ETV Bharat / bharat

ಮಹಾರಾಷ್ಟ್ರದಲ್ಲಿ ಲಾಕ್​ಡೌನ್ 3.0 ; ಡೆಲ್ಟಾ ಸೋಂಕು ತಡೆಗೆ ಕಠಿಣ ಕ್ರಮ

ಡೆಲ್ಟಾ ಪ್ಲಸ್ ರೂಪಾಂತರದ ಭೀತಿಯನ್ನು ನಿಭಾಯಿಸಲು ಕಠಿಣ ಪ್ರಯತ್ನಗಳನ್ನು ಮಹಾರಾಷ್ಟ್ರ ಸರ್ಕಾರ ತೆಗೆದುಕೊಂಡಿದ್ದು, 3.0 ಲಾಕ್​ಡೌನ್​ ಘೋಷಣೆ ಮಾಡಿದೆ. ಈ ಬಗ್ಗೆ ಮಾಹಿತಿ ನೀಡಿದ ಪರಿಹಾರ ಮತ್ತು ಪುನರ್ವಸತಿ ಪ್ರಧಾನ ಕಾರ್ಯದರ್ಶಿ ಅಸೀಮ್ ಗುಪ್ತಾ ಮೂಲಭೂತವಾಗಿ ನಾವು ಕಾರ್ಯಪಡೆ ಮತ್ತು ಜಿಒಐನ ಸಲಹೆ ಪಡೆದು ಈ ನಿರ್ಧಾರಗಳನ್ನು ತೆಗೆದುಕೊಂಡಿದ್ದೇವೆ ಎಂದಿದ್ದಾರೆ.

author img

By

Published : Jun 25, 2021, 10:30 PM IST

Maharashtra
ಮಹಾರಾಷ್ಟ್ರ

ಮಹಾರಾಷ್ಟ್ರ: ವೈರಸ್ ಹರಡುವುದನ್ನು ತಡೆಗಟ್ಟಲು ಮತ್ತು ರಾಜ್ಯದಲ್ಲಿ ಡೆಲ್ಟಾ ಪ್ಲಸ್ ರೂಪಾಂತರದ ಭೀತಿಯನ್ನು ನಿಭಾಯಿಸಲು ಕಠಿಣ ಪ್ರಯತ್ನಗಳನ್ನು ಮಹಾರಾಷ್ಟ್ರ ಸರ್ಕಾರ ತೆಗೆದುಕೊಂಡಿದ್ದು, ಲಾಕ್​ಡೌನ್ 3.0​ ಘೋಷಣೆ ಮಾಡಿದೆ. ಹೆಚ್ಚುವರಿ ಕಟ್ಟುನಿಟ್ಟಿನ ನಿರ್ಬಂಧಗಳನ್ನು ವಿಧಿಸುವ ನಿರ್ಧಾರವನ್ನು ಮುಖ್ಯಮಂತ್ರಿ ಉದ್ಧವ್ ಠಾಕ್ರೆ ಅವರ ಅಧ್ಯಕ್ಷತೆಯಲ್ಲಿ ನಡೆದ ಸಂಪುಟ ಸಭೆಯಲ್ಲಿ ಸರ್ವಾನುಮತದಿಂದ ಅಂಗೀಕರಿಸಲಾಗಿದೆ.

ಈ ಬಗ್ಗೆ ಮಾಹಿತಿ ನೀಡಿದ ಪರಿಹಾರ ಮತ್ತು ಪುನರ್ವಸತಿ ಪ್ರಧಾನ ಕಾರ್ಯದರ್ಶಿ ಅಸೀಮ್ ಗುಪ್ತಾ "ಮೂಲಭೂತವಾಗಿ ನಾವು ಕಾರ್ಯಪಡೆ ಮತ್ತು ಜಿಒಐನ ಸಲಹೆ ಪಡೆದು ಈ ನಿರ್ಧಾರಗಳನ್ನು ತೆಗೆದುಕೊಂಡಿದ್ದೇವೆ. ಸೋಂಕಿನ ಭೀತಿ ಕಡಿಮೆಯಾದ ಬಳಿಕ ಈ ಕ್ರಮಗಳನ್ನು ಹಿಂತೆಗೆದುಕೊಳ್ಳುತ್ತೇವೆ." ಎಂದಿದ್ದಾರೆ.

ಆರ್​ಟಿಪಿಸಿಆರ್​ ಮತ್ತು ರಾಪಿಡ್ ಆಂಟಿಜೆನ್ ಪರೀಕ್ಷೆಯಲ್ಲಿ ಗೊಂದಲ ಉಂಟಾಗಿದ್ದು, ಈ ಹಿನ್ನೆಲೆಯಲ್ಲಿ ಕೇವಲ ಆರ್​ಟಿಪಿಸಿಆರ್​ ಪರೀಕ್ಷೆಗಳನ್ನು ಮಾತ್ರ ಪರಿಗಣಿಸಬೇಕೆಂದು ನಾವು ಆದೇಶಿಸಿದ್ದೇವೆ ಎಂದು ಗುಪ್ತಾ ಹೇಳಿದರು. 3 ನೇ ಹಂತದ ನಿರ್ಬಂಧಗಳು ಮುಂದುವರಿಯಲಿದ್ದು ಇದರಲ್ಲಿ ಅಗತ್ಯ ಅಂಗಡಿಗಳು ಮತ್ತು ಸಂಸ್ಥೆಗಳು ಎಲ್ಲಾ ದಿನಗಳಲ್ಲಿ ಸಂಜೆ 4 ಗಂಟೆಯವರೆಗೆ ತೆರೆದಿರಬಹುದು.

ವಾರದ ದಿನಗಳಲ್ಲಿ ಸಂಜೆ 4 ಗಂಟೆಯವರೆಗೆ ರೆಸ್ಟೋರೆಂಟ್‌ಗಳಿಗೆ 50 ಪ್ರತಿಶತದಷ್ಟು ಸಾಮರ್ಥ್ಯದೊಂದಿಗೆ ಕಾರ್ಯನಿರ್ವಹಿಸಲು ಅವಕಾಶವಿರುತ್ತದೆ. ಮತ್ತು ಹೋಂ ಡೆಲಿವರಿಗೆ ಸಹ ಅನುಮತಿ ನೀಡಲಾಗಿದೆ. ಜಿಮ್‌ಗಳು, ಸೆಲೂನ್​ ಮತ್ತು ಸ್ಪಾಗಳು ಸಂಜೆ 4 ರವರೆಗೆ ತೆರೆದಿರುತ್ತವೆ. ಇಲ್ಲಿಯೂ ಶೇ 50 ರಷ್ಟು ಸಾಮರ್ಥ್ಯದಲ್ಲಿ ಕಾರ್ಯನಿರ್ವಹಿಸಬೇಕಾಗುತ್ತದೆ.

ಮಹಾರಾಷ್ಟ್ರ: ವೈರಸ್ ಹರಡುವುದನ್ನು ತಡೆಗಟ್ಟಲು ಮತ್ತು ರಾಜ್ಯದಲ್ಲಿ ಡೆಲ್ಟಾ ಪ್ಲಸ್ ರೂಪಾಂತರದ ಭೀತಿಯನ್ನು ನಿಭಾಯಿಸಲು ಕಠಿಣ ಪ್ರಯತ್ನಗಳನ್ನು ಮಹಾರಾಷ್ಟ್ರ ಸರ್ಕಾರ ತೆಗೆದುಕೊಂಡಿದ್ದು, ಲಾಕ್​ಡೌನ್ 3.0​ ಘೋಷಣೆ ಮಾಡಿದೆ. ಹೆಚ್ಚುವರಿ ಕಟ್ಟುನಿಟ್ಟಿನ ನಿರ್ಬಂಧಗಳನ್ನು ವಿಧಿಸುವ ನಿರ್ಧಾರವನ್ನು ಮುಖ್ಯಮಂತ್ರಿ ಉದ್ಧವ್ ಠಾಕ್ರೆ ಅವರ ಅಧ್ಯಕ್ಷತೆಯಲ್ಲಿ ನಡೆದ ಸಂಪುಟ ಸಭೆಯಲ್ಲಿ ಸರ್ವಾನುಮತದಿಂದ ಅಂಗೀಕರಿಸಲಾಗಿದೆ.

ಈ ಬಗ್ಗೆ ಮಾಹಿತಿ ನೀಡಿದ ಪರಿಹಾರ ಮತ್ತು ಪುನರ್ವಸತಿ ಪ್ರಧಾನ ಕಾರ್ಯದರ್ಶಿ ಅಸೀಮ್ ಗುಪ್ತಾ "ಮೂಲಭೂತವಾಗಿ ನಾವು ಕಾರ್ಯಪಡೆ ಮತ್ತು ಜಿಒಐನ ಸಲಹೆ ಪಡೆದು ಈ ನಿರ್ಧಾರಗಳನ್ನು ತೆಗೆದುಕೊಂಡಿದ್ದೇವೆ. ಸೋಂಕಿನ ಭೀತಿ ಕಡಿಮೆಯಾದ ಬಳಿಕ ಈ ಕ್ರಮಗಳನ್ನು ಹಿಂತೆಗೆದುಕೊಳ್ಳುತ್ತೇವೆ." ಎಂದಿದ್ದಾರೆ.

ಆರ್​ಟಿಪಿಸಿಆರ್​ ಮತ್ತು ರಾಪಿಡ್ ಆಂಟಿಜೆನ್ ಪರೀಕ್ಷೆಯಲ್ಲಿ ಗೊಂದಲ ಉಂಟಾಗಿದ್ದು, ಈ ಹಿನ್ನೆಲೆಯಲ್ಲಿ ಕೇವಲ ಆರ್​ಟಿಪಿಸಿಆರ್​ ಪರೀಕ್ಷೆಗಳನ್ನು ಮಾತ್ರ ಪರಿಗಣಿಸಬೇಕೆಂದು ನಾವು ಆದೇಶಿಸಿದ್ದೇವೆ ಎಂದು ಗುಪ್ತಾ ಹೇಳಿದರು. 3 ನೇ ಹಂತದ ನಿರ್ಬಂಧಗಳು ಮುಂದುವರಿಯಲಿದ್ದು ಇದರಲ್ಲಿ ಅಗತ್ಯ ಅಂಗಡಿಗಳು ಮತ್ತು ಸಂಸ್ಥೆಗಳು ಎಲ್ಲಾ ದಿನಗಳಲ್ಲಿ ಸಂಜೆ 4 ಗಂಟೆಯವರೆಗೆ ತೆರೆದಿರಬಹುದು.

ವಾರದ ದಿನಗಳಲ್ಲಿ ಸಂಜೆ 4 ಗಂಟೆಯವರೆಗೆ ರೆಸ್ಟೋರೆಂಟ್‌ಗಳಿಗೆ 50 ಪ್ರತಿಶತದಷ್ಟು ಸಾಮರ್ಥ್ಯದೊಂದಿಗೆ ಕಾರ್ಯನಿರ್ವಹಿಸಲು ಅವಕಾಶವಿರುತ್ತದೆ. ಮತ್ತು ಹೋಂ ಡೆಲಿವರಿಗೆ ಸಹ ಅನುಮತಿ ನೀಡಲಾಗಿದೆ. ಜಿಮ್‌ಗಳು, ಸೆಲೂನ್​ ಮತ್ತು ಸ್ಪಾಗಳು ಸಂಜೆ 4 ರವರೆಗೆ ತೆರೆದಿರುತ್ತವೆ. ಇಲ್ಲಿಯೂ ಶೇ 50 ರಷ್ಟು ಸಾಮರ್ಥ್ಯದಲ್ಲಿ ಕಾರ್ಯನಿರ್ವಹಿಸಬೇಕಾಗುತ್ತದೆ.

ETV Bharat Logo

Copyright © 2024 Ushodaya Enterprises Pvt. Ltd., All Rights Reserved.