ETV Bharat / bharat

ಮಹಾರಾಷ್ಟ್ರದ 2 ನಗರಗಳಿಗೆ ಮರುನಾಮಕರಣ: ತಂದೆಗೆ ಕೊಟ್ಟ ಮಾತು ಉಳಿಸಿಕೊಂಡ ಸಿಎಂ ಠಾಕ್ರೆ

author img

By

Published : Jun 29, 2022, 7:18 PM IST

Updated : Jun 29, 2022, 7:55 PM IST

ಮಹಾರಾಷ್ಟ್ರ ಮುಖ್ಯಮಂತ್ರಿ ಉದ್ಧವ್ ಠಾಕ್ರೆ ನೇತೃತ್ವದಲ್ಲಿಂದು ಸಂಭಾವ್ಯ ಕೊನೆಯ ಸಚಿವ ಸಂಪುಟ ಸಭೆ ನಡೆಯಿತು. ಈ ಸಂದರ್ಭದಲ್ಲಿ ರಾಜ್ಯದ ಎರಡು ನಗರಗಳ ಹೆಸರು ಬದಲಿಸಿ ಮಹತ್ವದ ನಿರ್ಧಾರ ಕೈಗೊಳ್ಳಲಾಗಿದೆ.

Maharashtra state cabinet
Maharashtra state cabinet

ಮುಂಬೈ: ಮಹಾರಾಷ್ಟ್ರದ ರಾಜಕೀಯ ಬಿಕ್ಕಟ್ಟಿನ ನಡುವೆ ಇಂದು ಸಂಜೆ ನಡೆದ ಮಹತ್ವದ ಸಚಿವ ಸಂಪುಟ ಸಭೆಯಲ್ಲಿ ಮುಖ್ಯಮಂತ್ರಿ ಉದ್ಧವ್ ಠಾಕ್ರೆ ಮಹತ್ವದ ನಿರ್ಧಾರ ಕೈಗೊಂಡಿದ್ದಾರೆ. ರಾಜ್ಯದ ಔರಂಗಾಬಾದ್​ ನಗರಕ್ಕೆ 'ಸಂಭಾಜಿನಗರ' ಹಾಗು ಒಸ್ಮಾನಾಬಾದ್‌ಗೆ 'ಧಾರಶಿವ್'​ ಎಂದು ಮರುನಾಮಕರಣ ಮಾಡಲು ಸಂಪುಟ ಅನುಮೋದನೆ ನೀಡಿದೆ. ಇದೇ ವೇಳೆ, ನವಿಮುಂಬೈ ವಿಮಾನ ನಿಲ್ದಾಣದ ಹೆಸರನ್ನು ಡಿ.ಬಿ.ಪಾಟೀಲ್​ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣ ಎಂದು ಬದಲಾಯಿಸಲು ನಿರ್ಧರಿಸಲಾಗಿದೆ.

ಮಹಾರಾಷ್ಟ್ರದ 2 ನಗರಗಳಿಗೆ ಮರುನಾಮಕರಣ: ತಂದೆಗೆ ಕೊಟ್ಟ ಮಾತು ಉಳಿಸಿಕೊಂಡ ಸಿಎಂ ಠಾಕ್ರೆ

ಈ ಹಿಂದೆ ಮೊಘಲರ ಆಡಳಿತದಲ್ಲಿ ಔರಂಗಜೇಬ್, ಮಹಾರಾಷ್ಟ್ರದ ಮರಾಠವಾಡ ಪ್ರದೇಶದಲ್ಲಿ ಔರಂಗಾಬಾದ್ ನಗರ ಸ್ಥಾಪನೆ ಮಾಡಿದ್ದರು. ಇದೀಗ ಈ ನಗರವನ್ನು 'ಸಂಭಾಜಿನಗರ' ಎಂದು ಮರುನಾಮಕರಣ ಮಾಡಲಾಗಿದೆ. ಇದೇ ವಿಚಾರವಾಗಿ ಈ ಹಿಂದೆ ಮಾತನಾಡಿದ್ದ ಉದ್ಧವ್ ಠಾಕ್ರೆ, ಔರಂಗಾಬಾದ್​ಗೆ ಸಂಭಾಜಿ ನಗರ ಎಂದು ಮರುನಾಮಕರಣ ಮಾಡುವುದಾಗಿ ನನ್ನ ತಂದೆ ಬಾಳಾ ಸಾಹೇಬ್​​ ಠಾಕ್ರೆಗೆ ನೀಡಿರುವ ಭರವಸೆಯನ್ನು ನಾನು ಮರೆತಿಲ್ಲ ಎಂದು ಹೇಳಿದ್ದರು. ಆ ಭರವಸೆಯಂತೆ ಇದೀಗ ನಿರ್ಧಾರ ಕೈಗೊಂಡಿದ್ದಾರೆ.

ಮಹಾರಾಷ್ಟ್ರದಲ್ಲಿ ಮೈತ್ರಿ ಸರ್ಕಾರದ ವಿರುದ್ಧ 48 ಶಿವಸೇನೆಯ ಶಾಸಕರು ಬಂಡಾಯವೆದ್ದಿರುವ ಕಾರಣ ಸರ್ಕಾರ ಅಲ್ಪಮತಕ್ಕೆ ಕುಸಿಯುವ ಭೀತಿಯಲ್ಲಿದೆ. ನಾಳೆ ವಿಧಾನಸಭೆಯಲ್ಲಿ ವಿಶ್ವಾಸಮತಯಾಚನೆ ನಡೆಯುವ ಸಾಧ್ಯತೆ ದಟ್ಟವಾಗಿದೆ.

ಮುಂಬೈ: ಮಹಾರಾಷ್ಟ್ರದ ರಾಜಕೀಯ ಬಿಕ್ಕಟ್ಟಿನ ನಡುವೆ ಇಂದು ಸಂಜೆ ನಡೆದ ಮಹತ್ವದ ಸಚಿವ ಸಂಪುಟ ಸಭೆಯಲ್ಲಿ ಮುಖ್ಯಮಂತ್ರಿ ಉದ್ಧವ್ ಠಾಕ್ರೆ ಮಹತ್ವದ ನಿರ್ಧಾರ ಕೈಗೊಂಡಿದ್ದಾರೆ. ರಾಜ್ಯದ ಔರಂಗಾಬಾದ್​ ನಗರಕ್ಕೆ 'ಸಂಭಾಜಿನಗರ' ಹಾಗು ಒಸ್ಮಾನಾಬಾದ್‌ಗೆ 'ಧಾರಶಿವ್'​ ಎಂದು ಮರುನಾಮಕರಣ ಮಾಡಲು ಸಂಪುಟ ಅನುಮೋದನೆ ನೀಡಿದೆ. ಇದೇ ವೇಳೆ, ನವಿಮುಂಬೈ ವಿಮಾನ ನಿಲ್ದಾಣದ ಹೆಸರನ್ನು ಡಿ.ಬಿ.ಪಾಟೀಲ್​ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣ ಎಂದು ಬದಲಾಯಿಸಲು ನಿರ್ಧರಿಸಲಾಗಿದೆ.

ಮಹಾರಾಷ್ಟ್ರದ 2 ನಗರಗಳಿಗೆ ಮರುನಾಮಕರಣ: ತಂದೆಗೆ ಕೊಟ್ಟ ಮಾತು ಉಳಿಸಿಕೊಂಡ ಸಿಎಂ ಠಾಕ್ರೆ

ಈ ಹಿಂದೆ ಮೊಘಲರ ಆಡಳಿತದಲ್ಲಿ ಔರಂಗಜೇಬ್, ಮಹಾರಾಷ್ಟ್ರದ ಮರಾಠವಾಡ ಪ್ರದೇಶದಲ್ಲಿ ಔರಂಗಾಬಾದ್ ನಗರ ಸ್ಥಾಪನೆ ಮಾಡಿದ್ದರು. ಇದೀಗ ಈ ನಗರವನ್ನು 'ಸಂಭಾಜಿನಗರ' ಎಂದು ಮರುನಾಮಕರಣ ಮಾಡಲಾಗಿದೆ. ಇದೇ ವಿಚಾರವಾಗಿ ಈ ಹಿಂದೆ ಮಾತನಾಡಿದ್ದ ಉದ್ಧವ್ ಠಾಕ್ರೆ, ಔರಂಗಾಬಾದ್​ಗೆ ಸಂಭಾಜಿ ನಗರ ಎಂದು ಮರುನಾಮಕರಣ ಮಾಡುವುದಾಗಿ ನನ್ನ ತಂದೆ ಬಾಳಾ ಸಾಹೇಬ್​​ ಠಾಕ್ರೆಗೆ ನೀಡಿರುವ ಭರವಸೆಯನ್ನು ನಾನು ಮರೆತಿಲ್ಲ ಎಂದು ಹೇಳಿದ್ದರು. ಆ ಭರವಸೆಯಂತೆ ಇದೀಗ ನಿರ್ಧಾರ ಕೈಗೊಂಡಿದ್ದಾರೆ.

ಮಹಾರಾಷ್ಟ್ರದಲ್ಲಿ ಮೈತ್ರಿ ಸರ್ಕಾರದ ವಿರುದ್ಧ 48 ಶಿವಸೇನೆಯ ಶಾಸಕರು ಬಂಡಾಯವೆದ್ದಿರುವ ಕಾರಣ ಸರ್ಕಾರ ಅಲ್ಪಮತಕ್ಕೆ ಕುಸಿಯುವ ಭೀತಿಯಲ್ಲಿದೆ. ನಾಳೆ ವಿಧಾನಸಭೆಯಲ್ಲಿ ವಿಶ್ವಾಸಮತಯಾಚನೆ ನಡೆಯುವ ಸಾಧ್ಯತೆ ದಟ್ಟವಾಗಿದೆ.

Last Updated : Jun 29, 2022, 7:55 PM IST
ETV Bharat Logo

Copyright © 2024 Ushodaya Enterprises Pvt. Ltd., All Rights Reserved.