ETV Bharat / bharat

‘ಪಕ್ಷದಲ್ಲಿ ಅಧ್ಯಕ್ಷರಿಲ್ಲದಿದ್ದರೆ ಚುನಾವಣೆ ಹೇಗೆ ನಡೆಯಿತು?’ ಕಪಿಲ್ ಸಿಬಲ್​ಗೆ ಖರ್ಗೆ ತಿರುಗೇಟು

author img

By

Published : Oct 4, 2021, 7:31 AM IST

ಹಿರಿಯ ಕಾಂಗ್ರೆಸ್ ನಾಯಕ ಕಪಿಲ್ ಸಿಬಲ್​ ಅವರು ಇತ್ತೀಚೆಗೆ, ಕಾಂಗ್ರೆಸ್ ಪಕ್ಷದಲ್ಲಿ​ ಅಧ್ಯಕ್ಷರಿಲ್ಲ ಎಂಬ ಹೇಳಿಕೆಗೆ ಪ್ರತಿಕ್ರಿಯಿಸಿರುವ ಮಲ್ಲಿಕಾರ್ಜುನ ಖರ್ಗೆ, ಸೋನಿಯಾ ಗಾಂಧಿ ಕಾಂಗ್ರೆಸ್ ಮುಖ್ಯಸ್ಥೆ. ಪಕ್ಷ ರಾಜಕೀಯ ಬಿಕ್ಕಟ್ಟು ಎದುರಿಸುತ್ತಿರುವುದು ಇದು ಹೊಸದೇನಲ್ಲ, ಎಲ್ಲವು ಸರಿಯಾಗಲಿದೆ ಎಂದು ತಿರುಗೇಟು ನೀಡಿದ್ದಾರೆ.

mallikarjun-kharge-slams-kapil-sibal-on-no-president-remark
ಕಪಿಲ್ ಸಿಬಲ್​ಗೆ ಖರ್ಗೆ ತಿರುಗೇಟು

ನವದೆಹಲಿ: ಕೆಲವು ದಿನಗಳಿಂದ ರಾಷ್ಟ್ರೀಯ ಕಾಂಗ್ರೆಸ್ ಪಕ್ಷದಲ್ಲಿ ಹಲವು ರೀತಿಯ ಬೆಳವಣಿಗೆ ನಡೆಯುತ್ತಿದ್ದು ಚರ್ಚೆಗೆ ಕಾರಣವಾಗಿದೆ. ಇತ್ತೀಚೆಗೆ ಕಪಿಲ್ ಸಿಬಲ್ ಪಕ್ಷದಲ್ಲಿ ಅಧ್ಯಕ್ಷರಿಲ್ಲ ಎಂದು ಅಸಮಾಧಾನ ವ್ಯಕ್ತಪಡಿಸಿದ್ದರು. ಇದಕ್ಕೆ ಮಲ್ಲಿಕಾರ್ಜುನ ಖರ್ಗೆ ತಿರುಗೇಟು ಕೊಟ್ಟಿದ್ದಾರೆ.

‘ಪಕ್ಷದಲ್ಲಿ ಅಧ್ಯಕ್ಷರಿಲ್ಲ ಎಂಬುದಾದರೆ ಈ ವರ್ಷದ ಆರಂಭದಲ್ಲಿ ಚುನಾವಣೆ ಹೇಗೆ ನಡೆಯಿತು?' ಎಂದು ಕೇಳಿದ್ದಾರೆ. ಅಷ್ಟೇ ಅಲ್ಲ, 'ಎಲ್ಲಾ ಪಕ್ಷಗಳಲ್ಲೂ ಒಳ ಜಗಳಗಳು ಇರುತ್ತವೆ. ಪಕ್ಷ ರಾಜಕೀಯ ಬಿಕ್ಕಟ್ಟು ಎದುರಿಸುತ್ತಿರುವುದು ಇದು ಹೊಸದೇನಲ್ಲ. ನಾವು ಶೀಘ್ರದಲ್ಲಿಯೇ ಈ ಬಿಕ್ಕಟ್ಟನ್ನು ಪರಿಹರಿಸುತ್ತೇವೆ ಮತ್ತು ಇನ್ನಷ್ಟು ಬಲವಾಗುತ್ತೇವೆ' ಎಂದು ವಿಶ್ವಾಸ ವ್ಯಕ್ತಪಡಿಸಿದ್ದಾರೆ.

ನಮ್ಮ ಅಧ್ಯಕ್ಷರನ್ನು ಮತ್ತು ರಾಹುಲ್ ಗಾಂಧಿಯನ್ನು ಬೆಂಬಲಿಸಬೇಕು, ಪಕ್ಷವನ್ನು ಬಲಪಡಿಸಬೇಕು ಎಂಬುದಾಗಿ ಪಕ್ಷದ ಇತರ ನಾಯಕರಿಗೆ ಸಲಹೆ ನೀಡುತ್ತೇನೆ ಎಂದು ಖರ್ಗೆ ಹೇಳಿದ್ದಾರೆ.

ಇತ್ತೀಚೆಗೆ ಪಂಜಾಬ್​​​ ಸಿಎಂ ಅಮರೀಂದರ್ ಸಿಂಗ್ ರಾಜೀನಾಮೆ ನೀಡಿದ್ದಾರೆ. ಆ ಬಳಿಕ ನಡೆದ ವಿದ್ಯಮಾನಗಳಲ್ಲಿ ರಾಜ್ಯ​ ಕಾಂಗ್ರೆಸ್ ಅಧ್ಯಕ್ಷ ನವಜೋತ್ ಸಿಂಗ್ ಸಿಧು ಕೂಡಾ ತಮ್ಮ ಸ್ಥಾನಕ್ಕೆ ರಾಜೀನಾಮೆ ನೀಡಿದ್ದರು.

ಈ ಹಿನ್ನೆಲೆಯಲ್ಲಿ ಮಾತನಾಡಿದ್ದ ಕಪಿಲ್ ಸಿಬಲ್, ಕಾಂಗ್ರೆಸ್​​ ಪಕ್ಷದಲ್ಲಿ ಅಧ್ಯಕ್ಷರಿಲ್ಲ. ಯಾರು ನಿರ್ಧಾರ ಕೈಗೊಳ್ಳುತ್ತಿದ್ದಾರೆ ಎಂಬುದೇ ತಿಳಿಯುತ್ತಿಲ್ಲ ಎಂದು ಅಸಮಾಧಾನ ತೋಡಿಕೊಂಡಿದ್ದರು. ಇದಕ್ಕೆ ಪಕ್ಷದಲ್ಲಿ ಮಿಶ್ರ ಪ್ರತಿಕ್ರಿಯೆ ವ್ಯಕ್ತವಾಗಿತ್ತು.

ನವದೆಹಲಿ: ಕೆಲವು ದಿನಗಳಿಂದ ರಾಷ್ಟ್ರೀಯ ಕಾಂಗ್ರೆಸ್ ಪಕ್ಷದಲ್ಲಿ ಹಲವು ರೀತಿಯ ಬೆಳವಣಿಗೆ ನಡೆಯುತ್ತಿದ್ದು ಚರ್ಚೆಗೆ ಕಾರಣವಾಗಿದೆ. ಇತ್ತೀಚೆಗೆ ಕಪಿಲ್ ಸಿಬಲ್ ಪಕ್ಷದಲ್ಲಿ ಅಧ್ಯಕ್ಷರಿಲ್ಲ ಎಂದು ಅಸಮಾಧಾನ ವ್ಯಕ್ತಪಡಿಸಿದ್ದರು. ಇದಕ್ಕೆ ಮಲ್ಲಿಕಾರ್ಜುನ ಖರ್ಗೆ ತಿರುಗೇಟು ಕೊಟ್ಟಿದ್ದಾರೆ.

‘ಪಕ್ಷದಲ್ಲಿ ಅಧ್ಯಕ್ಷರಿಲ್ಲ ಎಂಬುದಾದರೆ ಈ ವರ್ಷದ ಆರಂಭದಲ್ಲಿ ಚುನಾವಣೆ ಹೇಗೆ ನಡೆಯಿತು?' ಎಂದು ಕೇಳಿದ್ದಾರೆ. ಅಷ್ಟೇ ಅಲ್ಲ, 'ಎಲ್ಲಾ ಪಕ್ಷಗಳಲ್ಲೂ ಒಳ ಜಗಳಗಳು ಇರುತ್ತವೆ. ಪಕ್ಷ ರಾಜಕೀಯ ಬಿಕ್ಕಟ್ಟು ಎದುರಿಸುತ್ತಿರುವುದು ಇದು ಹೊಸದೇನಲ್ಲ. ನಾವು ಶೀಘ್ರದಲ್ಲಿಯೇ ಈ ಬಿಕ್ಕಟ್ಟನ್ನು ಪರಿಹರಿಸುತ್ತೇವೆ ಮತ್ತು ಇನ್ನಷ್ಟು ಬಲವಾಗುತ್ತೇವೆ' ಎಂದು ವಿಶ್ವಾಸ ವ್ಯಕ್ತಪಡಿಸಿದ್ದಾರೆ.

ನಮ್ಮ ಅಧ್ಯಕ್ಷರನ್ನು ಮತ್ತು ರಾಹುಲ್ ಗಾಂಧಿಯನ್ನು ಬೆಂಬಲಿಸಬೇಕು, ಪಕ್ಷವನ್ನು ಬಲಪಡಿಸಬೇಕು ಎಂಬುದಾಗಿ ಪಕ್ಷದ ಇತರ ನಾಯಕರಿಗೆ ಸಲಹೆ ನೀಡುತ್ತೇನೆ ಎಂದು ಖರ್ಗೆ ಹೇಳಿದ್ದಾರೆ.

ಇತ್ತೀಚೆಗೆ ಪಂಜಾಬ್​​​ ಸಿಎಂ ಅಮರೀಂದರ್ ಸಿಂಗ್ ರಾಜೀನಾಮೆ ನೀಡಿದ್ದಾರೆ. ಆ ಬಳಿಕ ನಡೆದ ವಿದ್ಯಮಾನಗಳಲ್ಲಿ ರಾಜ್ಯ​ ಕಾಂಗ್ರೆಸ್ ಅಧ್ಯಕ್ಷ ನವಜೋತ್ ಸಿಂಗ್ ಸಿಧು ಕೂಡಾ ತಮ್ಮ ಸ್ಥಾನಕ್ಕೆ ರಾಜೀನಾಮೆ ನೀಡಿದ್ದರು.

ಈ ಹಿನ್ನೆಲೆಯಲ್ಲಿ ಮಾತನಾಡಿದ್ದ ಕಪಿಲ್ ಸಿಬಲ್, ಕಾಂಗ್ರೆಸ್​​ ಪಕ್ಷದಲ್ಲಿ ಅಧ್ಯಕ್ಷರಿಲ್ಲ. ಯಾರು ನಿರ್ಧಾರ ಕೈಗೊಳ್ಳುತ್ತಿದ್ದಾರೆ ಎಂಬುದೇ ತಿಳಿಯುತ್ತಿಲ್ಲ ಎಂದು ಅಸಮಾಧಾನ ತೋಡಿಕೊಂಡಿದ್ದರು. ಇದಕ್ಕೆ ಪಕ್ಷದಲ್ಲಿ ಮಿಶ್ರ ಪ್ರತಿಕ್ರಿಯೆ ವ್ಯಕ್ತವಾಗಿತ್ತು.

ETV Bharat Logo

Copyright © 2024 Ushodaya Enterprises Pvt. Ltd., All Rights Reserved.