ETV Bharat / bharat

ಮದುವೆಗೆ ಮುನ್ನ ಪ್ರೇಮ.. ಗಂಡನ ಕಳೆದುಕೊಂಡರೂ ಯುವತಿಗೆ ಕಿರುಕುಳ: ಯುವಕನ ಕೊಂದ ಕುಟುಂಬಸ್ಥರು

ತೆಲಂಗಾಣದ ಮಂಚೇರಿಯಾಲ ಜಿಲ್ಲೆಯಲ್ಲಿ ಹಾಡಹಗಲೇ ನಡು ರಸ್ತೆಯಲ್ಲಿ ಯುವಕನೊಬ್ಬನನ್ನು ಯುವತಿಯ ಕುಟುಂಬದವರು ಹೊಡೆದು ಕೊಲೆ ಮಾಡಿದ್ದಾರೆ.

author img

By

Published : Apr 25, 2023, 8:14 PM IST

Man beaten to death  after harassing widow in telangana
ಗಂಡನ ಕಳೆದುಕೊಂಡರೂ ಯುವತಿಗೆ ಕಿರುಕುಳ: ಯುವಕನ ಕೊಂದ ಕುಟುಂಬಸ್ಥರು

ಮಂಚೇರಿಯಾಲ (ತೆಲಂಗಾಣ): ವಿಧವೆಗೆ ಕಿರುಕುಳ ನೀಡುತ್ತಿದ್ದ ಆರೋಪದ ಮೇಲೆ ಯುವಕನೊಬ್ಬನಿಗೆ ಆಕೆಯ ಕುಟುಂಬಸ್ಥರು ಹೊಡೆದು ಕೊಲೆ ಮಾಡಿರುವ ಘಟನೆ ತೆಲಂಗಾಣದ ಮಂಚೇರಿಯಾಲ ಜಿಲ್ಲೆಯಲ್ಲಿ ಮಂಗಳವಾರ ಬೆಳಗ್ಗೆ ನಡೆದಿದೆ. ಎಲ್ಲರ ಕಣ್ಣೆದುರಿಗೆ ನಡೆದ ಘಟನೆಯಿಂದ ಜನತೆ ಬೆಚ್ಚಿ ಬೀಳುವಂತೆ ಮಾಡಿದೆ.

ಇಲ್ಲಿನ ಜೈಪುರ ಮಂಡಲದ ಇಂದಾರಂ ಗ್ರಾಮದಲ್ಲಿ ಈ ಘಟನೆ ಜರುಗಿದೆ. ಕೊಲೆಯಾದ ಯುವಕನನ್ನು ಎಂ.ಮಹೇಶ್ (24) ಎಂದು ಗುರುತಿಸಲಾಗಿದೆ. ಇದೇ ಗ್ರಾಮದ ಯುವತಿಯೊಂದಿಗೆ ಪ್ರೇಮ ಸಂಬಂಧ ಹೊಂದಿದ್ದ. ಆದರೆ, ಕಳೆದ ವರ್ಷ ಯುವತಿಯ ಪೋಷಕರು ಆಕೆಗೆ ಇನ್ನೊಬ್ಬ ವ್ಯಕ್ತಿಯೊಂದಿಗೆ ವಿವಾಹ ಮಾಡಿಕೊಟ್ಟಿದ್ದರು. ಇದರಿಂದ ದ್ವೇಷ ಸಾಧಿಸುತ್ತಿದ್ದ ಮಹೇಶ್ ಈ ಹಿಂದೆ ಆಕೆಯೊಂದಿಗೆ ಅನ್ಯೋನ್ಯವಾಗಿರುವ ವಿಡಿಯೋಗಳನ್ನು ಸಾಮಾಜಿಕ ಜಾಲತಾಣಗಳಲ್ಲಿ ಹರಿಬಿಟ್ಟಿದ್ದ ಎಂದು ತಿಳಿದು ಬಂದಿದೆ.

ಅಲ್ಲದೇ, ಆಗ ವಿಷಯ ತಿಳಿದ ಯುವತಿಯ ಪೋಷಕರು ಯುವಕನ ವಿರುದ್ಧ ಜೈಪುರ ಪೊಲೀಸ್ ಠಾಣೆಯಲ್ಲಿ ದೂರು ದಾಖಲಿಸಿದ್ದರು. ಪೊಲೀಸರು ಎರಡೂ ಕಡೆಯವರನ್ನು ಕರೆಸಿ ಕೌನ್ಸೆಲಿಂಗ್ ನಡೆಸಿ ಪ್ರಕರಣ ದಾಖಲಿಸಿಕೊಂಡಿದ್ದರು. ಇದರ ನಡುವೆ ಎಂದರೆ ಆರು ತಿಂಗಳ ಹಿಂದೆ ಯುವತಿಯ ಪತಿ ಆಕೆಗೆ ವಿಚ್ಛೇದನ ನೀಡಿ ಆತ್ಮಹತ್ಯೆ ಮಾಡಿಕೊಂಡಿದ್ದಾನೆ. ಹೀಗಾಗಿ ಯುವತಿ ತನ್ನ ಹುಟ್ಟೂರಿಗೆ ಬಂದಿದ್ದಾಳೆ.

ಇದನ್ನೂ ಓದಿ: ಸೈನಿ ಸಮಾಜ ಮೀಸಲಾತಿ ಹೋರಾಟ: ಪ್ರತಿಭಟನಾನಿರತ ಯುವಕ ಆತ್ಮಹತ್ಯೆ

ಆದರೆ, ಮಹೇಶ್ ತನ್ನ ಚಾಳಿ ಬಿಟ್ಟಿರಲಿಲ್ಲ. ಮತ್ತೆ-ಮತ್ತೆ ಆಕೆಗೆ ಕಿರುಕುಳ ನೀಡಲು ಶುರು ಮಾಡಿದ್ದ. ಇದನ್ನು ಹಲವು ಬಾರಿ ಗಮನಿಸಿದ ಆಕೆಯ ಕುಟುಂಬಸ್ಥರು ಮತ್ತೆ ಪೊಲೀಸರಿಗೆ ದೂರು ನೀಡಿದ್ದರು. ಇಷ್ಟಾದರೂ, ಕಿರುಕುಳ ಮುಂದುವರಿದಿದ್ದರಿಂದ ಮಂಗಳವಾರ ಬೆಳಗ್ಗೆ ಯುವತಿಯ ಮನೆಯವರು ಚಾಕು ಮತ್ತು ಕಲ್ಲುಗಳಿಂದ ಮಹೇಶ್ ಮೇಲೆ ಹಲ್ಲೆ ನಡೆಸಿ ಕೊಲೆ ಮಾಡಿದ್ದಾರೆ ಎಂದು ಸ್ಥಳೀಯರು ಮಾಹಿತಿ ನೀಡಿದ್ದಾರೆ. ಈ ವಿಷಯ ತಿಳಿದು ಘಟನಾ ಸ್ಥಳಕ್ಕೆ ಎಸಿಪಿ ನರೇಂದ್ರ, ಎಸ್‌ಎಸ್‌ಐ ರಾಮಕೃಷ್ಣ ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ.

ಈ ಘಟನೆ ಬಗ್ಗೆ ಪ್ರತಿಕ್ರಿಯಿಸಿರುವ ಎಸಿಪಿ ನರೇಂದ್ರ, ''ಇಂದು ಬೆಳಗ್ಗೆ ಹಾಲು ಹಾಕಿ ಬೈಕ್​ನಲ್ಲಿ ಬರುತ್ತಿದ್ದ ಮಹೇಶ್​ನನ್ನು ಯುವತಿಯ ಕುಟುಂಬಸ್ಥರು ಅಡ್ಡಗಟ್ಟಿದ್ದಾರೆ. ಈ ವೇಳೆ ಕತ್ತಿ, ರಾಡ್​​ಗಳಿಂದ ಹೊಡೆದು ಕೊಲೆ ಮಾಡಿದ್ದಾರೆ. ನಾಲ್ಕೈದು ಜನ ಸೇರಿಕೊಂಡು ಕೃತ್ಯ ಎಸಗಿದ್ದು, ಇದರ ನಂತರ ಆರೋಪಿಗಳು ತಾವೇ ಪೊಲೀಸ್​ ಠಾಣೆಗೆ ಶರಣಾಗಿದ್ದಾರೆ. ಈ ಬಗ್ಗೆ ಹೆಚ್ಚಿನ ತನಿಖೆ ಕೈಗೊಳ್ಳಲಾಗಿದೆ'' ತಿಳಿಸಿದ್ದಾರೆ.

ಯುವತಿ ಮೇಲೆ ಚಾಕುವಿನಿಂದ ಹಲ್ಲೆ: ಮತ್ತೊಂದೆಡೆ, ಹೈದರಾಬಾದ್​ನ ಬೋರಬಂಡಾ ಪ್ರದೇಶದಲ್ಲಿ ಯುವತಿ ಮೇಲೆ ಯುವಕನೋರ್ವ ಚಾಕುವಿನಿಂದ ಹಲ್ಲೆ ಮಾಡಿರುವ ಘಟನೆ ನಡೆದಿದೆ. ಯುವತಿ ತನ್ನ ದ್ವಿಚಕ್ರ ವಾಹನದಲ್ಲಿ ಬರುತ್ತಿದ್ದಾಗ ಯುವಕ ತಡೆದು ಚಾಕುವಿನಿಂದ ಕುತ್ತಿಗೆ ಮೇಲೆ ದಾಳಿ ಮಾಡಿದ್ದಾನೆ. ಇದನ್ನು ಗಮನಿಸಿದ ಕೆಲವರು ತಕ್ಷಣವೇ ಆರೋಪಿಯನ್ನು ತಡೆದಿದ್ದಾರೆ. ಅಲ್ಲದೇ, ಯುವಕನಿಗೆ ಧರ್ಮದೇಟು ನೀಡಿದ್ದು, ಬುದ್ಧಿಕಲಿಸಿದ್ದಾರೆ. ಮತ್ತೊಂದೆಡೆ, ಚಾಕು ದಾಳಿಯಲ್ಲಿ ಗಾಯಗೊಂಡ ಯುವತಿಯನ್ನು ಸ್ಥಳೀಯ ಆಸ್ಪತ್ರೆಗೆ ಜನರೇ ರವಾನಿಸಿ ಮಾನವೀಯತೆ ಮೆರೆದಿದ್ದಾರೆ.

ಇದನ್ನೂ ಓದಿ: ಮಾಲ್ಡಾದಲ್ಲಿ ಅಪ್ರಾಪ್ತೆ ಶವಪತ್ತೆ.. ಅತ್ಯಾಚಾರದ ನಂತರ ಕೊಂದಿರುವ ಶಂಕೆ

ಮಂಚೇರಿಯಾಲ (ತೆಲಂಗಾಣ): ವಿಧವೆಗೆ ಕಿರುಕುಳ ನೀಡುತ್ತಿದ್ದ ಆರೋಪದ ಮೇಲೆ ಯುವಕನೊಬ್ಬನಿಗೆ ಆಕೆಯ ಕುಟುಂಬಸ್ಥರು ಹೊಡೆದು ಕೊಲೆ ಮಾಡಿರುವ ಘಟನೆ ತೆಲಂಗಾಣದ ಮಂಚೇರಿಯಾಲ ಜಿಲ್ಲೆಯಲ್ಲಿ ಮಂಗಳವಾರ ಬೆಳಗ್ಗೆ ನಡೆದಿದೆ. ಎಲ್ಲರ ಕಣ್ಣೆದುರಿಗೆ ನಡೆದ ಘಟನೆಯಿಂದ ಜನತೆ ಬೆಚ್ಚಿ ಬೀಳುವಂತೆ ಮಾಡಿದೆ.

ಇಲ್ಲಿನ ಜೈಪುರ ಮಂಡಲದ ಇಂದಾರಂ ಗ್ರಾಮದಲ್ಲಿ ಈ ಘಟನೆ ಜರುಗಿದೆ. ಕೊಲೆಯಾದ ಯುವಕನನ್ನು ಎಂ.ಮಹೇಶ್ (24) ಎಂದು ಗುರುತಿಸಲಾಗಿದೆ. ಇದೇ ಗ್ರಾಮದ ಯುವತಿಯೊಂದಿಗೆ ಪ್ರೇಮ ಸಂಬಂಧ ಹೊಂದಿದ್ದ. ಆದರೆ, ಕಳೆದ ವರ್ಷ ಯುವತಿಯ ಪೋಷಕರು ಆಕೆಗೆ ಇನ್ನೊಬ್ಬ ವ್ಯಕ್ತಿಯೊಂದಿಗೆ ವಿವಾಹ ಮಾಡಿಕೊಟ್ಟಿದ್ದರು. ಇದರಿಂದ ದ್ವೇಷ ಸಾಧಿಸುತ್ತಿದ್ದ ಮಹೇಶ್ ಈ ಹಿಂದೆ ಆಕೆಯೊಂದಿಗೆ ಅನ್ಯೋನ್ಯವಾಗಿರುವ ವಿಡಿಯೋಗಳನ್ನು ಸಾಮಾಜಿಕ ಜಾಲತಾಣಗಳಲ್ಲಿ ಹರಿಬಿಟ್ಟಿದ್ದ ಎಂದು ತಿಳಿದು ಬಂದಿದೆ.

ಅಲ್ಲದೇ, ಆಗ ವಿಷಯ ತಿಳಿದ ಯುವತಿಯ ಪೋಷಕರು ಯುವಕನ ವಿರುದ್ಧ ಜೈಪುರ ಪೊಲೀಸ್ ಠಾಣೆಯಲ್ಲಿ ದೂರು ದಾಖಲಿಸಿದ್ದರು. ಪೊಲೀಸರು ಎರಡೂ ಕಡೆಯವರನ್ನು ಕರೆಸಿ ಕೌನ್ಸೆಲಿಂಗ್ ನಡೆಸಿ ಪ್ರಕರಣ ದಾಖಲಿಸಿಕೊಂಡಿದ್ದರು. ಇದರ ನಡುವೆ ಎಂದರೆ ಆರು ತಿಂಗಳ ಹಿಂದೆ ಯುವತಿಯ ಪತಿ ಆಕೆಗೆ ವಿಚ್ಛೇದನ ನೀಡಿ ಆತ್ಮಹತ್ಯೆ ಮಾಡಿಕೊಂಡಿದ್ದಾನೆ. ಹೀಗಾಗಿ ಯುವತಿ ತನ್ನ ಹುಟ್ಟೂರಿಗೆ ಬಂದಿದ್ದಾಳೆ.

ಇದನ್ನೂ ಓದಿ: ಸೈನಿ ಸಮಾಜ ಮೀಸಲಾತಿ ಹೋರಾಟ: ಪ್ರತಿಭಟನಾನಿರತ ಯುವಕ ಆತ್ಮಹತ್ಯೆ

ಆದರೆ, ಮಹೇಶ್ ತನ್ನ ಚಾಳಿ ಬಿಟ್ಟಿರಲಿಲ್ಲ. ಮತ್ತೆ-ಮತ್ತೆ ಆಕೆಗೆ ಕಿರುಕುಳ ನೀಡಲು ಶುರು ಮಾಡಿದ್ದ. ಇದನ್ನು ಹಲವು ಬಾರಿ ಗಮನಿಸಿದ ಆಕೆಯ ಕುಟುಂಬಸ್ಥರು ಮತ್ತೆ ಪೊಲೀಸರಿಗೆ ದೂರು ನೀಡಿದ್ದರು. ಇಷ್ಟಾದರೂ, ಕಿರುಕುಳ ಮುಂದುವರಿದಿದ್ದರಿಂದ ಮಂಗಳವಾರ ಬೆಳಗ್ಗೆ ಯುವತಿಯ ಮನೆಯವರು ಚಾಕು ಮತ್ತು ಕಲ್ಲುಗಳಿಂದ ಮಹೇಶ್ ಮೇಲೆ ಹಲ್ಲೆ ನಡೆಸಿ ಕೊಲೆ ಮಾಡಿದ್ದಾರೆ ಎಂದು ಸ್ಥಳೀಯರು ಮಾಹಿತಿ ನೀಡಿದ್ದಾರೆ. ಈ ವಿಷಯ ತಿಳಿದು ಘಟನಾ ಸ್ಥಳಕ್ಕೆ ಎಸಿಪಿ ನರೇಂದ್ರ, ಎಸ್‌ಎಸ್‌ಐ ರಾಮಕೃಷ್ಣ ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ.

ಈ ಘಟನೆ ಬಗ್ಗೆ ಪ್ರತಿಕ್ರಿಯಿಸಿರುವ ಎಸಿಪಿ ನರೇಂದ್ರ, ''ಇಂದು ಬೆಳಗ್ಗೆ ಹಾಲು ಹಾಕಿ ಬೈಕ್​ನಲ್ಲಿ ಬರುತ್ತಿದ್ದ ಮಹೇಶ್​ನನ್ನು ಯುವತಿಯ ಕುಟುಂಬಸ್ಥರು ಅಡ್ಡಗಟ್ಟಿದ್ದಾರೆ. ಈ ವೇಳೆ ಕತ್ತಿ, ರಾಡ್​​ಗಳಿಂದ ಹೊಡೆದು ಕೊಲೆ ಮಾಡಿದ್ದಾರೆ. ನಾಲ್ಕೈದು ಜನ ಸೇರಿಕೊಂಡು ಕೃತ್ಯ ಎಸಗಿದ್ದು, ಇದರ ನಂತರ ಆರೋಪಿಗಳು ತಾವೇ ಪೊಲೀಸ್​ ಠಾಣೆಗೆ ಶರಣಾಗಿದ್ದಾರೆ. ಈ ಬಗ್ಗೆ ಹೆಚ್ಚಿನ ತನಿಖೆ ಕೈಗೊಳ್ಳಲಾಗಿದೆ'' ತಿಳಿಸಿದ್ದಾರೆ.

ಯುವತಿ ಮೇಲೆ ಚಾಕುವಿನಿಂದ ಹಲ್ಲೆ: ಮತ್ತೊಂದೆಡೆ, ಹೈದರಾಬಾದ್​ನ ಬೋರಬಂಡಾ ಪ್ರದೇಶದಲ್ಲಿ ಯುವತಿ ಮೇಲೆ ಯುವಕನೋರ್ವ ಚಾಕುವಿನಿಂದ ಹಲ್ಲೆ ಮಾಡಿರುವ ಘಟನೆ ನಡೆದಿದೆ. ಯುವತಿ ತನ್ನ ದ್ವಿಚಕ್ರ ವಾಹನದಲ್ಲಿ ಬರುತ್ತಿದ್ದಾಗ ಯುವಕ ತಡೆದು ಚಾಕುವಿನಿಂದ ಕುತ್ತಿಗೆ ಮೇಲೆ ದಾಳಿ ಮಾಡಿದ್ದಾನೆ. ಇದನ್ನು ಗಮನಿಸಿದ ಕೆಲವರು ತಕ್ಷಣವೇ ಆರೋಪಿಯನ್ನು ತಡೆದಿದ್ದಾರೆ. ಅಲ್ಲದೇ, ಯುವಕನಿಗೆ ಧರ್ಮದೇಟು ನೀಡಿದ್ದು, ಬುದ್ಧಿಕಲಿಸಿದ್ದಾರೆ. ಮತ್ತೊಂದೆಡೆ, ಚಾಕು ದಾಳಿಯಲ್ಲಿ ಗಾಯಗೊಂಡ ಯುವತಿಯನ್ನು ಸ್ಥಳೀಯ ಆಸ್ಪತ್ರೆಗೆ ಜನರೇ ರವಾನಿಸಿ ಮಾನವೀಯತೆ ಮೆರೆದಿದ್ದಾರೆ.

ಇದನ್ನೂ ಓದಿ: ಮಾಲ್ಡಾದಲ್ಲಿ ಅಪ್ರಾಪ್ತೆ ಶವಪತ್ತೆ.. ಅತ್ಯಾಚಾರದ ನಂತರ ಕೊಂದಿರುವ ಶಂಕೆ

ETV Bharat Logo

Copyright © 2024 Ushodaya Enterprises Pvt. Ltd., All Rights Reserved.