ಕೋಲ್ಕತ್ತಾ: ಭಾರತೀಯ ಜನತಾ ಪಕ್ಷದ (ಬಿಜೆಪಿ) ರಾಜ್ಯ ಅಧ್ಯಕ್ಷ ದಿಲೀಪ್ ಘೋಷ್ ಬುಧವಾರ ಸಿಎಂ ಮಮತಾ ಬ್ಯಾನರ್ಜಿ ವಿರುದ್ಧ ವಾಗ್ದಾಳಿ ನಡೆಸಿದ್ದಾರೆ.
‘ರಾಯಲ್ ಬಂಗಾಳ ಹುಲಿ’ ಅಲ್ಲ, ಆದರೆ, ಅವರ ಸ್ಥಿತಿ ‘ಬೆಕ್ಕಿನಂತೆ’ ಆಗಿದೆ ಎಂದು ಸಿಎಂ ಮಮತಾ ಬ್ಯಾನರ್ಜಿ ವಿರುದ್ಧ ಘೋಷ್ ವ್ಯಂಗ್ಯವಾಡಿದರು. ಪಶ್ಚಿಮ ಬಂಗಾಳದಲ್ಲಿ ಸಭೆ ನಡೆಸಲು ವಿರೋಧ ಪಕ್ಷಗಳಿಗೆ ಅನುಮತಿ ನೀಡಿಲ್ಲ ಎಂದು ಬಿಜೆಪಿ ನಾಯಕ ಸಿಎಂ ಅವರನ್ನು ದೂಷಿಸಿ ಆರೋಪಿಸಿದರು.
ಮಮತಾ ಬ್ಯಾನರ್ಜಿಯ ಸರ್ವಾಧಿಕಾರಿ ಮನಸ್ಥಿತಿ ಪ್ರಜಾಪ್ರಭುತ್ವದಲ್ಲಿ ಮೇಲುಗೈ ಸಾಧಿಸುವುದಿಲ್ಲ. ವಿರೋಧ ಪಕ್ಷಗಳಿಗೆ ಬಂಗಾಳದಲ್ಲಿ ಸಭೆ ಅಥವಾ ಯಾತ್ರೆ ನಡೆಸಲು ಅವಕಾಶವಿಲ್ಲ. ಅವರು (ಮಮತಾ ಬ್ಯಾನರ್ಜಿ) ಪ್ರಧಾನ ಮಂತ್ರಿಯ ವಿರುದ್ಧ ನಿಂದನೀಯ ಮಾತುಗಳನ್ನು ಬಳಸುತ್ತಾರೆ ಮತ್ತು ಸರ್ಕಾರಿ ಕಾರ್ಯಕ್ರಮಗಳಲ್ಲಿ ರಾಜಕೀಯ ಭಾಷಣ ಮಾಡುತ್ತಾರೆ ಎಂದು ದಿಲೀಪ್ ಘೋಷ್ ಹೇಳಿದ್ದಾರೆ.
ಮಾಧ್ಯಮಗಳೊಂದಿಗೆ ಮಾತನಾಡಿದ ಘೋಷ್, ತನ್ನ ಪಕ್ಷದ ಸದಸ್ಯರು ಅಥವಾ ಆಡಳಿತ ಅಧಿಕಾರಿಗಳು ಅವರ ಬಗ್ಗೆ ಹೆದರುವುದಿಲ್ಲ ಎಂದು ಹೇಳಿದರು.