ETV Bharat / bharat

ಕೋವಿಡ್​ನ ಹೊಸ ರೂಪ... ಮಹಾರಾಷ್ಟ್ರದಲ್ಲಿ ನೈಟ್ ಕರ್ಫ್ಯೂ ಜಾರಿ

author img

By

Published : Dec 21, 2020, 8:02 PM IST

ಇಂಗ್ಲೆಂಡ್​ನಲ್ಲಿ ಕೋವಿಡ್ ಹೊಸ ರೂಪಾಂತರ ವೈರಸ್ ವ್ಯಾಪಕವಾಗಿ ಹರಡುತ್ತಿರುವ ಹಿನ್ನೆಲೆ ಡಿಸೆಂಬರ್ 22ರ ಮಂಗಳವಾರದಿಂದ ಜನವರಿ 5ರವರೆಗೆ ನೈಟ್ ಕರ್ಫ್ಯೂ ಜಾರಿ ಮಾಡಿ ಮಹಾರಾಷ್ಟ್ರ ಸರ್ಕಾರ ಆದೇಶ ಹೊರಡಿಸಿದೆ.

Amid Covid
ಕರ್ಫ್ಯೂ ಜಾರಿ

ಮುಂಬೈ (ಮಹಾರಾಷ್ಟ್ರ): ಇಂಗ್ಲೆಂಡ್​ನಲ್ಲಿ ಕೋವಿಡ್ ಹೊಸ ರೂಪಾಂತರ ವೈರಸ್ ವ್ಯಾಪಕವಾಗಿ ಹರಡುತ್ತಿರುವ ಹಿನ್ನೆಲೆ ಜನವರಿ 5ರವರೆಗೆ ಪುರಸಭೆ ವ್ಯಾಪ್ತಿಯಲ್ಲಿ ರಾತ್ರಿ ಕರ್ಫ್ಯೂ ವಿಧಿಸಿ ಮಹಾರಾಷ್ಟ್ರ ಸರ್ಕಾರ ಆದೇಶಿಸಿದೆ.

ಡಿಸೆಂಬರ್ 22ರ ಮಂಗಳವಾರದಿಂದ ಪ್ರತಿದಿನ ರಾತ್ರಿ 11 ಗಂಟೆಯಿಂದ ಬೆಳಗ್ಗೆ 6 ಗಂಟೆವರೆಗೆ ಕರ್ಫ್ಯೂ ಜಾರಿಯಲ್ಲಿರುತ್ತದೆ. ಯೂರೋಪಿಯನ್ ಮತ್ತು ಮಧ್ಯಪ್ರಾಚ್ಯ ರಾಷ್ಟ್ರಗಳಿಂದ ರಾಜ್ಯಕ್ಕೆ ಬರುವ ಪ್ರಯಾಣಿಕರು ಕಡ್ಡಾಯವಾಗಿ 14 ದಿನಗಳವರೆಗೆ ಸಾಂಸ್ಥಿಕ ಕ್ವಾರಂಟೈನ್​ನಲ್ಲಿರಬೇಕಾಗುತ್ತದೆ. ಅಲ್ಲದೆ ಅವರು ಐದು ಅಥವಾ ಏಳನೇ ದಿನ ಕೋವಿಡ್ RTPCR ಪರೀಕ್ಷೆ ಮಾಡಿಸಿಕೊಳ್ಳಬೇಕಾಗುತ್ತದೆ ಎಂದು ರಾಜ್ಯ ಸರ್ಕಾರ ತಿಳಿಸಿದೆ.

ಸಿಎಂ ಉದ್ಧವ್ ಠಾಕ್ರೆ ನೇತೃತ್ವದಲ್ಲಿ ನಡೆದ ಸಭೆಯಲ್ಲಿ, ರೋಗ ಹರಡುವುದನ್ನು ತಡೆಯಲು ಈ ಕ್ರಮಗಳನ್ನು ಕೈಗೊಳ್ಳಲಾಗಿದೆ. ವಿದೇಶದಿಂದ ಬಂದವರಿಗೆ ಟೆಸ್ಟ್ ಮಾಡಲು ಬೇರೆ ಆಸ್ಪತ್ರೆಗಳ ವ್ಯವಸ್ಥೆ ಮಾಡಲಾಗುವುದು. ಯೂರೋಪ್, ಮಧ್ಯಪ್ರಾಚ್ಯ ರಾಷ್ಟ್ರಗಳನ್ನು ಹೊರತುಪಡಿಸಿ ಬೇರೆ ದೇಶಗಳಿಂದ ಬಂದವರಿಗೆ ಹೋಂ ಕ್ವಾರಂಟೈನ್ ಕಡ್ಡಾಯವಾಗಿದೆ.

ಯಾವುದೇ ಕಾರಣಕ್ಕೂ ಕೋವಿಡ್ ಮಾರ್ಗಸೂಚಿಗಳನ್ನು ಉಲ್ಲಂಘಿಸಬೇಡಿ. ಸಾರ್ವಜನಿಕ ಸ್ಥಳಗಳಲ್ಲಿ ಗುಂಪು ಗುಂಪಾಗಿ ಸೇರಬೇಡಿ. ಮಾಸ್ಕ್ ಧರಿಸಿ, ಸ್ಯಾನಿಟೈಸರ್ ಬಳಸಿ, ವೈರಸ್​ನಿಂದ ರಕ್ಷಿಸಿಕೊಳ್ಳಿ ಎಂದು ಸಿಎಂ ಉದ್ಧವ್ ಠಾಕ್ರೆ ರಾಜ್ಯದ ಜನತೆಗೆ ಮನವಿ ಮಾಡಿದ್ದಾರೆ.

ಮುಂಬೈ (ಮಹಾರಾಷ್ಟ್ರ): ಇಂಗ್ಲೆಂಡ್​ನಲ್ಲಿ ಕೋವಿಡ್ ಹೊಸ ರೂಪಾಂತರ ವೈರಸ್ ವ್ಯಾಪಕವಾಗಿ ಹರಡುತ್ತಿರುವ ಹಿನ್ನೆಲೆ ಜನವರಿ 5ರವರೆಗೆ ಪುರಸಭೆ ವ್ಯಾಪ್ತಿಯಲ್ಲಿ ರಾತ್ರಿ ಕರ್ಫ್ಯೂ ವಿಧಿಸಿ ಮಹಾರಾಷ್ಟ್ರ ಸರ್ಕಾರ ಆದೇಶಿಸಿದೆ.

ಡಿಸೆಂಬರ್ 22ರ ಮಂಗಳವಾರದಿಂದ ಪ್ರತಿದಿನ ರಾತ್ರಿ 11 ಗಂಟೆಯಿಂದ ಬೆಳಗ್ಗೆ 6 ಗಂಟೆವರೆಗೆ ಕರ್ಫ್ಯೂ ಜಾರಿಯಲ್ಲಿರುತ್ತದೆ. ಯೂರೋಪಿಯನ್ ಮತ್ತು ಮಧ್ಯಪ್ರಾಚ್ಯ ರಾಷ್ಟ್ರಗಳಿಂದ ರಾಜ್ಯಕ್ಕೆ ಬರುವ ಪ್ರಯಾಣಿಕರು ಕಡ್ಡಾಯವಾಗಿ 14 ದಿನಗಳವರೆಗೆ ಸಾಂಸ್ಥಿಕ ಕ್ವಾರಂಟೈನ್​ನಲ್ಲಿರಬೇಕಾಗುತ್ತದೆ. ಅಲ್ಲದೆ ಅವರು ಐದು ಅಥವಾ ಏಳನೇ ದಿನ ಕೋವಿಡ್ RTPCR ಪರೀಕ್ಷೆ ಮಾಡಿಸಿಕೊಳ್ಳಬೇಕಾಗುತ್ತದೆ ಎಂದು ರಾಜ್ಯ ಸರ್ಕಾರ ತಿಳಿಸಿದೆ.

ಸಿಎಂ ಉದ್ಧವ್ ಠಾಕ್ರೆ ನೇತೃತ್ವದಲ್ಲಿ ನಡೆದ ಸಭೆಯಲ್ಲಿ, ರೋಗ ಹರಡುವುದನ್ನು ತಡೆಯಲು ಈ ಕ್ರಮಗಳನ್ನು ಕೈಗೊಳ್ಳಲಾಗಿದೆ. ವಿದೇಶದಿಂದ ಬಂದವರಿಗೆ ಟೆಸ್ಟ್ ಮಾಡಲು ಬೇರೆ ಆಸ್ಪತ್ರೆಗಳ ವ್ಯವಸ್ಥೆ ಮಾಡಲಾಗುವುದು. ಯೂರೋಪ್, ಮಧ್ಯಪ್ರಾಚ್ಯ ರಾಷ್ಟ್ರಗಳನ್ನು ಹೊರತುಪಡಿಸಿ ಬೇರೆ ದೇಶಗಳಿಂದ ಬಂದವರಿಗೆ ಹೋಂ ಕ್ವಾರಂಟೈನ್ ಕಡ್ಡಾಯವಾಗಿದೆ.

ಯಾವುದೇ ಕಾರಣಕ್ಕೂ ಕೋವಿಡ್ ಮಾರ್ಗಸೂಚಿಗಳನ್ನು ಉಲ್ಲಂಘಿಸಬೇಡಿ. ಸಾರ್ವಜನಿಕ ಸ್ಥಳಗಳಲ್ಲಿ ಗುಂಪು ಗುಂಪಾಗಿ ಸೇರಬೇಡಿ. ಮಾಸ್ಕ್ ಧರಿಸಿ, ಸ್ಯಾನಿಟೈಸರ್ ಬಳಸಿ, ವೈರಸ್​ನಿಂದ ರಕ್ಷಿಸಿಕೊಳ್ಳಿ ಎಂದು ಸಿಎಂ ಉದ್ಧವ್ ಠಾಕ್ರೆ ರಾಜ್ಯದ ಜನತೆಗೆ ಮನವಿ ಮಾಡಿದ್ದಾರೆ.

ETV Bharat Logo

Copyright © 2024 Ushodaya Enterprises Pvt. Ltd., All Rights Reserved.