ಆಂಧ್ರಪ್ರದೇಶ: ವಿಜಯವಾಡದ ವಾಂಬೆ ಕಾಲೋನಿಯಲ್ಲಿ ವ್ಯಕ್ತಿಯೊಬ್ಬ ಹೆಂಡತಿ ಮತ್ತು ಇಬ್ಬರು ಮಕ್ಕಳನ್ನು ಕೊಂದು ತಾನೂ ಆತ್ಮಹತ್ಯೆ ಮಾಡಿಕೊಳ್ಳಲು ಯತ್ನಿಸಿರುವ ಘಟನೆ ನಡೆದಿದೆ.
ಮೋಹನ್ ಎಂಬಾತ ಈ ಕೃತ್ಯ ಎಸಗಿದವನು. ಈತ ಸಾಕಷ್ಟು ಸಾಲ ಮಾಡಿಕೊಂಡಿದ್ದರಿಂದ ಸಾಲಗಾರರ ಕಿರುಕುಳ ಹೆಚ್ಚಾಗಿತ್ತು. ಹೆಂಡತಿಯೊಂದಿಗೆ ನಿತ್ಯ ಜಗಳ ನಡೆಯುತ್ತಿತ್ತು. ಈ ಕಾರಣದಿಂದ ಹೆಂಡತಿ, ಮಕ್ಕಳನ್ನು ಹಲ್ಲೆ ಮಾಡಿ ಕೊಂದಿದ್ದಾನೆ ಎಂದು ಪೊಲೀಸರು ಶಂಕಿಸಿದ್ದಾರೆ.
ಕೊಲೆ ಮಾಡಿದ ನಂತರ ಆರೋಪಿ ರೈಲ್ವೆ ಹಳಿಗೆ ತಲೆ ಕೊಟ್ಟು ಆತ್ಮಹತ್ಯೆಗೆ ಯತ್ನಿಸಿದ್ದಾನೆ. ಆದರೆ ರೈಲು ಬಂದ ಸಮಯದಲ್ಲಿ ಸಾವಿಗೆ ಹೆದರಿ ಕಂಬಿಯಿಂದ ಹೊರಗೆ ಜಿಗಿದಿದ್ದಾನೆ. ಇದರಿಂದ ಮೋಹನ್ಗೆ ಗಾಯಗಳಾಗಿದ್ದು ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾನೆ.