ETV Bharat / bharat

ಬಿಬಿಸಿ ಮೇಲಿನ ಐಟಿ ದಾಳಿ ವಿರುದ್ಧ ಕಿಡಿಕಾರಿದ ಮಮತಾ ಬ್ಯಾನರ್ಜಿ

author img

By

Published : Feb 15, 2023, 6:41 PM IST

Updated : Feb 15, 2023, 7:19 PM IST

''ರಾಜಕೀಯ ಸೇಡಿನಿಂದ ಬಿಜೆಪಿ ಸರ್ಕಾರ ಐಟಿ ದಾಳಿ ನಡೆಸುತ್ತಿರುವುದು ಸರಿಯಾದ ಕ್ರಮವಲ್ಲ'' ಎಂದು ಕೇಂದ್ರದ ವಿರುದ್ದ ಹರಿಹಾಯ್ದ ಪಶ್ಚಿಮ ಬಂಗಾಳದ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ.

Mamata Banerjee slams IT survey on BBC
ಮಮತಾ ಬ್ಯಾನರ್ಜಿ

ಕೋಲ್ಕತ್ತಾ (ಪಶ್ಚಿಮ ಬಂಗಾಳ): ನವದೆಹಲಿಯ ಬಿಬಿಸಿ ಕಚೇರಿಯಲ್ಲಿ ಮಂಗಳವಾರ ಆದಾಯ ತೆರಿಗೆ ಅಧಿಕಾರಿಗಳಿಂದ ನಡೆದ ದಾಳಿ ಬಗ್ಗೆ ಪಶ್ಚಿಮ ಬಂಗಾಳದ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ತೀವ್ರ ಅಸಮಾಧಾನ ವ್ಯಕ್ತಪಡಿಸಿದರು. ''ಕೇಂದ್ರ ಸರ್ಕಾರದಿಂದ ನಡೆಸಿರುವ ಈ ಐಟಿ ದಾಳಿಯು ರಾಜಕೀಯ ಸೇಡಿನ ಕ್ರಮವಾಗಿ ನಾನು ನೋಡುತ್ತಿದ್ದೇನೆ'' ಎಂದು ಮಮತಾ ಬ್ಯಾನರ್ಜಿ ಬುಧವಾರ ಖಾರವಾಗಿ ಉತ್ತರಿಸಿದ್ದಾರೆ. ಬಿಜೆಪಿ ಸರ್ಕಾರ ರಾಜಕೀಯ ದ್ವೇಷದಿಂದಲೇ ಈ ರೀತಿ ಕಾರ್ಯ ಮಾಡುತ್ತಿದೆ ಎಂದು ಅವರು ವಾಗ್ದಾಳಿ ನಡೆಸಿದರು.

ಬಿಬಿಸಿ ಸಾಕ್ಷ್ಯಚಿತ್ರಕ್ಕೆ ಪ್ರತೀಕಾರ: 2002ರ ಗುಜರಾತ್ ಹಿಂಸಾಚಾರದ ಕುರಿತು ಬಿಬಿಸಿ ಸಾಕ್ಷ್ಯಚಿತ್ರವನ್ನು ನಿರ್ಮಿಸಿತ್ತು. ಆ ಸಾಕ್ಷ್ಯಚಿತ್ರದ ಹೆಸರು 'ಭಾರತ: ಮೋದಿ ಪ್ರಶ್ನೆ'. ಈ ಸಾಕ್ಷ್ಯಚಿತ್ರ ದೇಶದ ವಿವಿಧ ಭಾಗಗಳಲ್ಲಿ ಸಂಚಲನ ಮೂಡಿಸಿತ್ತು. ಸರ್ಕಾರ ಕೂಡಾ ಈ ಸಾಕ್ಷ್ಯಚಿತ್ರವನ್ನು ನಿಷೇಧಿಸಿತ್ತು. ಆಗ ಈ ವಿವಾದ ಕೊನೆಗೊಳ್ಳಲಿಲ್ಲ. ಈ ವಿಷಯದ ಬಗ್ಗೆ ಹಲವರು ಮೋದಿ ಸರ್ಕಾರವನ್ನು ಕಟುವಾಗಿಯೇ ಟೀಕಿಸಿದ್ದರು.

ವಿರೋಧ ಪಕ್ಷಗಳಿಂದ ಅಸಮಾಧಾನ: ಈ ಪರಿಸ್ಥಿತಿಯ ಮಧ್ಯೆ ಮಂಗಳವಾರ ದೆಹಲಿ ಮತ್ತು ಮುಂಬೈನಲ್ಲಿರುವ ಬಿಬಿಸಿ ಕಚೇರಿಗಳಲ್ಲಿ ಆದಾಯ ತೆರಿಗೆ ಇಲಾಖೆ ದಾಳಿ ನಡೆಸಿದೆ. ಈ ಸಾಕ್ಷ್ಯಚಿತ್ರ ಪ್ರದರ್ಶನ ಮಾಡಿರುವುದನ್ನು ವಿಷಯವಾಗಿಸಿಕೊಂಡು ಸರ್ಕಾರವು ಐಟಿ ದಾಳಿ ನಡೆಸಲಾಗುದೆ ಎಂದು ಹಲವು ರಾಜಕೀಯ ನಾಯಕರು ಆರೋಪಿಸಿದ್ದಾರೆ. ಈ ರೀತಿ ಕ್ರಮ ಕೈಗೊಂಡಿರುವುದು ಪತ್ರಿಕಾ ಸ್ವಾತಂತ್ರ್ಯದ ಮೇಲೆ ಹಸ್ತಕ್ಷೇಪ ಮಾಡಿದಂತೆ ಆಗಿದೆ ಎಂದು ಹಲವರು ಗಂಭೀರವಾಗಿ ಟೀಕಿಸಿದ್ದಾರೆ. ಕಾಂಗ್ರೆಸ್ ಸೇರಿದಂತೆ ಹಲವಾರು ವಿರೋಧ ಪಕ್ಷಗಳು ಕೂಡಾ ಅಸಮಾಧಾನ ವ್ಯಕ್ತಪಡಿಸಿವೆ. ಟೀಕಿಸಿವೆ. ಇದೀಗ ಮಮತಾ ಬ್ಯಾನರ್ಜಿ ಅವರು ಕೂಡಾ ಈ ವಿಚಾರ ಬಗ್ಗೆ ಧ್ವನಿ ಎತ್ತಿದ್ದಾರೆ.

ಮುಂದಿನ ಹಣಕಾಸು ವರ್ಷದ ಬಜೆಟ್ ಅನ್ನು ಪಶ್ಚಿಮ ಬಂಗಾಳ ವಿಧಾನಸಭೆಯಲ್ಲಿ ಮಂಡಿಸಲಾಯಿತು. ಬಳಿಕ ಮುಖ್ಯಮಂತ್ರಿಗಳು ವಿಧಾನಸಭೆಯಿಂದ ನಿರ್ಗಮಿಸುವ ವೇಳೆ, ಪತ್ರಕರ್ತರು ಕೇಳಿದ ಪ್ರಶ್ನೆಗಳಿಗೆ ಉತ್ತರಿಸಿದ ಮಮತಾ ಬ್ಯಾನರ್ಜಿ ಅವರು, ''ಅಕ್ರಮ ನಡೆದಿದ್ದರೆ, ಸರ್ಕಾರ ಅವರ ಜತೆ ಚರ್ಚಿಸಿ ಪರಿಹಾರ ಕಂಡುಕೊಳ್ಳಬಹುದಿತ್ತು'' ಎಂದರು.

ಕೇಂದ್ರದ ವಿರುದ್ದ ಹರಿಹಾಯ್ದ ಮಮತಾ: ''ನಾನು ಯಾವುದೇ ಕಾನೂನುಬಾಹಿರ ಕೃತ್ಯವನ್ನು ಬೆಂಬಲಿಸುತ್ತಿಲ್ಲ. ಬಿಬಿಸಿ ಕೆಲವು ಸರ್ಕಾರಿ ವಿರೋಧಿ ಸುದ್ದಿಗಳನ್ನು ಪ್ರಕಟಿಸಿದೆ ಎಂದು ನಾನು ನಂಬಲು ಸಾಧ್ಯವಿಲ್ಲ. ನಂತರ ಬಿಬಿಸಿ ವಿರುದ್ಧ ಅಭಿಯಾನ ಪ್ರಾರಂಭವಾಯಿತು. ಇದು ಅತ್ಯಂತ ದುರದೃಷ್ಟಕರ ಸಂಗತಿ. ರಾಜಕೀಯ ಸೇಡಿನಿಂದಲೇ ಬಿಜೆಪಿ ಸರ್ಕಾರ ಐಟಿ ದಾಳಿ ನಡೆಸುತ್ತಿರುವುದು ಸರಿಯಲ್ಲ'' ಎಂದು ಅವರು ಕೇಂದ್ರ ಸರ್ಕಾರದ ವಿರುದ್ದ ಹರಿಹಾಯ್ದರು.

ಐಟಿ ದಾಳಿಗೆ ಅಮೆರಿಕ ಪ್ರತಿಕ್ರಿಯೆ: ಗೋಧ್ರೋತ್ತರ ಗಲಭೆಗಳ ಬಗ್ಗೆ ಬ್ರಿಟಿಷ್​ ಬ್ರಾಡ್​ಕಾಸ್ಟಿಂಗ್​ ಕಾರ್ಪೋರೇಷನ್​(ಬಿಬಿಸಿ) ಚಿತ್ರಿಸಿದ ಸಾಕ್ಷ್ಯಚಿತ್ರದ ಪ್ರಸಾರವನ್ನು ಭಾರತದಲ್ಲಿ ನಿಷೇಧಿಸಿದ್ದನ್ನು ಪರೋಕ್ಷವಾಗಿ ವಿರೋಧಿಸಿದ್ದ ಅಮೆರಿಕ, ಈಗ ದೆಹಲಿಯ ಬಿಬಿಸಿ ಕಚೇರಿಯ ಮೇಲೆ ತೆರಿಗೆ ಇಲಾಖೆ ಅಧಿಕಾರಿಗಳು ನಡೆಸಿದ ದಾಳಿಯ ಬಗ್ಗೆ ಪ್ರತಿಕ್ರಿಯೆ ನೀಡಿದೆ.

''ದಾಳಿ ನಡೆಸಿರುವುದು ಲೆಕ್ಕಪತ್ರ ಪರಿಶೀಲನೆಗೆ ಎಂದು ಅಧಿಕಾರಿಗಳು ಹೇಳಿದ್ದಾರೆ. ಹೀಗಾಗಿ ದಾಳಿಯ ಬಗ್ಗೆ ನಿರ್ಧರಿಸಲು ಸಾಧ್ಯವಿಲ್ಲ'' ಎಂದು ಅಮೆರಿಕ ಹೇಳಿದೆ. ಈ ಬಗ್ಗೆ ಹೇಳಿಕೆ ನೀಡಿರುವ ವಿದೇಶಾಂಗ ಇಲಾಖೆಯ ವಕ್ತಾರ ನೆಡ್​ಪ್ರೈಸ್, ''ಬಿಬಿಸಿ ಕಚೇರಿಯ ಮೇಲೆ ತೆರಿಗೆ ಇಲಾಖೆ ನಡೆಸಿರುವ ಲೆಕ್ಕಪತ್ರ ಪರಿಶೋಧನೆಯನ್ನು ಸರಿ ತಪ್ಪು ಎಂದು ನಿರ್ಣಯಿಸಲು ಸಾಧ್ಯವಿಲ್ಲ. ತೆರಿಗೆ ವಂಚನೆ ತನಿಖೆಯ ಭಾಗವಾಗಿ ಈ ಕಾರ್ಯಾಚರಣೆ ನಡೆದಿದೆ'' ಎಂದು ಆದಾಯ ತೆರಿಗೆ ಅಧಿಕಾರಿಗಳು ತಿಳಿಸಿದ್ದಾರೆ ಎಂದು ಹೇಳಿದ್ದಾರೆ.

''ಭಾರತೀಯ ತೆರಿಗೆ ಅಧಿಕಾರಿಗಳು ದೆಹಲಿಯಲ್ಲಿರುವ ಬಿಬಿಸಿ ಕಚೇರಿಗಳಲ್ಲಿ ತನಿಖೆ ನಡೆಸಿರುವುದು ನಮಗೆ ತಿಳಿದಿದೆ. ಇದರಾಚೆಗೆ ಯಾವುದೇ ಹೇಳಿಕೆ ನೀಡಲು ಸಾಧ್ಯವಿಲ್ಲ. ಪ್ರಪಂಚದಾದ್ಯಂತ ಮುಕ್ತ ಪತ್ರಿಕಾ ಪ್ರಾಮುಖ್ಯತೆಯನ್ನು ಬೆಂಬಲಿಸುತ್ತೇವೆ. ಅಭಿವ್ಯಕ್ತಿ ಸ್ವಾತಂತ್ರ್ಯ, ಧರ್ಮ ಅಥವಾ ನಂಬಿಕೆಯ ಸ್ವಾತಂತ್ರ್ಯದ ಪ್ರಾಮುಖ್ಯತೆಯನ್ನು ಮಾನವ ಹಕ್ಕುಗಳ ವ್ಯಾಪ್ತಿಗೆ ಬರುತ್ತದೆ ಎಂಬುದನ್ನು ನಾವು ನಂಬಿದ್ದೇವೆ. ಇವುಗಳಿಂದ ವಿಶ್ವದಾದ್ಯಂತ ಪ್ರಜಾಪ್ರಭುತ್ವವನ್ನು ಬಲಪಡಿಸಲು ಸಾಧ್ಯ. ಅಮೆರಿಕದಲ್ಲಿ ಮಾಧ್ಯಮ ಸ್ವಾತಂತ್ರ್ಯ ದೇಶವನ್ನು ಬಲಪಡಿಸಿದೆ.

ಅದೇ ರೀತಿ ಭಾರತಕ್ಕೂ ಇದು ಅನುಕೂಲವಾಗಬಹುದು ಎಂದು ಹೇಳಿರುವುದಾಗಿ ವರದಿಯಾಗಿದೆ. ಮಾಧ್ಯಮ ಹಕ್ಕು ಪ್ರಪಂಚದಾದ್ಯಂತದ ಪ್ರಜಾಪ್ರಭುತ್ವಗಳ ತಳಹದಿಯಾಗಿದೆ ಎಂದು ನೆಡ್​ಪ್ರೈಸ್ ಅಭಿಪ್ರಾಯಪಟ್ಟಿದ್ದಾರೆ. ಬಿಬಿಸಿ ಮೇಲಿನ ಈ ದಾಳಿ ಪ್ರಜಾಪ್ರಭುತ್ವದ ಕೆಲವು ಸ್ಪೂರ್ತಿ ಅಥವಾ ಮೌಲ್ಯದ ವಿರುದ್ಧವಾಗಿದೆಯೇ ಎಂಬ ಪ್ರಶ್ನೆಗೆ, ಇದನ್ನು ನಿಖರವಾಗಿ ಹೇಳಲು ಸಾಧ್ಯವಿಲ್ಲ. ಇದರ ಸತ್ಯಾಸತ್ಯತೆಗಳ ನಿರ್ಣಯಿಸಲು ಸಾಧ್ಯವಿಲ್ಲ'' ಎಂದು ಅವರು ಹೇಳಿದ್ದಾರೆ.

ಇದನ್ನೂ ಓದಿ: ಬಿಬಿಸಿ ಕಚೇರಿ ತೆರಿಗೆ ವ್ಯವಹಾರಗಳ ಮೇಲ್ವಿಚಾರಣೆ ಮಾಡುತ್ತಿದೆ ಯುಕೆ ಸರ್ಕಾರ

ಕೋಲ್ಕತ್ತಾ (ಪಶ್ಚಿಮ ಬಂಗಾಳ): ನವದೆಹಲಿಯ ಬಿಬಿಸಿ ಕಚೇರಿಯಲ್ಲಿ ಮಂಗಳವಾರ ಆದಾಯ ತೆರಿಗೆ ಅಧಿಕಾರಿಗಳಿಂದ ನಡೆದ ದಾಳಿ ಬಗ್ಗೆ ಪಶ್ಚಿಮ ಬಂಗಾಳದ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ತೀವ್ರ ಅಸಮಾಧಾನ ವ್ಯಕ್ತಪಡಿಸಿದರು. ''ಕೇಂದ್ರ ಸರ್ಕಾರದಿಂದ ನಡೆಸಿರುವ ಈ ಐಟಿ ದಾಳಿಯು ರಾಜಕೀಯ ಸೇಡಿನ ಕ್ರಮವಾಗಿ ನಾನು ನೋಡುತ್ತಿದ್ದೇನೆ'' ಎಂದು ಮಮತಾ ಬ್ಯಾನರ್ಜಿ ಬುಧವಾರ ಖಾರವಾಗಿ ಉತ್ತರಿಸಿದ್ದಾರೆ. ಬಿಜೆಪಿ ಸರ್ಕಾರ ರಾಜಕೀಯ ದ್ವೇಷದಿಂದಲೇ ಈ ರೀತಿ ಕಾರ್ಯ ಮಾಡುತ್ತಿದೆ ಎಂದು ಅವರು ವಾಗ್ದಾಳಿ ನಡೆಸಿದರು.

ಬಿಬಿಸಿ ಸಾಕ್ಷ್ಯಚಿತ್ರಕ್ಕೆ ಪ್ರತೀಕಾರ: 2002ರ ಗುಜರಾತ್ ಹಿಂಸಾಚಾರದ ಕುರಿತು ಬಿಬಿಸಿ ಸಾಕ್ಷ್ಯಚಿತ್ರವನ್ನು ನಿರ್ಮಿಸಿತ್ತು. ಆ ಸಾಕ್ಷ್ಯಚಿತ್ರದ ಹೆಸರು 'ಭಾರತ: ಮೋದಿ ಪ್ರಶ್ನೆ'. ಈ ಸಾಕ್ಷ್ಯಚಿತ್ರ ದೇಶದ ವಿವಿಧ ಭಾಗಗಳಲ್ಲಿ ಸಂಚಲನ ಮೂಡಿಸಿತ್ತು. ಸರ್ಕಾರ ಕೂಡಾ ಈ ಸಾಕ್ಷ್ಯಚಿತ್ರವನ್ನು ನಿಷೇಧಿಸಿತ್ತು. ಆಗ ಈ ವಿವಾದ ಕೊನೆಗೊಳ್ಳಲಿಲ್ಲ. ಈ ವಿಷಯದ ಬಗ್ಗೆ ಹಲವರು ಮೋದಿ ಸರ್ಕಾರವನ್ನು ಕಟುವಾಗಿಯೇ ಟೀಕಿಸಿದ್ದರು.

ವಿರೋಧ ಪಕ್ಷಗಳಿಂದ ಅಸಮಾಧಾನ: ಈ ಪರಿಸ್ಥಿತಿಯ ಮಧ್ಯೆ ಮಂಗಳವಾರ ದೆಹಲಿ ಮತ್ತು ಮುಂಬೈನಲ್ಲಿರುವ ಬಿಬಿಸಿ ಕಚೇರಿಗಳಲ್ಲಿ ಆದಾಯ ತೆರಿಗೆ ಇಲಾಖೆ ದಾಳಿ ನಡೆಸಿದೆ. ಈ ಸಾಕ್ಷ್ಯಚಿತ್ರ ಪ್ರದರ್ಶನ ಮಾಡಿರುವುದನ್ನು ವಿಷಯವಾಗಿಸಿಕೊಂಡು ಸರ್ಕಾರವು ಐಟಿ ದಾಳಿ ನಡೆಸಲಾಗುದೆ ಎಂದು ಹಲವು ರಾಜಕೀಯ ನಾಯಕರು ಆರೋಪಿಸಿದ್ದಾರೆ. ಈ ರೀತಿ ಕ್ರಮ ಕೈಗೊಂಡಿರುವುದು ಪತ್ರಿಕಾ ಸ್ವಾತಂತ್ರ್ಯದ ಮೇಲೆ ಹಸ್ತಕ್ಷೇಪ ಮಾಡಿದಂತೆ ಆಗಿದೆ ಎಂದು ಹಲವರು ಗಂಭೀರವಾಗಿ ಟೀಕಿಸಿದ್ದಾರೆ. ಕಾಂಗ್ರೆಸ್ ಸೇರಿದಂತೆ ಹಲವಾರು ವಿರೋಧ ಪಕ್ಷಗಳು ಕೂಡಾ ಅಸಮಾಧಾನ ವ್ಯಕ್ತಪಡಿಸಿವೆ. ಟೀಕಿಸಿವೆ. ಇದೀಗ ಮಮತಾ ಬ್ಯಾನರ್ಜಿ ಅವರು ಕೂಡಾ ಈ ವಿಚಾರ ಬಗ್ಗೆ ಧ್ವನಿ ಎತ್ತಿದ್ದಾರೆ.

ಮುಂದಿನ ಹಣಕಾಸು ವರ್ಷದ ಬಜೆಟ್ ಅನ್ನು ಪಶ್ಚಿಮ ಬಂಗಾಳ ವಿಧಾನಸಭೆಯಲ್ಲಿ ಮಂಡಿಸಲಾಯಿತು. ಬಳಿಕ ಮುಖ್ಯಮಂತ್ರಿಗಳು ವಿಧಾನಸಭೆಯಿಂದ ನಿರ್ಗಮಿಸುವ ವೇಳೆ, ಪತ್ರಕರ್ತರು ಕೇಳಿದ ಪ್ರಶ್ನೆಗಳಿಗೆ ಉತ್ತರಿಸಿದ ಮಮತಾ ಬ್ಯಾನರ್ಜಿ ಅವರು, ''ಅಕ್ರಮ ನಡೆದಿದ್ದರೆ, ಸರ್ಕಾರ ಅವರ ಜತೆ ಚರ್ಚಿಸಿ ಪರಿಹಾರ ಕಂಡುಕೊಳ್ಳಬಹುದಿತ್ತು'' ಎಂದರು.

ಕೇಂದ್ರದ ವಿರುದ್ದ ಹರಿಹಾಯ್ದ ಮಮತಾ: ''ನಾನು ಯಾವುದೇ ಕಾನೂನುಬಾಹಿರ ಕೃತ್ಯವನ್ನು ಬೆಂಬಲಿಸುತ್ತಿಲ್ಲ. ಬಿಬಿಸಿ ಕೆಲವು ಸರ್ಕಾರಿ ವಿರೋಧಿ ಸುದ್ದಿಗಳನ್ನು ಪ್ರಕಟಿಸಿದೆ ಎಂದು ನಾನು ನಂಬಲು ಸಾಧ್ಯವಿಲ್ಲ. ನಂತರ ಬಿಬಿಸಿ ವಿರುದ್ಧ ಅಭಿಯಾನ ಪ್ರಾರಂಭವಾಯಿತು. ಇದು ಅತ್ಯಂತ ದುರದೃಷ್ಟಕರ ಸಂಗತಿ. ರಾಜಕೀಯ ಸೇಡಿನಿಂದಲೇ ಬಿಜೆಪಿ ಸರ್ಕಾರ ಐಟಿ ದಾಳಿ ನಡೆಸುತ್ತಿರುವುದು ಸರಿಯಲ್ಲ'' ಎಂದು ಅವರು ಕೇಂದ್ರ ಸರ್ಕಾರದ ವಿರುದ್ದ ಹರಿಹಾಯ್ದರು.

ಐಟಿ ದಾಳಿಗೆ ಅಮೆರಿಕ ಪ್ರತಿಕ್ರಿಯೆ: ಗೋಧ್ರೋತ್ತರ ಗಲಭೆಗಳ ಬಗ್ಗೆ ಬ್ರಿಟಿಷ್​ ಬ್ರಾಡ್​ಕಾಸ್ಟಿಂಗ್​ ಕಾರ್ಪೋರೇಷನ್​(ಬಿಬಿಸಿ) ಚಿತ್ರಿಸಿದ ಸಾಕ್ಷ್ಯಚಿತ್ರದ ಪ್ರಸಾರವನ್ನು ಭಾರತದಲ್ಲಿ ನಿಷೇಧಿಸಿದ್ದನ್ನು ಪರೋಕ್ಷವಾಗಿ ವಿರೋಧಿಸಿದ್ದ ಅಮೆರಿಕ, ಈಗ ದೆಹಲಿಯ ಬಿಬಿಸಿ ಕಚೇರಿಯ ಮೇಲೆ ತೆರಿಗೆ ಇಲಾಖೆ ಅಧಿಕಾರಿಗಳು ನಡೆಸಿದ ದಾಳಿಯ ಬಗ್ಗೆ ಪ್ರತಿಕ್ರಿಯೆ ನೀಡಿದೆ.

''ದಾಳಿ ನಡೆಸಿರುವುದು ಲೆಕ್ಕಪತ್ರ ಪರಿಶೀಲನೆಗೆ ಎಂದು ಅಧಿಕಾರಿಗಳು ಹೇಳಿದ್ದಾರೆ. ಹೀಗಾಗಿ ದಾಳಿಯ ಬಗ್ಗೆ ನಿರ್ಧರಿಸಲು ಸಾಧ್ಯವಿಲ್ಲ'' ಎಂದು ಅಮೆರಿಕ ಹೇಳಿದೆ. ಈ ಬಗ್ಗೆ ಹೇಳಿಕೆ ನೀಡಿರುವ ವಿದೇಶಾಂಗ ಇಲಾಖೆಯ ವಕ್ತಾರ ನೆಡ್​ಪ್ರೈಸ್, ''ಬಿಬಿಸಿ ಕಚೇರಿಯ ಮೇಲೆ ತೆರಿಗೆ ಇಲಾಖೆ ನಡೆಸಿರುವ ಲೆಕ್ಕಪತ್ರ ಪರಿಶೋಧನೆಯನ್ನು ಸರಿ ತಪ್ಪು ಎಂದು ನಿರ್ಣಯಿಸಲು ಸಾಧ್ಯವಿಲ್ಲ. ತೆರಿಗೆ ವಂಚನೆ ತನಿಖೆಯ ಭಾಗವಾಗಿ ಈ ಕಾರ್ಯಾಚರಣೆ ನಡೆದಿದೆ'' ಎಂದು ಆದಾಯ ತೆರಿಗೆ ಅಧಿಕಾರಿಗಳು ತಿಳಿಸಿದ್ದಾರೆ ಎಂದು ಹೇಳಿದ್ದಾರೆ.

''ಭಾರತೀಯ ತೆರಿಗೆ ಅಧಿಕಾರಿಗಳು ದೆಹಲಿಯಲ್ಲಿರುವ ಬಿಬಿಸಿ ಕಚೇರಿಗಳಲ್ಲಿ ತನಿಖೆ ನಡೆಸಿರುವುದು ನಮಗೆ ತಿಳಿದಿದೆ. ಇದರಾಚೆಗೆ ಯಾವುದೇ ಹೇಳಿಕೆ ನೀಡಲು ಸಾಧ್ಯವಿಲ್ಲ. ಪ್ರಪಂಚದಾದ್ಯಂತ ಮುಕ್ತ ಪತ್ರಿಕಾ ಪ್ರಾಮುಖ್ಯತೆಯನ್ನು ಬೆಂಬಲಿಸುತ್ತೇವೆ. ಅಭಿವ್ಯಕ್ತಿ ಸ್ವಾತಂತ್ರ್ಯ, ಧರ್ಮ ಅಥವಾ ನಂಬಿಕೆಯ ಸ್ವಾತಂತ್ರ್ಯದ ಪ್ರಾಮುಖ್ಯತೆಯನ್ನು ಮಾನವ ಹಕ್ಕುಗಳ ವ್ಯಾಪ್ತಿಗೆ ಬರುತ್ತದೆ ಎಂಬುದನ್ನು ನಾವು ನಂಬಿದ್ದೇವೆ. ಇವುಗಳಿಂದ ವಿಶ್ವದಾದ್ಯಂತ ಪ್ರಜಾಪ್ರಭುತ್ವವನ್ನು ಬಲಪಡಿಸಲು ಸಾಧ್ಯ. ಅಮೆರಿಕದಲ್ಲಿ ಮಾಧ್ಯಮ ಸ್ವಾತಂತ್ರ್ಯ ದೇಶವನ್ನು ಬಲಪಡಿಸಿದೆ.

ಅದೇ ರೀತಿ ಭಾರತಕ್ಕೂ ಇದು ಅನುಕೂಲವಾಗಬಹುದು ಎಂದು ಹೇಳಿರುವುದಾಗಿ ವರದಿಯಾಗಿದೆ. ಮಾಧ್ಯಮ ಹಕ್ಕು ಪ್ರಪಂಚದಾದ್ಯಂತದ ಪ್ರಜಾಪ್ರಭುತ್ವಗಳ ತಳಹದಿಯಾಗಿದೆ ಎಂದು ನೆಡ್​ಪ್ರೈಸ್ ಅಭಿಪ್ರಾಯಪಟ್ಟಿದ್ದಾರೆ. ಬಿಬಿಸಿ ಮೇಲಿನ ಈ ದಾಳಿ ಪ್ರಜಾಪ್ರಭುತ್ವದ ಕೆಲವು ಸ್ಪೂರ್ತಿ ಅಥವಾ ಮೌಲ್ಯದ ವಿರುದ್ಧವಾಗಿದೆಯೇ ಎಂಬ ಪ್ರಶ್ನೆಗೆ, ಇದನ್ನು ನಿಖರವಾಗಿ ಹೇಳಲು ಸಾಧ್ಯವಿಲ್ಲ. ಇದರ ಸತ್ಯಾಸತ್ಯತೆಗಳ ನಿರ್ಣಯಿಸಲು ಸಾಧ್ಯವಿಲ್ಲ'' ಎಂದು ಅವರು ಹೇಳಿದ್ದಾರೆ.

ಇದನ್ನೂ ಓದಿ: ಬಿಬಿಸಿ ಕಚೇರಿ ತೆರಿಗೆ ವ್ಯವಹಾರಗಳ ಮೇಲ್ವಿಚಾರಣೆ ಮಾಡುತ್ತಿದೆ ಯುಕೆ ಸರ್ಕಾರ

Last Updated : Feb 15, 2023, 7:19 PM IST
ETV Bharat Logo

Copyright © 2024 Ushodaya Enterprises Pvt. Ltd., All Rights Reserved.