ತಪಡಿಸಲಾಗಿದೆ. ಜತೆಗೆ ಮಹಾಮಾರಿ ಕೊರೊನಾ ವೈರಸ್ ತಡೆಗಟ್ಟಲು ಯಾವೆಲ್ಲ ಕ್ರಮ ಕೈಗೊಳ್ಳಬೇಕು ಎಂಬುದರ ಕುರಿತು ಚರ್ಚೆ ನಡೆಸಲಾಗಿದೆ.

ಇದನ್ನೂ ಓದಿ: ಮಹಾರಾಷ್ಟ್ರದಲ್ಲಿ ಮತ್ತಷ್ಟು ಕಠಿಣ ರೂಲ್ಸ್​​​: ದಿನಸಿ, ತರಕಾರಿ ಅಂಗಡಿ ನಾಲ್ಕು ಗಂಟೆ ಮಾತ್ರ ಓಪನ್​!

ಆರೋಗ್ಯ ಸಚಿವರು ಹೇಳಿದ್ದೇನು!?

  • We have requested the CM to announce a complete lockdown in the state from tomorrow at 8 pm. This was the request of all ministers to CM, now it is his decision: Maharashtra Health Minister Rajesh Tope pic.twitter.com/rik7MTpryC

    — ANI (@ANI) April 20, 2021 " class="align-text-top noRightClick twitterSection" data=" ">

ಸಂಪೂರ್ಣ ಲಾಕ್​ಡೌನ್ ಘೋಷಣೆ ಮಾಡುವಂತೆ ಸಚಿವ ಸಂಪುಟದಲ್ಲಿ ಎಲ್ಲ ಸಚಿವರು ಮನವಿ ಮಾಡಿದ್ದು, ಇದಕ್ಕೆ ಸಂಬಂಧಿಸಿದಂತೆ ಮುಖ್ಯಮಂತ್ರಿ ಅಂತಿಮ ನಿರ್ಧಾರ ಕೈಗೊಳ್ಳಲಿದ್ದಾರೆ ಎಂದು ಆರೋಗ್ಯ ಸಚಿವ ರಾಜೇಶ್ ಥೋಪೆ ತಿಳಿಸಿದ್ದಾರೆ. ನಾಳೆ ರಾತ್ರಿ 8 ಗಂಟೆಗೆ ಇದಕ್ಕೆ ಸಂಬಂಧಿಸಿದಂತೆ ಉದ್ಧವ್ ಠಾಕ್ರೆ ಮಾಹಿತಿ ನೀಡಲಿದ್ದಾರೆ ಎಂದು ಅವರು ತಿಳಿಸಿದ್ದಾರೆ.

10ನೇ ತರಗತಿ ಪರೀಕ್ಷೆ ರದ್ದು

  • Given the worsening situation of the #Covid-19 pandemic, the Maharashtra government has now decided to cancel the state board exams for class 10th: Maharashtra Minister for School Education, Varsha Gaikwad

    — ANI (@ANI) April 20, 2021 " class="align-text-top noRightClick twitterSection" data=" ">

ಮಹಾಮಾರಿ ಕೊರೊನಾ ವೈರಸ್ ಹಾವಳಿ ಹೆಚ್ಚಾಗಿರುವ ಕಾರಣ ರಾಜ್ಯದಲ್ಲಿನ 10ನೇ ತರಗತಿ ಪರೀಕ್ಷೆ ರದ್ದುಗೊಳಿಸಲಾಗಿದೆ ಎಂದು ಶಿಕ್ಷಣ ಸಚಿವ ವರ್ಷಾ ಗಾಯಕ್​ವಾಡ್​ ಘೋಷಣೆ ಮಾಡಿದ್ದಾರೆ.

ಮುಂಬೈ: ಮಹಾರಾಷ್ಟ್ರದಲ್ಲಿ ಕೊರೊನಾ ವೈರಸ್ ಹಾವಳಿ ಮೀತಿ ಮೀರಿದ್ದು, ಈಗಾಗಲೇ ಸೆಕ್ಷನ್​ 144 ಜಾರಿಗೊಳಿಸಿ ಅಲ್ಲಿನ ಮುಖ್ಯಮಂತ್ರಿ ಉದ್ಧವ್​ ಠಾಕ್ರೆ ಮಹತ್ವದ ಆದೇಶ ಹೊರಡಿಸಿದ್ದಾರೆ. ಇದರ ಮಧ್ಯೆ ನಾಳೆ ಮತ್ತೊಂದು ಮಹತ್ವದ ನಿರ್ಧಾರ ಹೊರಬೀಳುವ ಸಾಧ್ಯತೆ ಇದೆ. ರಾಜ್ಯದಲ್ಲಿ ಮಹಾಮಾರಿ ಕೊರೊನಾ ವೈರಸ್ ಹಾವಳಿ ಹೆಚ್ಚಾಗಿರುವ ಕಾರಣ ಸಂಪೂರ್ಣ ಲಾಕ್​ಡೌನ್​ ಘೋಷಣೆ ಮಾಡುವ ಸಾಧ್ಯತೆ ಇದ್ದು, ನಾಳೆ ಇದರ ಬಗ್ಗೆ ನಿರ್ಧಾರ ಹೊರಬರುವ ಸಾಧ್ಯತೆ ಇದೆ.

ರಾಜ್ಯದಲ್ಲಿ ಮುಖ್ಯಮಂತ್ರಿ ಉದ್ಧವ್ ಠಾಕ್ರೆ ನೇತೃತ್ವದಲ್ಲಿ ಸಚಿವ ಸಂಪುಟ ಸಭೆ ನಡೆಸಲಾಗಿದ್ದು, ಅದರಲ್ಲಿ ರಾಜ್ಯದಲ್ಲಿ ಬೆಡ್​ ಹಾಗೂ ಆಕ್ಸಿಜನ್ ಕೊರತೆ ಉಂಟಾಗಿರುವ ಬಗ್ಗೆ ಆತಂಕ ವ್ಯಕ್ತಪಡಿಸಲಾಗಿದೆ. ಜತೆಗೆ ಮಹಾಮಾರಿ ಕೊರೊನಾ ವೈರಸ್ ತಡೆಗಟ್ಟಲು ಯಾವೆಲ್ಲ ಕ್ರಮ ಕೈಗೊಳ್ಳಬೇಕು ಎಂಬುದರ ಕುರಿತು ಚರ್ಚೆ ನಡೆಸಲಾಗಿದೆ.

ಇದನ್ನೂ ಓದಿ: ಮಹಾರಾಷ್ಟ್ರದಲ್ಲಿ ಮತ್ತಷ್ಟು ಕಠಿಣ ರೂಲ್ಸ್​​​: ದಿನಸಿ, ತರಕಾರಿ ಅಂಗಡಿ ನಾಲ್ಕು ಗಂಟೆ ಮಾತ್ರ ಓಪನ್​!

ಆರೋಗ್ಯ ಸಚಿವರು ಹೇಳಿದ್ದೇನು!?

  • We have requested the CM to announce a complete lockdown in the state from tomorrow at 8 pm. This was the request of all ministers to CM, now it is his decision: Maharashtra Health Minister Rajesh Tope pic.twitter.com/rik7MTpryC

    — ANI (@ANI) April 20, 2021 " class="align-text-top noRightClick twitterSection" data=" ">

ಸಂಪೂರ್ಣ ಲಾಕ್​ಡೌನ್ ಘೋಷಣೆ ಮಾಡುವಂತೆ ಸಚಿವ ಸಂಪುಟದಲ್ಲಿ ಎಲ್ಲ ಸಚಿವರು ಮನವಿ ಮಾಡಿದ್ದು, ಇದಕ್ಕೆ ಸಂಬಂಧಿಸಿದಂತೆ ಮುಖ್ಯಮಂತ್ರಿ ಅಂತಿಮ ನಿರ್ಧಾರ ಕೈಗೊಳ್ಳಲಿದ್ದಾರೆ ಎಂದು ಆರೋಗ್ಯ ಸಚಿವ ರಾಜೇಶ್ ಥೋಪೆ ತಿಳಿಸಿದ್ದಾರೆ. ನಾಳೆ ರಾತ್ರಿ 8 ಗಂಟೆಗೆ ಇದಕ್ಕೆ ಸಂಬಂಧಿಸಿದಂತೆ ಉದ್ಧವ್ ಠಾಕ್ರೆ ಮಾಹಿತಿ ನೀಡಲಿದ್ದಾರೆ ಎಂದು ಅವರು ತಿಳಿಸಿದ್ದಾರೆ.

10ನೇ ತರಗತಿ ಪರೀಕ್ಷೆ ರದ್ದು

  • Given the worsening situation of the #Covid-19 pandemic, the Maharashtra government has now decided to cancel the state board exams for class 10th: Maharashtra Minister for School Education, Varsha Gaikwad

    — ANI (@ANI) April 20, 2021 " class="align-text-top noRightClick twitterSection" data=" ">

ಮಹಾಮಾರಿ ಕೊರೊನಾ ವೈರಸ್ ಹಾವಳಿ ಹೆಚ್ಚಾಗಿರುವ ಕಾರಣ ರಾಜ್ಯದಲ್ಲಿನ 10ನೇ ತರಗತಿ ಪರೀಕ್ಷೆ ರದ್ದುಗೊಳಿಸಲಾಗಿದೆ ಎಂದು ಶಿಕ್ಷಣ ಸಚಿವ ವರ್ಷಾ ಗಾಯಕ್​ವಾಡ್​ ಘೋಷಣೆ ಮಾಡಿದ್ದಾರೆ.

ETV Bharat Logo

Copyright © 2024 Ushodaya Enterprises Pvt. Ltd., All Rights Reserved.